ಬೆಂಗಳೂರು: ರಾಜ್ಯ ಸರ್ಕಾರದಿಂದ ಅಧಿಕಾರಿಗಳ ವಿದೇಶ ಪ್ರವಾಸವನ್ನು ಈ ಕೂಡಲೇ ಜಾರಿಗೆ ಬರುವಂತೆ ನಿರ್ಬಂಧಿಸಿ ಆದೇಶಿಸಿದೆ. ಈ ಮೂಲಕ ಅಧ್ಯಯನದ ಹೆಸರಿನಲ್ಲಿ ಅಧಿಕಾರಿಗಳು ಕೈಗೊಳ್ಳುತ್ತಿದ್ದಂತ ವಿದೇಶ ಪ್ರವಾಸಕ್ಕೆ ಬ್ರೇಕ್ ಹಾಕಲಾಗಿದೆ.
ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, 2024ನೇ ಸಾಲಿನ ಆಗಸ್ಟ್ ತಿಂಗಳಿನಿಂದ 2025ರ ಜುಲೈ ತಿಂಗಳವರೆಗೆ ರಾಜ್ಯ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಅಧಿಕೃತ ವಿದೇಶ ಪ್ರವಾಸ ಕೈಗೊಂಡು ಅಧ್ಯಯನ ನಡೆಸಿ, ಕಲಿಕೆ ಹಾಗು ಶಿಫಾರಸ್ಸುಗಳೊಂದಿಗೆ ಸರ್ಕಾರಕ್ಕೆ ಅಧ್ಯಯನ ವರದಿಯನ್ನು ಒಂದು ವಾರದೊಳಗಾಗಿ ಸಲ್ಲಿಸುವಂತೆ ಮಾನ್ಯ ಮುಖ್ಯಮಂತ್ರಿಗಳಿಂದ ಸೂಚಿತವಾಗಿರುತ್ತದೆ ಎಂದಿದ್ದಾರೆ.
ಆದರೆ, ಹಲವು ಅಧಿಕಾರಿಗಳು ಕೈಗೊಂಡಿರುವ ಅಧಿಕೃತ ವಿದೇಶ ಪ್ರವಾಸದ ವರದಿಗಳನ್ನು ಸಲ್ಲಿಸದಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಮುಂಬರುವ ದಿನಗಳಲ್ಲಿ ಅಧಿಕೃತ ವಿದೇಶ ಪ್ರವಾಸಕ್ಕೆ ಅನುಮತಿ ಕೋರಿ ಪ್ರಸ್ತಾವನೆಯನ್ನು ಸಲ್ಲಿಸುವ ಮುನ್ನ ಕಡ್ಡಾಯವಾಗಿ ಈ ಹಿಂದೆ ಕೈಗೊಂಡಿರುವ ಪ್ರವಾಸಗಳ ಕಲಿಕೆ ಹಾಗೂ ಅನುಷ್ಠಾನ ವರದಿ ನೀಡಿದ್ದಲ್ಲಿ ಮಾತ್ರ ಹಾಲಿ ಪ್ರವಾಸದ ಪ್ರಸ್ತಾವನೆಗೆ ಅನುಮತಿ ನೀಡುವ ಕುರಿತು ಪರಿಶೀಲಿಸಲಾಗುವುದೆಂದು ಈ ಮೂಲಕ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಮುಂದುವರೆದು, ಈ ವರ್ಷ 2025ನೇ ಸಾಲಿನ ಅಂತ್ಯದವರೆಗೂ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧಿಕೃತ ವಿದೇಶ ಪ್ರವಾಸಗಳನ್ನು ನಿರ್ಭಂಧಿಸಿ ಆದೇಶಿಸಿದ್ದಾರೆ.
‘ಆಂಬುಲೆನ್ಸ್ ಚಾಲಕ’ನನ್ನು ಸನ್ಮಾನಿಸಿ ಗೌರವಿಸಿದ ‘ಸಚಿವ ದಿನೇಶ್ ಗುಂಡೂರಾವ್’: ಯಾಕೆ ಗೊತ್ತೆ?
ಆಂಧ್ರಪ್ರದೇಶದಲ್ಲಿನ ಹೊಸ ಕ್ಯಾಂಪಸ್ ಗೆ 12,000 ಉದ್ಯೋಗಿಗಳನ್ನು ನೇಮಿಸಲು ಸಜ್ಜಾದ ಅಕ್ಸೆಂಚರ್ | Accenture Jobs