Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇನ್ಮುಂದೆ ಕಾಮಗಾರಿ ವೆಚ್ಚದ ಬಿಲ್ಲುಗಳನ್ನು ಆನ್ ಲೈನ್ ನಲ್ಲಿ ಖಜಾನೆಗೆ ಸಲ್ಲಿಸುವುದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

22/10/2025 5:16 PM

ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿಗೆ ನಾಯಕತ್ವ: ಡಿಕೆಶಿಗೆ ಬಿಗ್‌ ಶಾಕ್‌ ಕೊಟ್ಟ ಯತೀಂದ್ರ

22/10/2025 5:15 PM

#WATCH | ಶಬರಿ ಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ‘ಇಡುಮುಡಿ’ಯೊಂದಿಗೆ ‘ದರ್ಶನ’ ಪಡೆದ ರಾಷ್ಟ್ರಪತಿ ದ್ರೌಪದಿ ಮುರ್ಮು

22/10/2025 5:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರಯಾಣಿಕರ ಗಮನಕ್ಕೆ: ದೀಪಾವಳಿ/ಛತ್ ಪ್ರಯುಕ್ತ ‘ವಿಶೇಷ ರೈಲು’ಗಳ ಸಂಚಾರ
KARNATAKA

ಪ್ರಯಾಣಿಕರ ಗಮನಕ್ಕೆ: ದೀಪಾವಳಿ/ಛತ್ ಪ್ರಯುಕ್ತ ‘ವಿಶೇಷ ರೈಲು’ಗಳ ಸಂಚಾರ

By kannadanewsnow0925/10/2024 7:47 PM

ಬೆಂಗಳೂರು: ದೀಪಾವಳಿ ಮತ್ತು ಛತ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ-ಮುಜಾಫರ್ಪುರ ಮತ್ತು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ದಾನಾಪುರ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ:

1. ರೈಲು ಸಂಖ್ಯೆ 07373/07374 ಎಸ್ಎಸ್ಎಸ್ ಹುಬ್ಬಳ್ಳಿ-ಮುಜಾಫರಪುರ್-ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್ ಪ್ರೆಸ್ ರೈಲು (ಒಂದು ಟ್ರಿಪ್)

ಅಕ್ಟೋಬರ್ 27 ರಂದು ರೈಲು ಸಂಖ್ಯೆ 07373 ಹುಬ್ಬಳ್ಳಿಯಿಂದ ಸಂಜೆ 5:20 ಗಂಟೆಗೆ ಹೊರಟು, ಮುಜಫರ್‌ಪುರ ನಿಲ್ದಾಣವನ್ನು ಅಕ್ಟೋಬರ್ 29 ರಂದು ಸಂಜೆ 4 ಗಂಟೆಗೆ ತಲುಪಲಿದೆ.

ಹಿಂದಿರುಗುವ ದಿಕ್ಕಿನಲ್ಲಿ, ಅಕ್ಟೋಬರ್ 30 ರಂದು ರೈಲು ಸಂಖ್ಯೆ 07374 ಮುಜಫರ್‌ಪುರದಿಂದ ಮಧ್ಯಾಹ್ನ 1:15 ಗಂಟೆಗೆ ಹೊರಟು, ಹುಬ್ಬಳ್ಳಿ ನಿಲ್ದಾಣಕ್ಕೆ ನವೆಂಬರ್ 1 ರಂದು ಬೆಳಿಗ್ಗೆ 10:30 ಗಂಟೆಗೆ ಆಗಮಿಸಲಿದೆ.

ಈ ರೈಲು ಎರಡೂ ದಿಕ್ಕುಗಳಲ್ಲಿ ಧಾರವಾಡ, ಬೆಳಗಾವಿ, ಘಟಪ್ರಭಾ, ಮೀರಜ್, ಸಾಂಗ್ಲಿ, ಕರಾಡ್, ಸತಾರಾ ಪುಣೆ, ದೌಂಡ್ ಕಾರ್ಡ್ ಲೈನ್, ಅಹ್ಮದ್‌ನಗರ, ಕೋಪರ್‌ಗಾಂವ್, ಮನ್ಮಾಡ್, ಭೂಸಾವಲ್, ಖಾಂಡ್ವಾ, ಇಟಾರ್ಸಿ, ನರಸಿಂಗ್‌ಪುರ, ಜಬಲ್‌ಪುರ, ಕಟ್ನಿ, ಸತ್ನಾ, ಮಾಣಿಕ್‌ಪುರ, ಪ್ರಯಾಗ್‌ರಾಜ್ ಛೋಕಿ, ಪಂಡಿತ ದೀನ್ ದಯಾಳ್ ಉಪಾಧ್ಯಾಯ ಜಂಕ್ಷನ್, ಬಕ್ಸಾರ್, ಅರಾ, ದಾನಾಪುರ, ಪಾಟ್ಲಿಪುತ್ರ, ಸೋನ್‌ಪುರ್ ಮತ್ತು ಹಾಜಿಪುರ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಈ ರೈಲು 2 ಎಸಿ 2-ಟೈರ್, 10 ಎಸಿ 3-ಟೈರ್, 5 ಸ್ಲೀಪರ್ ಕ್ಲಾಸ್ ಮತ್ತು 2 ಲಗೇಜ್, ಬ್ರೇಕ್ ಕಮ್ ಜನರೇಟರ್ ಕಾರುಗಳು ಸೇರಿದಂತೆ 19 ಬೋಗಿಗಳನ್ನು ಒಳಗೊಂಡಿರುತ್ತದೆ.

2. ರೈಲು ಸಂಖ್ಯೆ 06235/06236 ಎಸ್ಎಂವಿಟಿ ಬೆಂಗಳೂರು-ದಾನಾಪುರ-ಎಸ್ಎಂವಿಟಿ ಬೆಂಗಳೂರು ವಿಶೇಷ ವಿಶೇಷ ಎಕ್ಸ್ ಪ್ರೆಸ್ ರೈಲು (ಒಂದು ಟ್ರಿಪ್)

ನವೆಂಬರ್ 3 ರಂದು ರೈಲು ಸಂಖ್ಯೆ 06235 ಎಸ್ಎಂವಿಟಿ ಬೆಂಗಳೂರಿನಿಂದ ರಾತ್ರಿ 11 ಗಂಟೆಗೆ ಹೊರಟು, ದಾನಾಪುರ ನಿಲ್ದಾಣವನ್ನು ನವೆಂಬರ್ 5 ರಂದು ಸಂಜೆ 4:30 ಗಂಟೆಗೆ ತಲುಪಲಿದೆ.

ಹಿಂದಿರುಗುವ ದಿಕ್ಕಿನಲ್ಲಿ, ನವೆಂಬರ್ 9 ರಂದು ರೈಲು ಸಂಖ್ಯೆ 06236 ದಾನಾಪುರದಿಂದ ಬೆಳಿಗ್ಗೆ 8:05 ಗಂಟೆಗೆ ಹೊರಟು, ಎಸ್ಎಂವಿಟಿ ಬೆಂಗಳೂರು ನಿಲ್ದಾಣಕ್ಕೆ ನವೆಂಬರ್ 11 ರಂದು ಬೆಳಿಗ್ಗೆ 7:30 ಗಂಟೆಗೆ ಆಗಮಿಸಲಿದೆ.

ಈ ರೈಲು ಎರಡೂ ದಿಕ್ಕುಗಳಲ್ಲಿ ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್‌ಪೇಟ್ಟೈ, ಕಟಪಾಡಿ, ರೇಣಿಗುಂಟಾ, ಗುಡೂರು, ನೆಲ್ಲೂರು, ಓಂಗೋಲ್, ವಿಜಯವಾಡ, ಖಮ್ಮಂ, ವಾರಂಗಲ್, ರಾಮಗುಂಡಂ, ಬಲ್ಹರ್ಷಾ, ನಾಗ್ಪುರ, ಇಟಾರ್ಸಿ, ಪಿಪಾರಿಯಾ, ಜಬಲ್‌ಪುರ, ಕಟ್ನಿ, ಸತ್ನಾ, ಪ್ರಯಾಗ್‌ರಾಜ್‌ ಛೋಕಿ, ಮಿರ್ಜಾಪುರ, ಪಂಡಿತ ದೀನ್ ದಯಾಳ್ ಉಪಾಧ್ಯಾಯ ಜಂಕ್ಷನ್, ಬಕ್ಸಾರ್ ಮತ್ತು ಅರಾ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಈ ರೈಲು 2 ಎಸಿ 3-ಟೈರ್, 10 ಸ್ಲೀಪರ್ ಕ್ಲಾಸ್, 4 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್‌ಎಲ್‌ಆರ್‌ಡಿ ಸೇರಿದಂತೆ 18 ಕೋಚ್‌ಗಳನ್ನು ಒಳಗೊಂಡಿರುತ್ತದೆ.

ಪ್ರಯಾಣಿಕರು www.enquiry.indianrail.gov.in ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಥವಾ NTES ಅಪ್ಲಿಕೇಶನ್ ಬಳಸಿ ಅಥವಾ 139 ಗೆ ಡಯಲ್ ಮಾಡುವ ಮೂಲಕ ರೈಲುಗಳ ಆಗಮನ/ನಿರ್ಗಮನ ಸಮಯ, ಇತರ ವಿವರಗಳನ್ನು ಪರಿಶೀಲಿಸಬಹುದು.

ದೇಶದಲ್ಲೇ ಮೊದಲು: ಬೆಂಗಳೂರಲ್ಲಿ ‘ಪ್ರತಿಷ್ಠಿತ ಮಾಲ್‍’ಗಳಲ್ಲಿ ‘ಆಹಾರ ಪದಾರ್ಥಗಳ ಕಲಬೆರಕೆ’ ಪತ್ತೆಗೆ ‘ಪರೀಕ್ಷಾ ಕೇಂದ್ರ’ ಸ್ಥಾಪನೆ

JOB ALERT: ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ 4,115 ನೇಮಕಾತಿಗೆ ಗ್ರೀನ್ ಸಿಗ್ನಲ್ | Karnataka Police Recruitment 2024

Share. Facebook Twitter LinkedIn WhatsApp Email

Related Posts

ಇನ್ಮುಂದೆ ಕಾಮಗಾರಿ ವೆಚ್ಚದ ಬಿಲ್ಲುಗಳನ್ನು ಆನ್ ಲೈನ್ ನಲ್ಲಿ ಖಜಾನೆಗೆ ಸಲ್ಲಿಸುವುದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

22/10/2025 5:16 PM2 Mins Read

ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿಗೆ ನಾಯಕತ್ವ: ಡಿಕೆಶಿಗೆ ಬಿಗ್‌ ಶಾಕ್‌ ಕೊಟ್ಟ ಯತೀಂದ್ರ

22/10/2025 5:15 PM1 Min Read

ರಾಜ್ಯ ಸರ್ಕಾರದಿಂದ ‘ಸರ್ಕಾರಿ ನೌಕರ’ರಿಗೆ ಪ್ರಯಾಣ ಭತ್ಯೆ, ಭವಿಷ್ಯ ನಿಧಿ ಮುಂಗಡದ ಬಗ್ಗೆ ಮಹತ್ವದ ಆದೇಶ

22/10/2025 5:04 PM2 Mins Read
Recent News

ಇನ್ಮುಂದೆ ಕಾಮಗಾರಿ ವೆಚ್ಚದ ಬಿಲ್ಲುಗಳನ್ನು ಆನ್ ಲೈನ್ ನಲ್ಲಿ ಖಜಾನೆಗೆ ಸಲ್ಲಿಸುವುದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

22/10/2025 5:16 PM

ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿಗೆ ನಾಯಕತ್ವ: ಡಿಕೆಶಿಗೆ ಬಿಗ್‌ ಶಾಕ್‌ ಕೊಟ್ಟ ಯತೀಂದ್ರ

22/10/2025 5:15 PM

#WATCH | ಶಬರಿ ಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ‘ಇಡುಮುಡಿ’ಯೊಂದಿಗೆ ‘ದರ್ಶನ’ ಪಡೆದ ರಾಷ್ಟ್ರಪತಿ ದ್ರೌಪದಿ ಮುರ್ಮು

22/10/2025 5:07 PM

ರಾಜ್ಯ ಸರ್ಕಾರದಿಂದ ‘ಸರ್ಕಾರಿ ನೌಕರ’ರಿಗೆ ಪ್ರಯಾಣ ಭತ್ಯೆ, ಭವಿಷ್ಯ ನಿಧಿ ಮುಂಗಡದ ಬಗ್ಗೆ ಮಹತ್ವದ ಆದೇಶ

22/10/2025 5:04 PM
State News
KARNATAKA

ಇನ್ಮುಂದೆ ಕಾಮಗಾರಿ ವೆಚ್ಚದ ಬಿಲ್ಲುಗಳನ್ನು ಆನ್ ಲೈನ್ ನಲ್ಲಿ ಖಜಾನೆಗೆ ಸಲ್ಲಿಸುವುದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

By kannadanewsnow0922/10/2025 5:16 PM KARNATAKA 2 Mins Read

ಬೆಂಗಳೂರು: ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ 1999ರ ಕಲಂ- 2ರಡಿ ವ್ಯಾಖ್ಯಾನಿಸಲಾದ ಎಲ್ಲಾ ಸಂಗ್ರಹಣಾ ಪ್ರಾಧಿಕಾರಿಗಳಿಗೆ ಕಾಂಟ್ರಕ್ಟ್ ಮ್ಯಾನೇಜೆಂಟ್…

ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿಗೆ ನಾಯಕತ್ವ: ಡಿಕೆಶಿಗೆ ಬಿಗ್‌ ಶಾಕ್‌ ಕೊಟ್ಟ ಯತೀಂದ್ರ

22/10/2025 5:15 PM

ರಾಜ್ಯ ಸರ್ಕಾರದಿಂದ ‘ಸರ್ಕಾರಿ ನೌಕರ’ರಿಗೆ ಪ್ರಯಾಣ ಭತ್ಯೆ, ಭವಿಷ್ಯ ನಿಧಿ ಮುಂಗಡದ ಬಗ್ಗೆ ಮಹತ್ವದ ಆದೇಶ

22/10/2025 5:04 PM

ಸಿದ್ದರಾಮಯ್ಯ ನಂತರ ಅಹಿಂದ ನಾಯಕ ಪ್ರಿಯಾಂಕ್ ಖರ್ಗೆ : ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳ ಪೋಸ್ಟ್ ವೈರಲ್

22/10/2025 5:03 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.