Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ರಾಜ್ಯದ `ಹೊರಗುತ್ತಿಗೆ ನೌಕರರಿಗೆ’ ಗುಡ್ ನ್ಯೂಸ್ : ನಿಗದಿತ ಸಮಯಕ್ಕೆ `ಸಂಬಳ’ ನೀಡುವುದು ಕಡ್ಡಾಯ.!

22/12/2025 6:23 PM

BREAKING: ನಾಳೆಯಿಂದ ಬೆಂಗಳೂರು ‘ಹಳದಿ ಮಾರ್ಗ’ದಲ್ಲಿ 6ನೇ ರೈಲು ಸೇವೆ ಪ್ರಾರಂಭ | Namma Metro

22/12/2025 6:19 PM

ALERT : ನಿಮ್ಮ ಮೊಬೈಲ್ ನಲ್ಲಿರುವ ಈ 3 ಆ್ಯಪ್ ಗಳನ್ನು ತಕ್ಷಣ ಡಿಲೀಟ್ ಮಾಡಿ : ಕೇಂದ್ರ ಸರ್ಕಾರದಿಂದ ತುರ್ತು ಎಚ್ಚರಿಕೆ

22/12/2025 6:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಿಗದಿತ ಕಾಲಮಿತಿಯಲ್ಲಿ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ: ಸಚಿವ ಶಿವರಾಜ್ ತಂಗಡಗಿ
KARNATAKA

ನಿಗದಿತ ಕಾಲಮಿತಿಯಲ್ಲಿ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ: ಸಚಿವ ಶಿವರಾಜ್ ತಂಗಡಗಿ

By kannadanewsnow0920/09/2025 3:12 PM

ಬೆಂಗಳೂರು: ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ನಿಗದಿತ ಕಾಲಮಿತಿಯಲ್ಲಿ ಸಮೀಕ್ಷೆ ನಡೆಯಲಿದ್ದು, ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನ ತಮ್ಮ ಗೃಹ ಕಚೇರಿ ಬಳಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ನಮ್ಮಲಿ ಸಮೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಗೊಂದಲ ಇಲ್ಲ. ಒಂದು ತಿಂಗಳ ಮುಂಚಿತವಾಗಿಯೇ ಸಮೀಕ್ಷೆಯ ದಿನಾಂಕವನ್ನು ಪ್ರಕಟ ಮಾಡಿದ್ದೇವೆ. ಈಗಾಗಲೇ ಇದಕ್ಕೆ ಬೇಕಾದ ಸಿದ್ಧತೆಗಳು ನಡೆದಿವೆ. ಅಕ್ಟೋಬರ್ ನಲ್ಲಿ ಸಮೀಕ್ಷೆ ಪೂರ್ಣಗೊಂಡು ಡಿಸೆಂಬರ್ ನಲ್ಲಿ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ವರದಿಯನ್ನ ಸರ್ಕಾರ ಜಾರಿ ಮಾಡುವ ಕೆಲಸವನ್ನು ಮಾಡಿಯೇ ಮಾಡುತ್ತದೆ ಎಂದು ಹೇಳಿದರು.

ದೊಡ್ಡ ಕಾರ್ಯಕ್ಕೆ ಸರ್ಕಾರ ಕೈ ಹಾಕಿದ್ದು, ಇದು ನಮಗೆ ಸವಾಲಿನ ಕೆಲಸ ಕೂಡ. ಇದರಲ್ಲಿ ಯಶಸ್ವಿಯೂ ಕೂಡ ಆಗುತ್ತೇವೆ. ಯಾವುದೇ ಸವಾಲಿನ ಕೆಲಸಕ್ಕೆ ಕೈ ಹಾಕಿದರೆ ಸಣ್ಣ- ಪುಟ್ಟ ಲೋಪಗಳು ಸಹಜ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಆಯೋಗಕ್ಕೆ ಸಲಹೆ ನೀಡಿದ್ದೇವೆ: ಕೆಲವೊಂದು ಗೊಂದಲಗಳ ಬಗ್ಗೆ ಚರ್ಚೆ ನಡೆಸಿ ಆಯೋಗಕ್ಕೆ ಸಲಹೆ ನೀಡಿದ್ದೇವೆ. ಆಯೋಗ ಒಂದು ಸಾಂವಿಧಾನಿಕ ಸಂಸ್ಥೆ. ಆಯೋಗಕ್ಕೆ ನಿರ್ದೇಶನ ನೀಡಲು ಸಾಧ್ಯವಿಲ್ಲ. ಕೇವಲ ಸಲಹೆ ನೀಡಬಹುದು. ಆಯೋಗದವರು ಸಂಪೂರ್ಣ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತಾರೆ. ಆ ಬಳಿಕ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗಳಾಗಲಿವೆ ಎಂದರು.

ನಾನು ಮತ್ತೆ-ಮತ್ತೆ ಹೇಳುತ್ತಿದ್ದೇನೆ ಇದು ಜಾತಿ ಸಮೀಕ್ಷೆ ಅಲ್ಲ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ. ರಾಜ್ಯದಲ್ಲಿನ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳು ತಲುಪಬೇಕೆಂಬ ಹಿನ್ನೆಲೆಯಲ್ಲಿ ಸಮೀಕ್ಷೆಯನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಕ್ರಿಶ್ಚಿಯನ್ ಕುರುಬ ಎಂದು ನಾವು ಬರೆಸಿಲ್ಲ;

ಕ್ರಿಶ್ಚಿಯನ್ ಜಂಗಮ, ಕ್ರಿಶ್ಚಿಯನ್ ಕುರುಬ ಎಂಬ ಕಾಲಂ ಸೃಷ್ಟಿ ಮಾಡಿದ್ದಾರಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಾಗಲಿ, ನಾನಾಗಲಿ ಅಥವಾ ಆಯೋಗದವರಾಗಲಿ ಬರೆಸಿಲ್ಲ. ಇಂದಿನ ಕಾಂತರಾಜು ಆಯೋಗದವರು ಸಮೀಕ್ಷೆ ನಡೆಸುವ ವೇಳೆ ಸಾರ್ವಜನಿಕರೇ ಈ ರೀತಿಯಾಗಿ ತಮ್ಮ ತಮ್ಮ ಸಮುದಾಯಗಳು ಎಂದು ಸ್ವ ಇಚ್ಛೆಯಿಂದ ಬರೆಸಿದ್ದಾರೆ. ಜನರು ಬರೆದಿದ್ದನ್ನು ಆಯೋಗ ಪಟ್ಟಿಯಲ್ಲಿ ಸೇರಿಸಿದೆ. ಯಾರಿಗೂ ಈ ರೀತಿ ಬರೆಯಿಸಿ ಎಂದು ಸಮೀಕ್ಷೆಗೆ ಹೋದವರು ಹೇಳಲು ಸಾಧ್ಯನಾ? ಯಾವುದೇ ವಿಷಯದ ಬಗ್ಗೆ ಚರ್ಚೆ ನಡೆಯಬಾರದು ಎಂದರೆ ಹೇಗೆ? ಎಂದು ಮರು ಪ್ರಶ್ನಿಸಿದರು.

ನಮ್ಮಲ್ಲಿ ಯಾವುದೇ ಅಪಸ್ವರ ಗಳಿಲ್ಲ. ಯಾವುದೇ ಸಮುದಾಯದ ನಾಯಕರ ಒತ್ತಡಗಳಿಲ್ಲ. ಸಚಿವ ಸಂಪುಟ ಸಭೆಯಲ್ಲಿ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆದಿದೆಯಷ್ಟೇ. ಇದಕ್ಕೆ ನಿಮ್ಮ ಭಾಷೆಯಲ್ಲಿ ವಿರೋಧ ಎನ್ನುತ್ತೀರಾ? ನಾವು ಚರ್ಚೆ ಎನ್ನುತ್ತೇವೆ ಎಂದು ಮಾರ್ಮಿಕವಾಗಿ ನುಡಿದರು.

ಬಿಜೆಪಿಗರಿಗೆ ಜಾತಿ-ಧರ್ಮ ಕಂಡರೆ ಮಾತ್ರ ಪ್ರೀತಿ

ನಮ್ಮ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ನಮಗೆ ಸ್ವಾತಂತ್ರ್ಯ ನೀಡಿದ್ದಾರೆ. ಯಾರು ಯಾವುದೇ ಸಲಹೆ ನೀಡಿದರು, ಏನೇ ಹೇಳಿದರು ಅದನ್ನು ಕೇಳುವ ಮನಸ್ಥಿತಿಯುಳ್ಳವರು. ಬಿಜೆಪಿಗರಿಗೆ, ಬಿಜೆಪಿ ಮಂತ್ರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಮಾತನಾಡಲು ಸಾಧ್ಯನಾ? ಮೋದಿಯವರು ಅವರ ಕೈಗೆ ಸಿಗುತ್ತಾರೆಯೇ? ಸುಮ್ಮನೆ ಇಲ್ಲ-ಸಲ್ಲದ ಆರೋಪ ಮಾಡುತ್ತಾರೆ. ಬಿಜೆಪಿಯವರಿಗೆ ಜಾತಿ , ಮಸೀದಿ ಕಂಡರೆ ಪ್ರೀತಿ. ಅಭಿವೃದ್ಧಿ ಬಗ್ಗೆ ಬಿಜೆಪಿಯವರು ಮಾತನಾಡುತ್ತಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಕೇವಲ ಧರ್ಮ ಜಾತಿಗಳ ಬಗ್ಗೆಯೇ ಚರ್ಚೆ ಮಾಡುತ್ತಾ ಹೋದರೆ, ದೇಶ ಅವನತಿಯತ್ತ ಸಾಗುತ್ತದೆ. ಪಾಕಿಸ್ತಾನ, ಬಾಂಗ್ಲಾದೇಶ ಹಾಳಾಗಿರುವುದೇ ಧರ್ಮದ ಚರ್ಚೆ ಮಾಡಿ ಎಂದು ಮಾರ್ಮಿಕವಾಗಿ ಹೇಳಿದರು.

ನಮ್ಮ ಪ್ರಣಾಳಿಕೆಯಲ್ಲಿ ಸಮೀಕ್ಷೆ ಬಗ್ಗೆ ಘೋಷಣೆ ಮಾಡಿದ್ದೆವು, ಆ ನಿಟ್ಟಿನಲ್ಲಿ ನಮ್ಮ ಪಕ್ಷ ಹಾಗೂ ಸರ್ಕಾರ ಹೆಜ್ಜೆ ಇಟ್ಟಿದೆ. ಸಮಾಜದಲ್ಲಿನ ಕಷ್ಟದಲ್ಲಿರುವ ಬಡವರಿಗೆ ಸರ್ಕಾರದ ಸವಲತ್ತನ್ನು ನೀಡುವುದಾಗಿ ಹೇಳಿದ್ದೆವು. ಆ ಹಿನ್ನೆಲೆಯಲ್ಲಿ ಸಮೀಕ್ಷೆ ಕೈಗೊಳ್ಳುತ್ತಿದ್ದೇವೆ ಎಂದು ವಿವರಿಸಿದರು.

ಎಲ್ಲಾ ಸಮುದಾಯಗಳ ನಾಯಕರು ಹಾಗೂ ಸ್ವಾಮೀಜಿಗಳು ಸಭೆ ನಡೆಸುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ, ಸಭೆ ನಡೆಸಲಿ ಅದರಲ್ಲಿ ತಪ್ಪಿಲ್ಲ. ಸಮೀಕ್ಷೆಗೆ ಸಂಬಂಧಿಸಿದಂತೆ ಆಯಾ ಸಮುದಾಯದವರು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ನಾವು ಕೂಡ ಸಮೀಕ್ಷೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ಮಾಹಿತಿ ನೀಡಿದರು.

ಇನ್ನು ತಮ್ಮ ಮನೆಗಳ ಬಳಿ ಸಮೀಕ್ಷೆಗಾಗಿ ಶಿಕ್ಷಕರು ಬರಲಿದ್ದು, ದಯಮಾಡಿ ಸೂಕ್ತ ಮಾಹಿತಿ ನೀಡಿ ಸಹಕರಿಸಿ. ಯಾವುದೇ ಒತ್ತಡಕ್ಕೆ ಒಳಗಾಗದೇ ಉತ್ತರ ನೀಡಿ ಎಂದು ಸಚಿವರು ಮಾಧ್ಯಮಗಳ ಮೂಲಕ ಮನವಿ ಸಾರ್ವಜನಿಕರಿಗೆ ಮನವಿ ಮಾಡಿದರು.

Share. Facebook Twitter LinkedIn WhatsApp Email

Related Posts

GOOD NEWS : ರಾಜ್ಯದ `ಹೊರಗುತ್ತಿಗೆ ನೌಕರರಿಗೆ’ ಗುಡ್ ನ್ಯೂಸ್ : ನಿಗದಿತ ಸಮಯಕ್ಕೆ `ಸಂಬಳ’ ನೀಡುವುದು ಕಡ್ಡಾಯ.!

22/12/2025 6:23 PM1 Min Read

BREAKING: ನಾಳೆಯಿಂದ ಬೆಂಗಳೂರು ‘ಹಳದಿ ಮಾರ್ಗ’ದಲ್ಲಿ 6ನೇ ರೈಲು ಸೇವೆ ಪ್ರಾರಂಭ | Namma Metro

22/12/2025 6:19 PM1 Min Read

ALERT : ನಿಮ್ಮ ಮೊಬೈಲ್ ನಲ್ಲಿರುವ ಈ 3 ಆ್ಯಪ್ ಗಳನ್ನು ತಕ್ಷಣ ಡಿಲೀಟ್ ಮಾಡಿ : ಕೇಂದ್ರ ಸರ್ಕಾರದಿಂದ ತುರ್ತು ಎಚ್ಚರಿಕೆ

22/12/2025 6:09 PM1 Min Read
Recent News

GOOD NEWS : ರಾಜ್ಯದ `ಹೊರಗುತ್ತಿಗೆ ನೌಕರರಿಗೆ’ ಗುಡ್ ನ್ಯೂಸ್ : ನಿಗದಿತ ಸಮಯಕ್ಕೆ `ಸಂಬಳ’ ನೀಡುವುದು ಕಡ್ಡಾಯ.!

22/12/2025 6:23 PM

BREAKING: ನಾಳೆಯಿಂದ ಬೆಂಗಳೂರು ‘ಹಳದಿ ಮಾರ್ಗ’ದಲ್ಲಿ 6ನೇ ರೈಲು ಸೇವೆ ಪ್ರಾರಂಭ | Namma Metro

22/12/2025 6:19 PM

ALERT : ನಿಮ್ಮ ಮೊಬೈಲ್ ನಲ್ಲಿರುವ ಈ 3 ಆ್ಯಪ್ ಗಳನ್ನು ತಕ್ಷಣ ಡಿಲೀಟ್ ಮಾಡಿ : ಕೇಂದ್ರ ಸರ್ಕಾರದಿಂದ ತುರ್ತು ಎಚ್ಚರಿಕೆ

22/12/2025 6:09 PM

SHOCKING : ದೇಶದಲ್ಲಿ `ಪೈಶಾಚಿಕ ಕೃತ್ಯ’ : 34 ವರ್ಷದ ವ್ಯಕ್ತಿಯಿಂದ ಅತ್ಯಾಚಾರ, ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ ಬಾಲಕಿ.!

22/12/2025 6:04 PM
State News
KARNATAKA

GOOD NEWS : ರಾಜ್ಯದ `ಹೊರಗುತ್ತಿಗೆ ನೌಕರರಿಗೆ’ ಗುಡ್ ನ್ಯೂಸ್ : ನಿಗದಿತ ಸಮಯಕ್ಕೆ `ಸಂಬಳ’ ನೀಡುವುದು ಕಡ್ಡಾಯ.!

By kannadanewsnow5722/12/2025 6:23 PM KARNATAKA 1 Min Read

ಬೆಂಗಳೂರು : ಹೊರಗುತ್ತಿಗೆ ನೌಕರರಿಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ನಿಗದಿತ ಸಮಯಕ್ಕೆ ವೇತನ ನೀಡುವುದು ಕಡ್ಡಾಯಗೊಳಿಸಲಾಗಿದೆ.  ಹೌದು, ಹೊರಗುತ್ತಿಗೆ…

BREAKING: ನಾಳೆಯಿಂದ ಬೆಂಗಳೂರು ‘ಹಳದಿ ಮಾರ್ಗ’ದಲ್ಲಿ 6ನೇ ರೈಲು ಸೇವೆ ಪ್ರಾರಂಭ | Namma Metro

22/12/2025 6:19 PM

ALERT : ನಿಮ್ಮ ಮೊಬೈಲ್ ನಲ್ಲಿರುವ ಈ 3 ಆ್ಯಪ್ ಗಳನ್ನು ತಕ್ಷಣ ಡಿಲೀಟ್ ಮಾಡಿ : ಕೇಂದ್ರ ಸರ್ಕಾರದಿಂದ ತುರ್ತು ಎಚ್ಚರಿಕೆ

22/12/2025 6:09 PM

ನಾಳೆ ಸಾಗರದ ‘ಸರ್ಕಾರಿ ಪದವಿ ಪೂರ್ವ ಕಾಲೇಜು ಸುವರ್ಣ ಮಹೋತ್ಸವ’: ಸಿದ್ಧತೆ ಪರಿಶೀಲಿಸಿದ ಶಾಸಕರು

22/12/2025 6:03 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.