ಬೆಂಗಳೂರು: ನಗರದಲ್ಲಿ ಆರ್ ಸಿ ಬಿ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತ ದುರಂತ ಉಂಟಾಗಿ 11 ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ಘಟನೆಯ ನಂತ್ರ ಸರ್ಕಾರ ಸಿಐಡಿ ತನಿಖೆಗೆ ಪ್ರಕರಣ ವರ್ಗಾಯಿಸಿತ್ತು. ಹೀಗಾಗಿ ಸಿಐಡಿ ಅಧಿಕಾರಿಗಳ ಮುಂದೆ ಕೆ ಎಸ್ ಸಿ ಎಯ ಮಾಜಿ ಕಾರ್ಯದರ್ಶಿ, ಖಜಾಂಚಿ ಅವರು ವಿಚಾರಣೆಗೆ ಹಾಜರಾದರು.
ಬೆಂಗಳೂರು ಕಾಲ್ತುಳಿತ ದುರಂತದ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕೆ ಎಸ್ ಸಿ ಎ ಮಾಜಿ ಕಾರ್ಯದರ್ಶಿ ಶಂಕರ್ ಹಾಗೂ ಖಜಾಂಚಿ ಜಯರಾಮ್ ಗೆ ಸಿಐಡಿ ನೋಟಿಸ್ ನೀಡಿತ್ತು. ಈ ಹಿನ್ನಲೆಯಲ್ಲಿ ಇಂದು ಸಿಐಡಿ ಕಚೇರಿಗೆ ಶಂಕರ್ ಮತ್ತು ಜಯರಾಮ್ ಹಾಜರಾದರು.
ಸಿಐಡಿಯ ಡಿವೈಎಸ್ಪಿ ಪುರುಷೋತ್ತಮ್ ಅವರು ಕೆ ಎಸ್ ಸಿ ಎ ಮಾಜಿ ಕಾರ್ಯದರ್ಶಿ ಶಂಕರ್ ಹಾಗೂ ಖಜಾಂಚಿ ಜಯರಾಮ್ ಅವರನ್ನು ವಿಚಾರಣೆಗೆ ಒಳಪಡಿಸಿದರು.
ಕೋವಿಡ್-19 ಉಲ್ಬಣ: ಪ್ರಧಾನಿ ಮೋದಿ ಭೇಟಿ ಮಾಡುವ ಮೊದಲು ಸಚಿವರಿಗೆ RT-PCR ಪರೀಕ್ಷೆ ಕಡ್ಡಾಯ: