ಜೈಪುರ (ರಾಜಸ್ಥಾನ) : ಇಂದು ಬೆಳಗ್ಗೆ ರಾಜಸ್ಥಾನದ ಖಾತು ಶ್ಯಾಮ್‌ಜಿ ದೇವಸ್ಥಾನದಲ್ಲಿ ಕಾಲ್ತುಳಿತದಲ್ಲಿ ಸಾವನಪ್ಪಿದವರ ಕುಟುಂಬಗಳಿಗೆ ಸಿಎಂ ಅಶೋಕ್ ಗೆಹ್ಲೋಟ್ ಅವರು ತಲಾ 5 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 20,000 ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ

“ಖಾತು ಶ್ಯಾಮ್‌ಜಿ ದೇವಸ್ಥಾನದಲ್ಲಿ ಸಂಭವಿಸಿದ ಅಪಘಾತದ ಕುರಿತು ವಿಭಾಗೀಯ ಆಯುಕ್ತರಿಂದ ತನಿಖೆ ನಡೆಸಲಾಗುವುದು. ಈ ಘಟನೆಯಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮೃತರ ಸಂಬಂಧಿಕರಿಗೆ ತಲಾ 5 ಲಕ್ಷ ಮತ್ತು ಗಾಯಗೊಂಡವರಿಗೆ 20,000 ರೂ.ಗಳನ್ನು ನೀಡುವಂತೆ ಸೂಚನೆ ನೀಡಲಾಗಿದೆ” ಎಂದು ಗೆಹ್ಲೋಟ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಮಾಸಿಕ ಜಾತ್ರೆಯ ಸಂದರ್ಭದಲ್ಲಿ ಇಂದು ಮುಂಜಾನೆ ದೇವಸ್ಥಾನದ ಪ್ರವೇಶ ಬಾಗಿಲು ತೆರೆದಾಗ ಸಿಕಾರ್‌ನ ಖಾತು ಶ್ಯಾಮ್‌ಜಿ ದೇವಸ್ಥಾನದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೂವರು ಮಹಿಳೆಯರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

BIGG NEWS : ರಾಜ್ಯಾದ್ಯಂತ ವರುಣಾರ್ಭಟಕ್ಕೆ ಒಂದೇ ವಾರದಲ್ಲಿ 34 ಜನ ಸಾವು!

Big news:‌ ಇಂದು ರಾಜ್ಯಸಭೆಯಲ್ಲಿ ಉಪರಾಷ್ಟ್ರಪತಿ ʻವೆಂಕಯ್ಯ ನಾಯ್ಡುʼ ಅವರಿಗೆ ಬೀಳ್ಕೊಡುಗೆ…

BIGG NEWS: ಕಲ್ಲಿದ್ದಲು ಹಗರಣ: ಮಾಜಿ ಕಲ್ಲಿದ್ದಲು ಕಾರ್ಯದರ್ಶಿಗೆ 3 ವರ್ಷ ಜೈಲು ಶಿಕ್ಷೆ

 

Share.
Exit mobile version