ಬೆಂಗಳೂರು: ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ-2025 ಅಂತಿಮವಾಗಿ ದಿನಾಂಕವನ್ನು ವಿಸ್ತರಿಸಿ ಆದೇಶಿಸಿದೆ. ಆದೇಶದಂತೆ ಜೂನ್ 30ರವರೆಗೆ ವಿಸ್ತರಣೆ ಮಾಡಿರುವುದಾಗಿ ತಿಳಿಸಿದೆ.
ಈ ಕುರಿತಂತೆ ನ್ಯಾಯಮೂರ್ತಿ ಡಾ.ಹೆಚ್ ಎನ್ ನಾಗಮೋಹನ್ ದಾಸ್ ಏಕ ಸದಸ್ಯ ಆಯೋಗದ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿನ 101 ಜಾತಿಗಳಿಗೆ ಸೇರಿದವರ ಪ್ರಾತಿನಿದ್ಯತೆ ಕುರಿತು ವೈಜ್ಞಾನಿಕ ದತ್ತಾಂಶವನ್ನು (Emperical Data) ಸಂಗ್ರಹಿಸಲು, ದಿನಾಂಕ: 05-05-2025 ರಿಂದ ಮನ-ಮನ ಭೇಟಿ ಮೂಲಕ ರಾಜ್ಯಾದ್ಯಂತ ಸಮೀಕ್ಷೆಯನ್ನು ಪ್ರಾರಂಭಿಸಲಾಗಿರುತ್ತದೆ ಎಂದಿದ್ದಾರೆ.
ಸಮೀಕ್ಷಾ ಕಾರ್ಯದಲ್ಲಿ ಶೇ. 100 ರಷ್ಟು ಪ್ರಗತಿ ಸಾಧಿಸಲು ಸಮೀಕ್ಷೆಯಲ್ಲಿ ಇದುವರೆಗೂ ಭಾಗವಹಿಸದೇ ಇರುವ ಕರ್ನಾಟಕ ರಾಜ್ಯಕ್ಕೆ ಸೇರಿದ ಪರಿಶಿಷ್ಟ ಜಾತಿ ಕುಟುಂಬದವರಿಗೆ, ದಿನಾಂಕ: 09.06.2025 ರಿಂದ ದಿನಾಂಕ: 22.06.2025 ರವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿಧಾನದ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ.
1. ನಾಗರೀಕ ಸೇವಾ ಕೇಂದ್ರಗಳಾದ, “ಕರ್ನಾಟಕ ಒನ್’ (Karnataka one) ‘ಬೆಂಗಳೂರು ಒನ್’ (Bengaluru one) “ಗ್ರಾಮ ಒನ್”(Grama one) ಮತ್ತು ಬಾಪೂಜಿ ಸೇವಾ ಕೇಂದ್ರಗಳು.
2. ಬಿ.ಬಿ.ಎಂ.ಪಿ ವ್ಯಾಪ್ತಿಯ 198 “ಬಿ.ಬಿ.ಎಂ.ಪಿ ವಾರ್ಡ್ ಕಚೇರಿ (BBMP ward offices) ಗಳಲ್ಲಿ ವ್ಯವಸ್ಥೆ ಮಾಡಿಕೊಂಡಿರುವ ಪ್ರತ್ಯೇಕವಾದ ಶಿಬಿರಗಳು.
3. https://schedulecastesurvey.karnataka.gov.in/selfd eclaration ಲಿಂಕ್ ಮೂಲಕ ಸ್ಮಯಂ ಘೋಷಣೆ ಮಾಡಿಕೊಳ್ಳುವುದು.
ಈವರೆಗೂ ರಾಜ್ಯಾದ್ಯಂತ ಸಮೀಕ್ಷೆಯಲ್ಲಿ ಶೇ. 91,00 ರಷ್ಟು ಪ್ರಗತಿಯನ್ನು ಸಾಧಿಸಲಾಗಿದ್ದು, ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿ ಶೇ.50ರಷ್ಟು ಪ್ರಗತಿಯಾಗಿರುತ್ತದೆ. ಸಮೀಕ್ಷೆಯಲ್ಲಿ ಭಾಗವಹಿಸದೇ ಇರುವ ಪರಿಶಿಷ್ಟ ಜಾತಿ ಕುಟುಂಬದವರಿಗೆ ಅಂತಿಮ ಅವಕಾಶ ಕಲ್ಪಿಸುವ ಉದ್ದೇಶದಿಂದ ರಾಜ್ಯಾದ್ಯಂತ ಸಮೀಕ್ಷಾ ದಿನಾಂಕವನ್ನು ದಿನಾಂಕ: 23.06.2025 ರಿಂದ ದಿನಾಂಕ: 30.06.2025 ರವರೆಗೆ ವಿಸ್ತರಿಸಲಾಗಿದೆ ಅಂತ ತಿಳಿಸಿದ್ದಾರೆ.
ಮೇಲ್ಕಂಡ ಸ್ಥಳಗಳಲ್ಲಿ/ವಿಧಾನದ ಮೂಲಕ ಸಮೀಕ್ಷೆಯನ್ನು ದಿನಾಂಕ: 30.06.2025 ರವರೆಗೆ ವಿಸ್ತರಿಸಿರುವ ಬಗ್ಗೆ, ವ್ಯಾಪಕ ಪ್ರಚಾರ ಕೈಗೊಂಡು ಇನ್ನೂ ಹೆಚ್ಚಿನ ಪ್ರಗತಿಯನ್ನು ಸಾಧಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ತಿಳಿಸಲು ಮಾನ್ಯ ಅಧ್ಯಕ್ಷರಿಂದ ನಿರ್ದೇಶಿಸಲ್ಪಟ್ಟಿದ್ದೇನೆ ಎಂದಿದ್ದಾರೆ.
ಕಾದಂಬರಿಕಾರ ಭಾರತೀಸುತ ಅವರ ಪುತ್ರಿ, ಖ್ಯಾತ ಪತ್ರಕರ್ತೆ ಕುಸುಮಾ ಶಾನುಭಾಗ ಇನ್ನಿಲ್ಲ
ಬೆಂಗಳೂರಿನ BTM ಲೇಔಟ್ ನಲ್ಲಿ ನವೀಕೃತ ಪ್ರಾಥಮಿಕ ಆರೋಗ್ಯ ಕೇಂದ್ರ ಲೋಕಾರ್ಪಣೆಗೊಳಿಸಿದ ಸಚಿವ ರಾಮಲಿಂಗಾರೆಡ್ಡಿ