Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಚಿತ್ರದುರ್ಗದಲ್ಲಿ ಘೋರ ದುರಂತ : ಕೃಷಿ ಹೊಂಡದಲ್ಲಿ ಕಾಲುಜಾರಿ ಬಿದ್ದು ಇಬ್ಬರು ಯುವಕರು ಸಾವು!

14/05/2025 8:43 PM

ಬಾಗಲಕೋಟೆಯಲ್ಲಿ ಒಡೆದ ಬಿಯರ್ ಬಾಟಲ್ ನಿಂದ ಶಿಕ್ಷಕನ ಮೇಲೆ ಹಲ್ಲೆ : ಆರೋಪಿ ಯುವಕ ಅರೆಸ್ಟ್

14/05/2025 8:37 PM

ಸಾಮಾಜಿಕ ನ್ಯಾಯದ ವಿರೋಧಿಗಳ ಜೊತೆ ಹೋಗಿ ಸೇರೋದು ಸರಿಯಲ್ಲ: ಸಿಎಂ ಸಿದ್ದರಾಮಯ್ಯ

14/05/2025 8:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘ರಾಜ್ಯ ಸರ್ಕಾರ’ದಿಂದ ‘ಲೋಕಸಭಾ ಚುನಾವಣೆ’ಯಂದು ‘ಸಾರ್ವತ್ರಿಕ ರಜೆ’ ಘೋಷಿಸಿ ಆದೇಶ
KARNATAKA

BREAKING: ‘ರಾಜ್ಯ ಸರ್ಕಾರ’ದಿಂದ ‘ಲೋಕಸಭಾ ಚುನಾವಣೆ’ಯಂದು ‘ಸಾರ್ವತ್ರಿಕ ರಜೆ’ ಘೋಷಿಸಿ ಆದೇಶ

By kannadanewsnow0930/03/2024 2:16 PM

ಬೆಂಗಳೂರು: ರಾಜ್ಯ ಸರ್ಕಾರದಿಂದ ಲೋಕಸಭಾ ಚುನಾವಣೆಯ ಮತದಾನದಂದು ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಿ ಇಂದು ಅಧಿಕೃತ ಆದೇಶ ಹೊರಡಿಸಲಾಗಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಭಾರತ ಚುನಾವಣಾ ಆಯೋಗವು ಲೋಕಸಭೆಗೆ ಸಾರ್ವತ್ರಿಕ ಚುನಾವಣೆ 2024ನ್ನು ಘೋಷಿಸಿದ್ದು, ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ದಿನಾಂಕ:26.04.2024ರ ಶುಕ್ರವಾರದಂದು ಹಾಗೂ ಇನ್ನುಳಿದ 14 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತ ಹಾಗೂ ಶೋರಾಪುರ-36 ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯನ್ನು ದಿನಾಂಕ:07.05.2024ರ ಮಂಗಳವಾರದಂದು ನಡೆಸುತ್ತಿದೆ ಎಂದಿದ್ದಾರೆ.

ಸದರಿ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವಂತಹ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಛೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಒಳಗೊಂಡಂತೆ ದಿನಾಂಕ:26.04.2024 ಮತ್ತು ದಿನಾಂಕ:07.05.2024ರಂದು ನಡೆಯುವ ಚುನಾವಣೆಗೆ ಕೆಳಗಿನ ಅಂಕಣದಲ್ಲಿ ನಮೂದಿಸಿರುವ ಆಯಾ ಚುನಾವಣಾ ಕ್ಷೇತ್ರಗಳಿಗೆ ಸೀಮಿತಗೊಳಿಸಿ ಸಾರ್ವತ್ರಿಕ ರಜೆಯನ್ನು ಘೋಷಿಸಿದ್ದಾರೆ.

ಲೋಕಸಭಾ ಕ್ಷೇತ್ರಗಳ ಅರ್ಹ ಮತದಾರರಾಗಿರುವ ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಮತ್ತು ಇನ್ನಿತರೆ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಪುಜಾಪತಿನಿಧಿ ಕಾಯ್ದೆ 1951 ಕಲಂ 135 ಬಿ ಅಡಿಯಲ್ಲಿನ ಎಲ್ಲಾ ಉಪಬಂಧಗಳಿಗೆ ಒಳಪಟ್ಟು ವೇತನ ಸಹಿತ ರಜೆ ನೀಡಲು ಈ ಮೂಲಕ ಆದೇಶಿಸಿದ್ದಾರೆ.

ದಿನಾಂಕ:26.04.2024 ಮತ್ತು 07.05.2024ರಂದು ಸಾರ್ವತ್ರಿಕ ರಜೆಯನ್ನು Negotiable Instrument Act 1881ರ ಪ್ರಕಾರವು ಸಹ ಘೋಷಿಸಿದೆ.
ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುಂತೆ ವ್ಯವಸ್ಥೆ ಮಾಡತಕ್ಕದ್ದು ಎಂದು ಹೇಳಿದ್ದಾರೆ.

ದಿನಾಂಕ:26.04.2024 ಮತ್ತು 07.05.2024ರಂದು ಚುನಾವಣೆ ನಡೆಯಲಿರುವ ಲೋಕಸಭಾ ಕ್ಷೇತ್ರಗಳ ವಿವರಗಳನ್ನು ಕೆಳಗಿನ ಅಂಕಣದಲ್ಲಿ ನೀಡಲಾಗಿದೆ.

ಮೊದಲ ಹಂತದಲ್ಲಿ ದಿನಾಂಕ:26.04.2024ರಂದು ನಡೆಯಲಿರುವ ಲೋಕಸಭಾ ಚುನಾವಣಾ ಕ್ಷೇತ್ರಗಳ ಹೆಸರು

  1. 15-ಉಡುಪಿ-ಚಿಕ್ಕಮಗಳೂರು
  2. 16-ಹಾಸನ
  3. 17-ದಕ್ಷಿಣ ಕನ್ನಡ
  4. 18-ಚಿತ್ರದುರ್ಗ
  5. 19-ತುಮಕೂರು
  6. 20-ಮಂಡ್ಯ
  7. 21-ಮೈಸೂರು
  8. 22-ಚಾಮರಾಜನಗರ
  9. 23-ಬೆಂಗಳೂರು ಗ್ರಾಮಾಂತರ
  10. 24-ಬೆಂಗಳೂರು ಉತ್ತರ
  11. 25-ಬೆಂಗಳೂರು ಕೇಂದ್ರ
  12. 26-ಬೆಂಗಳೂರು ದಕ್ಷಿಣ
  13. 27-ಚಿಕ್ಕಬಳ್ಳಾಪುರ
  14. 28-ಕೋಲಾರ

ಎರಡನೇ ಹಂತದಲ್ಲಿ ದಿನಾಂಕ:07.05.2024ರಂದು ನಡೆಯಲಿರುವ ಲೋಕಸಭಾ ಚುನಾವಣಾ ಕ್ಷೇತ್ರಗಳ ಹೆಸರು

  1. 1-ಚಿಕ್ಕೋಡಿ
  2. 2-ಬೆಳಗಾವಿ
  3. 3-ಬಾಗಲಕೋಟೆ
  4. 4-ವಿಜಯಪುರ
  5. 5-ಕಲಬುರಗಿ
  6. 6-ರಾಯಚೂರು
  7. 7-ಬೀದರ್
  8. 8-ಕೊಪ್ಪಳ
  9. 9-ಬಳ್ಳಾರಿ
  10. 10-ಹಾವೇರಿ
  11. 11-ಧಾರವಾಡ
  12. 12-ಉತ್ತರ ಕನ್ನಡ
  13. 13-ದಾವಣಗೆರೆ
  14. 14-ಶಿವಮೊಗ್ಗ

ದಿನಾಂಕ:07.05.2024ರಂದು ಚುನಾವಣಾ ಕ್ಷೇತ್ರದ ಹೆಸರು ನಡೆಯಲಿರುವ ವಿಧಾನಸಭಾ ಉಪ ಚುನಾವಣೆ -36-ಸುರಪುರ, ಯಾದಗಿರಿ ಜಿಲ್ಲೆ.

BREAKING: ‘ಎಲ್.ಕೆ.ಅಡ್ವಾಣಿ’ ಸೇರಿ ನಾಲ್ವರಿಗೆ ‘ಭಾರತ ರತ್ನ ಪ್ರಶಸ್ತಿ’ ಪ್ರದಾನ ಮಾಡಿದ ‘ರಾಷ್ಟ್ರಪತಿ ದ್ರೌಪದಿ ಮುರ್ಮು’

BREAKING : ಡಿಸಿಎಂ ಡಿಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ : ‘IT’ ಇಲಾಖೆಯಿಂದ ನೋಟಿಸ್ ಜಾರಿ

ರಾಜ್ಯ ಸರ್ಕಾರದಿಂದ ಲೋಕಸಭಾ ಚುನಾವಣೆಯಂದು ಸಾರ್ವತ್ರಿಕ ರಜೆ ಘೋಷಿಸಿ ಆದೇಶ State government declares general holiday on Lok Sabha elections
Share. Facebook Twitter LinkedIn WhatsApp Email

Related Posts

BREAKING : ಚಿತ್ರದುರ್ಗದಲ್ಲಿ ಘೋರ ದುರಂತ : ಕೃಷಿ ಹೊಂಡದಲ್ಲಿ ಕಾಲುಜಾರಿ ಬಿದ್ದು ಇಬ್ಬರು ಯುವಕರು ಸಾವು!

14/05/2025 8:43 PM1 Min Read

ಬಾಗಲಕೋಟೆಯಲ್ಲಿ ಒಡೆದ ಬಿಯರ್ ಬಾಟಲ್ ನಿಂದ ಶಿಕ್ಷಕನ ಮೇಲೆ ಹಲ್ಲೆ : ಆರೋಪಿ ಯುವಕ ಅರೆಸ್ಟ್

14/05/2025 8:37 PM1 Min Read

ಸಾಮಾಜಿಕ ನ್ಯಾಯದ ವಿರೋಧಿಗಳ ಜೊತೆ ಹೋಗಿ ಸೇರೋದು ಸರಿಯಲ್ಲ: ಸಿಎಂ ಸಿದ್ದರಾಮಯ್ಯ

14/05/2025 8:26 PM1 Min Read
Recent News

BREAKING : ಚಿತ್ರದುರ್ಗದಲ್ಲಿ ಘೋರ ದುರಂತ : ಕೃಷಿ ಹೊಂಡದಲ್ಲಿ ಕಾಲುಜಾರಿ ಬಿದ್ದು ಇಬ್ಬರು ಯುವಕರು ಸಾವು!

14/05/2025 8:43 PM

ಬಾಗಲಕೋಟೆಯಲ್ಲಿ ಒಡೆದ ಬಿಯರ್ ಬಾಟಲ್ ನಿಂದ ಶಿಕ್ಷಕನ ಮೇಲೆ ಹಲ್ಲೆ : ಆರೋಪಿ ಯುವಕ ಅರೆಸ್ಟ್

14/05/2025 8:37 PM

ಸಾಮಾಜಿಕ ನ್ಯಾಯದ ವಿರೋಧಿಗಳ ಜೊತೆ ಹೋಗಿ ಸೇರೋದು ಸರಿಯಲ್ಲ: ಸಿಎಂ ಸಿದ್ದರಾಮಯ್ಯ

14/05/2025 8:26 PM

BREAKING : ಬಿಳಿಗಿರಿರಂಗನ ಬೆಟ್ಟದ ತಿರುವಿನಲ್ಲಿ ಸಚಿವ ವೆಂಕಟೇಶ್ ಪೈಲಟ್ ವಾಹನ ಪಲ್ಟಿ : PSI, ಚಾಲಕನಿಗೆ ಗಂಭೀರ ಗಾಯ

14/05/2025 8:08 PM
State News
KARNATAKA

BREAKING : ಚಿತ್ರದುರ್ಗದಲ್ಲಿ ಘೋರ ದುರಂತ : ಕೃಷಿ ಹೊಂಡದಲ್ಲಿ ಕಾಲುಜಾರಿ ಬಿದ್ದು ಇಬ್ಬರು ಯುವಕರು ಸಾವು!

By kannadanewsnow0514/05/2025 8:43 PM KARNATAKA 1 Min Read

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು, ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿರುವ…

ಬಾಗಲಕೋಟೆಯಲ್ಲಿ ಒಡೆದ ಬಿಯರ್ ಬಾಟಲ್ ನಿಂದ ಶಿಕ್ಷಕನ ಮೇಲೆ ಹಲ್ಲೆ : ಆರೋಪಿ ಯುವಕ ಅರೆಸ್ಟ್

14/05/2025 8:37 PM

ಸಾಮಾಜಿಕ ನ್ಯಾಯದ ವಿರೋಧಿಗಳ ಜೊತೆ ಹೋಗಿ ಸೇರೋದು ಸರಿಯಲ್ಲ: ಸಿಎಂ ಸಿದ್ದರಾಮಯ್ಯ

14/05/2025 8:26 PM

BREAKING : ಬಿಳಿಗಿರಿರಂಗನ ಬೆಟ್ಟದ ತಿರುವಿನಲ್ಲಿ ಸಚಿವ ವೆಂಕಟೇಶ್ ಪೈಲಟ್ ವಾಹನ ಪಲ್ಟಿ : PSI, ಚಾಲಕನಿಗೆ ಗಂಭೀರ ಗಾಯ

14/05/2025 8:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.