ಬೆಂಗಳೂರು: ನಟ ಯುವರಾಜ್ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.ಅವರ ವಿಚ್ಛೇದನ ಅರ್ಜಿಯ ವಿಚಾರಣೆ ಇಂದು ಒಂದನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದಲ್ಲಿ ನಡೆದಿದೆ.ನ್ಯಾಯಾಧೀಶರು ಯುವರಾಜ್ ಹಾಗೂ ಶ್ರೀದೇವಿಗೆ ಕೌನ್ಸಲಿಂಗ್ ಗೆ ಅವಕಾಶ ನೀಡಿದ್ದಾರೆ.ಹಾಗೂ ವಿಚಾರಣೆಯನ್ನು ಆಗಸ್ಟ್ 23 ಕ್ಕೆ ಮುಂದೂಡಿದ್ದಾರೆ.

ಯುವ ರಾಜ್ ಕುಮಾರ್ ಸಲ್ಲಿಸಿರುವ ವಿಚ್ಛೇದನಕ್ಕೆ ಶ್ರೀದೇವಿ ಆಕ್ಷೇಪಣೆ ಸಲ್ಲಿಸಿದ್ದಾರೆ. ಶ್ರೀದೇವಿಗೆ ಅಕ್ರಮ ಸಂಬಂಧ ಇದೆಯೆಂಬ ಆರೋಪವನ್ನು ಯುವರಾಜ್ ಹೊರಿಸಿದ್ದಾರೆ. ಇಂದು ವಿಚ್ಛೇದನ ಅರ್ಜಿ ವಿಚಾರಣೆ ನ್ಯಾಯಾಲಯದಲ್ಲಿ ನಡೆದಿದ್ದು, ಆರಂಭಿಕ ವಿಚಾರಣೆ ಬಳಿಕ, ಮುಂದಿನ ವಿಚಾರಣೆಯನ್ನು‌ ಆಗಸ್ಟ್ 23 ಕ್ಕೆ ಮುಂದೂಡಲಾಗಿದೆ.

Share.
Exit mobile version