Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

20/08/2025 3:07 PM

ರಾಜ್ಯದ ‘ಪುನರ್ವಸತಿ ಕಾರ್ಯಕರ್ತೆ’ಯರಿಗೆ ಶಾಕಿಂಗ್ ನ್ಯೂಸ್: ‘ಖಾಯಂ ಇಲ್ಲ’ವೆಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

20/08/2025 3:05 PM

GOOD NEWS: ರಾಜ್ಯದ ಪುನರ್ವಸತಿ ಕಾರ್ಯಕರ್ತರ ಗೌರವಧನ ರೂ.1,000 ಹೆಚ್ಚಳ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

20/08/2025 3:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಶಿರಾಡ್ ಘಾಟ್’ ಗುಡ್ಡ ಕುಸಿತ‌ ಸ್ಥಳಕ್ಕೆ ಸಿದ್ಧರಾಮಯ್ಯ ಭೇಟಿ: ಅಧಿಕಾರಿಗೆ ‘ಸಿಎಂ ಫುಲ್‌ ಕ್ಲಾಸ್’
KARNATAKA

‘ಶಿರಾಡ್ ಘಾಟ್’ ಗುಡ್ಡ ಕುಸಿತ‌ ಸ್ಥಳಕ್ಕೆ ಸಿದ್ಧರಾಮಯ್ಯ ಭೇಟಿ: ಅಧಿಕಾರಿಗೆ ‘ಸಿಎಂ ಫುಲ್‌ ಕ್ಲಾಸ್’

By kannadanewsnow0903/08/2024 4:39 PM

ಶಿರಾಡಿ ಘಾಟ್ ಆ 3: ಶಿರಾಡ್ ಘಾಟ್ ಗುಡ್ಡ ಕುಸಿತದ ಭೀಕರತೆಗೆ ಶಾಕ್ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿಲಾಸ್ ಅವರಿಗೆ ಸಾಲು ಸಾಲು ಪ್ರಶ್ನೆಗಳ ಸುರಿಮಳೆಗೈದರು.

ಗುಡ್ಡ ಕುಸಿತದ ಸ್ಥಳ ಪರಿಶೀಲನೆಗೆ ಅಧಿಕಾರಿಗಳ ತಂಡದೊಂದಿಗೆ ರಸ್ತೆ ಮಾರ್ಗವಾಗಿ ಘಟನಾ ಸ್ಥಳಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ರಸ್ತೆ ನಿರ್ಮಾಣಕ್ಕಾಗಿ ಗುಡ್ಡಗಳನ್ನು 90 ಡಿಗ್ರಿಯಲ್ಲಿ ನೇರವಾಗಿ ಸೀಳಿರುವುದಕ್ಕೆ ಅಸಮಾಧಾನಗೊಂಡು ಗುಡ್ಡ ಕುಸಿತಕ್ಕೆ ಇದೂ ಕೂಡ ಪ್ರಮುಖ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಸ್ತೆ ಕಾಮಗಾರಿ ಕುರಿತಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಿಎಂ ಗೆ ವಿವರಿಸುತ್ತಾ, “ಒಟ್ಟು 45 km ನಲ್ಲಿ 35 km ಹೈವೇ ಕಾಮಗಾರಿ ಮುಗಿದಿದೆ. 10 km ಬಾಕಿ ಇದೆ. ಆದರೆ ಇಲ್ಲಿಯವರೆಗೂ ಎಲ್ಲೂ ತಡೆಗೋಡೆಗಳನ್ಜು ನಿರ್ಮಿಸಿಲ್ಲ, ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿ ಅದರ ಆಧಾರದಲ್ಲಿ ಸುರಕ್ಷತಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಂತೆ ಇಲ್ಲ” ಎಂದು ವಿವರಿಸಿದರು.

ಮೊಣಕಾಲುದ್ದುದ ಕೆಸರಲ್ಲೇ ಗುಡ್ಡ ಕುಸಿತದ ಜಾಗದುದ್ದಕ್ಕೂ ನಡೆದು ಪರಿಶೀಲಿಸಿದ ಮುಖ್ಯಮಂತ್ರಿಗಳು ಸ್ಥಳದಲ್ಲಿ ಮಣ್ಣು ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದ SDRF ತಂಡದೊಂದಿಗೆ ಕೆಲ ಹೊತ್ತು ಚರ್ಚಿಸಿದರು.

ಬಳಿಕ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ‌ ಅಧಿಕಾರಿ ವಿಲಾಸ್ ಅವರ ಮುಂದೆ ಸಿಎಂ ಸಾಲು ಸಾಲು ಪ್ರಶ್ನೆಗಳನ್ನು ಇಟ್ಟರು…

*ಹಣ ಉಳಿಸುವ ಉದ್ದೇಶದಿಂದ ಕಡಿಮೆ ಭೂಮಿ ಸ್ವಾಧೀನಗೊಳಿಸಿಕೊಳ್ಳುವುದು, ಬಳಿಕ ಖರ್ಚು ಉಳಿಸಲು 90 ಡಿಗ್ರಿಯಲ್ಲಿ ಗುಡ್ಡಗಳನ್ನು ಕತ್ತರಿಸಿದ್ದೀರಿ. ಇದು ಅವೈಜ್ಞಾನಿಕ ಕಾಮಗಾರಿ ಅಲ್ಲವೇ?

*ಗುಡ್ಡಗಳನ್ನು 30 ರಿಂದ 45 ಡಿಗ್ರಿಯಲ್ಲಿ ಕತ್ತರಿಸಿ ತಡೆಗೋಡೆ ನಿರ್ಮಿಸಿದ್ದರೆ ಮಣ್ಣು ಕುಸಿತವನ್ನು ತಡೆಯಬಹುದಿತ್ತಲ್ಲವೇ?

*ಕಾಮಗಾರಿ ಆರಂಭಿಸುವ ಮೊದಲು ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿದ್ದೀರಾ? ಅದಕ್ಕೆ ತಕ್ಕಂತೆ ಮುಂಜಾಗ್ರತಾ ಕ್ರಮ ಏಕೆ ವಹಿಸಿಲ್ಲ ಎಂದು ಪ್ರಶ್ನಿಸಿದರು.

ವಿಲಾಸ್ ಅವರಿಂದ ಸೂಕ್ತ ಉತ್ತರ ಬರದಿದ್ದಾಗ ಒಟ್ಟಾರೆ ಸ್ಥಿತಿ ಗತಿ ಕುರಿತು ಕೇಂದ್ರ ಸಚಿವರಾದ ಗಡ್ಕರಿ ಅವರಿಗೆ ಪತ್ರ ಬರೆಯುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದರು.

ಹಾಸನ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ, ಶಾಸಕ ಶಿವಲಿಂಗೇಗೌಡರು, ಸಂಸದ ಶ್ರೇಯಸ್ ಪಟೇಲ್ , ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ್ ಸೇರಿ ಹಿರಿಯ ಅಧಿಕಾರಿಗಳ ತಂಡವೇ ಸ್ಥಳದಲ್ಲಿತ್ತು.

BREAKING: ಸೊಮಾಲಿಯಾದಲ್ಲಿ ಭೀಕರ ಆತ್ಮಾಹುತಿ ಬಾಂಬ್ ದಾಳಿ: 32 ಮಂದಿ ಸಾವು, ಹಲವರಿಗೆ ಗಾಯ | Somali beach attack

ಸಿದ್ದರಾಮಯ್ಯರಿಗೆ ಕಂಟಕ ಇದೆ, ‘ಕಂಬಳಿ’ ಹೊದ್ದುಕೊಂಡರೆ ಕಷ್ಟಗಳೆಲ್ಲ ನಿವಾರಣೆ : ಅಭಿಮಾನಿಯ ಮನದಾಳದ ಮಾತು

Share. Facebook Twitter LinkedIn WhatsApp Email

Related Posts

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

20/08/2025 3:07 PM1 Min Read

ರಾಜ್ಯದ ‘ಪುನರ್ವಸತಿ ಕಾರ್ಯಕರ್ತೆ’ಯರಿಗೆ ಶಾಕಿಂಗ್ ನ್ಯೂಸ್: ‘ಖಾಯಂ ಇಲ್ಲ’ವೆಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

20/08/2025 3:05 PM1 Min Read

GOOD NEWS: ರಾಜ್ಯದ ಪುನರ್ವಸತಿ ಕಾರ್ಯಕರ್ತರ ಗೌರವಧನ ರೂ.1,000 ಹೆಚ್ಚಳ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

20/08/2025 3:03 PM1 Min Read
Recent News

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

20/08/2025 3:07 PM

ರಾಜ್ಯದ ‘ಪುನರ್ವಸತಿ ಕಾರ್ಯಕರ್ತೆ’ಯರಿಗೆ ಶಾಕಿಂಗ್ ನ್ಯೂಸ್: ‘ಖಾಯಂ ಇಲ್ಲ’ವೆಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

20/08/2025 3:05 PM

GOOD NEWS: ರಾಜ್ಯದ ಪುನರ್ವಸತಿ ಕಾರ್ಯಕರ್ತರ ಗೌರವಧನ ರೂ.1,000 ಹೆಚ್ಚಳ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

20/08/2025 3:03 PM

ಪರಿಶಿಷ್ಟ ಸಮುದಾಯಕ್ಕೆ ಒಳಮೀಸಲಾತಿಯು ನಮ್ಮ ಸರ್ಕಾರ ದೇವರಾಜ ಅರಸುಗೆ ಸಲ್ಲಿಸುತ್ತಿರುವ ನಮನ: ಡಿಕೆಶಿ

20/08/2025 2:59 PM
State News
KARNATAKA

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

By kannadanewsnow0920/08/2025 3:07 PM KARNATAKA 1 Min Read

ವಿಧಾನಸಭೆ : ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ 6 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 35 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಪ್ರಸ್ತುತ…

ರಾಜ್ಯದ ‘ಪುನರ್ವಸತಿ ಕಾರ್ಯಕರ್ತೆ’ಯರಿಗೆ ಶಾಕಿಂಗ್ ನ್ಯೂಸ್: ‘ಖಾಯಂ ಇಲ್ಲ’ವೆಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

20/08/2025 3:05 PM

GOOD NEWS: ರಾಜ್ಯದ ಪುನರ್ವಸತಿ ಕಾರ್ಯಕರ್ತರ ಗೌರವಧನ ರೂ.1,000 ಹೆಚ್ಚಳ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

20/08/2025 3:03 PM

ಪರಿಶಿಷ್ಟ ಸಮುದಾಯಕ್ಕೆ ಒಳಮೀಸಲಾತಿಯು ನಮ್ಮ ಸರ್ಕಾರ ದೇವರಾಜ ಅರಸುಗೆ ಸಲ್ಲಿಸುತ್ತಿರುವ ನಮನ: ಡಿಕೆಶಿ

20/08/2025 2:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.