ಬೆಂಗಳೂರು : ಕಾಂಗ್ರೆಸ್ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ಬಂದಿದ್ದ ಶ್ರೀಶೈಲಪ್ಪ ಬಿದರೂರುಗೆ ಹೃದಯಾಘಾತವಾಗಿದ್ದು, ಕೂಡಲೇ ಕಾರ್ಯಕರ್ತರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ಬಂದಿದ್ದ ಶ್ರೀಶೈಲಪ್ಪ ಬಿದರೂರುಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಕಾರ್ಯಕರ್ತರು ಇನೋವ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವರ್ತೂರು ಕೋಡಿ ಬಳಿಯ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಇಂದು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ಆಗಮಿಸಿದ್ದ ಶ್ರೀಶೈಲಪ್ಪ ಬಿದರೂರು ಸಭೆ ಆರಂಭದಲ್ಲೇ ಕುಸಿದುಬ ಬಿದ್ದರು. ಕೂಡಲೇ ಕಾರ್ಯಕರ್ತರು ಶ್ರೀಶೈಲಪ್ಪರನ್ನು ಇನ್ನೋವಾ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗದಗ, ರೋಣ ಕ್ಷೇತ್ರದ ಶಾಸಕರಾಗಿದ್ದ ಶ್ರೀಶೈಲಪ್ಪ. 2019 ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು.