Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Viral Video : ತನ್ನ ಮಗು `ಮೊಬೈಲ್’ ನೋಡುವುದನ್ನು ತಡೆಯಲು ಅದ್ಭುತ ಟ್ರಿಕ್ಸ್ ಬಳಸಿದ ಮಹಿಳೆ : ವಿಡಿಯೋ ವೈರಲ್

16/11/2025 5:44 AM
Nandini ghee price hiked by Rs 30

ಬೆಂಗಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ : 8350 ಲೀಟ‌ರ್ ನಕಲಿ ತುಪ್ಪ ಜಪ್ತಿ, ಸಿಸಿಬಿ ಪೊಲೀಸರಿಂದ ನಾಲ್ವರು ಅರೆಸ್ಟ್

16/11/2025 5:40 AM

BIG NEWS : ಇಂದು ಚಿತ್ತಾಪುರದಲ್ಲಿ ‘RSS’ ಪಥ ಸಂಚಲನ : ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಭದ್ರತೆ

16/11/2025 5:35 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಈವರೆಗೂ KSRTCಯ ನಿಗಮಗಳನ್ನೂ ಬಿಟ್ಟುಕೊಟ್ಟಿಲ್ಲ, ನೌಕರರ ಹಿತವನ್ನೂ ನಿರ್ಲಕ್ಷಿಸಿಲ್ಲ: ಸಚಿವ ರಾಮಲಿಂಗಾರೆಡ್ಡಿ
KARNATAKA

ಈವರೆಗೂ KSRTCಯ ನಿಗಮಗಳನ್ನೂ ಬಿಟ್ಟುಕೊಟ್ಟಿಲ್ಲ, ನೌಕರರ ಹಿತವನ್ನೂ ನಿರ್ಲಕ್ಷಿಸಿಲ್ಲ: ಸಚಿವ ರಾಮಲಿಂಗಾರೆಡ್ಡಿ

By kannadanewsnow0908/12/2024 8:22 PM

ಬೆಂಗಳೂರು: ಸಾರಿಗೆ ಸಂಸ್ಥೆಗಳ ನೌಕರರ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಕ್ರಮವಹಿಸಿದ್ದು, ಈ ಹಂತದಲ್ಲಿ ಮುಷ್ಕರಕ್ಕೆ ಮುಂದಾಗುವುದು ಸರಿಯಲ್ಲ. ನೌಕರರ ಬೇಡಿಕೆ ಈಡೇರಿಕೆ ಸಂಬಂಧ ಈಗಾಗಲೇ ಮಾತುಕತೆಗಳು ನಡೆದಿದ್ದು, ಬಹುತೇಕ ಬೇಡಿಕೆಗಳ ಈಡೇರಿಕೆ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಹೇಳಿದ್ದಾರೆ.

ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಈಗಾಗಲೇ ಸಾರಿಗೆ ಸಚಿವರು ನೌಕರರ ಸಂಘಟನೆಗಳೊಂದಿಗೆ ಅವರ ಬೇಡಿಕೆಗಳಿಗೆ ಸಂಬಂಧಿಸಿ ದಂತೆ ಮಾತುಕತೆ ನಡೆಸಿದ್ದು, ಅವುಗಳಲ್ಲಿ ಕೆಲವೊಂದು ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಈಗಾಗಲೇ ಕ್ರಮ ಜರುಗಿದೆ ಎಂದು ತಿಳಿಸಿದ್ದಾರೆ.

  • ಪ್ರಮುಖವಾಗಿ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಸೇವಾ ವಿಮುಕ್ತಿ ಹೊಂದಿದ ನೌಕರರ ಉಪಧನ ಮತ್ತು ಗಳಿಕೆ ರಜೆ ನಗದೀಕರಣ ವ್ಯತ್ಯಾಸದ ಮೊತ್ತ ಪಾವತಿಸಲು ರೂ.224 ಕೋಟಿ ಗಳನ್ನು ನೀಡಲು ಸರ್ಕಾರವು ದಿನಾಂಕ: 07.12 2024 ರಂದು ಸರ್ಕಾರಿ ಆದೇಶ ಹೊರಡಿಸಿದೆ. ಅಧಿವೇಶನದ ನಂತರ ಹಣ ಬಿಡುಗಡೆಯಾಗಲಿದೆ‌
  • ಸಿಬ್ಬಂದಿಗಳ ಅಂತರ ನಿಗಮ ವರ್ಗಾವಣೆಯ ಪಟ್ಟಿ ಬಿಡುಗಡೆ ಮಾಡಲಾಗಿದೆ.
  • ಭವಿಷ್ಯನಿಧಿ ಮತ್ತು ಡೀಸೆಲ್ ಬಾಕಿ ಹಣ ಪಾವತಿಗಾಗಿ ಸರ್ಕಾರವೇ ಗ್ಯಾರೆಂಟಿ‌ ನೀಡಿ ರೂ.2000 ಕೋಟಿ ಲೋನ್ ನೀಡಿದೆ.

ಈ ನಡುವೆ, ತಮ್ಮ ಆರೋಗ್ಯದ ಕಾರಣದಿಂದಾಗಿ ವೈಯಕ್ತಿಕವಾಗಿ ಸಭೆ ನಡೆಸಲು ಸಾಧ್ಯವಾಗದೆ, ಈ ಎಲ್ಲಾ ವಿಷಯಗಳನ್ನು ಕಾರ್ಮಿಕ ಸಂಘಟನೆಗಳಿಗೆ ತಿಳಿಸಲು KSRTC ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದ್ದು, ಅದರಂತೆ ಅವರು ಸಭೆ ನಡೆಸಿ ಮಾಹಿತಿ ನೀಡಿರುತ್ತಾರೆ ಎಂದಿದ್ದಾರೆ.

ಸಾರಿಗೆ ಸಂಸ್ಥೆ ಮತ್ತು ಬಸ್ಸುಗಳು ಜನರ ಜೀವನಾಡಿ. ಇತ್ತೀಚಿನ ದಿನಗಳಲ್ಲಿ 5800 ಹೊಸ ಬಸ್ಸುಗಳ ಸೇರ್ಪಡೆ, 10000 ಹೊಸ ನೇಮಕಾತಿಗಳು ಹಾಗೂ ಹತ್ತು ಹಲವು ಕಾರ್ಮಿಕ ಕಲ್ಯಾಣ ಉಪಕ್ರಮಗಳು ಸಂಸ್ಥೆಗಳಲ್ಲಿ ಯಶಸ್ವಿಯಾಗಿ ಜಾರಿಗೆ ತರಲಾಗುತ್ತಿದೆ. ಸಾರಿಗೆ ಸಿಬ್ಬಂದಿಗಳ ಬಗ್ಗೆ ಅಪಾರವಾದ ಕಾಳಜಿಯಿದ್ದು, ಅವರ ಹಲವು ವರ್ಷಗಳ ಬೇಡಿಕೆಯಾದ ನಗದು ರಹಿತ ಆರೋಗ್ಯ ಸೇವೆಗೂ ಶೀಘ್ರದಲ್ಲಿಯೇ ಚಾಲನೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಹಿಂದಿನ ಸರ್ಕಾರದ ಅವಧಿಯಲ್ಲಿ ಭವಿಷ್ಯನಿಧಿ, ಡೀಸೆಲ್ ಬಾಕಿ, ಉಪಧನ, ನಿವೃತ್ತ ನೌಕರರ ಬಾಕಿ ಎಲ್ಲಾ ಸೇರಿ ರೂ‌5900 ಕೋಟಿ ಸಾಲ ಬಾಕಿ ಉಳಿದಿರುವ ಕಾರಣ ಸಾರಿಗೆ ಸಂಸ್ಥೆಗಳನ್ನು ಸಹಜ ಸ್ಥಿತಿಗೆ ತರಲು ಕಾಲಾವಕಾಶದ ಅಗತ್ಯವಿದೆ. ಈ ಬಗ್ಗೆ ಕಾರ್ಮಿಕ ಮುಖಂಡರಿಗೆ, ಸಂಘಟನೆಗಳಿಗೆ ಸಂಪೂರ್ಣ ಮಾಹಿತಿಯಿದೆ. ಸಾರಿಗೆ ಸಂಸ್ಥೆಗಳು ಯಾವ ಸ್ಥಿತಿಯಲ್ಲಿವೆ, ಹಿಂದಿನಿಂದಲೂ ಎಷ್ಟು ನಷ್ಟದಲ್ಲಿವೆ , ಬಾಕಿ ಹಣ ಎಷ್ಟು ಕೊಡಬೇಕಾಗಿದೆ ಎಂಬುದು ತಿಳಿದಿದೆ ಎಂದವರು ತಿಳಿಸಿದ್ದಾರೆ.

ಕಾರ್ಮಿಕ ಸಂಘಟನೆಗಳಾದ ಅಖಂಡ ಕರ್ನಾಟಕ ರಾಜ್ಯ ಸಾರಿಗೆ ಕಾರ್ಮಿಕ ಮಹಾಮಂಡಳಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ, KSRTC ನಿಗಮಗಳ ಎಸ್ಸಿ /ಎಸ್ಟಿ ನೌಕರರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಎಸ್ಸಿ /ಎಸ್ಟಿ ಅಧಿಕಾರಿಗಳ ಮತ್ತು ನೌಕರರ ಸಮನ್ವಯ ಸಮಿತಿ, ಕೆಬಿಎನ್ಎನ್ ವರ್ಕರ್ಸ್ ಫೆಡರೇಶನ್, KSRTC/BMTC ಯುನೈಟೆಡ್ ಎಂಪ್ಲಾಯೀಸ್ ಯೂನಿಯನ್, ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ್ ಸಂಘ ಒಕ್ಕೂಟ, KSRTC Officers Welfare Association (KOWA) ಹಾಗೂ Supervisory staff Associations ಕೂಡಾ ಬೆಳಗಾವಿ ಚಲೋಗೆ ಕೈ ಜೋಡಿಸಿಲ್ಲ ಹಾಗೂ ಮುಷ್ಕರ ಕ್ಕೂ ಆಸಕ್ತಿ ತೋರುತ್ತಿಲ್ಲ ಎಂದಿದ್ದಾರೆ.

ಇಂತಹ ಸಂದರ್ಭದಲ್ಲಿ ಬೆಳಗಾವಿ ಚಲೋ ನಡೆಸಿ ಮುಷ್ಕರಕ್ಕೆ ನೋಟಿಸ್ ನೀಡುವುದು ಸೂಕ್ತವಲ್ಲ. ಕಾರ್ಮಿಕ ಸಂಘಟನೆಗಳ ಇತರೆ ಬೇಡಿಕೆಗಳ ಬಗ್ಗೆ ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳವರ ಗಮನಕ್ಕೆ ಕೂಡ ತರಲಾಗಿದ್ದು, ಮಾನ್ಯ ಸಚಿವರ ಆರೋಗ್ಯ ಸುಧಾರಣೆ ನಂತರ ಮಾತುಕತೆ ಪುನಾರಂಭಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.

ಸಾರಿಗೆ ನೌಕರರ ಬಗ್ಗೆ ಅಪಾರ ಕಾಳಜಿಯಿದೆ. ರೂ‌2224 ಕೋಟಿ ಸರ್ಕಾರ ಸಾರಿಗೆ ನಿಗಮಗಳಿಗೆ ನೀಡಲು ಸರ್ಕಾರ ಕ್ರಮವಹಿಸಿದ್ದು, ಈಗ ಮುಷ್ಕರ ನಡೆಸುವ ಬಗ್ಗೆ ನೋಟಿಸ್ ನೀಡುವುದು ಸರಿಯಲ್ಲ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

Share. Facebook Twitter LinkedIn WhatsApp Email

Related Posts

Viral Video : ತನ್ನ ಮಗು `ಮೊಬೈಲ್’ ನೋಡುವುದನ್ನು ತಡೆಯಲು ಅದ್ಭುತ ಟ್ರಿಕ್ಸ್ ಬಳಸಿದ ಮಹಿಳೆ : ವಿಡಿಯೋ ವೈರಲ್

16/11/2025 5:44 AM1 Min Read
Nandini ghee price hiked by Rs 30

ಬೆಂಗಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ : 8350 ಲೀಟ‌ರ್ ನಕಲಿ ತುಪ್ಪ ಜಪ್ತಿ, ಸಿಸಿಬಿ ಪೊಲೀಸರಿಂದ ನಾಲ್ವರು ಅರೆಸ್ಟ್

16/11/2025 5:40 AM1 Min Read

BIG NEWS : ಇಂದು ಚಿತ್ತಾಪುರದಲ್ಲಿ ‘RSS’ ಪಥ ಸಂಚಲನ : ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಭದ್ರತೆ

16/11/2025 5:35 AM1 Min Read
Recent News

Viral Video : ತನ್ನ ಮಗು `ಮೊಬೈಲ್’ ನೋಡುವುದನ್ನು ತಡೆಯಲು ಅದ್ಭುತ ಟ್ರಿಕ್ಸ್ ಬಳಸಿದ ಮಹಿಳೆ : ವಿಡಿಯೋ ವೈರಲ್

16/11/2025 5:44 AM
Nandini ghee price hiked by Rs 30

ಬೆಂಗಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ : 8350 ಲೀಟ‌ರ್ ನಕಲಿ ತುಪ್ಪ ಜಪ್ತಿ, ಸಿಸಿಬಿ ಪೊಲೀಸರಿಂದ ನಾಲ್ವರು ಅರೆಸ್ಟ್

16/11/2025 5:40 AM

BIG NEWS : ಇಂದು ಚಿತ್ತಾಪುರದಲ್ಲಿ ‘RSS’ ಪಥ ಸಂಚಲನ : ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಭದ್ರತೆ

16/11/2025 5:35 AM

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಬರ್ತಡೇ ದಿನವೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ!

16/11/2025 5:31 AM
State News
KARNATAKA

Viral Video : ತನ್ನ ಮಗು `ಮೊಬೈಲ್’ ನೋಡುವುದನ್ನು ತಡೆಯಲು ಅದ್ಭುತ ಟ್ರಿಕ್ಸ್ ಬಳಸಿದ ಮಹಿಳೆ : ವಿಡಿಯೋ ವೈರಲ್

By kannadanewsnow5716/11/2025 5:44 AM KARNATAKA 1 Min Read

ಇತ್ತೀಚಿನ ದಿನಗಳಲ್ಲಿ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೆ ಎಲ್ಲರೂ ತಮ್ಮ ಮೊಬೈಲ್ ಫೋನ್‌ಗಳೊಂದಿಗೆ ಗಂಟೆಗಟ್ಟಲೆ ಕಳೆಯುತ್ತಾರೆ. ವಿಶೇಷವಾಗಿ ಈ ಪೀಳಿಗೆಯ ಪೋಷಕರಿಗೆ,…

Nandini ghee price hiked by Rs 30

ಬೆಂಗಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ : 8350 ಲೀಟ‌ರ್ ನಕಲಿ ತುಪ್ಪ ಜಪ್ತಿ, ಸಿಸಿಬಿ ಪೊಲೀಸರಿಂದ ನಾಲ್ವರು ಅರೆಸ್ಟ್

16/11/2025 5:40 AM

BIG NEWS : ಇಂದು ಚಿತ್ತಾಪುರದಲ್ಲಿ ‘RSS’ ಪಥ ಸಂಚಲನ : ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಭದ್ರತೆ

16/11/2025 5:35 AM

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಬರ್ತಡೇ ದಿನವೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ!

16/11/2025 5:31 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.