Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯದ `KPS, BPS, PM ಶ್ರೀ ಶಾಲೆಗಳಲ್ಲಿ’ ಮಕ್ಕಳ ದಾಖಲಾತಿ ಮಿತಿ ಹೆಚ್ಚಳ ಮಾಡಿ ಸರ್ಕಾರ ಆದೇಶ.!

21/06/2025 5:15 AM

ಇಂದು ‘ಅಂತರರಾಷ್ಟ್ರೀಯ ಯೋಗ ದಿನಾಚರಣೆ’ : ‘ಯೋಗ’ ಮಾಡುವಾಗ ಈ ಮಾರ್ಗದರ್ಶನಗಳ ಪಾಲನೆ ಕಡ್ಡಾಯ | International Yoga Day

21/06/2025 5:10 AM

BIG NEWS : ಇಂದು ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ `ಅಂತರರಾಷ್ಟ್ರೀಯ ಯೋಗ ದಿನಾಚರಣೆ’ ಕಡ್ಡಾಯ.!

21/06/2025 5:01 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಜೆಪಿಯಲ್ಲಿ ಕೆಲವರು ಕಾಂಗ್ರೆಸ್ ಜೊತೆ ಶಾಮೀಲಾಗಿದ್ದಾರೆ: HD ಕುಮಾರಸ್ವಾಮಿ ಗಂಭೀರ ಆರೋಪ
KARNATAKA

ಬಿಜೆಪಿಯಲ್ಲಿ ಕೆಲವರು ಕಾಂಗ್ರೆಸ್ ಜೊತೆ ಶಾಮೀಲಾಗಿದ್ದಾರೆ: HD ಕುಮಾರಸ್ವಾಮಿ ಗಂಭೀರ ಆರೋಪ

By kannadanewsnow0920/10/2024 10:01 PM

ಬೆಂಗಳೂರು: ಬಿಜೆಪಿಯಲ್ಲಿ ಇರುವಂತಹ ಕೆಲವೇ ಕೆಲವರು ಕುಮಾರಸ್ವಾಮಿಗೆ ದೆಹಲಿ ಮಟ್ಟದಲ್ಲಿ ಉತ್ತಮ ಬಾಂಧವ್ಯ ಇದೆ. ಹೀಗಾಗಿ ಅವರಿಗೆ ಏನಾದರೂ ಸಮಸ್ಯೆ ಉದ್ಭವ ಮಾಡಬೇಕು ಎನ್ನುವ ಕಾರಣಕ್ಕೆ ಇಂತಹ ಪ್ರಕರಣಗಳನ್ನು ದುರ್ಬಳಕೆ ಮಾಡಿಕೊಳ್ಳಲು ಪ್ರಯತ್ನ ಮಾಡುತ್ತಿದ್ದಾರೆ ಅಂತ ಕೆಲವರು ಮಾತಾಡಿಕೊಳ್ಳುತ್ತಿದ್ದಾರೆ. ಅದು ನನ್ನ ಕಿವಿಗೂ ಬಿದ್ದಿದೆ. ಬಿಜೆಪಿ – ಜೆಡಿಎಸ್ ಮೈತ್ರಿಗೆ ಹುಳಿ ಹಿಂಡುವವರು ಬಹಳಷ್ಟು ಜನ ಇದ್ದಾರೆ. ಒಟ್ಟಾರೆ ಕುಮಾರಸ್ವಾಮಿಯನ್ನು ಹಾಳು ಮಾಡಲು ಹೊರಟಿದ್ದಾರೆ. ಅವರ ಪ್ರಯತ್ನ ಫಲ ಕೊಡುವುದಿಲ್ಲ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಹುಳಿ ಹಿಂಡುವವರು ನಮ್ಮ ಪಕ್ಷದಲ್ಲಿ ಇಲ್ಲ. ಆದರೆ ಅಲ್ಲಿನ ಹುಳಿ ಹಿಂಡುವವರು ಕಾಂಗ್ರೆಸ್ ನಾಯಕರ ಜತೆ ಸೇರಿಕೊಂಡಿದ್ದಾರೆ. ಅದು ನನಗೆ ಗೊತ್ತಿದೆ. ಪ್ರಧಾನ ಮಂತ್ರಿ ಅವರನ್ನು ಅಸ್ಥಿರಗೊಳಿಸಲು ಅವರು ಕಾಂಗ್ರೆಸ್ ನಾಯಕರ ಜತೆ ಸೇರಿಕೊಂಡು ಮಸಲತ್ತು ಮಾಡುತ್ತಿರಬಹುದು. ನರೇಂದ್ರ ಮೋದಿ ಅವರ ವರ್ಚಸ್ಸಿಗೆ ಧಕ್ಕೆ ಆಗಬಾರದು. ಇದೆಲ್ಲವನ್ನು ಗಮನಿಸುತ್ತಿದ್ದೇನೆ. ಇದಕ್ಕೆ ನಾನು ಅವಕಾಶ ಕೊಡಬೇಕಾ? ಎಂದು ಅವರು ಪ್ರಶ್ನಿಸಿದರು.

ಇಂತ ಕುತಂತ್ರಕ್ಕೆ ನಾನು ಯಾಕೆ ಬಲಿಯಾಗಬೇಕು? ನೋಡೋಣ, ಮುಂದೆ ಅಭ್ಯರ್ಥಿ ತೀರ್ಮಾನ‌ ಮಾಡುತ್ತೇವೆ. ನನಗೆ ಬೇಕಿರುವುದು ಪ್ರಧಾನಮಂತ್ರಿಯವರಿಗೆ ಶಕ್ತಿ ತುಂಬುವುದಷ್ಟೇ. ಆ ನಿಟ್ಟಿನಲ್ಲಿ ನಾನು ತೀರ್ಮಾನ ಮಾಡುತ್ತೇನೆ. ಆ ನಿಟ್ಟಿನಲ್ಲಿ ಚನ್ನಪಟ್ಟಣ ಸೀಟು ಗೆಲ್ಲಬೇಕು. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಹುನ್ನಾರಕ್ಕೆ ಬಲಿ ಆಗುವುದಿಲ್ಲ.

ನಿಮ್ಮ ಕುಟುಂಬದಿಂದಲೇ ಯಾರಾದರೂ ಸ್ಪರ್ಧೆ ಮಾಡುತ್ತಾರಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಚಿವರು; ಇಲ್ಲಿವರೆಗೂ ಎಲ್ಲೂ ನಮ್ಮ ಕುಟುಂಬದವರು ಸ್ಪರ್ಧೆ ಮಾಡುತ್ತಾರೆ ಎಂದು ನಾನು ಹೇಳಿಲ್ಲ. ನಾನು ಸ್ಪರ್ಧೆ ಮಾಡಲ್ಲ ಎಂದು ನಿಖಿಲ್ ಕುಮಾರಸ್ವಾಮಿ ನೂರು ಬಾರಿ ಹೇಳಿದ್ದಾರೆ. ಚುನಾವಣೆಯಲ್ಲಿ ನಿಲ್ಲಲ್ಲ.. ಇನ್ನು ಮೂರು ವರ್ಷ ಕಾಯುತ್ತೇನೆ ಎಂದು ಅವರು ಹೇಳಿದ್ದಾರೆ. ನಾನೇನಾದರೂ ಹೇಳಿದ್ದೀನಾ? ನಿಖಿಲ್ ಕುಮಾರಸ್ವಾಮಿ ನಿಲ್ಲುತ್ತಾರೆ ಎಂದು. ನಾನು ಹೇಳಿರುವುದು ಎನ್‌ಡಿಎ ಅಭ್ಯರ್ಥಿ ನಿಲ್ಲುತ್ತಾರೆ ಎಂದು. ಅದು ಬಿಜೆಪಿಯಿಂದ ಅಥವಾ ಜೆಡಿಎಸ್ ನಿಂದ ಆದರೂ ಆಗಬಹುದು ಅಂತ ಅಷ್ಟೇ. ಅಭ್ಯರ್ಥಿ ನಿಲ್ಲಿಸಲೇಬೇಕಲ್ವಾ? ಪಲಾಯನ ಮಾಡೋಕಾಗುತ್ತಾ?ಯಾವುದೇ ಕಾರಣಕ್ಕೂ ಕಾಂಗ್ರೆಸ್ ಇಲ್ಲಿ ಲಾಭ ಪಡೆಯಲು ಸಾಧ್ಯವಿಲ್ಲ. ಏಕೆಂದರೆ, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಬಲಯುತವಾಗಿಲ್ಲ. ಆ ಪಕ್ಷಕ್ಕೆ ಅಲ್ಲಿ ಕಾರ್ಯಕರ್ತರ ಪಡೆಯೇ ಇಲ್ಲ. ಹಣದ ಮುಖಾಂತರ ಅಧಿಕಾರದ ದುರುಪಯೋಗದ ಮೂಲಕ ರಾಜಕಾರಣ ಮಾಡಬೇಕು ಅಷ್ಟೆ. ಕಳೆದ 25 ವರ್ಷಗಳಿಂದ ಚನ್ನಪಟ್ಟಣದಲ್ಲಿ ಕಾಂಗ್ರೆಸ್ 3ನೇ ಸ್ಥಾನದಲ್ಲಿದೆ. ಈಗ ಕಾಂಗ್ರೆಸ್ಸಿನ ಕುತಂತ್ರಕ್ಕೆ ಕೆಲವರು ಬಲಿಯಾಗಲು ಹೊರಟಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ, ಡಿಕೆಶಿಯನ್ನು ಭೇಟಿಯಾಗಿದ್ದಾರೆ: HDK ಸ್ಪೋಟಕ ಹೇಳಿಕೆ

Rain Alert : ರಾಜ್ಯದಲ್ಲಿ ಇನ್ನೆರಡು ದಿನ ಭಾರಿ ಮಳೆ : ಈ 13 ಜಿಲ್ಲೆಗಳಲ್ಲಿ ‘ಯಲ್ಲೋ’ ಅಲರ್ಟ್ ಘೋಷಣೆ

BREAKING : ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋರ್ಟ್ ಗೆ ಬಾಂಬ್ ಬೆದರಿಕೆ ಕರೆ : ಭದ್ರತಾ ಪಡೆಗಳಿಂದ ಮುಂಜಾಗ್ರತಾ ಕ್ರಮ

Share. Facebook Twitter LinkedIn WhatsApp Email

Related Posts

ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯದ `KPS, BPS, PM ಶ್ರೀ ಶಾಲೆಗಳಲ್ಲಿ’ ಮಕ್ಕಳ ದಾಖಲಾತಿ ಮಿತಿ ಹೆಚ್ಚಳ ಮಾಡಿ ಸರ್ಕಾರ ಆದೇಶ.!

21/06/2025 5:15 AM2 Mins Read

ಇಂದು ‘ಅಂತರರಾಷ್ಟ್ರೀಯ ಯೋಗ ದಿನಾಚರಣೆ’ : ‘ಯೋಗ’ ಮಾಡುವಾಗ ಈ ಮಾರ್ಗದರ್ಶನಗಳ ಪಾಲನೆ ಕಡ್ಡಾಯ | International Yoga Day

21/06/2025 5:10 AM3 Mins Read

BIG NEWS : ಇಂದು ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ `ಅಂತರರಾಷ್ಟ್ರೀಯ ಯೋಗ ದಿನಾಚರಣೆ’ ಕಡ್ಡಾಯ.!

21/06/2025 5:01 AM1 Min Read
Recent News

ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯದ `KPS, BPS, PM ಶ್ರೀ ಶಾಲೆಗಳಲ್ಲಿ’ ಮಕ್ಕಳ ದಾಖಲಾತಿ ಮಿತಿ ಹೆಚ್ಚಳ ಮಾಡಿ ಸರ್ಕಾರ ಆದೇಶ.!

21/06/2025 5:15 AM

ಇಂದು ‘ಅಂತರರಾಷ್ಟ್ರೀಯ ಯೋಗ ದಿನಾಚರಣೆ’ : ‘ಯೋಗ’ ಮಾಡುವಾಗ ಈ ಮಾರ್ಗದರ್ಶನಗಳ ಪಾಲನೆ ಕಡ್ಡಾಯ | International Yoga Day

21/06/2025 5:10 AM

BIG NEWS : ಇಂದು ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ `ಅಂತರರಾಷ್ಟ್ರೀಯ ಯೋಗ ದಿನಾಚರಣೆ’ ಕಡ್ಡಾಯ.!

21/06/2025 5:01 AM

BIG NEWS : ಅಂತಾರಾಷ್ಟ್ರೀಯ ಯೋಗ ದಿನಾಚರಣೆ : ಇಂದು ವಿಶಾಖಪಟ್ಟಣಂನಲ್ಲಿ 3 ಲಕ್ಷ ಜನರೊಂದಿಗೆ `ಯೋಗ’ ಮಾಡಲಿದ್ದಾರೆ ಪ್ರಧಾನಿ ಮೋದಿ | PM Modi

21/06/2025 5:00 AM
State News
KARNATAKA

ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯದ `KPS, BPS, PM ಶ್ರೀ ಶಾಲೆಗಳಲ್ಲಿ’ ಮಕ್ಕಳ ದಾಖಲಾತಿ ಮಿತಿ ಹೆಚ್ಚಳ ಮಾಡಿ ಸರ್ಕಾರ ಆದೇಶ.!

By kannadanewsnow5721/06/2025 5:15 AM KARNATAKA 2 Mins Read

ಬೆಂಗಳೂರು : ಕರ್ನಾಟಕ ಪಬ್ಲಿಕ್ ಶಾಲೆ (KPS), ಬೆಂಗಳೂರು ಪಬ್ಲಿಕ್ ಶಾಲೆ (BPS) ‘ಹಾಗೂ ಪಿ.ಎಂ ಶ್ರೀ ಶಾಲೆಗಳಲ್ಲಿ ದಿ-ಭಾಷಾ…

ಇಂದು ‘ಅಂತರರಾಷ್ಟ್ರೀಯ ಯೋಗ ದಿನಾಚರಣೆ’ : ‘ಯೋಗ’ ಮಾಡುವಾಗ ಈ ಮಾರ್ಗದರ್ಶನಗಳ ಪಾಲನೆ ಕಡ್ಡಾಯ | International Yoga Day

21/06/2025 5:10 AM

BIG NEWS : ಇಂದು ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ `ಅಂತರರಾಷ್ಟ್ರೀಯ ಯೋಗ ದಿನಾಚರಣೆ’ ಕಡ್ಡಾಯ.!

21/06/2025 5:01 AM

ಶಿವಮೊಗ್ಗ: ಸಾಲದ ಬಾಧೆಯಿಂದ ಗೌತಮಪುರ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ನೇಣಿಗೆ ಶರಣು

20/06/2025 10:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.