Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಐಸ್ ಕ್ರೀಮ್ ಪ್ರಿಯರೇ ಎಚ್ಚರ : ತಪ್ಪದೇ ಇದನ್ನೊಮ್ಮೆ ಓದಲೇಬೇಕು | Ice cream

​ಸಿನಿಮಾ ರಂಗಕ್ಕೆ ಸಿಎಂ ವಿಜಯ್ ಮೊದಲ ಕೊಡುಗೆ: ಸೂರ್ಯ-ತ್ರಿಶಾ ನಟನೆಯ ‘ಕರುಪ್ಪು’ ಚಿತ್ರದ 9 AM ಶೋಗೆ ವಿಶೇಷ ಅನುಮತಿ!

`LPG ಗ್ರಾಹಕರ’ ಗಮನಕ್ಕೆ : ಪ್ರತಿ ವರ್ಷ ಈ ಕೆಲಸ ಮಾಡದಿದ್ದರೆ ಸಿಗಲ್ಲ `ಸಬ್ಸಿಡಿ ಹಣ’ | LPG subsidy

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರಿ ನೌಕರರೇ ಗಮನಿಸಿ: ಕಡ್ಡಾಯ ಜೀವ ವಿಮೆ ಕಂತು ಕಡಿತಗೊಳಿಸುವ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ!
KARNATAKA

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ: ಕಡ್ಡಾಯ ಜೀವ ವಿಮೆ ಕಂತು ಕಡಿತಗೊಳಿಸುವ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ!

By ಅವಿನಾಶ್‌ ಆರ್‌ ಭೀಮಸಂದ್ರ
Vidhana Soudha

ಬೆಂಗಳೂರು: ಕರ್ನಾಟಕ ಸರ್ಕಾರಿ ಜೀವ ವಿಮೆ ವೇತನ ಬಿಲ್ಲುಗಳಲ್ಲಿ ಕಡ್ಡಾಯ ಜೀವ ವಿಮೆ ಕಂತುಗಳನ್ನು ಕಡಿತಗೊಳಿಸುವ ಕುರಿತು. ಆದೇಶವನ್ನು ಹೊರಡಿಸಿದೆ.

ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ ನಿರ್ದೇಶಕರು, ಕರ್ನಾಟಕ ಸರ್ಕಾರಿ ಜೀವ ವಿಮೆ ಇಲಾಖೆ, ಇವರು ಉಲ್ಲೇಖಿತ ಪತ್ರದಲ್ಲಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕಡ್ಡಾಯ ಜೀವ ವಿಮಾ ನಿಯಮಾವಳಿಗಳ ನಿಯಮ 8 ರಂತೆ ಪ್ರತಿಯೊಬ್ಬ ರಾಜ್ಯ ಸರ್ಕಾರಿ ನೌಕರ/ಅಧಿಕಾರಿಯು, ಅವರು ಹೊಂದಿರುವ ಹುದ್ದೆಯ ವೇತನ ಶ್ರೇಣಿಯ ಸರಾಸರಿ ವೇತನದ ಕನಿಷ್ಠ ಶೇ 6.25 ರಷ್ಟು ಮಾಸಿಕ ವಿಮಾ ಕಂತಿಗೆ ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯಲ್ಲಿ ಕಡ್ಡಾಯವಾಗಿ ಜೀವವಿಮ ಪಡೆಯಬೇಕಿರುತ್ತದೆ. ಕಡ್ಡಾಯ ಜೀವ ವಿಮಾ ನಿಯಮಾವಳಿಗಳ ನಿಯಮ 6 (i) ರನ್ವಯ 50 ವರ್ಷ ವಯಸ್ಸು ಮೀರಿದ ರಾಜ್ಯ ಸರ್ಕಾರಿ ನೌಕರರಿಗೆ ಜೀವ ವಿಮಾ ಪಾಲಿಸಿಯನ್ನು ನೀಡಲಾಗುವುದಿಲ್ಲ ಎಂದು ತಿಳಿಸಿರುತ್ತಾರೆ.

2. ಈ ಪ್ರಕಾರ ಪರಿಶೀಲಿಸಲಾಗಿ ದಿನಾಂಕ 31-03-2024 ರ ಅಂತ್ಯಕ್ಕೆ 50 ವರ್ಷ ವಯಸ್ಸು ಪೂರ್ಣಗೊಂಡಿರುವ ನೌಕರರನ್ನು ಹೊರತುಪಡಿಸಿ, ರಾಜ್ಯ ಸರ್ಕಾರದ ಸುಮಾರು 72,754 ಅಧಿಕಾರಿ/ನೌಕರರು ಕಡ್ಡಾಯ ಜೀವ ವಿಮಾ ನಿಯಮಾವಳಿಯಲ್ಲಿ ನಿರ್ದಿಷ್ಟಪಡಿಸಿರುವಂತೆ ಸರಾಸರಿ ವೇತನದ ಕನಿಷ್ಠ ಶೇ 6.25 ರಷ್ಟು ಮಾಸಿಕ ವಿಮಾ ಕಂತಿಗೆ ವಿಮಾ ಇಲಾಖೆಯಲ್ಲಿ ಜೀವ ವಿಮೆ ಪಡೆಯದೇ ಇರುವುದು ಕಂಡುಬಂದಿರುವುದಾಗಿ ಸಹ ತಿಳಿಸಿರುತ್ತಾರೆ. ಈ ಕುರಿತು ವಿವರಗಳು ಕೆಜಿಐಡಿ ವೆಬ್‌ಸೈಟ್ https://kgidonline.karnataka.gov.in/kgid- note ನಲ್ಲಿ ಲಭ್ಯವಿರುವುದಾಗಿ ತಿಳಿಸಿರುತ್ತಾರೆ.

3. ಮೇಲ್ಕಂಡ ಅಂಶದ ಹಿನ್ನೆಲೆಯಲ್ಲಿ, ಈಗಾಗಲೇ ಸಂಬಂಧಿಸಿದ ವೇತನ ಬಟವಾಡೆ ಅಧಿಕಾರಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕಡ್ಡಾಯ ಜೀವವಿಮಾ ನಿಯಮಾವಳಿಗಳ ನಿಯಮ 8 ನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದ್ದು, ಕರ್ನಾಟಕ ಆರ್ಥಿಕ ಸಂಹಿತ ಅನುಚ್ಛೇದ 26 (1) ಮತ್ತು ಕರ್ನಾಟಕ ಖಜಾನ ಸಂಹಿತೆಯ ಅನುಚ್ಛೇದ 87 (1) ರಲ್ಲಿ ಅವಕಾಶವಿರುವಂತ, ಕಡ್ಡಾಯ ಜೀವ ವಿಮಾ ನಿಯಮಾವಳಿಯಲ್ಲಿ ನಿರ್ದಿಷ್ಟಪಡಿಸಿರುವಷ್ಟು ಶೇಕಡಾವಾರು ವಿಮಾ ಕಂತನ್ನು ನೌಕರರ ವೇತನದಲ್ಲಿ ಕಟಾವಣೆ ಮಾಡಿರುವ ಬಗ್ಗೆ ವೇತನ ಬಿಲ್ಲುಗಳನ್ನು ತೀರ್ಣಗೊಳಿಸುವಾಗ ಖಜಾನ ಅಧಿಕಾರಿಗಳು ಖಚಿತಪಡಿಸಿಕೊಳ್ಳುವಂತೆ ಸೂಚಿಸಲು ಸಹ ಕೋರಿರುತ್ತಾರೆ.

4. ಈ ಕುರಿತು ಖಜಾನೆಗಳಲ್ಲಿ ವೇತನ ಬಿಲ್ಲುಗಳನ್ನು ಪಾವತಿಗಾಗಿ ತೀರ್ಣಗೊಳಿಸುವಾಗ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕಡ್ಡಾಯ ಜೀವ ವಿಮಾ ನಿಯಮಾವಳಿಗಳ ನಿಯಮ 8 ರಂತೆ, ಪ್ರತಿಯೊರ್ವ ಅರ್ಹ ಅಧಿಕಾರಿ/ಸಿಬ್ಬಂದಿಗಳಿಂದ ಕನಿಷ್ಠ ವಿಮಾ ಕಂತನ್ನು ಕಡಿತಗೊಳಿಸಿರುವ ಕುರಿತು ಖಚಿತಪಡಿಸಿಕೊಳ್ಳುವಂತೆ, ಒಂದು ವೇಳೆ ಕಡಿತಗೊಳಿಸದೆ ಅಥವಾ ಕಡಿಮೆ ಕಡಿತಗೊಳಿಸಿದ್ದಲ್ಲಿ ಬಿಲ್ಲನ್ನು ಆಕ್ಷೇಪಿಸಿ ಹಿಂದುರುಗಿಸುವಂತೆ
ಸೂಚಿಸಿದೆ.

5. ಮೇಲ್ಕಂಡ ವೆಬ್‌ಸೈಟಿನಲ್ಲಿ ಪರಿಶೀಲಿಸಿದಾಗ, ಖಜಾನೆ ಇಲಾಖೆಯ 200 ಅಧಿಕಾರಿಗಳು/ಸಿಬ್ಬಂದಿಗಳ ಸರಾಸರಿ ವೇತನದ ಶೇ 6.25 ರಷ್ಟು ಕನಿಷ್ಠ ಮಾಸಿಕ ವಿಮಾ ಕಂತಿಗಿಂತ ಕಡಿಮೆ ಕಡಿತಗೊಳಿಸುತ್ತಿರುವುದು ಕಂಡುಬಂದಿರುತ್ತದೆ. ಈ ಕುರಿತು ಪರಿಶೀಲಿಸಿ ಕನಿಷ್ಠ ವಿಮಾ ಕಂತಿಗೆ ಪಾಲಿಸಿಯನ್ನು ಪಡೆದು ಕನಿಷ್ಠ ಕಂತನ್ನು ಕಡಿತಗೊಳಿಸುವ ಕುರಿತು ಕೂಡಲೇ ಕ್ರಮ ಕೈಗೊಳ್ಳುವುದು ಅಂತ ತಿಳಿಸಿದೆ.

 

 

State government employees: Here's some important information about the mandatory life insurance premium cut!
Share. Facebook Twitter LinkedIn WhatsApp Email

Related Posts

`LPG ಗ್ರಾಹಕರ’ ಗಮನಕ್ಕೆ : ಪ್ರತಿ ವರ್ಷ ಈ ಕೆಲಸ ಮಾಡದಿದ್ದರೆ ಸಿಗಲ್ಲ `ಸಬ್ಸಿಡಿ ಹಣ’ | LPG subsidy

2 Mins Read

ನಿಮ್ಮ ಮನೆಗೆ ಮಹಾಲಕ್ಷ್ಮಿ ಬರುವ ಮುನ್ನ ಪ್ರಕೃತಿ ನೀಡುತ್ತೆ ಈ 5 ಸಂಕೇತ: ಇವುಗಳನ್ನ ನಿರ್ಲಕ್ಷಿಸಬೇಡಿ

2 Mins Read

ನಿಮ್ಮ ಮನೆಯ ನೀರು ಕುಡಿಯಲು ಯೋಗ್ಯವಾಗಿದೆಯೇ? ಶುದ್ಧತೆ ಪರೀಕ್ಷಿಸಲು ಇಲ್ಲಿವೆ ಸುಲಭ ವಿಧಾನಗಳು | Water Test

2 Mins Read
Recent News

ALERT : ಐಸ್ ಕ್ರೀಮ್ ಪ್ರಿಯರೇ ಎಚ್ಚರ : ತಪ್ಪದೇ ಇದನ್ನೊಮ್ಮೆ ಓದಲೇಬೇಕು | Ice cream

​ಸಿನಿಮಾ ರಂಗಕ್ಕೆ ಸಿಎಂ ವಿಜಯ್ ಮೊದಲ ಕೊಡುಗೆ: ಸೂರ್ಯ-ತ್ರಿಶಾ ನಟನೆಯ ‘ಕರುಪ್ಪು’ ಚಿತ್ರದ 9 AM ಶೋಗೆ ವಿಶೇಷ ಅನುಮತಿ!

`LPG ಗ್ರಾಹಕರ’ ಗಮನಕ್ಕೆ : ಪ್ರತಿ ವರ್ಷ ಈ ಕೆಲಸ ಮಾಡದಿದ್ದರೆ ಸಿಗಲ್ಲ `ಸಬ್ಸಿಡಿ ಹಣ’ | LPG subsidy

ಹವಾಮಾನ ವೈಪರೀತ್ಯ: ದಕ್ಷಿಣ ಭಾರತದಲ್ಲಿ ಗುಡುಗು ಸಹಿತ ಮಳೆ ಅಬ್ಬರ; ಪಶ್ಚಿಮ ಭಾರತಕ್ಕೆ ಸುಡುತ್ತಿರುವ ‘ಹೀಟ್ ವೇವ್’ ಎಚ್ಚರಿಕೆ!

State News
KARNATAKA

`LPG ಗ್ರಾಹಕರ’ ಗಮನಕ್ಕೆ : ಪ್ರತಿ ವರ್ಷ ಈ ಕೆಲಸ ಮಾಡದಿದ್ದರೆ ಸಿಗಲ್ಲ `ಸಬ್ಸಿಡಿ ಹಣ’ | LPG subsidy

By kannadanewsnow57 KARNATAKA 2 Mins Read

ಕೇಂದ್ರ ಸರ್ಕಾರದ ಎಲ್ಪಿಜಿ ಗ್ಯಾಸ್ ಸಬ್ಸಿಡಿ ಪಡೆಯುತ್ತಿರುವ ಗ್ರಾಹಕರಿಗೆ ತೈಲ ಮಾರುಕಟ್ಟೆ ಕಂಪನಿಗಳು (OMCs) ಮಹತ್ವದ ಸೂಚನೆಯನ್ನು ನೀಡಿವೆ. ಗ್ಯಾಸ್…

ನಿಮ್ಮ ಮನೆಗೆ ಮಹಾಲಕ್ಷ್ಮಿ ಬರುವ ಮುನ್ನ ಪ್ರಕೃತಿ ನೀಡುತ್ತೆ ಈ 5 ಸಂಕೇತ: ಇವುಗಳನ್ನ ನಿರ್ಲಕ್ಷಿಸಬೇಡಿ

ನಿಮ್ಮ ಮನೆಯ ನೀರು ಕುಡಿಯಲು ಯೋಗ್ಯವಾಗಿದೆಯೇ? ಶುದ್ಧತೆ ಪರೀಕ್ಷಿಸಲು ಇಲ್ಲಿವೆ ಸುಲಭ ವಿಧಾನಗಳು | Water Test

BREAKING : ಹೃದಯಾಘಾತದಿಂದ ಸ್ಯಾಂಡಲ್ ವುಡ್ ನಟ ದಿಲೀಪ್ ರಾಜ್ ನಿಧನ | Actor Dilip Raj passes away

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.