Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹೊಸದುರ್ಗದ ಕಬ್ಬಳ ಗ್ರಾಮದಲ್ಲಿ ಕತ್ತಿಕಲ್ಲಾಂಭ ದೇವಿಯ ಅದ್ದೂರಿ ರಥೋತ್ಸವ: ಭಕ್ತಿಭಾವದ ಸಿಡಿ ಉತ್ಸವಕ್ಕೆ ಸಾಕ್ಷಿಯಾದ ಸಾವಿರಾರು ಭಕ್ತರು

09/04/2026 8:28 PM

ನದಿಪಾತ್ರದಲ್ಲಿ ಚಿನ್ನದ ಭೇಟೆ! ಭಾರತದ ಈ 3 ನದಿಗಳಲ್ಲಿ ಇಂದಿಗೂ ಸಿಗುತ್ತಿದೆ ಅಪ್ಪಟ ಬಂಗಾರ: ಇಲ್ಲಿದೆ ಅಚ್ಚರಿಯ ಮಾಹಿತಿ

09/04/2026 8:27 PM

ವಿಧಾನಸಭಾ ಚುನಾವಣೆ 2026: ಅಸ್ಸಾಂ, ಪುದುಚೇರಿಯಲ್ಲಿ ಶೇ. 80ಕ್ಕೂ ಹೆಚ್ಚು ಮತದಾನ! ಕೇರಳದಲ್ಲಿ ಶೇ. 75ರಷ್ಟು ದಾಖಲೆ

09/04/2026 8:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿದ್ಧರಾಮಯ್ಯ 1 ವರ್ಷದ ಸಾಧನೆ ಶೂನ್ಯ, ರಾಜ್ಯಪಾಲರು ಸರ್ಕಾರ ವಜಾಗೊಳಿಸಬೇಕು: ಆರ್ ಅಶೋಕ್ ಆಗ್ರಹ
KARNATAKA

ಸಿದ್ಧರಾಮಯ್ಯ 1 ವರ್ಷದ ಸಾಧನೆ ಶೂನ್ಯ, ರಾಜ್ಯಪಾಲರು ಸರ್ಕಾರ ವಜಾಗೊಳಿಸಬೇಕು: ಆರ್ ಅಶೋಕ್ ಆಗ್ರಹ

By kannadanewsnow0920/05/2024 4:44 PM

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಒಂದು ವರ್ಷದಲ್ಲಿ ಖಜಾನೆಯನ್ನು ಸಂಪೂರ್ಣ ಖಾಲಿ ಮಾಡಿದೆ. ರಾಜ್ಯ ಕೊಲೆಗಡುಕರ ಸ್ವರ್ಗವಾಗಿ ಬದಲಾಗಿದೆ. ಇಂತಹ ಶೂನ್ಯ ಸಾಧನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ರಾಜ್ಯಪಾಲರು ಈ ಸರ್ಕಾರವನ್ನು ವಜಾ ಮಾಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ಕಾರದ ಅವಧಿ ಮುಗಿಯತೆಂಬ ಕಾರಣಕ್ಕೆ ಜನರಿಗೆ ಧನ್ಯವಾದ ತಿಳಿಸಿದ್ದಾರೆಯೋ ಅಥವಾ ಕಾನೂನು ಸುವ್ಯವಸ್ಥೆ ಹಾಳು ಮಾಡಿರುವ ಕೊಲೆಗಾರರಿಗೆ ಧನ್ಯವಾದ ಹೇಳಿದ್ದಾರೆಯೋ ಗೊತ್ತಿಲ್ಲ. ನೇಹಾ, ಅಂಜಲಿ ಕೊಲೆಯಾದರು. ಇನ್ನು ಯಾವ ಹೆಣ್ಣುಮಕ್ಕಳು ಕೊಲೆಯಾಗುತ್ತಾರೆ ಎಂಬ ಆತಂಕವಿದೆ. ಹೆಣ್ಣುಮಕ್ಕಳು ಕಾಲೇಜಿಗೆ ಹೋದರೆ ಗ್ಯಾರಂಟಿ ಇಲ್ಲ, ಮನೆಯಿಂದ ಆಚೆಬಂದರೆ ಗ್ಯಾರಂಟಿ ಇಲ್ಲ. ಸರ್ಕಾರ ಎಷ್ಟು ಉಚಿತ ನೀಡಿದರೂ ಬದುಕುವ ಗ್ಯಾರಂಟಿಯೇ ಇಲ್ಲ ಎಂದು ಟೀಕಿಸಿದರು.

ಅಂಜಲಿಯ ಕೊಲೆಯ ಹಿಂದೆ ಪೊಲೀಸರ ಲೋಪವಿದೆ ಎಂದು ಗೃಹ ಸಚಿವರೇ ಹೇಳಿದ್ದಾರೆ ಎಂದ ಮೇಲೆ ಸರ್ಕಾರ ಯಾಕೆ ಬದುಕಿರಬೇಕು? ಹಿಂದೂಗಳ ಮಾರಣಹೋಮವಾದರೂ ಇಲ್ಲಿ ಕೇಳುವವರಿಲ್ಲ. ಬೆಂಗಳೂರಿನಲ್ಲಿ ಮುಸ್ಲಿಮರು ಪೊಲೀಸ್‌ ಠಾಣೆಗೆ ಹೋಗಿ ಕಪಾಳಮೋಕ್ಷ ಮಾಡುವ ಸ್ಥಿತಿಯಿದೆ. ಕೊಲೆಗಾರರನ್ನು ನೇಣಿಗೇರಿಸುವ ಬದಲು ಈ ಸರ್ಕಾರವನ್ನೇ ನೇಣಿಗೇರಿಸಬೇಕು. ಈ ಸರ್ಕಾರ ಬಂದ ನಂತರ ವಿಧಾನಸೌಧದಲ್ಲೇ ಪಾಕಿಸ್ತಾನ ಜಿಂದಾಬಾದ್‌ ಹೇಳಲು ಅನುಮತಿ ಸಿಕ್ಕಿದೆ. ಹನುಮಾನ್‌ ಚಾಲೀಸ ಕೇಳಿದರೆ, ಜೈ ಶ್ರೀರಾಮ್‌ ಎಂದರೆ ಹಲ್ಲೆಯಾಗುತ್ತದೆ ಎಂದು ದೂರಿದರು.

ಒಂದು ವರ್ಷದಲ್ಲಿ ಮಗು ಅಂಬೆಗಾಲಿಡುತ್ತದೆ. ಆದರೆ ಸರ್ಕಾರ ಇನ್ನೂ ಟೇಕಾಫ್‌ ಆಗಿಲ್ಲ. ರಸ್ತೆ, ನೀರಾವರಿ, ಸೇತುವೆ ಸೇರಿದಂತೆ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಶಾಲೆ ಕಟ್ಟಡ ದುರಸ್ತಿಗೂ ಹಣವಿಲ್ಲ. ಬಸ್‌ ಚಾಲಕರಿಗೆ, ಆಂಬ್ಯುಲೆನ್ಸ್‌ ಚಾಲಕರಿಗೆ ಸಂಬಳವಿಲ್ಲ, ರೈತರಿಗೆ ಹಾಲಿನ ಪ್ರೋತ್ಸಾಹಧನ ಸಿಕ್ಕಿಲ್ಲ. ರಾಜ್ಯದ ಆರ್ಥಿಕ ಸ್ಥಿತಿ ವೆಂಟಿಲೇಟರ್‌ನಲ್ಲಿದೆ. ಸಿಎಂ ಸಿದ್ದರಾಮಯ್ಯನವರು 15 ಬಜೆಟ್‌ ಮಂಡಿಸಿ ಒಂದೂವರೆ ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ ಎಂದು ದೂರಿದರು.

ಇತಿಹಾಸದಲ್ಲೇ ಮೊದಲ ಬಾರಿಗೆ ಕೇಂದ್ರ ಸರ್ಕಾರದಿಂದ ದಾಖಲೆಯ ಬರ ಪರಿಹಾರ ಸಿಕ್ಕಿದೆ. ಆದರೆ ಇನ್ನೂ 2 ಲಕ್ಷ ರೈತರಿಗೆ ಪರಿಹಾರ ನೀಡಬೇಕಿದೆ. ಕೆಲವರಿಗೆ 300, 400 ರೂ. ಪರಿಹಾರ ನೀಡಿದ್ದಾರೆ. ಬಿತ್ತನೆ ಮಾಡಬೇಡಿ ಎಂದು ಮೊದಲಿಗೆ ಹೇಳಿ, ಈಗ ಬಿತ್ತನೆ ಮಾಡದವರಿಗೆ ಪರಿಹಾರ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಕನ್ನಡ ಮಾತಾಡಲು ಬರಲ್ಲ ಎಂದು ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಕ್ಕೂ ಬರ ಬಂದಿದೆ. 20 ಕೃಪಾಂಕ ನೀಡಿ ವಿದ್ಯಾರ್ಥಿಗಳನ್ನು ಪಾಸ್‌ ಮಾಡಿದ್ದಾರೆ. ಹೀಗೆ ಓದುವುದನ್ನೂ ಉಚಿತ ಮಾಡಿ ಓದದೆಯೇ ಪಾಸು ಮಾಡುವ ಯೋಜನೆ ತಂದಿದ್ದಾರೆ. ಹಾಗಾದರೆ ಕಷ್ಟಪಟ್ಟು ಓದಿದ ವಿದ್ಯಾರ್ಥಿಗಳಿಗೆ ಬೆಲೆ ಇಲ್ಲವೇ? ಸಿಇಟಿ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳನ್ನು ಕೇಳಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದ್ದಾರೆ. ಈ ಸರ್ಕಾರ ಶಿಕ್ಷಣ ಇಲಾಖೆಗೆ ಅನುದಾನ ಕಡಿಮೆ ಮಾಡಿ ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಮಣಿವಣ್ಣನ್‌ ಎಂಬ ಅಧಿಕಾರಿ ಕುವೆಂಪು ವಾಣಿಯನ್ನು ತಿದ್ದುವಂತಹ ಸ್ಥಿತಿ ಇದೆ ಎಂದರು.

ಲೂಟಿ ಸರ್ಕಾರ

ಒಂದು ವರ್ಷದಲ್ಲಿ ಈ ಸರ್ಕಾರ ಚೆನ್ನಾಗಿ ಲೂಟಿ ಮಾಡಿದೆ. ಬ್ರ್ಯಾಂಡ್‌ ಬೆಂಗಳೂರು ಮಾಡುತ್ತೇವೆಂದು ಹೇಳಿ ನೀರಿನ ಸಮಸ್ಯೆ ತಂದು ಬ್ಯಾಡ್‌ ಬೆಂಗಳೂರು ಮಾಡಿದ್ದಾರೆ. 16 ಸಾವಿರ ಕೋಟಿ ರೂ. ವೆಚ್ಚದಲ್ಲಿ ಸುರಂಗ ರಸ್ತೆ ಮಾಡುತ್ತೇವೆಂದು ಕಮಿಶನ್‌ ಹೊಡೆಯಲು ಯೋಜನೆ ರೂಪಿಸಿದ್ದಾರೆ. ಯಾವುದೇ ಡೆವಲಪರ್‌ ಬಂದರೂ ಚದರ ಅಡಿಗೆ 100 ರೂ. ಕಾಂಗ್ರೆಸ್‌ ಟ್ಯಾಕ್ಸ್‌ ಎಂಬ ಕಮಿಶನ್‌ ಕೊಡಬೇಕಾಗುತ್ತದೆ. ಈ ಕಮಿಶನ್‌ ಸಾಗಿಸಲು ಸುರಂಗ ನಿರ್ಮಿಸಲು ಯೋಜನೆ ಮಾಡಿದ್ದಾರೆ. ಇಂತಹ ಸರ್ಕಾರ ಇದ್ದರೂ ಒಂದೇ, ಹೋದರೂ ಒಂದೇ ಎಂದರು.

ಕಾಂಗ್ರೆಸ್‌ ಶಾಸಕರೇ ಸರ್ಕಾರ ಬೀಳಿಸುತ್ತಾರೆ

ಕಾಂಗ್ರೆಸ್‌ ಸರ್ಕಾರವನ್ನು ಬೀಳಿಸಲು ಅವರ ಶಾಸಕರೇ ತಯಾರಾಗಿದ್ದಾರೆ. ಒಂದು ವರ್ಷ ಶಾಸಕರಿಗೆ ಅನುದಾನ ನೀಡದಿದ್ದರಿಂದ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಸರ್ಕಾರ ಬೀಳಿಸಲು ಅವರೇ ಮುಹೂರ್ತ ನಿಗದಿ ಮಾಡಲಿದ್ದಾರೆ. ಈಗ ಕೌಂಟ್‌ಡೌನ್‌ ಶುರುವಾಗಿದೆ ಎಂದರು.

‘ಪ್ರಜ್ವಲ್ ಕೇಸ್’ನಿಂದ ಮನನೊಂದು ‘ದೇವೇಗೌಡ’ರು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆಗೆ ಮುಂದಾಗಿದ್ದರು:HDK

‘ಸ್ಮೋಕ್ ಪಾನ್’ ಪ್ರಿಯರೇ ಎಚ್ಚರ ; ಪಾನ್ ತಿಂದು 12 ವರ್ಷದ ಬಾಲಕಿ ಹೊಟ್ಟೆಯಲ್ಲಿ ರಂಧ್ರ, ಶಸ್ತ್ರಚಿಕಿತ್ಸ

Share. Facebook Twitter LinkedIn WhatsApp Email

Related Posts

ಹೊಸದುರ್ಗದ ಕಬ್ಬಳ ಗ್ರಾಮದಲ್ಲಿ ಕತ್ತಿಕಲ್ಲಾಂಭ ದೇವಿಯ ಅದ್ದೂರಿ ರಥೋತ್ಸವ: ಭಕ್ತಿಭಾವದ ಸಿಡಿ ಉತ್ಸವಕ್ಕೆ ಸಾಕ್ಷಿಯಾದ ಸಾವಿರಾರು ಭಕ್ತರು

09/04/2026 8:28 PM2 Mins Read

ಶಿವಮೊಗ್ಗ: ದ್ವಿತೀಯ ಪಿಯುಸಿಯಲ್ಲಿ ಸೊರಬದ ಉಳವಿಯ ಪ್ರಕಾಶ್ ಪುತ್ರ ಶಂಕರ್ 600ಕ್ಕೆ 542 ಅಂಕ

09/04/2026 8:14 PM1 Min Read

ರೈಲ್ವೆ ಸಿಬ್ಬಂದಿಯ ಪ್ರಾಮಾಣಿಕತೆ: ಪ್ರಯಾಣಿಕರ ಲಕ್ಷಾಂತರ ಮೌಲ್ಯದ ಬ್ಯಾಗ್ ಸುರಕ್ಷಿತವಾಗಿ ವಾಪಸ್!

09/04/2026 7:06 PM2 Mins Read
Recent News

ಹೊಸದುರ್ಗದ ಕಬ್ಬಳ ಗ್ರಾಮದಲ್ಲಿ ಕತ್ತಿಕಲ್ಲಾಂಭ ದೇವಿಯ ಅದ್ದೂರಿ ರಥೋತ್ಸವ: ಭಕ್ತಿಭಾವದ ಸಿಡಿ ಉತ್ಸವಕ್ಕೆ ಸಾಕ್ಷಿಯಾದ ಸಾವಿರಾರು ಭಕ್ತರು

09/04/2026 8:28 PM

ನದಿಪಾತ್ರದಲ್ಲಿ ಚಿನ್ನದ ಭೇಟೆ! ಭಾರತದ ಈ 3 ನದಿಗಳಲ್ಲಿ ಇಂದಿಗೂ ಸಿಗುತ್ತಿದೆ ಅಪ್ಪಟ ಬಂಗಾರ: ಇಲ್ಲಿದೆ ಅಚ್ಚರಿಯ ಮಾಹಿತಿ

09/04/2026 8:27 PM

ವಿಧಾನಸಭಾ ಚುನಾವಣೆ 2026: ಅಸ್ಸಾಂ, ಪುದುಚೇರಿಯಲ್ಲಿ ಶೇ. 80ಕ್ಕೂ ಹೆಚ್ಚು ಮತದಾನ! ಕೇರಳದಲ್ಲಿ ಶೇ. 75ರಷ್ಟು ದಾಖಲೆ

09/04/2026 8:25 PM

ಶಿವಮೊಗ್ಗ: ದ್ವಿತೀಯ ಪಿಯುಸಿಯಲ್ಲಿ ಸೊರಬದ ಉಳವಿಯ ಪ್ರಕಾಶ್ ಪುತ್ರ ಶಂಕರ್ 600ಕ್ಕೆ 542 ಅಂಕ

09/04/2026 8:14 PM
State News
KARNATAKA

ಹೊಸದುರ್ಗದ ಕಬ್ಬಳ ಗ್ರಾಮದಲ್ಲಿ ಕತ್ತಿಕಲ್ಲಾಂಭ ದೇವಿಯ ಅದ್ದೂರಿ ರಥೋತ್ಸವ: ಭಕ್ತಿಭಾವದ ಸಿಡಿ ಉತ್ಸವಕ್ಕೆ ಸಾಕ್ಷಿಯಾದ ಸಾವಿರಾರು ಭಕ್ತರು

By kannadanewsnow0909/04/2026 8:28 PM KARNATAKA 2 Mins Read

ಹೊಸದುರ್ಗ: ತಾಲ್ಲೂಕಿನ ಕಬ್ಬಳ ಗ್ರಾಮದಲ್ಲಿ ಗ್ರಾಮ ದೇವತೆ ಶ್ರೀ ಕತ್ತಿಕಲ್ಲಾಂಭ ದೇವಿಯ ರಥೋತ್ಸವ ಹಾಗೂ ಸಿಡಿ ಉತ್ಸವವು ಗುರುವಾರ ಸಾವಿರಾರು…

ಶಿವಮೊಗ್ಗ: ದ್ವಿತೀಯ ಪಿಯುಸಿಯಲ್ಲಿ ಸೊರಬದ ಉಳವಿಯ ಪ್ರಕಾಶ್ ಪುತ್ರ ಶಂಕರ್ 600ಕ್ಕೆ 542 ಅಂಕ

09/04/2026 8:14 PM

ರೈಲ್ವೆ ಸಿಬ್ಬಂದಿಯ ಪ್ರಾಮಾಣಿಕತೆ: ಪ್ರಯಾಣಿಕರ ಲಕ್ಷಾಂತರ ಮೌಲ್ಯದ ಬ್ಯಾಗ್ ಸುರಕ್ಷಿತವಾಗಿ ವಾಪಸ್!

09/04/2026 7:06 PM

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆಗೆ ಮೊದಲ ಸ್ಥಾನ, ಯಾದಗಿರಿಗೆ ಕೊನೆಯ ಸ್ಥಾನ

09/04/2026 7:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.