ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ 371 (ಜೆ) ವಿಧಿಯ 10ನೇ ವರ್ಷಾಚರಣೆ ಅಂಗವಾಗಿ ವಿಶೇಷ ಆಚರಣೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
371 (ಜೆ) ಕಲಂ ಅನುಷ್ಠಾನ 10 ವರ್ಷಗಳನ್ನು ಪೂರೈಸುತ್ತಿದ್ದು, ಈ ಮೈಲಿಗಲ್ಲನ್ನು ಆಚರಿಸಲು ಕಾರ್ಯಕ್ರಮ ರೂಪಿಸಲಾಗುತ್ತಿದೆ. 371 ಹಾಸಿಗೆಗಳ ಸಾಮರ್ಥ್ಯದ ಜಯದೇವ ಆಸ್ಪತ್ರೆಯನ್ನು ಮುಂದಿನ ತಿಂಗಳು ಉದ್ಘಾಟಿಸಲಾಗುವುದು ಎಂದು ಶಿವಕುಮಾರ್ ತಿಳಿಸಿದರು.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಲಬುರಗಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ಇಎಸ್ಐ ಆಸ್ಪತ್ರೆಯನ್ನು ತಂದರು. ಜಿಲ್ಲೆಯಲ್ಲಿ ಇಂದಿರಾ ಗಾಂಧಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಕಿದ್ವಾಯಿ ಮತ್ತು ಜಯದೇವ ಆಸ್ಪತ್ರೆಗಳನ್ನು ನಿರ್ಮಿಸಲಾಗುತ್ತಿದೆ. ಇದರ ಪರಿಣಾಮವಾಗಿ, ಈ ಪ್ರದೇಶದ ಜನರು ಇನ್ನು ಮುಂದೆ ವೈದ್ಯಕೀಯ ಆರೈಕೆಗಾಗಿ ಬೆಂಗಳೂರು ಅಥವಾ ಹೈದರಾಬಾದ್ಗೆ ಪ್ರಯಾಣಿಸುವ ಅಗತ್ಯವಿಲ್ಲ. ವಿರೋಧ ಪಕ್ಷಗಳ ಇಬ್ಬರು ನಾಯಕರೊಂದಿಗೆ ಚರ್ಚಿಸಿದ ನಂತರ ಆಚರಣೆಯ ಕಾರ್ಯಕ್ರಮದ ದಿನಾಂಕವನ್ನು ಅಂತಿಮಗೊಳಿಸಲಾಗುವುದು” ಎಂದು ಅವರು ಹೇಳಿದರು.
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ 371 (ಜೆ) ವಿಧಿಯನ್ನು ಜಾರಿಗೆ ತರುವಲ್ಲಿ ಮಲ್ಲಿಕಾರ್ಜುನ ಖರ್ಗೆ ಮುಂಚೂಣಿಯಲ್ಲಿದ್ದರು. ಇದು ಈ ಪ್ರದೇಶದಲ್ಲಿ ಶೈಕ್ಷಣಿಕ, ಕೈಗಾರಿಕಾ ಮತ್ತು ಸಾಮಾಜಿಕ ಕ್ರಾಂತಿಗಳಿಗೆ ಕಾರಣವಾಗಿದೆ.