ನವದೆಹಲಿ : ಜಬಲ್ಪುರಕ್ಕೆ ತೆರಳುತ್ತಿದ್ದ ಸ್ಪೈಸ್ಜೆಟ್ ವಿಮಾನದ ಕ್ಯಾಬಿನ್ನಲ್ಲಿ ಹೊಗೆಯನ್ನು ಗಮನಿಸಿದ ಸಿಬ್ಬಂದಿ ಕೂಡಲೇ ದೆಹಲಿ ವಿಮಾನ ನಿಲ್ದಾಣಕ್ಕೆ ವಿಮಾನವನ್ನು ಮರಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
ವಿಮಾನವು 5,000 ಅಡಿ ಎತ್ತರದಲ್ಲಿದ್ದಾಗ ಸಿಬ್ಬಂದಿಗೆ ಕ್ಯಾಬಿನ್ನಲ್ಲಿ ಹೊಗೆ ಕಾಣಿಸಿಕೊಂಡಿತ್ತ ಎನ್ನಲಾಗುತ್ತಿದೆ.
ಸ್ಪೈಸ್ಜೆಟ್ ವಿಮಾನವು ಇಂದು ಬೆಳಿಗ್ಗೆ ದೆಹಲಿಯಿಂದ ಜಬಲ್ಪುರ್ಗೆ ಕಾರ್ಯನಿರ್ವಹಿಸುತ್ತಿದೆ. ಸಿಬ್ಬಂದಿ 5000 ಸಾವಿರ ಅಡಿ ದಾಟುವಾಗ ಕ್ಯಾಬಿನ್ನಲ್ಲಿ ಹೊಗೆಯನ್ನು ಗಮನಿಸಿದ ನಂತರ ಸುರಕ್ಷಿತವಾಗಿ ದೆಹಲಿ ವಿಮಾನ ನಿಲ್ದಾಣಕ್ಕೆ ವಿಮಾನವನ್ನು ತರಲಾಯಿತು. ಪ್ರಯಾಣಿಕರು ಸುರಕ್ಷಿತವಾಗಿ ಇದ್ದಾರೆ ಎಂದು ಸ್ಪೈಸ್ಜೆಟ್ ವಕ್ತಾರರು ತಿಳಿಸಿದ್ದಾರೆ.