ಬಳ್ಳಾರಿ : ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆ ನಡೆಯುತ್ತಿದ್ದು ಇದರ ಮಧ್ಯ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ 2028ರ ವರೆಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಅವರೇ ಇರುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ.
ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್, ಸಿದ್ದರಾಮಯ್ಯ ಸಾರಥ್ಯದಲ್ಲಿ 2028 ರ ಚುನಾವಣೆಗೆ ಹೋಗುತ್ತೇವೆ. ನಮ್ಮದು ಹೈಕಮಾಂಡ್ ಪಕ್ಷ ಸಿಎಂ ಬದಲಾವಣೆ ನಮ್ಮ ಕೈಯಲ್ಲಿ ಇಲ್ಲ. ಹಾಗಾಗಿ 2028 ರ ವರೆಗೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಮುಂದುವರೆಯುತ್ತಾರೆ ಎಂದು ತಿಳಿಸಿದರು.








