Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಿಎಂ ಡಿಕೆ ಶಿವಕುಮಾರ್ ಗೆ ಸದ್ಯ ಯಾವುದೇ ಕಂಟಕ ಇಲ್ಲ : ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಶ್ರೀ ಹೇಳಿಕೆ!

BIG NEWS : ಪೋಷಕರೇ ಗಮನಿಸಿ : 18 ವರ್ಷ ದಾಟಿದ ಮಕ್ಕಳಿಗೆ ತಪ್ಪದೇ ಈ 4 ಸರ್ಕಾರಿ ದಾಖಲೆಗಳನ್ನು ಮಾಡಿಸಿ.!

BREAKING NEWS

BREAKING : ಅಮೇರಿಕ ಸೇನಾ ನೆಲೆಗಳ ಮೇಲೆ ಇರಾನ್ ಭೀಕರ ಡ್ರೋನ್ ದಾಳಿ : ಹೊತ್ತಿ ಉರಿದ 2 ಸೇನಾ ನೆಲೆಗಳು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರಾಜ್ಯ ಸರ್ಕಾರದಿಂದ ‘ಪದವಿ’ ಕಾರ್ಯಕ್ರಮಗಳ ‘ಅವಧಿ, ಪಠ್ಯಕ್ರಮ’ಗಳನ್ನು ಪರಿಷ್ಕರಿಸಿ ಆದೇಶ
KARNATAKA

BREAKING: ರಾಜ್ಯ ಸರ್ಕಾರದಿಂದ ‘ಪದವಿ’ ಕಾರ್ಯಕ್ರಮಗಳ ‘ಅವಧಿ, ಪಠ್ಯಕ್ರಮ’ಗಳನ್ನು ಪರಿಷ್ಕರಿಸಿ ಆದೇಶ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಉನ್ನತ ಶಿಕ್ಷಣ ವ್ಯಾಪ್ತಿಯಲ್ಲಿನ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ 2024-25ನೇ ಸಾಲಿನಿಂದ ಜಾರಿಗೆ ಬರುವಂತೆ ಪದವಿ ಕಾರ್ಯಕ್ರಮಗಳ ಅವಧಿ ಮತ್ತು ಪಠ್ಯಕ್ರಮವನ್ನು ಪರಿಷ್ಕರಿಸಿ ಆದೇಶಿಸಿದೆ.

ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಕೆ. ವಿಕೇಶ್ ಬಾಬು ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ: 07.08.2021ರ ಆದೇಶದಲ್ಲಿ ಭಾರತ ಸರ್ಕಾರವು ಪಕಟಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದ ಉನ್ನತ ಶಿಕ್ಷಣ ಇಲಾಖೆಯಡಿ ವಿಶ್ವವಿದ್ಯಾಲಯಗಳು ಮತ್ತು ಸಂಯೋಜಿತ ಕಾಲೇಜುಗಳಲ್ಲಿ 2021-22ನೇ ಶೈಕ್ಷಣಿಕ ವರ್ಷದಿಂದ ಅಗತ್ಯ ಮಾರ್ಗಸೂಚಿಗಳನುಸಾರ ಅನುಷ್ಠಾನಗೊಳಿಸಲಾಗಿರುತ್ತದೆ ಎಂದಿದ್ದಾರೆ.

ದಿನಾಂಕ: 11.10.2023ರ ಆದೇಶದಲ್ಲಿ ಹೊಸ ಶಿಕ್ಷಣ ನೀತಿಯನ್ನು ರೂಪಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡನ್ನು ಸಿದ್ಧಪಡಿಸಲು ಶ್ರೇಷ್ಠ ಶಿಕ್ಷಣ ತಜ್ಞರಾದ Prof. Sukhdev Torat, ಇವರ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಆಯೋಗವನ್ನು ರಚಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.

ರಾಜ್ಯ ಶಿಕ್ಷಣ ನೀತಿ ಆಯೋಗವು ದಿನಾಂಕ: 18.01.2024ರಂದು ಸರ್ಕಾರಕ್ಕೆ ಮಧ್ಯಂತರ ವರದಿಯನ್ನು ಸಲ್ಲಿಸಿರುತ್ತದೆ ಎಂದು ಹೇಳಿದ್ದಾರೆ.

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ರಾಜ್ಯ ಶಿಕ್ಷಣ ನೀತಿ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಸಂಪೂರ್ಣವಾಗಿ ಒಪ್ಪಲು ಶಿಫಾರಸ್ಸು ಮಾಡಿರುತ್ತದೆ ಎಂದು ತಿಳಿಸಿದ್ದಾರೆ.

ರಾಜ್ಯ ಶಿಕ್ಷಣ ನೀತಿ ಆಯೋಗವು ದಿನಾಂಕ: 19.01.2024ರಂದು REPORT PART-1 ಮತ್ತು ದಿನಾಂಕ: 10.03.2024ರಂದು ನ್ನ REPORT PART-1(a) ಮಧ್ಯಂತರ ವರದಿಗಳನ್ನು ಸರ್ಕಾರಕ್ಕೆ ಸಲ್ಲಿಸಿರುತ್ತದೆ ಎಂದಿದ್ದಾರೆ.

ರಾಜ್ಯ ಶಿಕ್ಷಣ ನೀತಿ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ಮಧ್ಯಂತರ ವರದಿಯಲ್ಲಿನ ಶಿಫಾರಸ್ಸುಗಳನ್ನು 2024-25 ನೇ ಶೈಕ್ಷಣಿಕ ಸಾಲಿನಿಂದ ಪದವಿ ಕಾರ್ಯಕ್ರಮಗಳಿಗೆ ಅನುಷ್ಠಾನಗೊಳಿಸಲು ದಿನಾಂಕ: 02.04.2024ರಂದು ಚುನಾವಣಾ ಆಯೋಗದ ಅನುಮತಿಯನ್ನು ಪಡೆಯಲಾಗಿರುತ್ತದೆ ಎಂದಿದ್ದಾರೆ.

ಮೇಲ್ಕಂಡ ಅಂಶಗಳ ಹಿನ್ನೆಲೆಯಲ್ಲಿ, ರಾಜ್ಯ ಶಿಕ್ಷಣ ನೀತಿ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ಮಧ್ಯಂತರ ವರದಿಗಳಲ್ಲಿನ ಶಿಫಾರಸ್ಸುಗಳನ್ನು 2024-25 ನೇ ಶೈಕ್ಷಣಿಕ ಸಾಲಿನಿಂದ ಪದವಿ ಕಾರ್ಯಕ್ರಮಗಳಿಗೆ ಅನುಷ್ಠಾನಗೊಳಿಸಲು ಉದ್ದೇಶಿಸಿ, ಸರ್ಕಾರದ ಆದೇಶ ಸಂಖ್ಯೆ: ಇಡಿ 260 ಯುಎನ್‌ಇ 2019 (ಭಾಗ 1) ಬೆಂಗಳೂರು, ದಿನಾಂಕ:07.08.2021ರ ಆದೇಶವನ್ನು ಪರಿಷ್ಕರಿಸಲು ಸರ್ಕಾರವು ನಿರ್ಧರಿಸಿ, ಅದರಂತೆ ಈ ಕೆಳಕಂಡ ಆದೇಶ ಎಂದು ತಿಳಿಸಿದ್ದಾರೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳನ್ವಯ ರಾಜ್ಯದಲ್ಲಿ ಉನ್ನತ ಶಿಕ್ಷಣ ಇಲಾಖೆಯಡಿಯ ವಿಶ್ವವಿದ್ಯಾಲಯಗಳು ಮತ್ತು ಸಂಯೋಜಿತ ಕಾಲೇಜುಗಳಲ್ಲಿ ಪದವಿ ಕಾರ್ಯಕ್ರಮಗಳಿಗೆ 2024-25ನೇ ಶೈಕ್ಷಣಿಕ ವರ್ಷದಿಂದ ಅನುಬಂಧ-1 ಮತ್ತು ಅನುಬಂಧ-2 ರ ಮಾರ್ಗಸೂಚಿಗಳಿಗನುಸಾರವಾಗಿ ಪದವಿ ಕಾರ್ಯಕ್ರಮಗಳ ಅವಧಿ ಮತ್ತು ಪಠ್ಯಕ್ರಮವನ್ನು ಪರಿಷ್ಕರಿಸಿ ಅನುಷ್ಠಾನಗೊಳಿಸಿ ಆದೇಶಿಸಿದ್ದಾರೆ.

ನಾಳೆ ಬೆಳಗ್ಗೆ 10.30ಕ್ಕೆ ‘SSLC’ ಫಲಿತಾಂಶ ಪ್ರಕಟ : ಈ ರೀತಿ ‘ರಿಸಲ್ಟ್’ ಚೆಕ್ ಮಾಡಿ | Karnataka SSLC Exam results 2024

ಈ ಅವಧಿಯ ನಂತ್ರ ಈ ಖಾತೆಗಳನ್ನ ಮುಚ್ಚಲಾಗುವುದು : ಗ್ರಾಹಕರಿಗೆ ‘ಪಂಜಾಬ್ ನ್ಯಾಷನಲ್ ಬ್ಯಾಂಕ್’ ಎಚ್ಚರಿಕೆ

Share. Facebook Twitter LinkedIn WhatsApp Email

Related Posts

ಸಿಎಂ ಡಿಕೆ ಶಿವಕುಮಾರ್ ಗೆ ಸದ್ಯ ಯಾವುದೇ ಕಂಟಕ ಇಲ್ಲ : ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಶ್ರೀ ಹೇಳಿಕೆ!

1 Min Read

BIG NEWS : ಪೋಷಕರೇ ಗಮನಿಸಿ : 18 ವರ್ಷ ದಾಟಿದ ಮಕ್ಕಳಿಗೆ ತಪ್ಪದೇ ಈ 4 ಸರ್ಕಾರಿ ದಾಖಲೆಗಳನ್ನು ಮಾಡಿಸಿ.!

2 Mins Read

BREAKING : ಹಾವೇರಿಯಲ್ಲಿ ನಿಧಿ ಆಸೆಗೆ ಬಸವೇಶ್ವರ, ಈಶ್ವರ ಮೂರ್ತಿ ಕಿತ್ತು ಹಾಕಿದ ದುಷ್ಕರ್ಮಿಗಳು : ನಾಲ್ವರು ಅರೆಸ್ಟ್!

1 Min Read
Recent News

ಸಿಎಂ ಡಿಕೆ ಶಿವಕುಮಾರ್ ಗೆ ಸದ್ಯ ಯಾವುದೇ ಕಂಟಕ ಇಲ್ಲ : ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಶ್ರೀ ಹೇಳಿಕೆ!

BIG NEWS : ಪೋಷಕರೇ ಗಮನಿಸಿ : 18 ವರ್ಷ ದಾಟಿದ ಮಕ್ಕಳಿಗೆ ತಪ್ಪದೇ ಈ 4 ಸರ್ಕಾರಿ ದಾಖಲೆಗಳನ್ನು ಮಾಡಿಸಿ.!

BREAKING NEWS

BREAKING : ಅಮೇರಿಕ ಸೇನಾ ನೆಲೆಗಳ ಮೇಲೆ ಇರಾನ್ ಭೀಕರ ಡ್ರೋನ್ ದಾಳಿ : ಹೊತ್ತಿ ಉರಿದ 2 ಸೇನಾ ನೆಲೆಗಳು!

BREAKING : ಹಾವೇರಿಯಲ್ಲಿ ನಿಧಿ ಆಸೆಗೆ ಬಸವೇಶ್ವರ, ಈಶ್ವರ ಮೂರ್ತಿ ಕಿತ್ತು ಹಾಕಿದ ದುಷ್ಕರ್ಮಿಗಳು : ನಾಲ್ವರು ಅರೆಸ್ಟ್!

State News
KARNATAKA

ಸಿಎಂ ಡಿಕೆ ಶಿವಕುಮಾರ್ ಗೆ ಸದ್ಯ ಯಾವುದೇ ಕಂಟಕ ಇಲ್ಲ : ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಶ್ರೀ ಹೇಳಿಕೆ!

By ಸುರೇಶ್‌ KARNATAKA 1 Min Read

ತುಮಕೂರು: ಕರ್ನಾಟಕದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ನಾಯಕತ್ವ ಬದಲಾವಣೆ ಹಾಗೂ ಭಿನ್ನಾಭಿಪ್ರಾಯಗಳ ಚರ್ಚೆಯ ನಡುವೆಯೇ, ಮುಖ್ಯಮಂತ್ರಿ ಡಿ.ಕೆ.…

BIG NEWS : ಪೋಷಕರೇ ಗಮನಿಸಿ : 18 ವರ್ಷ ದಾಟಿದ ಮಕ್ಕಳಿಗೆ ತಪ್ಪದೇ ಈ 4 ಸರ್ಕಾರಿ ದಾಖಲೆಗಳನ್ನು ಮಾಡಿಸಿ.!

BREAKING : ಹಾವೇರಿಯಲ್ಲಿ ನಿಧಿ ಆಸೆಗೆ ಬಸವೇಶ್ವರ, ಈಶ್ವರ ಮೂರ್ತಿ ಕಿತ್ತು ಹಾಕಿದ ದುಷ್ಕರ್ಮಿಗಳು : ನಾಲ್ವರು ಅರೆಸ್ಟ್!

BREAKING : ಬೆಂಗಳೂರಿನಲ್ಲಿ ನಕಲಿ ಅಂಕಪಟ್ಟಿ ಜಾಲ ಪತ್ತೆ: ಸಿಸಿಬಿ ಪೊಲೀಸರಿಂದ ಪ್ರಮುಖ ಆರೋಪಿಯ ಬಂಧನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.