Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಾರಣಾಂತಿಕ ‘ರಕ್ತದ ಕ್ಯಾನ್ಸರ್‌’ನಿಂದ ಬಳಲುತ್ತಿದ್ದ 3 ವರ್ಷದ ಮಗುವಿಗೆ ಪೊರ್ಟೀಸ್ ಆಸ್ಪತ್ರೆ ವೈದ್ಯರಿಂದ ಯಶಸ್ವಿ ಚಿಕಿತ್ಸೆ

11/06/2025 9:29 AM

BIG NEWS : ‘CET’ಯಲ್ಲಿ ಕಡಿಮೆ ಅಂಕ ಬಂದಿದಕ್ಕೆ ಮಗಳು ಆತ್ಮಹತ್ಯೆ : ಮನನೊಂದ ತಾಯಿಯು ನೇಣಿಗೆ ಶರಣು!

11/06/2025 9:27 AM

ದೇವಾಲಯದೊಳಗೆ ಹೋಗುವ ಮೊದಲು ಹೊಸಿಲಿಗೆ ಏಕೆ ನಮಸ್ಕರಿಸುತ್ತಾರೆ?

11/06/2025 9:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಕ್ರೀಡೆ-ಸಾಂಸ್ಕೃತಿಕ ಚಟುವಟಿಕೆಗಳು ಸಹಕಾರಿ: ಎಸ್.ಮಧು ಬಂಗಾರಪ್ಪ
KARNATAKA

ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಕ್ರೀಡೆ-ಸಾಂಸ್ಕೃತಿಕ ಚಟುವಟಿಕೆಗಳು ಸಹಕಾರಿ: ಎಸ್.ಮಧು ಬಂಗಾರಪ್ಪ

By kannadanewsnow0905/04/2025 3:24 PM

ಶಿವಮೊಗ್ಗ : ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಸಹಕಾರಿಯಾಗಿವೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು.

ಅವರು ಇಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ತಮ್ಮ ಕಾರ್ಯಕ್ಷೇತ್ರದಲ್ಲಿ ದಿನನಿತ್ಯ ಒತ್ತಡದಿಂದ ದಿನಕಳೆಯುವ ನೌಕರರು ತಮ್ಮಲ್ಲಿರುವ ಸುಪ್ತ ಪ್ರತಿಭೆಯ ಅನಾವರಣಕ್ಕೆ ಹಾಗೂ ಕೆಲಕ್ಷಣಗಳಾದರೂ ಒತ್ತಡದ ಬದುಕಿನಿಂದ ಮುಕ್ತಗೊಳ್ಳಲು ಈ ಸ್ಪರ್ಧೆಗಳು ಸಹಕಾರಿಯಾಗಿವೆ ಎಂದರು.

ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರರು ಸ್ವೀಕರಿಸಿದ ಪ್ರಮಾಣದಂತೆ ಸ್ಪರ್ಧಾತ್ಮಕಭಾವದಿಂದ ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದ ಅವರು ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರೂ ವಿಜೇತರಾಗುವುದು ಸಾಧ್ಯವಿಲ್ಲ. ಆದರೆ ಸ್ಪರ್ಧಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ವಿಜೇತರಾದವರು ರಾಜ್ಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ, ಜಿಲ್ಲೆಯ ಕೀರ್ತಿಗೆ ಕಾರಣರಾಗುವಂತೆ ಮನವಿ ಮಾಡಿದರು.

ಪ್ರಸಕ್ತ ಸಾಲಿನಲ್ಲಿ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಶಿವಮೊಗ್ಗದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದ್ದು, ಜಿಲ್ಲಾಢಳಿತದೊಂದಿಗೆ ರಾಜ್ಯ ಸರ್ಕಾರದ ಎಲ್ಲಾ ಸಹಕಾರ ಹಾಗೂ ನೆರವನ್ನು ಒದಗಿಸಿಕೊಡಲಾಗುವುದು ಎಂದ ಅವರು, ಯುರೋಪಿಯನ್ಪ್ರೀಮಿಯರ್ಲೀಗ್ನ ಸಹಕಾರದಲ್ಲಿ ರಾಜ್ಯದ ಸುಮಾರು 60ಕ್ರೀಡಾಪಟುಗಳಿಗೆ ಮಾಸ್ಟರ್ಟ್ರೈನಿಂಗ್ನೀಡಲಾಗಿದೆ. ಇದೇ ಮಾದರಿಯಲ್ಲಿ ರಾಜ್ಯದ ಪ್ರತಿ ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳಿಗೂ ತರಬೇತಿ ನೀಡಲು ಮನವಿ ಮಾಡಿಕೊಳ್ಳಲಾಗಿದೆ ಎಂದರು.

ಸರ್ಕಾರವೂ ಕೂಡ ನೌಕರರ ಸ್ನೇಹಿಯಾಗಿದ್ದು, ಈಗಾಗಲೇ ಆರೋಗ್ಯ ಸಂಜೀವಿವಿ ಯೋಜನೆಯನ್ನು ಜಾರಿಗೊಳಿಸಿದ್ದು, ರಾಜ್ಯದ ಸುಮಾರು 4.50;ಲಕ್ಷ ನೌಕರರು ಮತ್ತು ಅವರ ಕುಟುಂಬದ ಅವಲಂಬಿತರು ಯೋಜನೆಯ ಲಾಭ ಪಡೆದುಕೊಳ್ಳಲಿದ್ದಾರೆ.ರಾಜ್ಯ ಸರ್ಕಾರು ರಾಷ್ಟೀಯ ಬ್ಯಾಂಕುಗಳೊಂದಿಗೆ ಮಾಡಿಕೊಂಡ ಒಪ್ಪಂದ-ಕರಾರಿನಂತೆ ವಿಮಾ ಸೌಲಭ್ಯ ನೀಡಲು ಉತ್ಸುಕವಾಗಿದೆ. ನೌಕರರ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಬದಲಾವಣೆ ಮಾಡಲು ಉದ್ದೇಶಿಸಿದೆ. ಬ್ಯಾಕ್ಲಾಗ್ಹುದ್ದೆಗಳ ನೇಮಕಾತಿಗೆ ಈಗಾಗಲೇ ಗಮನಹರಿಸಿದೆ. 13000ಶಿಕ್ಷಕರ ನೇಮಕಾತಿ ಕ್ರಮಕೈಗೊಳ್ಳಲಾಗಿದೆ. ಮುಂದಿನ ಒಂದು ವರ್ಷದೊಳಗಾಗಿ ನೌಕರರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಯತ್ನಿಸಲಾಗುವುದು ಎಂದರು.

ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮಾತನಾಡಿ, ರಾಜ್ಯಮಟ್ಟದ ನೌಕರರ ಕ್ರೀಡಾಕೂಟವನ್ನು ಏಪ್ರಿಲ್ಮಾಹೆಯಲ್ಲಿ ಶಿವಮೊಗ್ಗದಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದರು.

ರಾಜ್ಯ ಸರ್ಕಾರಿ ನೌಕರರು ವೇತನಾಧಾರಿತ ಬ್ಯಾಂಕ್ಖಾತೆ ತೆರೆದು, 1.20ಕೋಟಿ ಮೊತ್ತದ ವಿಮಾ ಸೌಲಭ್ಯ ಮತ್ತು ಮಕ್ಕಳ ಶೈಕ್ಷಣಿಕ ಸೌಲಭ್ಯ, ಆಕಸ್ಮಿಕ ಅಪಘಾತ ಮುಂತಾದ ಸೌಲಭ್ಯಗಳ ಲಾಭ ಪಡೆದುಕೊಳ್ಳಬೇಕು. ಈಗಾಗಲೇ ಸಂಘವು ಕೈಗೊಂಡು ನಿರ್ಣಯದಂತೆ ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸಲು ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅದರ ಅಧ್ಯಯನಕ್ಕಾಗಿ ಹಿರಿಯ ಅಧಿಕಾರಿ ಅಂಜುಂ ಫರ್ವೇಜ್ಅವರ ನೇತೃತ್ವದಲ್ಲಿ ಸಮಿತಿ ರಚಿಸಿದೆ. ಈ ಸಮಿತಿಯು ಶೀಘ್ರದಲ್ಲಿ ವರದಿ ಸಲ್ಲಿಸಲಿದ್ದು, ವರದಿಯಂತೆ ಸರ್ಕಾರ ಪಿಂಚಣಿ ವ್ಯವಸ್ಥೆ ಜಾರಿಗೊಳಿಸುವ ಆಶಾಭಾವನೆ ಹೊಂದಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಆರ್.ಮೋಹನ್ಕುಮಾರ್ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ಸದಸ್ಯೆ ಶ್ರೀಮತಿ ಬಲ್ಕಿಶ್ಬಾನು, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪೊಲೀಸ್ವರಿಷ್ಠಾಧಿಕಾರಿ ಜಿ.ಕೆ.ಮಿಥುನಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್, ಮಹಾನಗರಪಾಲಿಕೆ ಆಯುಕ್ತೆ ಶ್ರೀಮತಿ ಕವಿತಾ ಯೋಗಪ್ಪನವರ್, ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ್ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

BREAKING: ಬೆಂಗಳೂರಲ್ಲಿ ಮತ್ತೊಂದು ಕೀಚಕ ಕೃತ್ಯ: ಅಪ್ರಾಪ್ತ ಬಾಲಕಿ ಮೇಲೆ ಬ್ಯಾಡ್ಮಿಂಟನ್ ಕೋಚ್ ಅತ್ಯಾಚಾರ

ಏ. 15 ರಿಂದ `ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿ ಸ್ಪರ್ಧೆ’ : ಆನ್‍ಲೈನ್‍ನಲ್ಲಿ ನೊಂದಣಿಗೆ ಸೂಚನೆ

Share. Facebook Twitter LinkedIn WhatsApp Email

Related Posts

ಮಾರಣಾಂತಿಕ ‘ರಕ್ತದ ಕ್ಯಾನ್ಸರ್‌’ನಿಂದ ಬಳಲುತ್ತಿದ್ದ 3 ವರ್ಷದ ಮಗುವಿಗೆ ಪೊರ್ಟೀಸ್ ಆಸ್ಪತ್ರೆ ವೈದ್ಯರಿಂದ ಯಶಸ್ವಿ ಚಿಕಿತ್ಸೆ

11/06/2025 9:29 AM1 Min Read

BIG NEWS : ‘CET’ಯಲ್ಲಿ ಕಡಿಮೆ ಅಂಕ ಬಂದಿದಕ್ಕೆ ಮಗಳು ಆತ್ಮಹತ್ಯೆ : ಮನನೊಂದ ತಾಯಿಯು ನೇಣಿಗೆ ಶರಣು!

11/06/2025 9:27 AM1 Min Read

ದೇವಾಲಯದೊಳಗೆ ಹೋಗುವ ಮೊದಲು ಹೊಸಿಲಿಗೆ ಏಕೆ ನಮಸ್ಕರಿಸುತ್ತಾರೆ?

11/06/2025 9:15 AM1 Min Read
Recent News

ಮಾರಣಾಂತಿಕ ‘ರಕ್ತದ ಕ್ಯಾನ್ಸರ್‌’ನಿಂದ ಬಳಲುತ್ತಿದ್ದ 3 ವರ್ಷದ ಮಗುವಿಗೆ ಪೊರ್ಟೀಸ್ ಆಸ್ಪತ್ರೆ ವೈದ್ಯರಿಂದ ಯಶಸ್ವಿ ಚಿಕಿತ್ಸೆ

11/06/2025 9:29 AM

BIG NEWS : ‘CET’ಯಲ್ಲಿ ಕಡಿಮೆ ಅಂಕ ಬಂದಿದಕ್ಕೆ ಮಗಳು ಆತ್ಮಹತ್ಯೆ : ಮನನೊಂದ ತಾಯಿಯು ನೇಣಿಗೆ ಶರಣು!

11/06/2025 9:27 AM

ದೇವಾಲಯದೊಳಗೆ ಹೋಗುವ ಮೊದಲು ಹೊಸಿಲಿಗೆ ಏಕೆ ನಮಸ್ಕರಿಸುತ್ತಾರೆ?

11/06/2025 9:15 AM

BREAKING: ಯಹೂದಿ ಕೇಂದ್ರದಲ್ಲಿ ಉಗ್ರರ ದಾಳಿಗೆ ಸಂಚು ರೂಪಿಸಿದ್ದ ಪಾಕ್ ಪ್ರಜೆಯನ್ನು ಗಡಿಪಾರು ಮಾಡಿದ ಅಮೇರಿಕಾ

11/06/2025 9:14 AM
State News
KARNATAKA

ಮಾರಣಾಂತಿಕ ‘ರಕ್ತದ ಕ್ಯಾನ್ಸರ್‌’ನಿಂದ ಬಳಲುತ್ತಿದ್ದ 3 ವರ್ಷದ ಮಗುವಿಗೆ ಪೊರ್ಟೀಸ್ ಆಸ್ಪತ್ರೆ ವೈದ್ಯರಿಂದ ಯಶಸ್ವಿ ಚಿಕಿತ್ಸೆ

By kannadanewsnow0911/06/2025 9:29 AM KARNATAKA 1 Min Read

ಬೆಂಗಳೂರು: ಮಾರಣಾಂತಿಕ ರಕ್ತದ ಕ್ಯಾನ್ಸರ್‌ಗೆ ತುತ್ತಾಗಿದ್ದ 3 ವರ್ಷದ ಪುಟ್ಟ ಬಾಲಕಿಗೆ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್‌ ಆಸ್ಪತ್ರೆ ಯಶಸ್ವಿಯಾಗಿ ಚಿಕಿತ್ಸೆ…

BIG NEWS : ‘CET’ಯಲ್ಲಿ ಕಡಿಮೆ ಅಂಕ ಬಂದಿದಕ್ಕೆ ಮಗಳು ಆತ್ಮಹತ್ಯೆ : ಮನನೊಂದ ತಾಯಿಯು ನೇಣಿಗೆ ಶರಣು!

11/06/2025 9:27 AM

ದೇವಾಲಯದೊಳಗೆ ಹೋಗುವ ಮೊದಲು ಹೊಸಿಲಿಗೆ ಏಕೆ ನಮಸ್ಕರಿಸುತ್ತಾರೆ?

11/06/2025 9:15 AM

BREAKING : ವಾಲ್ಮೀಕಿ ಹಗರಣ ಕೇಸ್ : ಬೆಳ್ಳಂ ಬೆಳಿಗ್ಗೆ ಕಾಂಗ್ರೆಸ್ ಸಂಸದ ಇಬ್ಬರು ಶಾಸಕರ ಮನೆ ಮೇಲೆ ‘ED’ ದಾಳಿ!

11/06/2025 9:13 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.