Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರೈತರ ಹೆಸರಿನಲ್ಲಿ ಬೆಳೆ ವಿಮಾ ಹಗರಣ : 4,453 ನಕಲಿ ಕ್ಲೇಮ್ ಸಲ್ಲಿಸಿದ 40 ಸೇವಾ ಕೇಂದ್ರ ನಿರ್ವಾಹಕರ ವಿರುದ್ಧ `FIR’ ದಾಖಲು.!

04/07/2025 8:45 AM

Axiom 4 mission: ಬಾಹ್ಯಾಕಾಶದಲ್ಲಿ ಒಂದು ವಾರ ಪೂರೈಸಿದ ಶುಭಾಂಶು ಶುಕ್ಲಾ, ಕರ್ತವ್ಯದ ದಿನದಂದು ಕುಟುಂಬದೊಂದಿಗೆ ಮಾತುಕತೆ

04/07/2025 8:42 AM

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌: ಜುಲೈನಲ್ಲಿ ಶೇ. 4 ರಷ್ಟು DA ಹೆಚ್ಚಳ | DA Hike

04/07/2025 8:38 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ’ಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಮೋದಿಗೆ ಅಭಿನಂದನೆ, ಕಾಂಗ್ರೆಸ್ ವಿರುದ್ಧ ಖಂಡನಾ ನಿರ್ಣಯ
KARNATAKA

‘ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ’ಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಮೋದಿಗೆ ಅಭಿನಂದನೆ, ಕಾಂಗ್ರೆಸ್ ವಿರುದ್ಧ ಖಂಡನಾ ನಿರ್ಣಯ

By kannadanewsnow0927/01/2024 6:32 PM

ಬೆಂಗಳೂರು: ಇಂದು ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ 2 ನಿರ್ಣಯಗಳನ್ನು ಅಂಗೀಕರಿಸಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ ಅವರು ತಿಳಿಸಿದರು.

“ಕಾರ್ಯಕಾರಿಣಿ ಸಭೆಯ ಮಾಧ್ಯಮ ಕೇಂದ್ರ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ, ಪ್ರಾಣ ಪ್ರತಿಷ್ಠಾಪನೆ ಯಶಸ್ವಿಯಾಗಿ ಪೂರ್ಣಗೊಳಿಸಿದ ನರೇಂದ್ರ ಮೋದಿಯವರನ್ನು ಅಭಿನಂದಿಸಲಾಗಿದೆ. 550 ವರ್ಷಗಳ ಭಾರತೀಯರ, ಹಿಂದೂ ಸಮಾಜದ ಬಹುನಿರೀಕ್ಷಿತ ಬೇಡಿಕೆ ಈಡೇರಿಸಿ ಮಂದಿರ ಲೋಕಾರ್ಪಣೆ ಮಾಡಿದ ಪ್ರಧಾನಿಯವರನ್ನು ಅಭಿನಂದಿಸಲಾಗಿದೆ. ಸರ್ವಾನುಮತದಿಂದ ಇದನ್ನು ಅಂಗೀಕರಿಸಲಾಗಿದೆ ಎಂದು ವಿವರಿಸಿದರು.

ಕಾಂಗ್ರೆಸ್ ಸರಕಾರದ ರೈತವಿರೋಧಿ, ದಲಿತ ವಿರೋಧಿ ನೀತಿ ಖಂಡಿಸಿ ನಿರ್ಣಯ ಅಂಗೀಕರಿಸಿದ್ದೇವೆ. ದಲಿತ ಮತ್ತು ಶೋಷಿತ ವರ್ಗಕ್ಕೆ ಮೀಸಲಿಟ್ಟ 11 ಸಾವಿರ ಕೋಟಿಗೂ ಹೆಚ್ಚು ಹಣವನ್ನು ಗ್ಯಾರಂಟಿಗಾಗಿ ಉಪಯೋಗ ಮಾಡಿ ದಲಿತ ಮತ್ತು ಶೋಷಿತರಿಗೆ ವಂಚಿಸಿದ್ದನ್ನು ಖಂಡಿಸಲಾಗಿದೆ. ಈ ನಿರ್ಧಾರದ ವಿರುದ್ಧ ಖಂಡನಾ ನಿರ್ಣಯ ಅನುಮೋದಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ, ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ ಎಂದರು.

ಬಿ.ವೈ.ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾದ ಬಳಿಕ ಪ್ರಥಮ ರಾಜ್ಯ ಕಾರ್ಯಕಾರಿಣಿ ಯಶಸ್ವಿಯಾಗಿ ನಡೆದು ಸಮಾರೋಪಗೊಂಡಿದೆ. ಕೇಂದ್ರ ಸರಕಾರದ ಸಚಿವ ಭೂಪೇಂದ್ರ ಯಾದವ್ ಅವರು ಕಾರ್ಯಕಾರಿಣಿ ಉದ್ಘಾಟಿಸಿದರು. ಶೇ 85ಕ್ಕೂ ಹೆಚ್ಚು ಹಾಜರಾತಿಯೊಂದಿಗೆ ಸಭೆ ನಡೆದಿದೆ ಎಂದು ತಿಳಿಸಿದರು. ಸಂಸದರು, ಶಾಸಕರು, ರಾಜ್ಯ ಪದಾಧಿಕಾರಿಗಳು, ಮಾಜಿ ಶಾಸಕರು, ಪರಾಜಿತ ಅಭ್ಯರ್ಥಿಗಳು ಬಂದಿದ್ದರು ಎಂದು ತಿಳಿಸಿದರು.

ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಅವರು ಮಾತನಾಡಿ, ಸಭೆಯಲ್ಲಿ ಸುಮಾರು 800 ಜನ ಅಪೇಕ್ಷಿತರು ಭಾಗವಹಿಸಿದ್ದರು. ಫೆ. 3ರಿಂದ 5ರವರೆಗೆ ಎಲ್ಲ ಜಿಲ್ಲೆಗಳಲ್ಲಿ ಕಾರ್ಯಕಾರಿಣಿ ಸಭೆ ನಡೆಸಲು ನಿರ್ಧರಿಸಲಾಗಿದೆ. ವಿಶೇóಷವಾಗಿ ಕೇಂದ್ರ ಸರಕಾರದ ಫಲಾನುಭವಿಗಳಾದ ಮಹಿಳೆಯರು, ಸ್ವಸಹಾಯ ಸಂಘಗಳನ್ನು ಭೇಟಿ ಮಾಡಿ ಅವರ ತಾಲ್ಲೂಕು, ಜಿಲ್ಲಾ ಮಟ್ಟದ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. ಮಾಜಿ ಸಚಿವೆ ಶಶಿಕಲಾ ಜೊಲ್ಲೆ, ಮಹಿಳಾ ಮೋರ್ಚಾದ ಮಾಜಿ ಅಧ್ಯಕ್ಷೆ ಗೀತಾ ವಿವೇಕಾನಂದ, ಮಹಿಳಾ ಮೋರ್ಚಾದ ಅಧ್ಯಕ್ಷೆ ಮಂಜುಳಾ, ಭಾರತಿ ಮುಗ್ದುಂ ಮತ್ತು ನಾನು ಆ ಸಮಿತಿಯಲ್ಲಿದ್ದೇವೆ ಎಂದು ತಿಳಿಸಿದರು. ನಾರಿ ಶಕ್ತಿ ವಂದನಾ ಎಂಬ ಈ ಕಾರ್ಯಕ್ರಮವನ್ನು ಫೆ. 25ರೊಳಗೆ ನಡೆಸಲು ತಿಳಿಸಲಾಗಿದೆ ಎಂದರು.

ಪ್ರತಿ ಬೂತ್ ಮಟ್ಟದಲ್ಲಿ ಒಂದು ಅಥವಾ ಎರಡು ಕಡೆ ಗೋಡೆಬರಹ ಬರೆಯಲು ನಿಶ್ಚಯಿಸಲಾಗಿದೆ. ‘3ನೇ ಬಾರಿಗೆ ಮತ್ತೊಮ್ಮೆ ಬಿಜೆಪಿ ಸರಕಾರ, ಮತ್ತೊಮ್ಮೆ ಮೋದಿ’ ಎಂಬ ಗೋಡೆಬರಹ ಬರೆಸಲಾಗುವುದು. ಇದಕ್ಕಾಗಿ ತಂಡ ರಚಿಸಿದ್ದು, ನಂದೀಶ್ ರೆಡ್ಡಿ ಸಂಚಾಲಕರಾಗಿ ನೇಮಕಗೊಂಡಿದ್ದಾರೆ. ಡಾ.ಶೈಲೇಂದ್ರ ಬೆಲ್ದಾಳೆ, ಮಹೇಂದ್ರ ಕವತಾಳ, ಹರಿಕೃಷ್ಣ ಸಹ ಸಂಚಾಲಕರಾಗಿರುವರು. ಜನವರಿ 30ರಂದು ಎಲ್ಲ ಪದಾಧಿಕಾರಿಗಳು ಇದನ್ನು ಆಂದೋಲನವಾಗಿ ನಡೆಸಲು ಸೂಚಿಸಲಾಗಿದೆ. ರಾಜ್ಯದಲ್ಲಿ 58 ಸಾವಿರ ಬೂತ್‍ಗಳಿವೆ. ಹೊಸ ಮತದಾರರ ಸೇರ್ಪಡೆಯಿಂದ ಇನ್ನೂ ಕೆಲವು ಬೂತ್‍ಗಳ ಸೇರ್ಪಡೆ ಸಾಧ್ಯತೆ ಇದೆ. ಅಲ್ಲಿ ಕೂಡ ಬೂತ್‍ಗಳನ್ನು ಗುರುತಿಸಿ ಗೋಡೆ ಬರೆಹ ಬರೆಸಲಾಗುತ್ತದೆ ಎಂದು ವಿವರ ನೀಡಿದರು.

ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಕೆ.ಸಿ. ರಾಮಮೂರ್ತಿ ಅವರು ಇದ್ದರು.

BREAKING: ಲೋಕಸಭಾ ಚುನಾವಣೆ: ರಾಜ್ಯದ 28 ಕ್ಷೇತ್ರಗಳಿಗೆ ‘ಬಿಜೆಪಿ ಉಸ್ತುವಾರಿ’ಗಳು ನೇಮಕ, ಇಲ್ಲಿದೆ ಸಂಪೂರ್ಣ ಲೀಸ್ಟ್

BREAKING : ಭೂಮಿ ಹಗರಣ ಪ್ರಕರಣ : ಬಿಹಾರ ಮಾಜಿ ಸಿಎಂ ಲಾಲು ಪತ್ನಿ ರಾಬ್ರಿ ದೇವಿ, ಪುತ್ರಿಯರಿಗೆ ‘ಕೋರ್ಟ್ ಸಮನ್ಸ್’

Share. Facebook Twitter LinkedIn WhatsApp Email

Related Posts

SHOCKING : ಬಳ್ಳಾರಿಗೆ ಎಂಟ್ರಿ ಕೊಟ್ಟಿದೆ ಭಯಾನಕ ಮುಸುಕುಧಾರಿ ಕಳ್ಳರ ಗ್ಯಾಂಗ್ : ಸಿನಿಮೀಯ ರೀತಿಯಲ್ಲಿ ಕಳ್ಳತನ.!

04/07/2025 8:30 AM1 Min Read

GOOD NEWS : ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 4134 ಶಾಲೆಗಳಲ್ಲಿ `ಇಂಗ್ಲಿಷ್ ಮೀಡಿಯಂ’ ಆರಂಭಿಸಲು ಸರ್ಕಾರ ಮಹತ್ವದ ಆದೇಶ

04/07/2025 8:22 AM1 Min Read

ಚಂದ್ರನ ಅಷ್ಟಮಿಯ ದಿನದಂದು ಒಂದೇ ಒಂದು ನಿಂಬೆಹಣ್ಣನ್ನು ಪೂಜಿಸಿದ್ರೆ ಚಿನ್ನದ ದೋಷ ನಿವಾರಣೆ

04/07/2025 8:17 AM3 Mins Read
Recent News

BIG NEWS : ರೈತರ ಹೆಸರಿನಲ್ಲಿ ಬೆಳೆ ವಿಮಾ ಹಗರಣ : 4,453 ನಕಲಿ ಕ್ಲೇಮ್ ಸಲ್ಲಿಸಿದ 40 ಸೇವಾ ಕೇಂದ್ರ ನಿರ್ವಾಹಕರ ವಿರುದ್ಧ `FIR’ ದಾಖಲು.!

04/07/2025 8:45 AM

Axiom 4 mission: ಬಾಹ್ಯಾಕಾಶದಲ್ಲಿ ಒಂದು ವಾರ ಪೂರೈಸಿದ ಶುಭಾಂಶು ಶುಕ್ಲಾ, ಕರ್ತವ್ಯದ ದಿನದಂದು ಕುಟುಂಬದೊಂದಿಗೆ ಮಾತುಕತೆ

04/07/2025 8:42 AM

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌: ಜುಲೈನಲ್ಲಿ ಶೇ. 4 ರಷ್ಟು DA ಹೆಚ್ಚಳ | DA Hike

04/07/2025 8:38 AM

Shocking: ಬಿಹಾರದಲ್ಲಿ 100 ಅಂಕಗಳಿಗೆ 257 ಅಂಕ ಪಡೆದ ವಿದ್ಯಾರ್ಥಿಗಳು !

04/07/2025 8:37 AM
State News
KARNATAKA

SHOCKING : ಬಳ್ಳಾರಿಗೆ ಎಂಟ್ರಿ ಕೊಟ್ಟಿದೆ ಭಯಾನಕ ಮುಸುಕುಧಾರಿ ಕಳ್ಳರ ಗ್ಯಾಂಗ್ : ಸಿನಿಮೀಯ ರೀತಿಯಲ್ಲಿ ಕಳ್ಳತನ.!

By kannadanewsnow5704/07/2025 8:30 AM KARNATAKA 1 Min Read

ಬಳ್ಳಾರಿ : ಬಳ್ಳಾರಿ ಜಿಲ್ಲೆಗೆ ಭಯಾನಕ ಮುಸುಕುಧಾರಿ ಗ್ಯಾಂಗ್ ವೊಂದು ಎಂಟ್ರಿ ಕೊಟ್ಟಿದ್ದು, ಸಿನಿಮೀಯ ರೀತಿಯಲ್ಲಿ ಐವರು ಕಳ್ಳತನ ಮಾಡಿರುವ…

GOOD NEWS : ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 4134 ಶಾಲೆಗಳಲ್ಲಿ `ಇಂಗ್ಲಿಷ್ ಮೀಡಿಯಂ’ ಆರಂಭಿಸಲು ಸರ್ಕಾರ ಮಹತ್ವದ ಆದೇಶ

04/07/2025 8:22 AM

ಚಂದ್ರನ ಅಷ್ಟಮಿಯ ದಿನದಂದು ಒಂದೇ ಒಂದು ನಿಂಬೆಹಣ್ಣನ್ನು ಪೂಜಿಸಿದ್ರೆ ಚಿನ್ನದ ದೋಷ ನಿವಾರಣೆ

04/07/2025 8:17 AM

ಗೃಹಣಿಯರಿಗೆ ಅಡುಗೆ ಮನೆಯಲ್ಲಿ ಉಪಯುಕ್ತವಾಗುವ ಸೂಪರ್ ಟಿಪ್ಸ್ ಗಳು.!

04/07/2025 8:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.