Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಸರ್ಕಾರಿ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕ್ಕೆ ಬಂಪರ್ ಕೊಡುಗೆ : 56 ಸಾವಿರ ಹುದ್ದೆಗಳಲ್ಲಿ 32 ಸಾವಿರ ಕಲ್ಯಾಣಕ್ಕೆ ಮೀಸಲು.!

04/05/2026 6:17 AM

ಇರಾನ್ ಸಂಧಾನಕ್ಕೆ ಟ್ರಂಪ್ ಬ್ರೇಕ್! “ನಿಮ್ಮ ಆಫರ್ ಒಪ್ಪಲು ಸಾಧ್ಯವಿಲ್ಲ” ಎಂದ ಅಮೆರಿಕ ಅಧ್ಯಕ್ಷ !

04/05/2026 6:17 AM

ಖಲಿಸ್ತಾನಿ ಉಗ್ರಗಾಮಿಗಳು ಕೆನಡಾ ಭದ್ರತೆಗೆ ಭಾರಿ ಅಪಾಯ; ಅಧಿಕೃತ ವರದಿಯಲ್ಲಿ ಎಚ್ಚರಿಕೆ ನೀಡಿದ ಗುಪ್ತಚರ ಸಂಸ್ಥೆ!

04/05/2026 6:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜೂನ್.29ರಂದು ಸಿಎಂ ಸಿದ್ಧರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಭೇಟಿ | CM Siddaramaiah
KARNATAKA

ಜೂನ್.29ರಂದು ಸಿಎಂ ಸಿದ್ಧರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಭೇಟಿ | CM Siddaramaiah

By kannadanewsnow0927/06/2024 4:40 PM

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದು, ಜೂನ್ 29ರಂದು 8.00ಗಂಟೆಗೆ ಪ್ರಧಾನಿಗಳ ಭೇಟಿಗೆ ಸಮಯ ನಿಗದಿಯಾಗಿದೆ.

ಅವರು ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.

ರಾಜ್ಯದಿಂದ ಗೆದ್ದಿರುವ ಎಲ್ಲಾ ಲೋಕಸಭಾ ಹಾಗು ರಾಜ್ಯಸಭಾ ಸದಸ್ಯರನ್ನು, ಹಾಗೂ ಕೇಂದ್ರದ ಮಂತ್ರಿಗಳನ್ನು ಭೇಟಿ ಮಾಡಲಾಗುವುದು. ಕೇಂದ್ರದಲ್ಲಿ ರಾಜ್ಯ ಸರ್ಕಾರದ ಯೋಜನೆಗಳ ಪಟ್ಟಿ ನೀಡಿ ರಾಜ್ಯ ಸರ್ಕಾರದ ಪರವಾಗಿ ಎಲ್ಲರೂ ಈ ಯೋಜನೆಗಳನ್ನು ಮಂಜೂರು ಮಾಡಿಸುವುದು, ಹಣ ಬಿಡುಗಡೆ ಮಾಡಿಸುವುದು, ಸಂಪನ್ಮೂಲ ಹೆಚ್ಚು ಮಾಡಲು ಪ್ರಯತ್ನ ಪಡಬೇಕೆಂದು ತಿಳಿಸಲು ನೂತನ ಸಂಸದರನ್ನು ಭೇಟಿ ಮಾಡಲಾಗುವುದು ಎಂದರು.

ಕೇಂದ್ರ ಸಚಿವರ ಭೇಟಿ

ವಿಶೇಷವಾಗಿ ನಮ್ಮ ಸಚಿವರೂ ಕೂಡ ಜೊತೆಗೂಡಿದ್ದು, ಪ್ರಧಾನಮಂತ್ರಿ ಭೂಸಾರಿಗೆ ಸಚಿವರು,ರೈಲ್ವೆ, ನೀರಾವರಿ , ಗೃಹ ಸಚಿವರು ಹಾಗೂ ಹಣಕಾಸು ಸಚಿವರನ್ನು ಭೇಟಿ ಮಾಡಲಿರುವುದಾಗಿ ಹೇಳಿದರು. ಗೃಹಸಚಿವರು ಭೇಟಿಗೆ ಇನ್ನೂ ಸಮಯ ನಿಗದಿಮಾಡಿಲ್ಲ. ಶೀಘ್ರವೇ ಮಾಡುತ್ತಾರೆ.ನಿತಿನ್ ಗಡ್ಕರಿಯವರು ಸಮಯ ನಿಗದಿ ಮಾಡಿದ್ದಾರೆ ಎಂದು ತಿಳಿಸಿದರು.

ರಾಜ್ಯದಲ್ಲಿ ಆಗಬೇಕಿರುವ ಕೆಲಸಗಳಪಟ್ಟಿ ಕಳುಹಿಸಲಾಗಿದೆ

ಹೊಸ ಸರ್ಕಾರದಿಂದ ಮಂಡಿಸಲಾಗುವ ಬಜೆಟ್ ನಲ್ಲಿ ಕರ್ನಾಟಕ ನಿರೀಕ್ಷೆ ಮಾಡುವ ಕೆಲಸಗಳ ಪಟ್ಟಿಯನ್ನು ಕಂದಾಯ ಸಚಿವರು ಈಗಾಗಲೇ ಮಂಡಿಸಿದ್ದಾರೆ ಎಂದರು.

ರಾಹುಲ್ ಗಾಂಧಿ ಜನರ ಧ್ವನಿಯಾಗಿ ಸಮರ್ಥವಾಗಿ ಅವರ ಜವಾಬ್ದಾರಿಯನ್ನು ನಿಭಾಯಿಸುತ್ತಾರೆ

ರಾಹುಲ್ ಗಾಂಧಿ ಹಾಗೂ ಪ್ರಧಾನಿಗಳು ಮೊದಲ ಬಾರಿಗೆ ಲೋಕಸಭಾಧ್ಯಕ್ಷರನ್ನು ಒಟ್ಟಿಗೆ ಭೇಟಿ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಪ್ರಧಾನಿಗಳು ಹಾಗು ವಿಪಕ್ಷ ನಾಯಕ ಜೊತೆಗೆ ಹೋಗಿ ಅವರ ಪೀಠದ ಮೇಲೆ ಕುಳ್ಳಿರಿಸಿ ಶುಭಾಶಯ ಹೇಳುವುದು ಮೊದಲಿನಿಂದಲೂ ನಡೆದುಬಂದಿರುವ ಸಂಪ್ರದಾಯ.ಅದರಂತೆ ನಡೆದುಕೊಂಡಿದ್ದಾರೆ. ನರೇಂದ್ರಮೋದಿ ಮೂರನೇ ಬಾರಿಗೆ ಪ್ರಧಾನಿಗಳಾಗಿದ್ದಾರೆ. ರಾಹುಲ್ ಗಾಂಧಿ ಇಡೀ ದೇಶವನ್ನು ಪಾದಯಾತ್ರೆ ಮೂಲಕ ಸುತ್ತಿದ್ದಾರೆ . ಅವರಿಗೆ ದೇಶದ ಸಮಸ್ಯೆಗಳ ಬಗ್ಗೆ ಅರಿವಿದೆ. ಈ ಸಮಸ್ಯೆಗಳನ್ನು ಪ್ರಸ್ತಾಪ ಮಾಡಿ ಜನರ ಧ್ವನಿಯಾಗಿ ಸಮರ್ಥವಾಗಿ ಅವರ ಜವಾಬ್ದಾರಿಯನ್ನು ನಿಭಾಯಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಭಾರತ ಬಹುತ್ವದ ಸಂಸ್ಕೃತಿ ಇರುವ ರಾಷ್ಟ

ನೋಬೆಲ್ ಪ್ರಶಸ್ತಿ ಪುರಸ್ಕ್ರತ ಅಮಾರ್ತ್ಯ ಸೇನ್ ಅವರು ಲೋಕಸಭಾ ಚುನಾವಣೆಯ ಫಲಿತಾಂಶದಿಂದ ಭಾರತ ಹಿಂದೂ ರಾಷ್ಟ್ರವಲ್ಲ, ಎಲ್ಲರಿಗೂ ಸೇರಿದ ರಾಷ್ಟ್ರ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಭಾರತ ಬಹುತ್ವದ ದೇಶ ಎಂದು ಮೊದಲಿನಿಂದಲೂ ಹೇಳುತ್ತಿದ್ದೇವೆ. ಕೇವಲ ಹಿಂದೂಗಳ ರಾಷ್ಟ್ರವಾಗಲು ಸಾಧ್ಯವಿಲ್ಲ. ಎಲ್ಲಾ ಜಾತಿ, ಧರ್ಮ, ಭಾಷೆಯವರು ಇದ್ದು, ಬಹುತ್ವದ ಸಂಸ್ಕೃತಿ ಇರುವ ರಾಷ್ಟವಾಗಿದೆ ಎಂದರು. ಅಮಾರ್ತ್ಯ ಸೇನ್ ಹೇಳಿರುವುದು ಸರಿಯಿದ್ದು, ನಾವೂ ಅದನ್ನೇ ಮೊದಲಿನಿಂದಲೂ ಪ್ರತಿಪಾದಿಸುತ್ತಿದ್ದೇವೆ ಎಂದರು.

BREAKING: ‘ಯಡಿಯೂರಪ್ಪ’ ವಿರುದ್ಧದ ಪೋಕ್ಸೋ ಕೇಸ್: ನ್ಯಾಯಾಲಯಕ್ಕೆ ‘ಆರೋಪ ಪಟ್ಟಿ’ ಸಲ್ಲಿಸಿದ ಪೊಲೀಸರು | BS Yediyurappa

‘ಆರ್.ಅಶೋಕ್’ ವಿರುದ್ಧದ ಭೂ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವಂತೆ ‘ರಮೇಶ್ ಬಾಬು’ ಒತ್ತಾಯ

Share. Facebook Twitter LinkedIn WhatsApp Email

Related Posts

BIG NEWS : ಸರ್ಕಾರಿ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕ್ಕೆ ಬಂಪರ್ ಕೊಡುಗೆ : 56 ಸಾವಿರ ಹುದ್ದೆಗಳಲ್ಲಿ 32 ಸಾವಿರ ಕಲ್ಯಾಣಕ್ಕೆ ಮೀಸಲು.!

04/05/2026 6:17 AM1 Min Read

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಇಂದು ಸುಪ್ರೀಂ ಕೋರ್ಟ್‌ ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ

04/05/2026 6:09 AM1 Min Read

ಪದ್ಮಶ್ರೀ ಪುರಸ್ಕೃತ ಅಂಕೇಗೌಡ ದಂಪತಿಗಳ ಸಾಧನೆ ಅಪಾರ: ಸಂಸದ ಜಿ.ಕುಮಾರನಾಯಕ್

03/05/2026 8:36 PM2 Mins Read
Recent News

BIG NEWS : ಸರ್ಕಾರಿ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕ್ಕೆ ಬಂಪರ್ ಕೊಡುಗೆ : 56 ಸಾವಿರ ಹುದ್ದೆಗಳಲ್ಲಿ 32 ಸಾವಿರ ಕಲ್ಯಾಣಕ್ಕೆ ಮೀಸಲು.!

04/05/2026 6:17 AM

ಇರಾನ್ ಸಂಧಾನಕ್ಕೆ ಟ್ರಂಪ್ ಬ್ರೇಕ್! “ನಿಮ್ಮ ಆಫರ್ ಒಪ್ಪಲು ಸಾಧ್ಯವಿಲ್ಲ” ಎಂದ ಅಮೆರಿಕ ಅಧ್ಯಕ್ಷ !

04/05/2026 6:17 AM

ಖಲಿಸ್ತಾನಿ ಉಗ್ರಗಾಮಿಗಳು ಕೆನಡಾ ಭದ್ರತೆಗೆ ಭಾರಿ ಅಪಾಯ; ಅಧಿಕೃತ ವರದಿಯಲ್ಲಿ ಎಚ್ಚರಿಕೆ ನೀಡಿದ ಗುಪ್ತಚರ ಸಂಸ್ಥೆ!

04/05/2026 6:13 AM

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಇಂದು ಸುಪ್ರೀಂ ಕೋರ್ಟ್‌ ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ

04/05/2026 6:09 AM
State News
KARNATAKA

BIG NEWS : ಸರ್ಕಾರಿ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕ್ಕೆ ಬಂಪರ್ ಕೊಡುಗೆ : 56 ಸಾವಿರ ಹುದ್ದೆಗಳಲ್ಲಿ 32 ಸಾವಿರ ಕಲ್ಯಾಣಕ್ಕೆ ಮೀಸಲು.!

By kannadanewsnow5704/05/2026 6:17 AM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರಿ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ನಿರುದ್ಯೋಗಿಗಳಿಗೆ ದೊಡ್ಡ ಮಟ್ಟದ ಶುಭಸುದ್ದಿ ಸಿಕ್ಕಿದೆ. ರಾಜ್ಯಾದ್ಯಂತ ಖಾಲಿ ಇರುವ…

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಇಂದು ಸುಪ್ರೀಂ ಕೋರ್ಟ್‌ ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ

04/05/2026 6:09 AM

ಪದ್ಮಶ್ರೀ ಪುರಸ್ಕೃತ ಅಂಕೇಗೌಡ ದಂಪತಿಗಳ ಸಾಧನೆ ಅಪಾರ: ಸಂಸದ ಜಿ.ಕುಮಾರನಾಯಕ್

03/05/2026 8:36 PM

ಮದ್ದೂರು ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಬ್ಯಾಡರಹಳ್ಳಿ ಅಂಕೇಗೌಡ ಆಯ್ಕೆ

03/05/2026 8:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.