Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬಾಂಗ್ಲಾದೇಶದ ಕೆಲವು ಸರಕುಗಳ ಆಮದಿಗೆ ಬಂದರು ನಿರ್ಬಂಧಗಳನ್ನು ವಿಧಿಸಿದ ಭಾರತ | Bangladesh Goods

17/05/2025 9:41 PM

BREAKING: ಬಾಂಗ್ಲಾದೇಶದ ಉಡುಪು, ಸಂಸ್ಕರಿಸಿದ ಆಹಾರದ ಆಮದಿಗೆ ಬಂದರು ಬಳಕೆ ನಿರ್ಬಂಧಿಸಿದ ಭಾರತ

17/05/2025 9:34 PM

ಕೋಡೆಕ್ಸ್ ಎಂದರೇನು?: ಬದಲಾಯಿಸಬಹುದಾದ ಓಪನ್‌ಎಐನಿಂದ ‘AI ಕೋಡಿಂಗ್ ಏಜೆಂಟ್’ ಬಿಡುಗಡೆ | What Is Codex

17/05/2025 9:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರಾಜ್ಯ ಸರ್ಕಾರದಿಂದ ‘ಗ್ರಾ.ಪಂ ಕಾರ್ಯದರ್ಶಿ’ಗಳನ್ನು ಜನನ, ಮರಣ ‘ಉಪ ನೋಂದಣಾಧಿಕಾರಿ’ಗಳನ್ನಾಗಿ ನೇಮಿಸಿ ಆದೇಶ
KARNATAKA

BREAKING: ರಾಜ್ಯ ಸರ್ಕಾರದಿಂದ ‘ಗ್ರಾ.ಪಂ ಕಾರ್ಯದರ್ಶಿ’ಗಳನ್ನು ಜನನ, ಮರಣ ‘ಉಪ ನೋಂದಣಾಧಿಕಾರಿ’ಗಳನ್ನಾಗಿ ನೇಮಿಸಿ ಆದೇಶ

By kannadanewsnow0924/06/2024 4:57 PM

ಬೆಂಗಳೂರು: ಗ್ರಾಮ ಪಂಚಾಯ್ತಿ ಕಾರ್ಯದರ್ಶಿಗಳು ಜನನ, ಮರಣ ಉಪ ನೋಂದಣಾಧಿಕಾರಿಗಳಾಗಿ ಕಾರ್ಯ ನಿರ್ವಹಿಸುವಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಈ ಕುರಿತಂತೆ ಜನನ, ಮರಣಗಳ ಮುಖ್ಯ ನೋಂದಣಾಧಿಕಾರಿಗಳು ಹಾಗೂ ಅಪರ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ದೇಶಾದ್ಯಂತ ಜನನ, ಮರಣ ನೋಂದಣಿ ಅಧಿನಿಯಮ, 1969 ಜಾರಿಯಲ್ಲಿರುತ್ತದೆ. ಕರ್ನಾಟಕ ಜನನ, ಮರಣಗಳ ನೋಂದಣಿ ನಿಯಮಗಳು, 1999ರ ಮೂಲಕ ಪುನರ್ ರಚಿತ ನಾಗರಿಕ ನೋಂದಣಿ ಪದ್ಮತಿಯನ್ನು ದಿನಾಂಕ: 01-01-2000 ರಿಂದ ರಾಜ್ಯಾದ್ಯಂತ ಏಕೀಕರಿಸಿ ಜನನ, ಮರಣ ನೋಂದಣಿಯನ್ನು ಕಡ್ಡಾಯವಾಗಿ ಜಾರಿಗೊಳಿಸಲಾಗಿದೆ ಎಂದಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಲೆಕ್ಕಿಗರನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿರುತ್ತದೆ. ಗ್ರಾಮೀಣ ಪ್ರದೇಶದಲ್ಲಿ ನಾಗರಿಕ ನೋಂದಣಿ ಪದ್ಧತಿಯನ್ನು ಬಲಪಡಿಸಲು ಹಾಗೂ ಘಟಿಸುವ ಶೇ.100 ರಷ್ಟು ಜನನ, ಮರಣ ನೋಂದಣಿ ಘಟನೆಗಳನ್ನು ದಾಖಲಿಸಲು ಜನನ, ಮರಣ ನೋಂದಣಿ ಅಧಿನಿಯಮ 1969ರ ಪ್ರಕರಣ 7(5) ರನ್ವಯ ಜನನ, ಮರಣ ಘಟನೆಗಳು ಘಟಿಸಿದ ಮೂವತ್ತು ದಿನಗಳವರೆಗಿನ ಘಟನೆಗಳನ್ನು ನೋಂದಾಯಿಸಲು ಪಂಚಾಯಿತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ಹಾಗೂ ಪುಕರಣ 7(1) ರನ್ವಯ ಜನನ, ಮರಣ ಘಟನೆಗಳು ಸಂಭವಿಸಿದ ಮೂವತ್ತು ದಿನಗಳ ನಂತರದ ವಿಳಂಬ ನೋಂದಣಿಯನ್ನು ನೋಂದಾಯಿಸಲು ಗ್ರಾಮ ಆಡಳಿತ ಅಧಿಕಾರಿಗಳನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ಉಲ್ಲೇಖಿತ (3) ರಲ್ಲಿ ಸರ್ಕಾರದ ಆದೇಶವನ್ನು ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಸದರಿ ಆದೇಶದನ್ವಯ ಜನನ, ಮರಣ ನೋಂದಣಿಗೆ ಸಂಬಂಧಿಸಿದಂತೆ, ನೋಂದಣಾಧಿಕಾರಿಗಳು ಮತ್ತು ಉಪ ನೋಂದಣಾಧಿಕಾರಿಗಳ ಪಾತ್ರ ಜವಾಬ್ದಾರಿ ಹಾಗೂ ನಿರ್ವಹಿಸಬೇಕಾದ ಕಾರ್ಯಗಳ ಕುರಿತ ಮಾರ್ಗಸೂಚಿಯನ್ನು ಒಳಗೊಂಡ ಪ್ರಮಾಣಿತ ಕಾರ್ಯಚರಣೆಯ ವಿಧಾನಗಳನ್ನು ಉಲ್ಲೇಖ(4) ರಲ್ಲಿ ಹೊರಡಿಸಲಾಗಿರುತ್ತದೆ ಎಂದು ಹೇಳಿದ್ದಾರೆ.

ದಿನಾಂಕ. 01.07.2024 ರಿಂದ ಜಾರಿಗೆ ಬರುವಂತೆ ಉಲ್ಲೇಖ (3)ರ ಸರ್ಕಾರದ ಆದೇಶವನ್ನು ಗ್ರಾಮೀಣ ಪುದೇಶಕ್ಕೆ ಅನ್ವಯವಾಗುವಂತೆ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಕೆಳಕಂಡ ಅಂಶಗಳನ್ನು ಪಾಲಿಸಲು ತಿಳಿಸಿದೆ.

1. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಘಟಿಸುವ ಜನನ, ಮರಣ ಘಟನೆಗಳು ಸಂಭವಿಸಿದ 30 ದಿನಗಳೊಳಗೆ ಜನನ, ಮರಣ ಉಪ ನೋಂದಣಾಧಿಕಾರಿಗಳಾದ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ನಿಯಮಾನುಸಾರ ನೋಂದಣಿ ಮಾಡತಕ್ಕದ್ದು.
a. ಘಟನೆ ಸಂಭವಿಸಿದ 21 ದಿನಗಳೊಳಗೆ ಜನನ, ಮರಣ ಘಟನೆಗಳನ್ನು ನೋಂದಣಿ ಮಾಡಿ ಉಚಿತವಾಗಿ ಒಂದು ಪುಮಾಣ ಪತ್ರವನ್ನು ವಿತರಿಸುವುದು.
b. ಕರ್ನಾಟಕ ಜನನ, ಮರಣ ನೋಂದಣಿ ನಿಯಮ 5ರಲ್ಲಿ ನಿಗದಿಪಡಿಸಿದ 21 ದಿನಗಳ ತರುವಾಯ ಮತ್ತು 30 ದಿನಗಳೊಳಗಾಗಿ ವರದಿಯಾಗುವ ಘಟನೆಗಳನ್ನು ಕರ್ನಾಟಕ ಜನನ, ಮರಣ ನೋಂದಣಿ ನಿಯಮಗಳು 1999ರ 9(1) ರ ಪುಕಾರ ರೂ.2/- ತಡ ಶುಲ್ಕ ಪಡೆದು ನೋಂದಾಯಿಸುವುದು.
c. ಘಟನೆ ಸಂಭವಿಸಿದ 30 ದಿನಗಳ ತರುವಾಯ ವರದಿಯಾಗುವ ಘಟನೆಗಳ ನೋಂದಣಿಯನ್ನು ಮಾಡತಕ್ಕದ್ದಲ್ಲ. ಸದರಿ ಘಟನೆಗಳ ನೋಂದಣಿಗೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳೊಂದಿಗೆ ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸಬೇಕಾಗಿರುವ ಹಿನ್ನೆಲೆಯಲ್ಲಿ ಕುರಿತಂತೆ ಸಾರ್ವಜನಿಕರಿಗೆ/
ಅರ್ಜಿದಾರರಿಗೆ ಮಾಹಿತಿಯನ್ನು ನೀಡುವುದು.
2. ಜನನ, ಮರಣ ಘಟನೆ ಸಂಭವಿಸಿದ 30 ದಿನಗಳ ನಂತರ ವರದಿಯಾಗುವ ಘಟನೆಗಳನ್ನು ಜನನ, ಮರಣ ನೋಂದಣಾಧಿಕಾರಿಗಳಾದ ಗ್ರಾಮ ಆಡಳಿತ ಅಧಿಕಾರಿಗಳು ನಿಯಮಾನುಸಾರ ಈ ಕೆಳಕಂಡಂತೆ ನೋಂದಣಿ ಮಾಡತಕ್ಕದ್ದು.
a. ಕರ್ನಾಟಕ ಜನನ, ಮರಣ ನೋಂದಣಿ ನಿಯಮಗಳು 1999ರ ನಿಯಮ 9(2) ರ ಪ್ರಕಾರ 30 ದಿನಗಳ ತರುವಾಯ ಒಂದು ವರ್ಷದ ಒಳಗೆ ವರದಿಯಾಗುವ ಜನನ,ಮರಣ ಹಾಗೂ ನಿರ್ಜೀವ ಜನನಗಳನ್ನು ತಹಶೀಲ್ದಾರರ ಲಿಖಿತ ಅನುಮತಿಯೊಂದಿಗೆ ರೂ.5/- ತಡೆ ಶುಲ್ಕ ಪಡೆದು ನೋಂದಾಯಿಸುವುದು
b. ಕರ್ನಾಟಕ ಜನನ, ಮರಣ ನೋಂದಣಿ ನಿಯಮಗಳು 1999ರ ನಿಯಮ 9(3) ರ ಪ್ರಕಾರ ಒಂದು ವರ್ಷದ ನಂತರ ವರದಿಯಾಗುವ ಜನನ, ಮರಣ ಘಟನೆಗಳಿಗೆ ವಿಳಂಬ ನೋಂದಣಿ ಮಾಡಲು ಮೊದಲನೇ ವರ್ಗದ ದಂಡಾಧಿಕಾರಿ ಅಥವಾ ಮಹಾ ಪ್ರಾಂತ ದಂಡಾಧಿಕಾರಿ (Presidency Magistrate) ರವರ ಆದೇಶದೊಂದಿಗೆ ರೂ.10/- ತಡೆ ಶುಲ್ಕ ಪಡೆದು ನೋಂದಾಯಿಸುವುದು.
ಜನನ, ಮರಣ ನೋಂದಣಿ ಸಂಬಂಧ ಯಾವುದಾದರೂ ಸಂದೇಹ/ಸೃಷ್ಟಿಕರಣ ಅವಶ್ಯಕತೆ ಇದ್ದಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಛೇರಿ ಹಾಗೂ ಜನನ, ಮರಣಗಳ ಮುಖ್ಯ ನೋಂದಣಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸುವುದು.

ಜನನ, ಮರಣ ಮತ್ತು ನಿರ್ಜೀವ ಜನನಗಳ ನೋಂದಣಿ ಮಾಡುವ ಸಂದರ್ಭದಲ್ಲಿ ಇ-ಜನ್ಮ ತಂತ್ರಾಂಶದಲ್ಲಿ ತಾಂತ್ರಿಕ ಸಮಸ್ಯೆಗಳು ಕಂಡು ಬಂದಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಛೇರಿ ಅಥವಾ ಇ-ಜನ್ಮ ಸಹಾಯವಾಣಿ ಹಾಗೂ ಇ-ಮೇಲ್ crbdkar@gmail.com / ejanmahelpdesk@gmail.com ಮತ್ತು ದೂರವಾಣಿ 1800-425-6578 ಕ್ಕೆ ಸಂಪರ್ಕಿಸುವುದು.

ಜನನ, ಮರಣ ನೋಂದಣಿ ಸಂಬಂಧ ಭಾರತದ ಮಹಾ ನೋಂದಣಾಧಿಕಾರಿಗಳು / ರಾಜ್ಯದ ಜನನ, ಮರಣಗಳ ಮುಖ್ಯ ನೋಂದಣಾಧಿಕಾರಿಗಳು ಕಾಲಕಾಲಕ್ಕೆ ಹೊರಡಿಸುವ ಸುತ್ತೋಲೆ / ಆದೇಶ / ಮಾರ್ಗಸೂಚಿಗಳನ್ವಯ ಕಾರ್ಯನಿರ್ವಹಿಸುವಂತೆ ಸೂಚಿಸಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ

‘ಅಂಗನವಾಡಿ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್: ಯಾರನ್ನೂ ಕೆಲಸದಿಂದ ತೆಗೆಯುವುದಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

BIG NEWS : ವಿಜಯಪುರ, ಧಾರವಾಡ ಜಿಲ್ಲೆಗಳಲ್ಲಿ ʻಫುಡ್ ಪಾರ್ಕ್ʼ ಸ್ಥಾಪಿಸುವಂತೆ ʻನಿಸ್ಸಿನ್ ಸಂಸ್ಥೆʼಗೆ ಆಹ್ವಾನ

Share. Facebook Twitter LinkedIn WhatsApp Email

Related Posts

BIG NEWS: SSLC ಪರೀಕ್ಷೆ-2 ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಅಂತಿಮ ಪ್ರವೇಶ ಪತ್ರ ಬಿಡುಗಡೆ

17/05/2025 9:18 PM2 Mins Read

BIG NEWS : ಬುರ್ಖಾಧಾರಿ ಮಹಿಳೆಯರಿಂದ ಮಕ್ಕಳ ಕಿಡ್ನಾಪ್ ಗೆ ಯತ್ನ : ತಡೆಯಲು ಬಂದ ತಾಯಿಗೆ ಚಾಕು ಇರಿತ

17/05/2025 9:01 PM1 Min Read

ಕರ್ನಾಟಕಕ್ಕೆ ಹೆಚ್ಚಿನ ‘ಎಲೆಕ್ಟ್ರಿಕ್ ಬಸ್’ ನೀಡಲು ಕೇಂದ್ರ ಸಚಿವ ‘HDK’ಗೆ ‘ಸಾರಿಗೆ ಸಚಿವ ರಾಮಲಿಂಗಾರೆಡ್ಡಿ’ ಮನವಿ

17/05/2025 8:58 PM2 Mins Read
Recent News

BREAKING: ಬಾಂಗ್ಲಾದೇಶದ ಕೆಲವು ಸರಕುಗಳ ಆಮದಿಗೆ ಬಂದರು ನಿರ್ಬಂಧಗಳನ್ನು ವಿಧಿಸಿದ ಭಾರತ | Bangladesh Goods

17/05/2025 9:41 PM

BREAKING: ಬಾಂಗ್ಲಾದೇಶದ ಉಡುಪು, ಸಂಸ್ಕರಿಸಿದ ಆಹಾರದ ಆಮದಿಗೆ ಬಂದರು ಬಳಕೆ ನಿರ್ಬಂಧಿಸಿದ ಭಾರತ

17/05/2025 9:34 PM

ಕೋಡೆಕ್ಸ್ ಎಂದರೇನು?: ಬದಲಾಯಿಸಬಹುದಾದ ಓಪನ್‌ಎಐನಿಂದ ‘AI ಕೋಡಿಂಗ್ ಏಜೆಂಟ್’ ಬಿಡುಗಡೆ | What Is Codex

17/05/2025 9:27 PM

BIG NEWS: SSLC ಪರೀಕ್ಷೆ-2 ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಅಂತಿಮ ಪ್ರವೇಶ ಪತ್ರ ಬಿಡುಗಡೆ

17/05/2025 9:18 PM
State News
KARNATAKA

BIG NEWS: SSLC ಪರೀಕ್ಷೆ-2 ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಅಂತಿಮ ಪ್ರವೇಶ ಪತ್ರ ಬಿಡುಗಡೆ

By kannadanewsnow0917/05/2025 9:18 PM KARNATAKA 2 Mins Read

ಬೆಂಗಳೂರು: 2025ರ ಮೇಲೆ ತಿಂಗಳಲ್ಲಿ ನಡೆಯಲಿರುವಂತ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಹಾಜರಾಗುತ್ತಿರುವಂತ ವಿದ್ಯಾರ್ಥಿಗಳಿಗೆ ಅಂತಿಮ ಪ್ರವೇಶ ಪತ್ರವನ್ನು…

BIG NEWS : ಬುರ್ಖಾಧಾರಿ ಮಹಿಳೆಯರಿಂದ ಮಕ್ಕಳ ಕಿಡ್ನಾಪ್ ಗೆ ಯತ್ನ : ತಡೆಯಲು ಬಂದ ತಾಯಿಗೆ ಚಾಕು ಇರಿತ

17/05/2025 9:01 PM

ಕರ್ನಾಟಕಕ್ಕೆ ಹೆಚ್ಚಿನ ‘ಎಲೆಕ್ಟ್ರಿಕ್ ಬಸ್’ ನೀಡಲು ಕೇಂದ್ರ ಸಚಿವ ‘HDK’ಗೆ ‘ಸಾರಿಗೆ ಸಚಿವ ರಾಮಲಿಂಗಾರೆಡ್ಡಿ’ ಮನವಿ

17/05/2025 8:58 PM

ಬಳ್ಳಾರಿಯಲ್ಲಿ ಜನರ ಸಮಸ್ಯೆ ಆಲಿಸದ ಜಮೀರ್ ವಿರುದ್ಧ ಆಕ್ರೋಶ, ಸಚಿವ ಬದಲಾವಣೆಗೆ ಪಟ್ಟು: JDS

17/05/2025 8:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.