Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಆಪರೇಷನ್ ಸಿಂಧೂರ್’ ಟ್ರೇಡ್ಮಾರ್ಕ್ ಬಿಡ್ ಹಿಂಪಡೆದ ರಿಲಯನ್ಸ್ | Operation Sindoor

09/05/2025 10:25 AM

BREAKING : ಯುದ್ಧ ಯಾರಿಗೂ ಬೇಡ, ಯುದ್ಧ ಆಗಬೇಕು ಅಂತ ಬಯಸೋದು ಸರಿಯಲ್ಲ : ಸಚಿವ ದಿನೇಶ್ ಗುಂಡೂರಾವ್

09/05/2025 10:13 AM

BREAKING : ಪಾಕಿಸ್ತಾನದ ಮೇಲೆ ಮುಂದುವರೆದ ದಾಳಿ : ಪಂಜಾಬ್ ಪ್ರಾಂತ್ಯದ ಮೇಲೆ 5 ಡ್ರೋನ್ ಗಳಿಂದ ಅಟ್ಯಾಕ್

09/05/2025 10:07 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING NEWS: ರಾಜ್ಯ ಸರ್ಕಾರದಿಂದ ‘ಮೈಕ್ರೋ ಫೈನಾನ್ಸ್ ಕಿರುಕುಳ’ ತಡೆಗೆ ‘ಸುಗ್ರೀವಾಜ್ಞೆ ಜಾರಿ’ಗೊಳಿಸಿ ‘ಗೆಜೆಟ್ ಅಧಿಸೂಚನೆ’ ಪ್ರಕಟ
KARNATAKA

BREAKING NEWS: ರಾಜ್ಯ ಸರ್ಕಾರದಿಂದ ‘ಮೈಕ್ರೋ ಫೈನಾನ್ಸ್ ಕಿರುಕುಳ’ ತಡೆಗೆ ‘ಸುಗ್ರೀವಾಜ್ಞೆ ಜಾರಿ’ಗೊಳಿಸಿ ‘ಗೆಜೆಟ್ ಅಧಿಸೂಚನೆ’ ಪ್ರಕಟ

By kannadanewsnow0912/02/2025 7:25 PM

ಬೆಂಗಳೂರು: ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿಗೊಳಿಸುವಂತ ನಿರ್ಧಾರವನ್ನು ಸರ್ಕಾರ ಪ್ರಕಟಿಸಿತ್ತು. ಅದರಂತೆ ಸಚಿವ ಸಂಪುಟ ಸಭೆಯಲ್ಲೂ ಅನುಮೋದಿಸಿ, ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಕಿತ ಸೂಚಿಸಿದ್ದಾರೆ. ಈ ಬೆನ್ನಲ್ಲೇ ಸರ್ಕಾರವು ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ತಡೆಯ ಗೆಜೆಟ್ ಅಧಿಸೂಚನೆಯನ್ನು ಪ್ರಕಟಿಸಿದೆ.

ಇಂದು ರಾಜ್ಯ ಸರ್ಕಾರದಿಂದ ವಿಶೇಷ ರಾಜ್ಯ ಪತ್ರದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸುಗ್ರೀವಾಜ್ಞೆಯನ್ನು ಪ್ರಕಟಿಸಲಾಗಿದೆ. ಅದರಲ್ಲಿ  ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ, 2025ರ ಫೆಬ್ರವರಿ ತಿಂಗಳ 12ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2025ರ ಕರ್ನಾಟಕ ಅಧ್ಯಾದೇಶ ಸಂಖ್ಯೆ : 02 ಎಂಬುದಾಗಿ ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ (ಭಾಗ IV-A) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ ಎಂದು ಹೇಳಿದೆ.

ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು (organizations) ಅಥವಾ ಲೇವಾದೇವಿದಾರರು ನೀಡುವ ದುಬಾರಿ ಬಡ್ಡಿ ದರಗಳ ಅನುಚಿತ ತೊಂದರೆ ಮತ್ತು ಬಲವಂತದ ವಸೂಲಾತಿ ವಿಧಾನಗಳಿಂದ ಆರ್ಥಿಕವಾಗಿ ದುರ್ಬಲ ಗುಂಪುಗಳು ಮತ್ತು ವ್ಯಕ್ತಿಗಳು, ವಿಶೇಷವಾಗಿ ರೈತರು, ಮಹಿಳೆಯರು ಮತ್ತು ಮಹಿಳಾ ಸ್ವಸಹಾಯ ಗುಂಪುಗಳನ್ನು ರಕ್ಷಿಸಲು ಮತ್ತು ಮುಕ್ತಗೊಳಿಸಲು ಹಾಗೂ ಅದಕ್ಕೆ ಸಂಬಂಧಪಟ್ಟ ಅಥವಾ ಅದಕ್ಕೆ ಪ್ರಾಸಂಗಿಕವಾದ ವಿಷಯಗಳಿಗಾಗಿ ಒಂದು ಅಧ್ಯಾದೇಶ ಎಂದು ಹೇಳಿದೆ.

ಕರ್ನಾಟಕ ವಿಧಾನ ಸಭೆ ಮತ್ತು ವಿಧಾನ ಪರಿಷತ್ತು ಅಧಿವೇಶನದಲ್ಲಿ ಇಲ್ಲದಿರುವುದರಿಂದ, ಮತ್ತು ಭಾರತ ಸಂವಿಧಾನದ 213 (1)ನೇ ಅನುಚ್ಛೇದದ ಮೇರೆಗಿನ ಅಧಿಕಾರಗಳನ್ನು ಚಲಾಯಿಸಲು ಅವಶ್ಯಕ ಮತ್ತು ಯುಕ್ತವಾದ ಸನ್ನಿವೇಶಗಳು ಉದ್ಭವವಾಗಿವೆಯೆಂದು ಮಾನ್ಯ ಕರ್ನಾಟಕ ರಾಜ್ಯಪಾಲರು ಮನಗಂಡಿರುವುದರಿಂದ, ಈ ಮುಂದಿನ ಅಧ್ಯಾದೇಶವನ್ನು ಪ್ರಖ್ಯಾಪಿಸುವರು

ಎಂದರೆ :-
1. ಸಂಕ್ಷಿಪ್ತ ಹೆಸರು, ಪ್ರಾರಂಭ ಮತ್ತು ಅನ್ವಯ.- (1) ಈ ಅಧ್ಯಾದೇಶವನ್ನು ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ, 2025 ಎಂದು ಕರೆಯತಕ್ಕದ್ದು.
(2) ಇದು ಈ ಕೂಡಲೆ ಜಾರಿಗೆ ಬರತಕ್ಕದ್ದು.
(3) ಈ ಅಧ್ಯಾದೇಶದಲ್ಲಿ ಇರುವುದಾವುದೂ ಆರ್‌ಬಿಐನೊಂದಿಗೆ ನೋಂದಾಯಿಸಲಾದ ಯಾವುದೇ ಬ್ಯಾಂಕಿಂಗ್‌ ಅಥವಾ ಬ್ಯಾಂಕಿಂಗೇತರ ಹಣಕಾಸು ಕಂಪನಿಗೆ ಅನ್ವಯಿಸತಕ್ಕದ್ದಲ್ಲ.
(NBFC)
(4) ಈ ಅಧ್ಯಾದೇಶದ ಉಪಬಂಧಗಳು ತತ್ಕಾಲದಲ್ಲಿ ಜಾರಿಯಲ್ಲಿರುವ ಅಸ್ತಿತ್ವದಲ್ಲಿನ ಯಾವುದೇ ಕಾನೂನಿನೊಂದಿಗೆ ಮುಂದುವರೆಯತಕ್ಕದು ಮತ್ತು ಅಧ್ಯಾರೋಹಿಯಾಗಿರತಕ್ಕದ್ದಲ್ಲ.
2. ಪರಿಭಾಷೆಗಳು. (1) ಈ ಅಧ್ಯಾದೇಶದಲ್ಲಿ ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು,-
(ಎ) “ಸಾಲಗಾರ” ಎಂದರೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು ಅಥವಾ ಲೇವಾದೇವಿದಾರರಿಂದ ಮೌಖಿಕ ಅಥವಾ ಲಿಖಿತ ಕರಾರಿನಡಿ ಷರತ್ತುಗಳು ಮತ್ತು ನಿಬಂಧನೆಗಳೊಂದಿಗೆ, ಯಾವುದೇ ಉದ್ದೇಶಕ್ಕಾಗಿ ಸಾಲದ ರೂಪದಲ್ಲಿ ಹಣವನ್ನು ಪಡೆಯುವ, ಆ ಹಣವನ್ನು ಕೆಲವು ಕಾಲಾವಧಿಯೊಳಗೆ ಮರುಪಾವತಿಸತಕ್ಕ ವ್ಯಕ್ತಿ ಅಥವಾ ಸ್ವಸಹಾಯ ಗುಂಪು (SHG) ಅಥವಾ ಜಂಟಿ ಹೊಣೆಗಾರಿಕೆ ಗುಂಪು (JLG) ಅಥವಾ ವ್ಯಕ್ತಿಗಳ ಗುಂಪು:
(ಬಿ) “ಬಲವಂತದ ಕ್ರಮ” ಎಂದರೆ 8ನೇ ಪ್ರಕರಣದಲ್ಲಿ ವಿವರಿಸಲಾದ ಬಲವಂತದ ಕ್ರಮ; (ಸಿ) “ಬಡ್ಡಿ” ಎಂಬುದು ಈ ಅಧ್ಯಾದೇಶದ ಉಪಬಂಧಗಳಡಿ ಪರಿಭಾಷಿಸಿದ ನಿಬಂಧನೆಗಳ ಉದ್ದೇಶಗಳಿಗಾಗಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು ಅಥವಾ ಲೇವಾದೇವಿದಾರರಿಂದ ನಗದು ಅಥವಾ ಸಂದರ್ಭಾನುಸಾರವಾಗಿ ವಸ್ತುರೂಪದಲ್ಲಿ ಸಾಲಗಾರನಿಗೆ ನೀಡಿದ ಮೊತ್ತದ ಮೇಲಿನ ಲಾಭ ಹಾಗೂ ಅದು ದಿನಕ್ಕೆ, ವಾರಕ್ಕೆ, ತಿಂಗಳಿಗೆ ಅಥವಾ ವರ್ಷದ ಆಧಾರದಲ್ಲಿ ವಿಧಿಸಲಾದ ಬಡ್ಡಿಯನ್ನು ಒಳಗೊಳ್ಳುವುದು

(ಡಿ) “ಸಾಲ” ಎಂದರೆ ಸಾಲಗಾರನಿಗೆ ಬಡ್ಡಿಯ ಮೇರೆಗೆ ಖಚಿತವಾಗಿ ಅಥವಾ ಅನ್ಯಥಾ ನೀಡಲಾದ ಹಣದ ರೂಪದಲ್ಲಿನ ಅಥವಾ ಬೀಜ, ಗೊಬ್ಬರ, ಇತ್ಯಾದಿಗಳಂತಹ ವಸ್ತುರೂಪದಲ್ಲಿನ ಮುಂಗಡ ಅಥವಾ ಕೈಸಾಲ;
(ಇ) “ಲೇವಾದೇವಿದಾರ” ಎಂಬುದು ಮೈಕ್ರೋ ಫೈನಾನ್ಸ್ ಸಂಸ್ಥೆ ಅಥವಾ ಸಾಲ ನೀಡಿಕೆ ಏಜೆನ್ಸಿ ಅಥವಾ ಸಂಸ್ಥೆಗಳನ್ನು ಒಳಗೊಳ್ಳುವುದು ಹಾಗೂ ದಿನಕ್ಕೆ, ವಾರಕ್ಕೆ, ತಿಂಗಳಿಗೆ ಅಥವಾ ವರ್ಷದ ಆಧಾರದಲ್ಲಿ ಬಡ್ಡಿಯನ್ನು ವಿಧಿಸುವ ಮೂಲಕ ಲಾಭವನ್ನು ಗಳಿಸಲು ನಗದು ಅಥವಾ ವಸ್ತುರೂಪದಲ್ಲಿ ಸಾಲ ನೀಡುವ ಅಥವಾ ಯಾವುದೇ ಸ್ವರೂಪದ ಹಣ ಕಾಸು ನೆರವು ನೀಡುವುದನ್ನು ಪ್ರಧಾನ ಅಥವಾ ಪ್ರಾಸಂಗಿಕ ಚಟುವಟಿಕೆಯಾಗಿಸಿಕೊಂಡ ಯಾವುದೇ ಪಾಲುದಾರ ಫರ್ಮು ಅಥವಾ ವ್ಯಕ್ತಿ ಅಥವಾ ವ್ಯಕ್ತಿಗಳ ಗುಂಪು ಅಥವಾ ಡಿಜಿಟಲ್ ಸಾಲನೀಡಿಕೆ ಪ್ಲಾಟ್‌ಫಾರ್ಮ್;
(ಎಫ್) “ನೋಂದಣಿ ಪ್ರಾಧಿಕಾರಿ” ಎಂದರೆ ಸಂಬಂಧಪಟ್ಟ ಜಿಲ್ಲೆಯ ಜಿಲ್ಲಾಧಿಕಾರಿ: ಪರಂತು ರಾಜ್ಯ ಸರ್ಕಾರವು ಅಧಿಸೂಚನೆಯ ಮೂಲಕ ಅಂಥ ಇತರ ಗೊತ್ತುಪಡಿಸಿದ ಅಧಿಕಾರಿಯನ್ನು ನೋಂದಣಿ ಪ್ರಾಧಿಕಾರಿ ಎಂದು ನೇಮಿಸಬಹುದು;
(ಜಿ) “ಸಮಾಜದ ದುರ್ಬಲ ವರ್ಗ” ಎಂದರೆ ರೈತರು, ಮಹಿಳೆಯರು, ಮಹಿಳಾ ಸ್ವಸಹಾಯ ಗುಂಪುಗಳು, ಕೃಷಿ ಕಾರ್ಮಿಕರು, ಕಾರ್ಮಿಕರು, ಬೀದಿ ವ್ಯಾಪಾರಿಗಳು, ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಚಲಿಸುವ ಇತರ ವ್ಯಾಪಾರಿಗಳು, ಹಾಲಿನ ಡೈರಿಯಲ್ಲಿ ಕೆಲಸ ಮಾಡುವ ಕಾರ್ಮಿಕರು, ನಿರ್ಮಾಣ ಕಾರ್ಮಿಕರು, ವಲಸೆ ಕಾರ್ಮಿಕರು, ಅವರ ಮೂಲ ಸೇವೆಗಳಿಗೆ ಕುಗ್ಗಿರುವ ಪ್ರವೇಶಾವಕಾಶದ ಮತ್ತು ಮುಖ್ಯವಾಗಿ ಆರೋಗ್ಯ, ವಸತಿ ನೈರ್ಮಲ್ಯ ಇತ್ಯಾದಿಗಳ ಅಂತರ್ನಿಹಿತ ನಿರ್ಣಾಯಕತೆಗಳ (underlying determinants) ಕಾರಣದಿಂದಾಗಿ ಇತರರಿಗೆ ಹೋಲಿಸಿದಲ್ಲಿ ಅನನುಕೂಲತೆಯಿರುವ ಜನರ ಗುಂಪು ಮತ್ತು ಆರ್ಥಿಕವಾಗಿ ಹಿಂದುಳಿದ, ನಿಯತ ಆದಾಯದ ಮೂಲವಿಲ್ಲದೆ ಜೀವನೋಪಾಯದ ಮಾದರಿಗಳಲ್ಲಿ ಕೆಳಮಟ್ಟದಲ್ಲಿರುವವರು.
2) ಈ ಅಧ್ಯಾದೇಶದಲ್ಲಿ ಬಳಸಿರುವ ಆದರೆ ಪರಿಭಾಷಿಸದಿರುವ ಪದಗಳು, ಸಂಬಂಧಪಟ್ಟ ಅಧಿನಿಯಮಗಳು ಮತ್ತು ಅದರಡಿ ರಚಿಸಿದ ನಿಯಮಗಳಲ್ಲಿ ಅನುಕ್ರಮವಾಗಿ ಅವುಗಳಿಗೆ ನೀಡಲಾದ ಅವೇ ಅರ್ಥಗಳನ್ನು ಹೊಂದಿರತಕ್ಕದ್ದು.
3. ಮೈಕ್ರೋ ಫೈನಾನ್ಸ್ ಸಂಸ್ಥೆ ಅಥವಾ ಸಾಲ ನೀಡಿಕೆ ಏಜೆನ್ಸಿ ಅಥವಾ ಸಂಸ್ಥೆ ಅಥವಾ ಲೇವಾದೇವಿದಾರರ ನೋಂದಣಿ.- (1) ಈ ಅಧ್ಯಾದೇಶದ ಪ್ರಾರಂಭದ ದಿನಾಂಕದಂದು ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿ ಅಥವಾ ಸಂಸ್ಥೆ ಅಥವಾ ಲೇವಾದೇವಿದಾರರು, ಈ ಅಧ್ಯಾದೇಶದ ಪ್ರಾರಂಭದ ದಿನಾಂಕದಿಂದ ಮೂವತ್ತು ದಿನಗಳೊಳಗಾಗಿ, ಅವುಗಳು ಕಾರ್ಯನಿರ್ವಹಿಸುತ್ತಿರುವ ಅಥವಾ ಕಾರ್ಯನಿರ್ವಹಿಸಲು ಉದ್ದೇಶಿಸಿರುವ ಗ್ರಾಮಗಳು ಅಥವಾ ಪಟ್ಟಣಗಳು, ವಿಧಿಸಿರುವ ಅಥವಾ ವಿಧಿಸಲು ಉದ್ದೇಶಿಸಿರುವ ಬಡ್ಡಿಯ ದರ, ಯುಕ್ತ ಜಾಗರೂಕ ನಿರ್ವಹಣಾ ವ್ಯವಸ್ಥೆ ಮತ್ತು ವಸೂಲಾತಿಯನ್ನು ಜಾರಿಗೊಳಿಸುವ ವ್ಯವಸ್ಥೆ ಹಾಗೂ ಸಾಲ ನೀಡಿಕೆ ಎಂಬುದಾಗಿ ತಿಳಿಸಿದೆ. ಆ ಇತರೆ ಅಂಶಗಳ ಬಗ್ಗೆ ಈ ಕೆಳಗಿನ ಕರ್ನಾಟಕ ರಾಜ್ಯ ಪತ್ರದಲ್ಲಿ ಸಂಪೂರ್ಣ ಮಾಹಿತಿ ಇದೆ. ಓದಿ ತಿಳಿದು ಕೊಳ್ಳಬಹುದಾಗಿದೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಮೂವರು ‘IAS ಅಧಿಕಾರಿ’ಗಳ ವರ್ಗಾವಣೆ | IAS Officer Transfer

ರಾಜ್ಯದ ‘SC, ST ಸಮುದಾಯ’ದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: ‘ಉಚಿತ KAS Mains ತರಬೇತಿ’ಗೆ ಅರ್ಜಿ ಆಹ್ವಾನ

ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಇನ್ನೆರಡು ದಿನಗಳಲ್ಲಿ ಸ್ಥಳ ಘೋಷಣೆ: ಡಿಸಿಎಂ ಡಿಕೆಶಿ

Share. Facebook Twitter LinkedIn WhatsApp Email

Related Posts

BREAKING : ಯುದ್ಧ ಯಾರಿಗೂ ಬೇಡ, ಯುದ್ಧ ಆಗಬೇಕು ಅಂತ ಬಯಸೋದು ಸರಿಯಲ್ಲ : ಸಚಿವ ದಿನೇಶ್ ಗುಂಡೂರಾವ್

09/05/2025 10:13 AM1 Min Read

BREAKING : ಶಿವಮೊಗ್ಗದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಹತ್ಯೆ : ವಾಕಿಂಗ್ ತೆರಳಿದ್ದ ವ್ಯಕ್ತಿಯ ಬರ್ಬರ ಕೊಲೆ

09/05/2025 9:48 AM1 Min Read

BREAKING : ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮಕ್ಕೆ ಸೂಚನೆ : ಬೆಂಗಳೂರು ಕಮಿಷನರ್ ಬಿ.ದಯಾನಂದ್

09/05/2025 9:13 AM1 Min Read
Recent News

‘ಆಪರೇಷನ್ ಸಿಂಧೂರ್’ ಟ್ರೇಡ್ಮಾರ್ಕ್ ಬಿಡ್ ಹಿಂಪಡೆದ ರಿಲಯನ್ಸ್ | Operation Sindoor

09/05/2025 10:25 AM

BREAKING : ಯುದ್ಧ ಯಾರಿಗೂ ಬೇಡ, ಯುದ್ಧ ಆಗಬೇಕು ಅಂತ ಬಯಸೋದು ಸರಿಯಲ್ಲ : ಸಚಿವ ದಿನೇಶ್ ಗುಂಡೂರಾವ್

09/05/2025 10:13 AM

BREAKING : ಪಾಕಿಸ್ತಾನದ ಮೇಲೆ ಮುಂದುವರೆದ ದಾಳಿ : ಪಂಜಾಬ್ ಪ್ರಾಂತ್ಯದ ಮೇಲೆ 5 ಡ್ರೋನ್ ಗಳಿಂದ ಅಟ್ಯಾಕ್

09/05/2025 10:07 AM

BREAKING : ಶಿವಮೊಗ್ಗದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಹತ್ಯೆ : ವಾಕಿಂಗ್ ತೆರಳಿದ್ದ ವ್ಯಕ್ತಿಯ ಬರ್ಬರ ಕೊಲೆ

09/05/2025 9:48 AM
State News
KARNATAKA

BREAKING : ಯುದ್ಧ ಯಾರಿಗೂ ಬೇಡ, ಯುದ್ಧ ಆಗಬೇಕು ಅಂತ ಬಯಸೋದು ಸರಿಯಲ್ಲ : ಸಚಿವ ದಿನೇಶ್ ಗುಂಡೂರಾವ್

By kannadanewsnow0509/05/2025 10:13 AM KARNATAKA 1 Min Read

ಬೆಂಗಳೂರು : ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ನಡೆಯುತ್ತಿದ್ದು, ಭಾರತೀಯ ಸೈನಿಕರಿಗೆ ಬೆಂಬಲ ಸೂಚಿಸಿ ಇಂದು ಕಾಂಗ್ರೆಸ್ ಪಕ್ಷಾತೀತವಾಗಿ…

BREAKING : ಶಿವಮೊಗ್ಗದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಹತ್ಯೆ : ವಾಕಿಂಗ್ ತೆರಳಿದ್ದ ವ್ಯಕ್ತಿಯ ಬರ್ಬರ ಕೊಲೆ

09/05/2025 9:48 AM

BREAKING : ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮಕ್ಕೆ ಸೂಚನೆ : ಬೆಂಗಳೂರು ಕಮಿಷನರ್ ಬಿ.ದಯಾನಂದ್

09/05/2025 9:13 AM

BREAKING : ವಿಜಯಪುರದಲ್ಲಿ ಪಾಕಿಸ್ತಾನದ ಪರವಾಗಿ ಪೋಸ್ಟ್ ಹಾಕಿದ ವಿದ್ಯಾರ್ಥಿನಿ : ದೇಶದ್ರೋಹ ಪ್ರಕರಣ ದಾಖಲು

09/05/2025 8:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.