ಮಣಿಪುರ: ಉತ್ತರ ಪ್ರದೇಶದ ಮೈನ್ಪುರಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ತಡರಾತ್ರಿ ಸಮಾಜವಾದಿ ಪಕ್ಷದ ಜಿಲ್ಲಾ ಅಧ್ಯಕ್ಷ ದೇವೇಂದ್ರ ಸಿಂಗ್ ಯಾದವ್ ಅವರ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು ಪರಿಣಾಮ ಸುಮಾರು 500 ಮೀಟರ್ ದೂರ ಎಳೆದೊಯ್ದಿದೆ.

ಅಪಫಾತದಲ್ಲಿ  ಜಿಲ್ಲಾ ಅಧ್ಯಕ್ಷ ರು ಕಾರಿನಲ್ಲಿ ಒಬ್ಬರೇ ಇದ್ದರು. ಆದರೆ ಯಾವುದೇ ಗಂಭೀರ ಗಾಯವಾಗಿಲ್ಲ ಎಂದು ವರದಿಯಾಗಿದೆ. ಆದಾಗ್ಯೂ, ಪೊಲೀಸರು ಈ ವಿಷಯದ ಬಗ್ಗೆ ದೂರು ದಾಖಲಿಸಿಕೊಂಡು ಟ್ರಕ್ ಚಾಲಕನನ್ನು ಬಂಧಿಸಿದ್ದಾರೆ.

ಸಮಾಜವಾದಿ ಪಕ್ಷದ ನಾಯಕನ ಕಾರಿಗೆ ಟ್ರಕ್ ಡಿಕ್ಕಿ ಹೊಡೆದಿದ್ದು, ಅದನ್ನು 500 ಮೀಟರ್ ಗಿಂತಲೂ ಹೆಚ್ಚು ದೂರ ಎಳೆದೊಯ್ದಿದೆ. ಇಟಾವಾದ ಟ್ರಕ್ ಚಾಲಕನನ್ನು ಬಂಧಿಸಲಾಗಿದೆ” ಎಂದು ಮೈನ್ಪುರಿಯ ಪೊಲೀಸ್ ಅಧೀಕ್ಷಕ (ಎಸ್ಪಿ) ಕಮಲೇಶ್ ದೀಕ್ಷಿತ್ ತಿಳಿಸಿದ್ದಾರೆ.

 

Share.
Exit mobile version