ಬೆಂಗಳೂರು: ನಗರದಲ್ಲಿ 2025ರ ಫೆಬ್ರವರಿ 12ರಿಂದ 14ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ನಡೆಸಲು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಇನ್ವೆಸ್ಟ್ ಕರ್ನಾಟಕ-2025ರ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ದಿನಾಂಕ 12-02-2025ರಿಂದ ದಿನಾಂಕ 14-02-2025ರವರೆಗೆ ನಡೆಸಲು ಅನುಮೋದನೆ ನೀಡಲಾಗಿದೆ.
ಜಾಗತಿಕ ಬಂಡವಾಳ ಹೂಡಿಕೆರಾದರ ಸಮಾವೇಶ ಏರ್ಪಡಿಸಲು ಕನಿಷ್ಠ 10-12 ತಿಂಗಳು ಕಾಲಾವಕಾಶ ಬೇಕಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದಕ್ಕಾಗಿ ಈಗಾಗಲೇ 75 ಕೋಟಿ ಒದಗಿಸಲಾಗಿದ್ದು, ರೂ.15 ಕೋಟಿ ಹೆಚ್ಚುವರಿ ಅನುದಾನ ಒದಗಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಲಾಗಿದೆ.
BIG NEWS: ಯಡಿಯೂರಪ್ಪ ವಿರುದ್ಧ ‘CID ಕ್ರಮ’ ಕೈಗೊಳ್ಳುತ್ತಿರುವುದನ್ನು ನೋಡಿ ಸಂತೋಷವಾಗಿದೆ: ನಟ ಚೇತನ್