Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ಕಿಲ್ಲರ್ `BMTC’ಗೆ ಮತ್ತೊಂದು ಬಲಿ : ಬಸ್ ಹರಿದು 11 ವರ್ಷದ ಬಾಲಕ ಸಾವು.!

25/08/2025 8:58 AM

`ಖಾದಿ’ ಉತ್ಪಾದನೆ ಉತ್ತೇಜಿಸಲು ರಾಜ್ಯ ಸರ್ಕಾರದಿಂದ ಪ್ರತಿ ವರ್ಷ ರಿಯಾಯತಿ : ಬಸವನಗೌಡ ತುರುವಿಹಾಳ

25/08/2025 8:53 AM

ದೆಹಲಿ ಸಿಎಂ ಮೇಲೆ ಹಲ್ಲೆ: 2,000 ರೂ.ಗೆ ವರ್ಗಾವಣೆ ಮಾಡಿದ ಪ್ರಮುಖ ಆರೋಪಿಯ ಸ್ನೇಹಿತನ ಬಂಧನ

25/08/2025 8:42 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » `ಖಾದಿ’ ಉತ್ಪಾದನೆ ಉತ್ತೇಜಿಸಲು ರಾಜ್ಯ ಸರ್ಕಾರದಿಂದ ಪ್ರತಿ ವರ್ಷ ರಿಯಾಯತಿ : ಬಸವನಗೌಡ ತುರುವಿಹಾಳ
KARNATAKA

`ಖಾದಿ’ ಉತ್ಪಾದನೆ ಉತ್ತೇಜಿಸಲು ರಾಜ್ಯ ಸರ್ಕಾರದಿಂದ ಪ್ರತಿ ವರ್ಷ ರಿಯಾಯತಿ : ಬಸವನಗೌಡ ತುರುವಿಹಾಳ

By kannadanewsnow5725/08/2025 8:53 AM

ಕೊಪ್ಪಳ : ಖಾದಿ ಉತ್ಪಾದನೆಯನ್ನು ಉತ್ತೇಜಿಸುವ ಸಲುವಾಗಿ ಕರ್ನಾಟಕ ಸರ್ಕಾರವು ಪ್ರತಿ ವರ್ಷ ಖಾದಿ ಬಟ್ಟೆಗಳಿಗೆ ಶೇ.35 ರಷ್ಟು ಹಾಗೂ ರೇಷ್ಮೆ ಖಾದಿ ಬಟ್ಟೆಗಳಿಗೆ ಶೇ.25 ರಷ್ಟು ರಿಯಾಯಿತಿಯನ್ನು ನೀಡುತ್ತಿದ್ದು, ಇದರಿಂದ ಖಾದಿ ಉತ್ಪನ್ನಗಳನ್ನು ಗ್ರಾಹಕರಿಗೆ ತಲುಪಿಸಲು ಸಹಕಾರಿಯಾಗಿದೆ ಎಂದು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಅಧ್ಯಕ್ಷರು ಹಾಗೂ ಮಸ್ಕಿ ಶಾಸಕರಾದ ಬಸವನಗೌಡ ತುರುವಿಹಾಳ ಹೇಳಿದರು.

ಅವರು ಭಾನುವಾರ ಕೊಪ್ಪಳ ನಗರದ ಮುಸ್ಲಿಂ ಶಾದಿಮಹಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೊಪ್ಪಳ ಹಾಗೂ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 24 ರಿಂದ ಸಪ್ಟೆಂಬರ್ 2ರ ವರೆಗೆ ಹಮ್ಮಿಕೊಳ್ಳಲಾದ ಖಾದಿ ಉತ್ಸವ-2025ರ ರಾಜ್ಯ ಮಟ್ಟದ ಖಾದಿ, ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ರಿಬ್ಬನ್ ಕತ್ತರಿಸುವುದರ ಮೂಲಕ ಚಾಲನೆ ನೀಡಿ, ನಂತರ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಕರ್ನಾಟಕ ರಾಜ್ಯದಲ್ಲಿ ಖಾದಿ ಉತ್ಪಾದನೆಗೆ ಒಂದು ಪ್ರಮುಖ ಇತಿಹಾಸವಿದ್ದು, ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸ್ವದೇಶಿ ಚಳುವಳಿಯ ಪ್ರತೀಕವಾಗಿ ಖಾದಿ ಪ್ರತಿನಿಧಿಸುತ್ತದೆ ಎಂದರೆ ತಪ್ಪಿಲ್ಲ. ಖಾದಿ ಕೇವಲ ಬಟ್ಟೆ ಮಾತ್ರವಲ್ಲ ಅದು ನಮ್ಮ ಸ್ವಾಭಿಮಾನ, ಸ್ವಾವಲಂಬನೆ ಮತ್ತು ಪರಿಸರ ಜೀವನ ಶೈಲಿಯ ಪ್ರತೀಕಕವು ಹೌದು. ಖಾದಿ ಉತ್ಪಾದನೆಯನ್ನು ಉತ್ತೇಜಿಸಲು ಮತ್ತು ಪುನರ್ಜೀನಗೊಳಿಸುವ ದೃಷ್ಟಿಯಿಂದ ಕರ್ನಾಟಕ ಸರ್ಕಾರವು 1957 ರಲ್ಲಿ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯನ್ನು ಸ್ಥಾಪಿಸಿರುತ್ತದೆ. ಖಾದಿ ಮಂಡಳಿಯ ಕಳೆದ 65 ವರ್ಷಗಳಿಗೂ ಮೇಲ್ಪಟ್ಟು ಖಾದಿ ಕ್ಷೇತ್ರವಾದ ಹತ್ತಿ, ರೇಷ್ಮೆ ಹಾಗೂ ಉಣ್ಣೆ ನೂಲಿನಿಂದ ಕೈ ಚರಕದ ಮೂಲಕ ನೂಲು ತೆಗೆದು ಸ್ಥಳೀಯ ಕಸುಬುದಾರರಿಂದಲೇ ಹತ್ತಿ ಬಟ್ಟೆ ಹಾಗೂ ಉಣ್ಣೆ ವಸ್ತ್ರಗಳನ್ನು ತಯಾರಿಸಲು ಉತ್ತೇಜಿಸುತ್ತಾ ಬಂದಿರುವುದರಿಂದ ಪ್ರಸ್ತುತ ಕರ್ನಾಟಕದಲ್ಲಿ 175 ಕ್ಕೂ ಹೆಚ್ಚು ಸಂಘ-ಸಂಸ್ಥೆಗಳು ಖಾದಿ ಉತ್ಪಾದನೆಯಲ್ಲಿ ತೊಡಗಿಸಿಕೊಂಡಿರವುದು ಪುಷ್ಠೀಕರಿಸುತ್ತದೆ ಎಂದರು.

ಖಾದಿ ಮತ್ತು ಗ್ರಾಮೋದ್ಯೋಗ ಕ್ಷೇತ್ರದಲ್ಲಿ ರಾಷ್ಟ್ರ ಮಟ್ಟದಲ್ಲಿ ರೂ.1.70 ಲಕ್ಷ ಕೋಟಿಗಗೂ ಹೆಚ್ಚು ವಹಿವಾಟು ನಡೆದಿರುವುದರ ಜೊತೆಗೆ ಸುಮಾರು 1.94 ಕೋಟಿ ಉದ್ಯೋಗಾವಕಾಶವನ್ನು ಸೃಷ್ಠಿರುವುದು ಹೆಮ್ಮೆಯ ವಿಷಯ. ಅದೇ ರೀತಿ ಕರ್ನಾಟಕದಲ್ಲಿ ರೂ. 650 ಕೋಟಿಗೂ ಮಿಗಿಲಾದ ವಹಿವಾಟಿನೊಂದಿಗೆ 21,000 ಕ್ಕೂ ಹೆಚ್ಚು ಉದ್ಯೋಗಳನ್ನು ಸೃಷ್ಟಿಸಿರುವುದು ಹೆಮ್ಮೆಯ ವಿಷಯವಾಗಿರುತ್ತದೆ. ಈ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳದ ಭಾಗವಾಗಿ ಇಂದು ಕೊಪ್ಪಳ ಜಿಲ್ಲೆಯಲ್ಲಿ “ಖಾದಿ ಉತ್ಸವ -2025” ಹೆಸರಿನಲ್ಲಿ ಖಾದಿ ವಸ್ತು ಪ್ರದರ್ಶನ ಮಾರಾಟ ಮೇಳವನ್ನು ಉದ್ಘಾಟಿಸಲು ಹೆಮ್ಮೆ ಎನಿಸುತ್ತಿದೆ. ಮುಂದಿನ 3 ರಿಂದ 4 ತಿಂಗಳೊಳಗೆ ರಾಜ್ಯದ ಇನ್ನೂ ವಿವಿಧ 6 ಜಿಲ್ಲೆಗಳಲ್ಲಿ ಖಾದಿ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗುವುದು.‌ ಕೊಪ್ಪಳ ನಗರದ ಶಾದಿಮಹಲ್‌ನಲ್ಲಿ ಇಂದಿನಿಂದ 10 ದಿನಗಳ ಕಾಲ ನಡೆಯುವ ಈ ಖಾದಿ ಗ್ರಾಮೋದ್ಯೋಗ ವಸ್ತು ಪ್ರದರ್ಶನಕ್ಕಾಗಿ ರಾಜ್ಯದ ವಿವಿಧ ಭಾಗಗಳಿಂದ ಹಾಗೂ ವಿವಿಧ ರಾಜ್ಯಗಳಿಂದಲೂ ಪ್ರದರ್ಶಕರು ಬಂದು ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸುತ್ತಿದೆ ಎಂದು ಹೇಳಿದರು.

ಈಗಾಗಲೇ ಕೋಲಾರ ಮತ್ತು ದಾವಣಗೇರೆಯಲ್ಲಿ ವಸ್ತು ಪ್ರದರ್ಶನವನ್ನು ಏರ್ಪಡಿಸಿದ್ದು, ಮುಂದಿನ ದಿನಗಳಿಗೆ ಗ್ರಾಹಕರ ಬೇಡಿಗೆ ಮತ್ತು ಖಾದಿ ಗ್ರಾಮೋದ್ಯೋಗ ಚಟುವಟಿಕೆಗಳ ಉತ್ಪಾದಕರ ಬೇಡಿಕೆಯನ್ನು ಆಧರಿಸಿ ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚು ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆಯನ್ನು ಮಾಡಲು ಪ್ರಯತ್ನಿಸುವ ಆಶಯದೊಂದಿಗೆ ಮುಂದಿನ 10 ದಿನಗಳ ಪ್ರದರ್ಶನ ಮತ್ತು ಮಾರಾಟ ಮೇಳ ಹಾಗೂ ಮುಂದಿನ 2 ತಿಂಗಳಲ್ಲಿ ಆಯೋಜನೆಯಾಗಲಿರುವ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಎಲ್ಲಾ ಖಾದಿ ಉತ್ಪಾದಕರು ಮತ್ತು ಖಾದಿ ಗ್ರಾಮೋದ್ಯೋಗ ಉತ್ಪಾದಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಲಾಭವನ್ನು ಪಡೆದುಕೊಳ್ಳಬೇಕು. ಈ “ಖಾದಿ ಉತ್ಸವ -2025” ಕಾರ್ಯಕ್ರಮವು ಯಶಸ್ವಿಯಾಗಲೆಂದು ಆಶಿಸುತ್ತೇವೆ ಎಂದರು.

ರಾ.ಬ.ಕೊ.ವಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಮಾತನಾಡಿ, ರಾಜ್ಯ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಕೊಪ್ಪಳದಲ್ಲಿ ಆಯೋಜನೆ ಮಾಡಿರುವುದು ತುಂಬಾ ಸಂತೋಷ ತಂದಿದೆ. ಬಸನಗೌಡ ತುರುವಿಹಾಳ ಅವರು ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಅಧ್ಯಕ್ಷರಾದ ಬಳಿಕ ಅನೇಕ ಕಡೆಗಳಲ್ಲಿ ಈ ರೀತಿ ವಸ್ತು ಪ್ರದರ್ಶನಗಳನ್ನು ಮಾಡುತ್ತಾ ಬಂದಿದ್ದಾರೆ. ಯಾರು ಇವತ್ತಿನವರೆಗೂ ಕೈಯಲ್ಲಿ ಬಟ್ಟೆಗಳನ್ನು ನೇಯ್ದು ತಯಾರಿಸಿ ಮಾರಾಟ ಮಾಡುತ್ತಿದ್ದಾರೆ ಅವರಿಗೆ ಈ ಇಲಾಖೆ ಪ್ರೋತ್ಸಾಹ ಕೊಡಬೇಕು. ನಮ್ಮ ಕೊಪ್ಪಳದ ಭಾಗ್ಯನಗರ ಮತ್ತು ಕಿನ್ನಾಳನಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಕೈ ಮಗ್ಗದಿಂದ ಬಟ್ಟೆಗಳನ್ನು ನೇಯುಯವಂತ ಕೆಲಸ ಮಾಡುತ್ತಿದ್ದಾರೆ. ಇಲಕಲ್ಲ ಸೀರೆ, ಶಾಲುಗಳು, ಯಾವುದೇ ಬಟ್ಟೆ ವಸ್ತುಗಳನ್ನು ಕೈಯಲ್ಲಿ ನೈಯ್ದು ತಯಾರಿಸುವ ಕೆಲಸಗಾರರಿಗೆ ಸರ್ಕಾರ ಹೆಚ್ಚಿನ ಸಹಾಯ ಮಾಡಿದರೆ ಅವರ ಬದುಕು ಹಸನಾಗಲಿಕ್ಕೆ ಸಾಧ್ಯ ಆಗುತ್ತದೆ. ಯಾಕೆಂದರೆ ಈ ವಸ್ತು ಪ್ರದರ್ಶನದಲ್ಲಿ ನಾವು ಇಂದು ನೋಡಿದೇವು ಜಮ್ಮು ಕಾಶ್ಮೀರದ ಶ್ರೀನಗರದಿಂದ ಬಂದು ಈ ಒಂದು ಪ್ರದರ್ಶನದಲ್ಲಿ ಭಾಗವಹಿಸಿದ್ದಾರೆ. ಅವರಿಗೆ ಇಂತಹ ಮಾರಾಟ ಮೇಳಗಳು ಸಹಾಯಕವಾಗಿವೆ. ಖಾದಿ ಮತ್ತು ಗ್ರಾಮೋದ್ಯೋಗ ಇಲಾಖೆಯವರು ಎಲ್ಲರನ್ನೂ ಒಟ್ಟುಗೂಡಿಸಿ ಮಾರ್ಕೆಟಿಂಗ್ ಮಾಡುವಂತಹ ಕೆಲಸ ಮಾಡುತ್ತಿದ್ದಾರೆ. ಅದು ಬಹಳ ಒಳ್ಳೆಯ ಕೆಲಸ. ಇದರಿಂದ ಮಾರಾಟಗಾರರಿಗೆ ಸಹಾಯವಾಗುತ್ತದೆ ಎಂದು ಹೇಳಿದರು.

ಇವತ್ತು ಸರಿಸುಮಾರು 14 ಸಾವಿರಕ್ಕೂ ಹೆಚ್ಚು ಕಾರ್ಮಿಕರು ಕೈ ಮಗ್ಗದ ಕೆಲಸದಲ್ಲಿ ತೊಡಗಿದ್ದಾರೆ. ಯಾರು ಮನೆಯಲ್ಲಿ ಕೈ ಮಗ್ಗದಿಂದ ಬಟ್ಟೆಗಳನ್ನು ನೈಯುತ್ತಿದ್ದಾರೆ ಅಂತವರಿಗೆ ಹೆಚ್ಚು ಸಹಕಾರ ನೀಡಿ ಅವರು ತಯಾರಿಸುವ ಬಟ್ಟೆಗಳಿಗೆ ಹೆಚ್ಚು ಬೆಲೆ ದೊರೆಯು ಹಾಗೆ ಮಾಡಿ, ಅವರನ್ನು ಜೀವನದ ಮುಖ್ಯ ವಾಹಿನಿಗೆ ಬರುವಂತೆ ಮಾಡುವ ಕೆಲಸಗಳನ್ನು ಹೆಚ್ಚಾಗಿ ಹಮ್ಮಿಕೊಳ್ಳಲು ವಿನಂತಿ ಮಾಡಿಕೊಳ್ಳುತ್ತೇನೆ. ಗುಡಿ ಕೈಗಾರಿಕೆಗಳಲ್ಲಿ ತೊಡಗಿರುವವರಿಗೆ ಸರ್ಕಾರವು ಸಹಾಯ ಮಾಡುತ್ತಾ ಬಂದಿದೆ. ಉದಾಹರಣೆಗೆ ಹೊಲಿಗೆ ಯಂತ್ರ, ಇಸ್ತ್ರಿ ಪೆಟ್ಟಿಗೆ ಮುಂತಾದ ರೀತಿಯಲ್ಲಿ ಸರ್ಕಾರ ಅನೇಕ ಸಬ್ಸಿಡಿಗಳನ್ನು ನೀಡುತ್ತಿದೆ. ಇದರ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಅಗಬೇಕು. ಅದೇ ರೀತಿ ಜನರು ಸಹ ಸರ್ಕಾರದ ಯೋಜನೆಗಳನ್ನು ಸರಿಯಾಗಿ ಬಳಸಿಕೊಂಡು ನಾವು ನಮ್ಮ ಸ್ವಾವಲಂಬನೆ ಬದುಕನ್ನು ಕಂಡುಕೊಳ್ಳಬೇಕು ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ ಅವರು ಮಾತನಾಡಿ, ಖಾದಿ ಎಂಬುದು ನಮ್ಮ ದೇಶಿಯ ಉಡುಪು. 2019ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವೋಕಲ್ ಫಾರ್ ಲೋಕಲ್ ಎಂಬ ಧ್ಯೇಯ ವಾಕ್ಯದೊಂದಿಗೆ ದೇಶೀಯ ವಸ್ತುಗಳಿಗೆ ನಾವು ಪ್ರಾತಿನ್ಯತೆ ಕೊಡಬೇಕು ಹಾಗೂ ವಿಶೇಷವಾಗಿ ಹತ್ತಿಯಿಂದ ಉತ್ಪಾದನೆ ಮಾಡುವ ಎಲ್ಲಾ ವಸ್ತುಗಳಿಗೆ ಉತ್ತೇನ ನೀಡಬೇಕೆಂದು ಕರೆ ನೀಡಿದ್ದರು. ಇದರ ಭಾಗವಾಗಿ ಆಗ ನಾವೆಲ್ಲರೂ ನಮ್ಮ ಕೊಪ್ಪಳ-ಭಾಗ್ಯನಗರದ ಸೀರೆಗಳನ್ನು ಖರೀದಿಸಿ, ಅವುಗಳನ್ನು ಉಡುಗೊರೆಯಾಗಿ ಇತರರಿಗೆ ನೀಡಿದೇವು. “ಉಷ್ಣ ಕಾಲೇ ಶೀತಂ-ಶೀತ ಕಾಲೇ ಉಷ್ಣಂ-ಅದುವೇ ಖಾದಿ ವಸ್ತ್ರಂ” ಎಂಬಂತೆ ಖಾದಿ ಬಟ್ಟೆಗಳು ಬೇಸಿಗೆ ಕಾಲದಲ್ಲಿ ನಮ್ಮ ದೇಹಕ್ಕೆ ತಂಪಾಗಿಸುವ ಮತ್ತು ಶೀತಕಾಲದಲ್ಲಿ ಬಿಸ ನೀಡುತ್ತದೆ. ನಮ್ಮ ಭಾಗದ ಜನಪ್ರಿಯ ವಸ್ತು ಕೌದಿಯ ಮಾದರಿಯ ಶಾಲುಗಳನ್ನು ಹಲವರು ಬಳಕೆ ಮಾಡುತ್ತಿದ್ದಾರೆ. ಇಂತಹ ವಸ್ತುಗಳು ಜನಪದದ ಸಂಕೇತವಾಗಿದೆ. ಈ ಮಾರಟ ಮಳಿಗೆಯಲ್ಲಿ ಕೌದಿಗೂ ಅವಕಾಶ ನೀಡಬೇಕು. ಖಾದಿ ಗ್ರಾಮೋದ್ಯೋಗವನ್ನು ಪ್ರೋತ್ಸಾಹ ಮಾಡಬೇಲಾದರೆ, ನಾವೆಲ್ಲರೂ ನಮ್ಮ ದೇಶೀಯ ವಸ್ತುಗಳನ್ನು ಖರೀದಿ ಮಾಡಿ, ಪ್ರೋತ್ಸಾಹಿಸಿದಾಗ ಮಾತ್ರ ಅದು ಬೆಳೆಯುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಕಾರ್ಯನಿರ್ವಾಹಣಾಧಿಕಾರಿ ಡಿ.ಬಿ. ನಟೇಶ್, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷರಾದ ರಾಮಣ್ಣ ನಾಯಕ, ಕೊಪ್ಪಳ ನಗರಸಭೆ ಸದಸ್ಯರಾದ ಅಕ್ಬರ್ ಪಾಶಾ ಪಲ್ಟನ್, ಮಾಜಿ ಜಿ.ಪಂ ಸದಸ್ಯರಾದ ಪ್ರಸನ್ನ ಗಡಾದ, ಕ‌.ರಾ.ಖಾ‌&ಗ್ರಾ. ಮಂಡಳಿಯ ಕೊಪ್ಪಳ ಜಿಲ್ಲಾ ಅಭಿವೃದ್ಧಿ ಅಧಿಕಾರಿ ಕೆ.ವೀರೇಶ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಕ‌.ರಾ.ಖಾ‌&ಗ್ರಾ. ಮಂಡಳಿಯ ಧಾರವಾಡ ಜಿಲ್ಲಾ ಅಭಿವೃದ್ಧಿ ಅಧಿಕಾರಿ ನಾಗನಗೌಡ ನೆಗಳೂರು ಅವರು ಕಾರ್ಯಕ್ರಮ ನಿರೂಪಿಸಿದರು.

ಆಕರ್ಷಕ ಖಾದಿ ವಸ್ತು ಪ್ರದರ್ಶನ: ಖಾದಿ ಉತ್ಸವ-2025ರ ರಾಜ್ಯ ಮಟ್ಟದ ಖಾದಿ, ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ ಖಾದಿ ವಸ್ತು ಪ್ರದರ್ಶನವು ತುಂಬಾ ಆಕರ್ಷಕವಾಗಿದ್ದು, ಸಾರ್ವಜನಿಕರ ಗಮನ ಸೆಳೆಯುವಂತಿದೆ.

State government provides annual subsidy to promote Khadi production: Basavanagowda Turuvihal
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಕಿಲ್ಲರ್ `BMTC’ಗೆ ಮತ್ತೊಂದು ಬಲಿ : ಬಸ್ ಹರಿದು 11 ವರ್ಷದ ಬಾಲಕ ಸಾವು.!

25/08/2025 8:58 AM1 Min Read
vidhana soudha

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : `ಒಳ ಮೀಸಲಾತಿ’ ಜಾರಿ ಬೆನ್ನಲ್ಲೇ 85,000 ಕ್ಕೂ ಅಧಿಕ ಹುದ್ದೆಗಳ ನೇಮಕಾತಿ.!

25/08/2025 8:33 AM1 Min Read

BREAKING : ಸ್ಯಾಂಡಲ್ ವುಡ್ ಹಿರಿಯ ಪೋಷಕ ನಟ `ಮಂಗಳೂರು ದಿನೇಶ್’ ಇನ್ನಿಲ್ಲ | Mangalore Dinesh passes away

25/08/2025 8:22 AM1 Min Read
Recent News

BREAKING : ಬೆಂಗಳೂರಲ್ಲಿ ಕಿಲ್ಲರ್ `BMTC’ಗೆ ಮತ್ತೊಂದು ಬಲಿ : ಬಸ್ ಹರಿದು 11 ವರ್ಷದ ಬಾಲಕ ಸಾವು.!

25/08/2025 8:58 AM

`ಖಾದಿ’ ಉತ್ಪಾದನೆ ಉತ್ತೇಜಿಸಲು ರಾಜ್ಯ ಸರ್ಕಾರದಿಂದ ಪ್ರತಿ ವರ್ಷ ರಿಯಾಯತಿ : ಬಸವನಗೌಡ ತುರುವಿಹಾಳ

25/08/2025 8:53 AM

ದೆಹಲಿ ಸಿಎಂ ಮೇಲೆ ಹಲ್ಲೆ: 2,000 ರೂ.ಗೆ ವರ್ಗಾವಣೆ ಮಾಡಿದ ಪ್ರಮುಖ ಆರೋಪಿಯ ಸ್ನೇಹಿತನ ಬಂಧನ

25/08/2025 8:42 AM

ಎಲ್ವಿಶ್ ಯಾದವ್ ಮನೆ ಗುಂಡಿನ ದಾಳಿ ಪ್ರಕರಣ: ಗುರುಗ್ರಾಮದಲ್ಲಿ ಬೈಕ್ ಟ್ಯಾಕ್ಸಿ ಸವಾರನ ಬಂಧನ

25/08/2025 8:35 AM
State News
KARNATAKA

BREAKING : ಬೆಂಗಳೂರಲ್ಲಿ ಕಿಲ್ಲರ್ `BMTC’ಗೆ ಮತ್ತೊಂದು ಬಲಿ : ಬಸ್ ಹರಿದು 11 ವರ್ಷದ ಬಾಲಕ ಸಾವು.!

By kannadanewsnow5725/08/2025 8:58 AM KARNATAKA 1 Min Read

ಬೆಂಗಳೂರು: ನಗರದಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ಸಿಗೆ ಮತ್ತೊಂದು ಬಲಿಯಾಗಿದೆ. ಬಿಎಂಟಿಸಿ ಬಸ್ ಹರಿದು 11 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.…

`ಖಾದಿ’ ಉತ್ಪಾದನೆ ಉತ್ತೇಜಿಸಲು ರಾಜ್ಯ ಸರ್ಕಾರದಿಂದ ಪ್ರತಿ ವರ್ಷ ರಿಯಾಯತಿ : ಬಸವನಗೌಡ ತುರುವಿಹಾಳ

25/08/2025 8:53 AM
vidhana soudha

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : `ಒಳ ಮೀಸಲಾತಿ’ ಜಾರಿ ಬೆನ್ನಲ್ಲೇ 85,000 ಕ್ಕೂ ಅಧಿಕ ಹುದ್ದೆಗಳ ನೇಮಕಾತಿ.!

25/08/2025 8:33 AM

BREAKING : ಸ್ಯಾಂಡಲ್ ವುಡ್ ಹಿರಿಯ ಪೋಷಕ ನಟ `ಮಂಗಳೂರು ದಿನೇಶ್’ ಇನ್ನಿಲ್ಲ | Mangalore Dinesh passes away

25/08/2025 8:22 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.