Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಈ ವಿಟಮಿನ್ ಕೊರತೆಯಿದ್ರೆ ನಿಮಗೆ ನಿದ್ದೆ ಬರುವುದಿಲ್ಲ ; ನೀವಿದನ್ನ ಈ ರೀತಿ ಭರ್ತಿ ಮಾಡಿ!

26/08/2025 10:05 PM

ಫೆ.3, 2026ರಂದು ಸಾಗರದ ‘ಮಾರಿಕಾಂಬಾ ದೇವಿ ಜಾತ್ರೆ’ ನಿಗದಿ: ಅಧ್ಯಕ್ಷ ಕೆ.ಎನ್ ನಾಗೇಂದ್ರ

26/08/2025 9:53 PM

ಶಿವಮೊಗ್ಗ: ಸಾಗರದ ಜೋಯಿಸ್ ಮನೆತನದಿಂದ ‘ಅರಮನೆ ಗೌರಿ’ ಪ್ರತಿಷ್ಠಾಪನೆ, ವಿಶೇಷ ಪೂಜೆ

26/08/2025 9:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಂಡ್ಯದಲ್ಲಿ ನೂತನ ಕೃಷಿ, ತೋಟಗಾರಿಕೆ ವಿವಿ ಸ್ಥಾಪನೆಗೆ ರಾಜ್ಯ ಸರ್ಕಾರದ ಅಧಿಕೃತ ಅನುಮೋದನೆ
KARNATAKA

ಮಂಡ್ಯದಲ್ಲಿ ನೂತನ ಕೃಷಿ, ತೋಟಗಾರಿಕೆ ವಿವಿ ಸ್ಥಾಪನೆಗೆ ರಾಜ್ಯ ಸರ್ಕಾರದ ಅಧಿಕೃತ ಅನುಮೋದನೆ

By kannadanewsnow0929/01/2025 9:20 PM

ಬೆಂಗಳೂರು: ಮಂಡ್ಯ ಜಿಲ್ಲೆ, ವಿ.ಸಿ ಫಾರಂನಲ್ಲಿ ನೂತನ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ (ಸಮಗ್ರ) ಸ್ಥಾಪನೆಗೆ ರಾಜ್ಯ ಸರ್ಕಾರ ತಾತ್ವಿಕ ಅನುಮೋದನೆ ನೀಡಿ ಆದೇಶ ಹೊರಡಿಸಿದ್ದು, ಮಂಡ್ಯ ಜಿಲ್ಲೆ ಸೇರಿದಂತೆ ಮೈಸೂರು ವಿಭಾಗದ ಜನರ ಬಹುದಿನಗಳ ಕನಸು ಈಡೇರಿದೆ.

2024-25ನೇ ಸಾಲಿನ ಬಜೆಟ್ ಭಾಷಣದ ಕಂಡಿಕೆ-42ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡ್ಯ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಯ ಸಾಧ್ಯತೆ ಕುರಿತು ಪರಿಶೀಲನೆಗೆ ಸಮಿತಿ ರಚಿಸುವುದಾಗಿ ಘೋಷಣೆ ಮಾಡಿದ ಒಂದು ವರ್ಷದೊಳಗೆ ವಿವಿ ಪ್ರಾರಂಭಕ್ಕೆ ಆದೇಶ ಹೊರಬಿದ್ದಿದೆ. ಕೃಷಿ ಸಚಿವರ ವಿಶೇಷ ಕಾಳಜಿ, ನಿರಂತರ ಪರಿಶ್ರಮ ಶೀಘ್ರವೇ ಫಲ ನೀಡಿದೆ.

ಇದಕ್ಕಾಗಿ ಚಲುವರಾಯಸ್ವಾಮಿರವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.

ನೂತನ ಬಜೆಟ್ ಘೋಷಣೆಯಂತೆ ಬೆಂಗಳೂರು ಕೃಷಿ ವಿ.ವಿಯ ವಿಶ್ರಾಂತಿ ಕುಲಪತಿ ಡಾ||ರಾಜೇಂದ್ರಪ್ರಸಾದ್‌ರವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚಿಸಲಾಗಿತ್ತು. ಈ ತಂಡವು ಹಲವು ಭಾರಿ ಸ್ಥಳ ಪರಿಶೀಲಿಸಿ, ಸಭೆಗಳನ್ನು ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು.

ಈ ಸಮಿತಿಯು ನೂತನ ಕೃಷಿ ವಿಶ್ವವಿದ್ಯಾಲಯಕ್ಕೆ ಬೆಂಗಳೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಮೈಸೂರು ಜಿಲ್ಲೆಯ ಸಂಸ್ಥೆಗಳಾದ : ಸಾವಯವ ಕೃಷಿ ಸಂಶೋಧನಾ ಕೇಂದ್ರ, ನಾಗೇನಹಳ್ಳಿ, ಮೈಸೂರು, ವಿಸ್ತರಣಾ ಶಿಕ್ಷಣ ಘಟಕ, ನಾಗೇನಹಳ್ಳಿ, ಮೈಸೂರು

ಹಾಸನ ಜಿಲ್ಲೆಯ ಸಂಸ್ಥೆಗಳಾದ; ಕಾರೆಕೆರೆಯ ಕೃಷಿ ಮಹಾವಿದ್ಯಾಲಯ, ಃ.Sಛಿ (ಊoಟಿs). ಕೃಷಿ ಃ.ಖಿeಛಿh (ಃio ಖಿeಛಿhಟಿoಟogಥಿ), ಃ.ಖಿeಛಿh (ಈooಜ ಖಿeಛಿhಟಿoಟogಥಿ), ಕಂದಲಿ ಕೃಷಿ ವಿಜ್ಞಾನ ಕೇಂದ್ರ (ಏಗಿಏ), ಕೃಷಿ ಸಂಶೋಧನಾ ಕೇಂದ್ರ, ಗುಂಜೇವು, ಹೊಳೆನರಸೀಪುರ ತಾಲ್ಲೂಕು, ಕೃಷಿ ಸಂಶೋಧನಾ ಕೇಂದ್ರ, ಮಡೆನೂರು (ಹಾಸನ), ಜೈವಿಕ ಇಂಧನ ಸಂಶೋಧನಾ ಕೇಂದ್ರ, ಹಾಸನ

ಚಾಮರಾಜನಗರ ಜಿಲ್ಲೆಯ ಸಂಸ್ಥೆಗಳು: ಕೃಷಿ ಮಹಾವಿದ್ಯಾಲಯ, ಚಾಮರಾಜನಗರ (ಹರದನಹಳ್ಳಿ), ಕೃಷಿ ವಿಜ್ಞಾನ ಕೇಂದ್ರ(ಕೆವಿಕೆ), ಚಾಮರಾಜನಗರ, ಂIಅಖP (ಹತ್ತಿ), ಂIಅಖP (ಜೋಳ), ಜೈವಿಕ ಇಂಧನ ಮಾಹಿತಿ ಕೇಂದ್ರ, ಚಾಮರಾಜನಗರ, ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ: ತೋಟಗಾರಿಕೆ ಕಾಲೇಜು, ಮೈಸೂರು, ಊಖಇಅ, ಮೈಸೂರು, ಂIಅಖP (ತಾಳೆಗಳು), ಅರಸೀಕೆರೆ, ತೋಟಗಾರಿಕೆ, ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರ(ಊಖಇಅ), ಅರಸೀಕೆರೆ, ಊಖಇಅ, ಸೋಮನಹಳ್ಳಿ ಕಾವಲ್ (ಹಾಸನ), ಂIಅಖP (ಆಲೂಗಡ್ಡೆ), ಹಾಸನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಕೊಡಗು ಜಿಲ್ಲೆಯ ಸಂಸ್ಥೆಗಳಾದ: ಅರಣ್ಯ ಮಹಾವಿದ್ಯಾಲಯ ಪೊನ್ನಂಪೇಟೆ, ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಪೊನ್ನಂಪೇಟೆ, ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಮಡಿಕೇರಿ, ವಿಸ್ತರಣಾ ಶಿಕ್ಷಣ ಘಟಕ, ಮಡಿಕೇರಿ ಕೇಂದ್ರಗಳನ್ನು ಮಂಡ್ಯ ವಿ.ಸಿ ಫಾರಂ ಕೃಷಿ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಸೇರಿಸುವಂತೆ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿತ್ತು.

ಸಮಿತಿಯ ಅಭಿಪ್ರಾಯವನ್ನು ಕಳೆದ ವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಂದಿಟ್ಟು ಅನುಮೋದನೆ ಪಡೆದ ನಂತರ ಸರ್ಕಾರ ಮಂಡ್ಯ ಜಿಲ್ಲೆಯ ವಿಶ್ವೇಶ್ವರಯ್ಯ ಕಾಲುವ ಫಾರಂನಲ್ಲಿ ನೂತನ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ (ಸಮಗ್ರ) ಸ್ಥಾಪಿಸಲು ತಾತ್ವಿಕ ಅನುಮೋದನೆ ನೀಡಿದೆ.

ಆರ್ಥಿಕ ಇಲಾಖೆ ಕೂಡ ಮಂಡ್ಯದ ವಿಸಿ ಫಾರಂನಲ್ಲಿ ಲಭ್ಯವಿರುವ ಮೂಲಭೂತ ಸೌಕರ್ಯಗಳನ್ನು ಬಳಸಿಕೊಂಡು ಮಂಡ್ಯ ಕೃಷಿ ವಿಶ್ವವಿದ್ಯಾಲಯ ಪ್ರಾರಂಭಿಸಲು ತಾತ್ವಿಕ ಅನುಮತಿ ನೀಡಿ ವಿಶ್ವವಿದ್ಯಾಲಯಕ್ಕೆ ಹಂತ ಹಂತವಾಗಿ ಅವಶ್ಯಕವಿರುವ ಮೂಲಭೂತ ಸೌಕರ್ಯಗಳಿಗೆ ಮಾತ್ರ ವಿಸ್ತೃತ ಅಂದಾಜು ಹಾಗೂ ಆವರ್ತಕ ವೆಚ್ಚದ ಅಂದಾಜನ್ನು ಸಲ್ಲಿಸಲು ತಿಳಿಸಿದೆ.

ಈ ಎಲ್ಲಾ ಅಂಶಗಳ ಆಧಾರದ ಮೇರೆಗೆ ಸರ್ಕಾರವು ಮಂಡ್ಯ ಜಿಲ್ಲೆಯ ವಿಸಿ ಫಾರಂನಲ್ಲಿ ನೂತನ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ (ಸಮಗ್ರ) ಸ್ಥಾಪಿಸಲು ಅನುಮೋದನೆ ನೀಡಿದೆ. ಷರತ್ತು ನಿಬಂಧನೆಗಳು ಹಾಗೂ ಆಡಳಿತಾತ್ಮಕ ಅನುಮೋದನೆಗಳನ್ನು ಮುಂದಿನ ಆದೇಶದಲ್ಲಿ ಹೊರಡಿಸಲಾಗುವುದೆಂದು ತಿಳಿಸಲಾಗಿದೆ.

ಶೀಘ್ರವೇ ವಿಶೇಷಾಧಿಕಾರಿಗಳನ್ನು ನೇಮಿಸಿ ಪ್ರಸಕ್ತ ಸಾಲಿನಲ್ಲಿಯೇ ವಿ.ವಿ ಕಾರ್ಯಾರಂಭ ಮಾಡಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುವುದು ಎಂದು ಕೃಷಿ ಸಚಿವರಾದ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಮೈಕ್ರೋ ಫೈನಾನ್ಸ್ ಸಾಲ ವಸೂಲಾತಿಗೆ ಕಿರುಕುಳ ನೀಡಿದರೆ ದೂರು ಸಲ್ಲಿಸಿ: ಮಂಡ್ಯ ಡಿಸಿ ಡಾ.ಕುಮಾರ

BREAKING: ‘ಕರ್ನಾಟಕ ಬಿಜೆಪಿ’ಯಲ್ಲಿ ಮೇಜರ್ ಸರ್ಜರಿ: 23 ಜಿಲ್ಲೆಗಳಿಗೆ ‘ನೂತನ ಅಧ್ಯಕ್ಷರ’ ನೇಮಕ | Karnataka BJP

Share. Facebook Twitter LinkedIn WhatsApp Email

Related Posts

ಫೆ.3, 2026ರಂದು ಸಾಗರದ ‘ಮಾರಿಕಾಂಬಾ ದೇವಿ ಜಾತ್ರೆ’ ನಿಗದಿ: ಅಧ್ಯಕ್ಷ ಕೆ.ಎನ್ ನಾಗೇಂದ್ರ

26/08/2025 9:53 PM1 Min Read

ಶಿವಮೊಗ್ಗ: ಸಾಗರದ ಜೋಯಿಸ್ ಮನೆತನದಿಂದ ‘ಅರಮನೆ ಗೌರಿ’ ಪ್ರತಿಷ್ಠಾಪನೆ, ವಿಶೇಷ ಪೂಜೆ

26/08/2025 9:46 PM1 Min Read

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಸೆ.1ರಿಂದ ಪಹಣಿ ತಿದ್ದುಪಡಿ ವಿಶೇಷ ಅಭಿಯಾನ

26/08/2025 9:30 PM1 Min Read
Recent News

ಈ ವಿಟಮಿನ್ ಕೊರತೆಯಿದ್ರೆ ನಿಮಗೆ ನಿದ್ದೆ ಬರುವುದಿಲ್ಲ ; ನೀವಿದನ್ನ ಈ ರೀತಿ ಭರ್ತಿ ಮಾಡಿ!

26/08/2025 10:05 PM

ಫೆ.3, 2026ರಂದು ಸಾಗರದ ‘ಮಾರಿಕಾಂಬಾ ದೇವಿ ಜಾತ್ರೆ’ ನಿಗದಿ: ಅಧ್ಯಕ್ಷ ಕೆ.ಎನ್ ನಾಗೇಂದ್ರ

26/08/2025 9:53 PM

ಶಿವಮೊಗ್ಗ: ಸಾಗರದ ಜೋಯಿಸ್ ಮನೆತನದಿಂದ ‘ಅರಮನೆ ಗೌರಿ’ ಪ್ರತಿಷ್ಠಾಪನೆ, ವಿಶೇಷ ಪೂಜೆ

26/08/2025 9:46 PM

ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ, ಬೆಲ್ಲ ಒಟ್ಟಿಗೆ ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ.? ತಿಳಿದ್ರೆ, ನೀವಿದನ್ನ ಬಿಡೋದಿಲ್ಲ

26/08/2025 9:44 PM
State News
KARNATAKA

ಫೆ.3, 2026ರಂದು ಸಾಗರದ ‘ಮಾರಿಕಾಂಬಾ ದೇವಿ ಜಾತ್ರೆ’ ನಿಗದಿ: ಅಧ್ಯಕ್ಷ ಕೆ.ಎನ್ ನಾಗೇಂದ್ರ

By kannadanewsnow0926/08/2025 9:53 PM KARNATAKA 1 Min Read

ಶಿವಮೊಗ್ಗ : ಸಾಗರದ ಇತಿಹಾಸ ಪ್ರಸಿದ್ದವಾದ ಶ್ರೀ ಮಾರಿಕಾಂಬಾ ದೇವಿ ಜಾತ್ರೆಯು ಫೆಬ್ರವರಿ.3, 2026ರಂದು ನಡೆಯಲಿದೆ ಎಂದು ಮಾರಿಕಾಂಬಾ ದೇವಸ್ಥಾನ…

ಶಿವಮೊಗ್ಗ: ಸಾಗರದ ಜೋಯಿಸ್ ಮನೆತನದಿಂದ ‘ಅರಮನೆ ಗೌರಿ’ ಪ್ರತಿಷ್ಠಾಪನೆ, ವಿಶೇಷ ಪೂಜೆ

26/08/2025 9:46 PM

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಸೆ.1ರಿಂದ ಪಹಣಿ ತಿದ್ದುಪಡಿ ವಿಶೇಷ ಅಭಿಯಾನ

26/08/2025 9:30 PM

BREAKING: ಮಾಜಿ ಸಚಿವ ಮುರುಗೇಶ್ ನಿರಾಣಿ ಪುತ್ರನಿಗೆ ಸುಪ್ರೀಂ ಕೋರ್ಟ್ ಶಾಕ್: ವಿಜಯ್ ನಿರಾಣಿ ವಿರುದ್ಧ ತನಿಖೆಗೆ ಆದೇಶ

26/08/2025 9:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.