Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದಲ್ಲಿ ಒಂದು ಕಪ್ ಚಹಾಕ್ಕಿಂತ ಕಡಿಮೆ ಬೆಲೆಗೆ ‘1GB ಡೇಟಾ’ ಲಭ್ಯವಿದೆ ; ಪ್ರಧಾನಿ ಮೋದಿ

08/10/2025 10:05 PM

BREAKING : ಉತ್ತರ ಪ್ರದೇಶದ ಕಾನ್ಪುರದಲ್ಲಿ 2 ಸ್ಕೂಟಿಗಳು ಸ್ಫೋಟ ; 6 ಜನರಿಗೆ ಗಾಯ

08/10/2025 9:40 PM

ಪ್ರತಿ ಬಾರಿ ಬಾಚಿದಾದ್ಲೂ ‘ಕೂದಲು’ ಉದುರುತ್ತಾ.? ಈ ಸರಳ ಸಲಹೆಯೊಂದಿಗೆ ಸುಲಭವಾಗಿ ಪರಿಶೀಲಿಸಿ!

08/10/2025 9:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಶೀಘ್ರವೇ ‘ಕರ್ನಾಟಕ ಪೊಲೀಸರ ಟೋಪಿ’ ಬದಲು: ‘ಪೀಕ್ ಕ್ಯಾಪ್’ ವಿತರಣೆ
KARNATAKA

BIG NEWS: ಶೀಘ್ರವೇ ‘ಕರ್ನಾಟಕ ಪೊಲೀಸರ ಟೋಪಿ’ ಬದಲು: ‘ಪೀಕ್ ಕ್ಯಾಪ್’ ವಿತರಣೆ

By kannadanewsnow0917/07/2025 6:19 AM

ಬೆಂಗಳೂರು: ಅನೇಕ ಪೊಲೀಸ್ ಪೇದೆಗಳು ಕ್ಯಾಪ್ ಬದಲಾವಣೆ ಬಗ್ಗೆ ಮನವಿ ಬಂದಿತ್ತು. ಮಳೆ ಸಂದರ್ಭದಲ್ಲಿ ಸಮಸ್ಯೆಯಾಗುತ್ತಿತ್ತು. ಸಿಎಂ ಅವರು ಪೀಕ್ ಕ್ಯಾಪ್‌ಗಳನ್ನು ಆಯ್ಕೆ ಮಾಡಿದ್ದಾರೆ. ಸದ್ಯದಲ್ಲೆ ಪರಿಚಯಿಸುತ್ತೇವೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಪೊಲೀಸ್ ಮತ್ತು ಬಿಎಂಆರ್‌ಸಿಎಲ್ ಸಹಯೋಗದೊಂದಿಗೆ ಬೆಂಗಳೂರಿನ ಕೋರಮಂಗಲದಲ್ಲಿ ನೂತನವಾಗಿ ನಿರ್ಮಿಸಿರುವ ‘ಕೆಎಸ್‌ಆರ್‌ಪಿ ಸಮುದಾಯ ಭವನ ಉದ್ಘಾಟನಾ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಪಾಲ್ಗೊಂಡು, ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಇಡೀ ದೇಶದಲ್ಲಿ ಮೊದಲ ಬಾರಿಗೆ ಕಾರಾಗೃಹ ಅಕಾಡೆಮಿಯ ಕಟ್ಟಡವನ್ನು ಉದ್ಘಾಟಿಸಲಾಗಿದೆ. ಅಲ್ಲದೇ, ಇಷ್ಟು ದೊಡ್ಡ ಕೆಎಸ್ಆರ್‌ಪಿ ಸಮುದಾಯ ಭವನವನ್ನು ನಿರ್ಮಿಸಿಲ್ಲ. ಇದರ ನಿರ್ಮಾಣಕ್ಕೆ ಬಿಎಂಆರ್‌ಸಿಎಲ್ 40 ಕೋಟಿ ರೂ. ನೀಡಿದ್ದಾರೆ. ಶೇಷಾದ್ರಿಪುರ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗಿದೆ. ನಮ್ಮ ಇಲಾಖೆ ಮಾನವ ಸಂಪನ್ಮೂಲಗಳ ಇಲಾಖೆ. ನಮ್ಮ ಇಲಾಖೆಯಲ್ಲಿ ದೊಡ್ಡ ಯೋಜನೆಗಳಿಲ್ಲ. ಆದರೆ, ಪೊಲೀಸರೆ ನಮ್ಮ ಇಲಾಖೆಯ ಸಂಪತ್ತು ಎಂದರು.

ರಾಜ್ಯದಲ್ಲಿ ಶಾಂತಿ, ಕಾನೂನು ಸುವ್ಯವ್ಥೆ, ಸಾರ್ವಜನಿಕರ ಆಸ್ತಿ ಕಾಪಾಡಲು, ನಾವೆಲ್ಲ ಶಾಂತಿಯುತ ಬದುಕು ನಡೆಸಲು, ಕರ್ನಾಟಕ ಸುಭಿಕ್ಷವಾಗಿ ಮತ್ತು ಶಾಂತಿಯಿಂದ ಇದೆ ಎಂದು ಹೇಳಲು ಕಾನ್ಸ್ಟೆಬಲ್ ಗಳು ಕಾರಣ. ಸರ್ಕಾರದ ವತಿಯಿಂದ ನಿಮಗೊಂದು ಸಲ್ಯೂಟ್ ಎಂದು ಹೇಳಿದರು.

ರಾಜ್ಯ ಪೊಲೀಸ್ ಇಲಾಖೆ ದೇಶದಲ್ಲೇ ಪ್ರಖ್ಯಾತಿ ಪಡೆದಿದೆ ಎಂಬುದನ್ನು ಸಂತೋಷವಾಗಿ ಹೇಳುತ್ತೇನೆ. ಮೂರು ದಿನದ ಹಿಂದೆ ಕೇಂದ್ರ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆಗಮಿಸಿ ಪ್ರಗತಿ ಪರಿಶೀಲಿಸಿದ್ದರು. ಈ ವೇಳೆ, ರಾಜ್ಯ ಪೊಲೀಸ್ ಇಲಾಖೆಯ ಕಾರ್ಯವೈಖರಿ ಉತ್ತಮವಾಗಿದೆ ಎಂದು ಹೇಳಿ ಶ್ಲಾಘಿಸಿರುವುದು ನನಗೆ ಅತ್ಯಂತ ಹೆಮ್ಮೆ ಎನಿಸುತ್ತದೆ.

ನ್ಯಾಯ ಒದಗಿಸುವುದರಲ್ಲಿ ಕರ್ನಾಟಕ ಪೊಲೀಸ್ ನಂಬರ್ ಒನ್ ಇದೆ ಎಂದು ಹೈದ್ರಾಬಾದ್ ವಿಶ್ವವಿದ್ಯಾಲಯ ಹೇಳಿದೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ನಮ್ಮ ಪೊಲೀಸರು ಪಾರಿತೋಷಕ ತಂದಿದ್ದಾರೆ ಎಂದು ಶ್ಲಾಘಿಸಿದರು.

ಗ್ಲೋಬಲ್ ಇನ್ವೆಸ್ಟರ್ಸ್ ಮೀಟ್‌ನಲ್ಲಿ 10 ಲಕ್ಷ ಕೋಟಿ ರೂ. ಹೂಡಿಕೆ ಹರಿದು ಬಂದಿದೆ. ರಾಜ್ಯದಲ್ಲಿ ಕಾನೂನು ಸುವ್ಯವ್ಥೆ ಕೆಟ್ಟಿದ್ದರೆ ಇಷ್ಟೊಂದು ಹೂಡಿಕೆ ಬರುತ್ತಿರಲಿಲ್ಲ. ರಾಜ್ಯಕ್ಕೆ ಬಂಡಾವಾಳ ಹೂಡಿಕೆ ಬರುವಲ್ಲಿ, ನಿಮ್ಮ ಉತ್ತಮ ಕಾರ್ಯವೈಖರಿಯಿಂದ ಸಾಧ್ಯವಾಗಿದೆ ಎಂದರು.

ಸಿಎಂ ಅವರು ಬಜೆಟ್ ಸಿದ್ಧಪಡಿಸುವಾಗ, ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಅನೇಕ ಬೇಡಿಕೆಗಳನ್ನು ಅವರ ಮುಂದಿಟ್ಟು ಸಾವಿರಾರು ಕೋಟಿ ರೂ. ಕೇಳುತ್ತೇನೆ. ಪೊಲೀಸ್ ವಸತಿ ಗೃಹ ಯೋಜನೆ, ಹೊಸ ವಾಹನಗಳ ಖರೀದಿ ಸೇರಿದಂತೆ ವಿವಿಧ ಕಾರ್ಯಗಳಿಗೆ 900 ಕೋಟಿ ರೂ. ಹೆಚ್ಚು ಹಣ ಕೊಟ್ಟಿದ್ದಾರೆ. ಪೊಲೀಸ್ ಇಲಾಖೆಗೆ ಎಂದಿಗೂ ನಿರಾಸೆ ಮಾಡಿಲ್ಲ ಎಂದು ಹೇಳಿದರು.

ಹೊಸದಾಗಿ ಎರಡು ಪೊಲೀಸ್ ಬೆಟಾಲಿಯನ್ ಸ್ಥಾಪನೆ, 100 ಪೊಲೀಸ್ ಠಾಣೆಗಳ ಕಟ್ಟಡ ನಿರ್ಮಾಣಕ್ಕೆ ಹಣ ಒದಗಿಸಿದ್ದಾರೆ. ಇಲಾಖೆಯಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಲು ಮತ್ತು ಆಧುನಿಕ ಬದಲಾವಣೆ ತರಲು ಎಲ್ಲ‌ ರೀತಿಯ ಸಹಕಾರ ಕೊಟ್ಟಿದ್ದಾರೆ. ಇಡೀ ದೇಶದಲ್ಲಿ ಮೊದಲ ಬಾರಿಗೆ ಸೈಬರ್ ಕ್ರೈಂ ಪೊಲೀಸ್ ಠಾಣೆ ಸ್ಥಾಪಿಸಿದ್ದು ಕರ್ನಾಟಕ ಪೊಲೀಸ್. ಸೈಬರ್ ಅಪರಾಧಗಳನ್ನು ತಡೆಗಟ್ಟುವ ಶಕ್ತಿ ಕರ್ನಾಟಕ ಪೊಲೀಸರಿಗೆ ಇದೆ ಎಂದರು.

ರಾಜ್ಯದಲ್ಲಿ ಕೊಲೆ ಸೇರಿದಂತೆ ಎಲ್ಲ ರೀತಿಯ ಅಪರಾಧಗಳು ಕಡಿಮೆಯಾಗಿವೆ. ಪೊಲೀಸರು ಪರಿಣಾಮಕಾರಿಯಾಗಿ ಕೆಲಸ ಮಾಡಿದ್ದರಿಂದ ಇದೆಲ್ಲ ಸಾಧ್ಯವಾಗಿದೆ. ಹಲವು ಬದಲಾವಣೆಗಳನ್ನು ತರಲು ಮುಂದಾಗಿದ್ದೇವೆ. ಸುಳ್ಳು ಸುದ್ದಿ, ಪ್ರಚೋಧನಾತ್ಮಕ ಭಾಷಣ ತಡೆಗಟ್ಟಲು ಕಾನೂನು ತರುತ್ತಿದ್ದೇವೆ ಎಂದು ತಿಳಿಸಿದರು.

ಅನೇಕ ಪೊಲೀಸ್ ಪೇದೆಗಳು ಕ್ಯಾಪ್ ಬದಲಾವಣೆ ಬಗ್ಗೆ ಮನವಿ ಬಂದಿತ್ತು. ಮಳೆ ಸಂದರ್ಭದಲ್ಲಿ ಸಮಸ್ಯೆಯಾಗುತ್ತಿತ್ತು. ಸಿಎಂ ಅವರು ಪೀಕ್ ಕ್ಯಾಪ್‌ಗಳನ್ನು ಆಯ್ಕೆ ಮಾಡಿದ್ದಾರೆ. ಸದ್ಯದಲ್ಲೆ ಪರಿಚಯಿಸುತ್ತೇವೆ. ಪೊಲೀಸ್ ಸಿಬ್ಬಂದಿಗಳ ಹಿತಾದೃಷ್ಡಿಯಿಂದ ಆರೋಗ್ಯ ತಪಾಸಣಾ ವೆಚ್ಚವನ್ನು 1500 ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದರು‌.

ಬೆಂಗಳೂರು ನಗರ ಪೊಲೀಸ್ ಕಮಾಂಡ್ ಸೆಂಟರ್ ವ್ಯವಸ್ಥೆ, ದೇಶದಲ್ಲಿ ಎಲ್ಲೂ ಇಲ್ಲ. ಲಂಡನ್ ಮೆಟ್ರೊ ಪೊಲೀಸ್‌ನವರು 7 ನಿಮಿಷಗಳಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾರೆ. ಇದನ್ನು ಗಮನಿಸಿ ಹೊಯ್ಸಳ ಪೊಲೀಸ್ ಪರುಚಯಿಸಲಾಯಿತು. ಈ ಹಿಂದೆ ಜನರನ್ನು ಸ್ಪಂದಿಸಲು 25 ನಿಮಿಷ ಆಗುತ್ತಿತ್ತು. ಬೆಂಗಳೂರು ನಗರ ಪೊಲೀಸರು 9 ನಿಮಿಷಗಳಲ್ಲಿ ಪೊಲೀಸರು ಸ್ಥಳದಲ್ಲಿರುತ್ತಾರೆ. ಬೆಂಗಳೂರು ನಗರ ಪೊಲೀಸರು ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎಂದು ಹೇಳಿದರು.

Share. Facebook Twitter LinkedIn WhatsApp Email

Related Posts

ಪಿಜಿನೀಟ್-25: ಅರ್ಜಿ ಸಲ್ಲಿಕೆಗೆ ಅ.15ರವರೆಗೆ ದಿನಾಂಕ ವಿಸ್ತರಣೆ- KEA

08/10/2025 8:14 PM1 Min Read

ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲೆ ಶೂ ಎಸೆದಿರುವುದು ಮನುವಾದದ ಬೆಂಬಲಿಗರ ಷಡ್ಯಂತ್ರದ ಭಾಗ: MLC ರಮೇಶ್ ಬಾಬು

08/10/2025 8:12 PM2 Mins Read

ಇನ್ಮುಂದೆ GBA ಪಾಲಿಕೆಗಳಲ್ಲಿ ಶೇ.50ರಷ್ಟು ಮಹಿಳಾ ಕಾರ್ಪೊರೇಟರ್ ಇರುತ್ತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

08/10/2025 7:39 PM8 Mins Read
Recent News

ಭಾರತದಲ್ಲಿ ಒಂದು ಕಪ್ ಚಹಾಕ್ಕಿಂತ ಕಡಿಮೆ ಬೆಲೆಗೆ ‘1GB ಡೇಟಾ’ ಲಭ್ಯವಿದೆ ; ಪ್ರಧಾನಿ ಮೋದಿ

08/10/2025 10:05 PM

BREAKING : ಉತ್ತರ ಪ್ರದೇಶದ ಕಾನ್ಪುರದಲ್ಲಿ 2 ಸ್ಕೂಟಿಗಳು ಸ್ಫೋಟ ; 6 ಜನರಿಗೆ ಗಾಯ

08/10/2025 9:40 PM

ಪ್ರತಿ ಬಾರಿ ಬಾಚಿದಾದ್ಲೂ ‘ಕೂದಲು’ ಉದುರುತ್ತಾ.? ಈ ಸರಳ ಸಲಹೆಯೊಂದಿಗೆ ಸುಲಭವಾಗಿ ಪರಿಶೀಲಿಸಿ!

08/10/2025 9:20 PM

‘ಅಟಲ್ ಪಿಂಚಣಿ ಯೋಜನೆ’ಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆ ; ಹೊಸ ನಿಯಮ ಹೀಗಿವೆ!

08/10/2025 8:42 PM
State News
KARNATAKA

ಪಿಜಿನೀಟ್-25: ಅರ್ಜಿ ಸಲ್ಲಿಕೆಗೆ ಅ.15ರವರೆಗೆ ದಿನಾಂಕ ವಿಸ್ತರಣೆ- KEA

By kannadanewsnow0908/10/2025 8:14 PM KARNATAKA 1 Min Read

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಪದವಿ / ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸುವ ಕೊನೆ…

ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲೆ ಶೂ ಎಸೆದಿರುವುದು ಮನುವಾದದ ಬೆಂಬಲಿಗರ ಷಡ್ಯಂತ್ರದ ಭಾಗ: MLC ರಮೇಶ್ ಬಾಬು

08/10/2025 8:12 PM

ಇನ್ಮುಂದೆ GBA ಪಾಲಿಕೆಗಳಲ್ಲಿ ಶೇ.50ರಷ್ಟು ಮಹಿಳಾ ಕಾರ್ಪೊರೇಟರ್ ಇರುತ್ತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

08/10/2025 7:39 PM

BREAKING: ಈ ಬಾರಿ ‘ರಾಜ್ಯೋತ್ಸವ ಪ್ರಶಸ್ತಿ’ಗೆ ಆನ್ ಮೂಲಕ ಅರ್ಜಿ ಪ್ರಕ್ರಿಯೆ ಇಲ್ಲ: ಸಚಿವ ಶಿವರಾಜ ತಂಗಡಗಿ

08/10/2025 7:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.