ಕೊಲೋಂಬೋ: ಅಧ್ಯಕ್ಷ ಗೊಟಬಯಾ ಮಾಲ್ಡೀವ್ಸ್ಗೆ ಪಲಾಯನ ಮಾಡಿದ ನಂತರ ಶ್ರೀಲಂಕಾ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ ಎಂದು ಪ್ರಧಾನಿ ಕಚೇರಿಯನ್ನು ಉಲ್ಲೇಖಿಸಿ ಎಎಫ್ಪಿ ವರದಿ ಮಾಡಿದೆ.
ಈ ನಡುವೆ ದೇಶದಲ್ಲಿ ಬಿಕ್ಕಟ್ಟು ತೀವ್ರಗೊಳ್ಳುತ್ತಿರುವ ನಡುವೆ, ಪ್ರತಿಭಟನಾಕಾರರು ಶ್ರೀಲಂಕಾದ ಪ್ರಧಾನಿ ಕಚೇರಿಯತ್ತ ತೆರಳುತ್ತಿದ್ದು, ಕೊಲಂಬೊದ ರಸ್ತೆಗಳಲ್ಲಿ ಪ್ರತಿಭಟನೆ ಮತ್ತೆ ಭುಗಿಲೆದ್ದಿದೆ. ಅಶ್ರುವಾಯು ಶೆಲ್ ದಾಳಿಯ ನಡುವೆ ಭದ್ರತಾ ನಿಯೋಜನೆಯನ್ನು ಉಲ್ಲಂಘಿಸಿ ಕೋಪೋದ್ರಿಕ್ತ ನೂರಾರು ಪ್ರತಿಭಟನಾಕಾರರು ಕೊಲಂಬೊದಲ್ಲಿರುವ ಶ್ರೀಲಂಕಾ ಪ್ರಧಾನಿ ನಿವಾಸದ ಆವರಣವನ್ನು ಪ್ರವೇಶಿಸಿದ್ದಾರೆ ಅಂತ ತಿಳಿದು ಬಂದಿದೆ. ಕೊಲಂಬೊದಲ್ಲಿರುವ ಶ್ರೀಲಂಕಾ ಪ್ರಧಾನಿ ನಿವಾಸಕ್ಕೆ ಪ್ರವೇಶಿಸಲು ಗೋಡೆಯನ್ನು ಏರಿದ ಪ್ರತಿಭಟನಾಕಾರರನ್ನು ಚದುರಿಸಲು ಮಿಲಿಟರಿ ಸಿಬ್ಬಂದಿ ಅಶ್ರುವಾಯು ಶೆಲ್ ಗಳನ್ನು ಬಳಕೆ ಮಾಡಿದ್ದಾರೆ ಎನ್ನಲಾಗಿದೆ. ಕೊಲಂಬೊದಲ್ಲಿ ಮತ್ತೆ ಪ್ರತಿಭಟನೆ ಭುಗಿಲೆದ್ದ ಹಿನ್ನೆಲೆಯಲ್ಲಿ ಶ್ರೀಲಂಕಾ ಪ್ರಧಾನಿ ನಿವಾಸದಲ್ಲಿ ಭಾರೀ ಸೇನಾ ಉಪಸ್ಥಿತಿ ಇರೋದನ್ನು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದಾವೆ.
ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ದೇಶವನ್ನು ತೊರೆದ ನಂತರ ದೇಶದಲ್ಲಿ ಬಿಕ್ಕಟ್ಟು ತೀವ್ರವಾಗುತ್ತಿದ್ದಂತೆ ಕೊಲಂಬೊದಲ್ಲಿ ಮತ್ತೆ ಪ್ರತಿಭಟನೆ ಪ್ರಾರಂಭವಾಗುತ್ತಿದೆ. ಶ್ರೀಲಂಕಾದ ಸಂಸತ್ತಿನ ಸ್ಪೀಕರ್ ಪ್ರಕಾರ, ರಾಜಪಕ್ಸೆ ಅವರು ಇನ್ನೂ ತಮ್ಮ ರಾಜೀನಾಮೆಯನ್ನು ನೀಡಿಲ್ಲ ಅಂತ ಹೇಳಿದ್ದಾರೆ.