Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಿಗರೇ ಹುಷಾರ್.! ರಸ್ತೆ ಅಕ್ಕ-ಪಕ್ಕ ಕಸ ಎಸೆದರೇ ‘ದಂಡ ಫಿಕ್ಸ್’

30/07/2025 1:55 PM

Watch video: ಕಮ್ಚಟ್ಕಾ ಭೂಕಂಪ: ರಷ್ಯಾದ ಭಾರೀ ಭೂಕಂಪಕ್ಕೆ ಕಾರಣವೇನು? ಇಲ್ಲಿದೆ ವಿವರ | Russia Earthquake

30/07/2025 1:52 PM

ಆ.3ಕ್ಕೆ ಸಾಗರದಲ್ಲಿ ‘ಎಸ್.ವೆಂಕಟರಮಣ ಆಚಾರ್ ಪ್ರಾಮಾಣಿಕ ಸರ್ಕಾರಿ ಸೇವಾ ಪ್ರಶಸ್ತಿ’ ಪ್ರದಾನ: ಮ.ಸ.ನಂಜುಂಡಸ್ವಾಮಿ

30/07/2025 1:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯ ಸರ್ಕಾರದಿಂದ ‘ವಕ್ಫ್ ಆಸ್ತಿ’ಗಳ ಸಂರಕ್ಷಣೆಗಾಗಿ ‘ಕಾಂಪೌಂಡ್ ಗೋಡೆ’ ನಿರ್ಮಾಣಕ್ಕೆ ಅನುದಾನ ಮಂಜೂರು
KARNATAKA

BIG NEWS: ರಾಜ್ಯ ಸರ್ಕಾರದಿಂದ ‘ವಕ್ಫ್ ಆಸ್ತಿ’ಗಳ ಸಂರಕ್ಷಣೆಗಾಗಿ ‘ಕಾಂಪೌಂಡ್ ಗೋಡೆ’ ನಿರ್ಮಾಣಕ್ಕೆ ಅನುದಾನ ಮಂಜೂರು

By kannadanewsnow0912/02/2024 5:18 PM

ಬೆಂಗಳೂರು: ರಾಜ್ಯ ಸರ್ಕಾರದಿಂದ ವಕ್ಫ್ ಆಸ್ತಿಗಳ ಸಂರಕ್ಷಣೆಗಾಗಿ ಕಾಂಪೌಂಡ್ ಗೋಡೆ ನಿರ್ಮಾಣ ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಕಾರಣದಿಂದಾಗಿಯೇ ಕಾಂಪೌಂಡ್ ನಿರ್ಮಾಣ ಮಾಡೋದಕ್ಕೆ ಅನುದಾನ ಮಂಜೂರು ಮಾಡಿ ಆದೇಶಿಸಿದೆ.

ಈ ಕುರಿತಂತೆ ಅಲ್ಪ ಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಕರ್ನಾಟಕ ರಾಜ್ಯದ ವಕ್ಸ್ ಆಸ್ತಿಗಳಾದ ಖಬರಸ್ಥಾನ್, ಈದಾದ ಜಾಗಗಳನ್ನು ಅಕ್ರಮ ಒತ್ತುವರಿ, ಅನಧಿಕೃತ ಸ್ವಾಧೀನ ಮತ್ತು ವಿವಾದಗಳಿಂದ ಉದ್ಭವಿಸುತ್ತಿರುವ ಸಮಸ್ಯೆಗಳನ್ನು ತಡೆಯಲು ಆಸ್ತಿಗಳ ಸುತ್ತ ಬೇಲಿ, ಗೋಡೆಯನ್ನು ಹಾಕುವುದು ಅವಶ್ಯಕವಾಗಿರುವುದರಿಂದ, ಅದನ್ನು ಸಂರಕ್ಷಣೆ ಮಾಡುವ ಯೋಜನೆಯಡಿ ಕೆಲವು ನಿಬಂಧನೆಗಳನ್ನು ರೂಪಿಸಿ ಆದೇಶ ಹೊರಡಿಸಲಾಗಿರುತ್ತದೆ ಎಂದಿದ್ದಾರೆ.

ರಾಜ್ಯದ ವಿವಿಧ ವಕ್ಸ್ ಆಸ್ತಿಗಳ ಸಂರಕ್ಷಣೆಗಾಗಿ ಕಾಂಪೌಂಡ್ ಗೋಡೆ ನಿರ್ಮಾಣ ಮಾಡಲು ಅನುದಾನ ಮಂಜೂರು ಮಾಡುವಂತೆ ಕೋರಿ ಪ್ರಸ್ತಾವನೆಗಳು ಸ್ವೀಕೃತವಾಗಿರುತ್ತವೆ. ಸದರಿ ಪ್ರಸ್ತಾವನೆಗಳನ್ನು ಪರಿಶೀಲಿಸಿ, ಕೆಳಕಂಡಂತೆ ಆದೇಶಿಸಿದೆ ಎಂದು ಹೇಳಿದ್ದಾರೆ.

ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ, ಈ ಆದೇಶದ ಅನುಬಂಧದಲ್ಲಿ ನಮೂದಿಸಿರುವಂತೆ ರಾಜ್ಯದ ಒಟ್ಟು 416 ವಕ್ಸ್ ಆಸ್ತಿಗಳ ಸಂರಕ್ಷಣೆಗಾಗಿ ಕಾಂಪೌಂಡ್ ಗೋಡೆ ನಿರ್ಮಾಣ ಮಾಡಲು ಒಟ್ಟು ರೂ.3184.50ಲಕ್ಷಗಳ (ಮೂವತ್ತೊಂದು ಕೋಟಿ ಎಂಭತ್ತತನಾಲ್ಕು ಅನುದಾನವನ್ನು ಈ ಕೆಳಕಂಡ
ಲಕ್ಷ ಐವತ್ತುಸಾವಿರ ರೂಪಾಯಿಗಳು ಮಾತ್ರ) ಷರತ್ತಿಗೊಳಪಟ್ಟು ಮಂಜೂರು ಮಾಡಿ ಆದೇಶಿಸಿದೆ.

ಷರತ್ತುಗಳು

1. ಸದರಿ ವೆಚ್ಚವನ್ನು 2023-24ನೇ ಸಾಲಿನ ಕರ್ನಾಟಕ ರಾಜ್ಯ ವಕ್ಸ್ ಆಸ್ತಿಗಳ ಸಂರಕ್ಷಣೆ ಯೋಜನೆ ಅಡಿಯಲ್ಲಿ ಲೆಕ್ಕಶೀರ್ಷಿಕೆ: 2225-04-102-0-03(059) ರಲ್ಲಿ ಹಂಚಿಕೆ ಮಾಡಿರುವ ಅನುದಾನದಲ್ಲಿ ಪ್ರಸಕ್ತ ಸಾಲಿಗೆ ಶೇ.50 ರಷ್ಟನ್ನು ಬಿಡುಗಡೆ ಮಾಡತಕ್ಕದ್ದು.
2. ಕರ್ನಾಟಕ ರಾಜ್ಯ ವಕ್ಸ್ ಮಂಡಳಿಯು ಗ್ರಾಂಟ್-ಇನ್-ಏಡ್ ನಲ್ಲಿರುವ ಸೂಚನೆಗಳನ್ನು ವಕ್ಸ್ ಸಂಸ್ಥೆಗಳಿಗೆ ಹಣ ಬಿಡುಗಡೆಗೊಳಿಸುವ ಮುನ್ನ ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು.

3. ಸದರಿ ವಕ್ಸ್ ಆಸ್ತಿಗಳು ಕರ್ನಾಟಕ ರಾಜ್ಯ ವಕ್ಸ್ ಮಂಡಳಿಯಲ್ಲಿ ನೋಂದಣಿಯಾಗಿರುವ ಬಗ್ಗೆ ವಿವರಗಳನ್ನು ಪಡೆದು ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿ, ಗ್ರಾಂಟ್-ಇನ್-ಏಡ್ ನಿಯಮಗಳ ಪ್ರಕಾರ ಅನುದಾನ ಮಂಜೂರು ಮಾಡಲು ಅರ್ಹರಿರುವ ಬಗ್ಗೆ ದೃಢಪಡಿಕೊಂಡ ನಂತರ ಅನುದಾನವನ್ನು ಬಿಡುಗಡೆ ಮಾಡತಕ್ಕದ್ದು.
4. ಕಾಮಗಾರಿಯ ಯೋಜನೆ ಹಾಗೂ ನೀಲಿ ನಕ್ಷೆಯ ಮೇಲೆ ಅಭಿಯಂತರರ ಸಹಿ ಇರುವ ಬಗ್ಗೆ, ವಕ್ಸ್ ಅಧಿಕಾರಿ/ವಕ್ಸ್ ನಿರೀಕ್ಷಕರಿಂದ ದೃಢೀಕರಿಸತಕ್ಕದ್ದು
5. ಸಂಸ್ಥೆಗಳ ಹಿಂದಿನ ಸಾಲಿನ ಲೆಕ್ಕಪರಿಶೋಧನೆ ಬಗ್ಗೆ ಪರೀಶೀಲಿಸಿ ಅನುದಾನ ಬಿಡುಗಡೆ ಮಾಡತಕ್ಕದ್ದು.
6. ವಕ್ಸ್ ಸಂಸ್ಥೆಯಿಂದ Indemnity Bond ಪಡೆದಿರುವ ಬಗ್ಗೆ ಖಚಿತಪಡಿಸಿಕೊಂಡು ಅನುದಾನ ಬಿಡುಗಡೆ ಮಾಡತಕ್ಕದ್ದು,
7. ಸಂಸ್ಥೆಯ ವ್ಯವಸ್ಥಾಪಕ ಸಮಿತಿಗೆ ಕರ್ನಾಟಕ ರಾಜ್ಯ ವಕ್ಸ್ ಮಂಡಳಿಯಿಂದ ಅನುಮೋದನೆ ಪಡೆದಿರುವ ಬಗ್ಗೆ ಖಚಿತಪಡಿಸಿಕೊಳ್ಳತಕ್ಕದ್ದು.
8. ಸಂಸ್ಥೆಯ ಬ್ಯಾಂಕ್ ಖಾತೆ ವಿವರಗಳನ್ನು ಪಡೆದು ಅನುದಾನ ಬಿಡುಗಡೆ ಮಾಡತಕ್ಕದ್ದು.
9. ಮೊದಲನೇ ಕಂತಿನಲ್ಲಿ ಶೇ.50ರಷ್ಟು ಅನುದಾನವನ್ನು ಮಾತ್ರ ಬಿಡುಗಡೆ ಮಾಡತಕ್ಕದ್ದು. ತದನಂತರ ಕಾಮಗಾರಿಯ ಪ್ರಗತಿಯನ್ನು ಕಡ್ಡಾಯವಾಗಿ ಪರಿಶೀಲಿಸಿ, ಮೊದಲನೇ ಕಂತಿನಲ್ಲಿ ಬಿಡುಗಡೆಯಾದ ಅನುದಾನಕ್ಕೆ ಹಣ ಬಳಕೆ ಪಮಾಣ ಪತ್ರವನ್ನು ಪಡೆದ ನಂತರ ಮುಂದಿನ ಆರ್ಥಿಕ ವರ್ಷದಲ್ಲಿ ಎರಡನೇ ಕಂತಿನ ಅನುದಾನ ಬಿಡುಗಡೆ ಮಾಡತಕ್ಕದ್ದು.
10. ಸದರಿ ಅನುದಾನವನ್ನು ಯಾವ ಉದ್ದೇಶಕ್ಕಾಗಿ ಬಿಡುಗಡೆಗೊಳಿಸಲಾಗಿದೆಯೋ ಅದೇ ಉದ್ದೇಶಕ್ಕಾಗಿ ಬಳಸತಕ್ಕದ್ದು.
ಈ ಆದೇಶವನ್ನು ಸರ್ಕಾರಿ ಆದೇಶ ಸಂಖ್ಯೆ: ಎಫ್‌ಡಿ 01 ಟಿಎಫ್‌ಪಿ 2024 ದಿನಾಂಕ: 05-02-2024 ರಲ್ಲಿ ಸರ್ಕಾರದ ಕಾರ್ಯದರ್ಶಿಗಳಿಗೆ ಪುತ್ಯಾಯೋಜಿಸಿರುವ ಅಧಿಕಾರದನ್ವಯ ಹೊರಡಿಸಲಾಗಿದೆ.

‘ಬಿಜೆಪಿ ಅಂದರೆ ‘ಸುಳ್ಳಿನ ಫ್ಯಾಕ್ಟರಿ’- ಸಚಿವ ಎಂ.ಬಿ ಪಾಟೀಲ್ ವಾಗ್ಧಾಳಿ

BIG NEWS: ರಾಜ್ಯದ ಸರ್ಕಾರಿ ಕಚೇರಿಯಲ್ಲಿ ‘ಬಸವಣ್ಣ’ನ ಭಾವಚಿತ್ರ ಹಾಕುವುದು ಕಡ್ಡಾಯ – ಸಿಎಂ ಸಿದ್ಧರಾಮಯ್ಯ ಆದೇಶ

Share. Facebook Twitter LinkedIn WhatsApp Email

Related Posts

ಬೆಂಗಳೂರಿಗರೇ ಹುಷಾರ್.! ರಸ್ತೆ ಅಕ್ಕ-ಪಕ್ಕ ಕಸ ಎಸೆದರೇ ‘ದಂಡ ಫಿಕ್ಸ್’

30/07/2025 1:55 PM1 Min Read

ಆ.3ಕ್ಕೆ ಸಾಗರದಲ್ಲಿ ‘ಎಸ್.ವೆಂಕಟರಮಣ ಆಚಾರ್ ಪ್ರಾಮಾಣಿಕ ಸರ್ಕಾರಿ ಸೇವಾ ಪ್ರಶಸ್ತಿ’ ಪ್ರದಾನ: ಮ.ಸ.ನಂಜುಂಡಸ್ವಾಮಿ

30/07/2025 1:49 PM2 Mins Read

ಗ್ರಾಮೀಣ ಮಹಿಳೆಯರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಸಿಗಲಿದೆ ಉಚಿತ `ವಿದ್ಯುತ್ ಚಾಲಿತ ಹೊಲಿಗೆ ಯಂತ್ರ’

30/07/2025 1:20 PM1 Min Read
Recent News

ಬೆಂಗಳೂರಿಗರೇ ಹುಷಾರ್.! ರಸ್ತೆ ಅಕ್ಕ-ಪಕ್ಕ ಕಸ ಎಸೆದರೇ ‘ದಂಡ ಫಿಕ್ಸ್’

30/07/2025 1:55 PM

Watch video: ಕಮ್ಚಟ್ಕಾ ಭೂಕಂಪ: ರಷ್ಯಾದ ಭಾರೀ ಭೂಕಂಪಕ್ಕೆ ಕಾರಣವೇನು? ಇಲ್ಲಿದೆ ವಿವರ | Russia Earthquake

30/07/2025 1:52 PM

ಆ.3ಕ್ಕೆ ಸಾಗರದಲ್ಲಿ ‘ಎಸ್.ವೆಂಕಟರಮಣ ಆಚಾರ್ ಪ್ರಾಮಾಣಿಕ ಸರ್ಕಾರಿ ಸೇವಾ ಪ್ರಶಸ್ತಿ’ ಪ್ರದಾನ: ಮ.ಸ.ನಂಜುಂಡಸ್ವಾಮಿ

30/07/2025 1:49 PM

Big News: ಬಾರ್ಬಿ ವಿನ್ಯಾಸಕರಾದ ಮಾರಿಯೋ ಪಗ್ಲಿನೊ ಮತ್ತು ಗಿಯಾನಿ ಗ್ರಾಸಿ ಇಟಲಿಯಲ್ಲಿ ನಿಧನ

30/07/2025 1:46 PM
State News
KARNATAKA

ಬೆಂಗಳೂರಿಗರೇ ಹುಷಾರ್.! ರಸ್ತೆ ಅಕ್ಕ-ಪಕ್ಕ ಕಸ ಎಸೆದರೇ ‘ದಂಡ ಫಿಕ್ಸ್’

By kannadanewsnow0930/07/2025 1:55 PM KARNATAKA 1 Min Read

ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಸಲುವಾಗಿ, ರಸ್ತೆ ಅಕ್ಕ ಪಕ್ಕದಲ್ಲಿ ಕಸ ಎಸೆಯುವವರನ್ನು ಗುರುತಿಸಿ,…

ಆ.3ಕ್ಕೆ ಸಾಗರದಲ್ಲಿ ‘ಎಸ್.ವೆಂಕಟರಮಣ ಆಚಾರ್ ಪ್ರಾಮಾಣಿಕ ಸರ್ಕಾರಿ ಸೇವಾ ಪ್ರಶಸ್ತಿ’ ಪ್ರದಾನ: ಮ.ಸ.ನಂಜುಂಡಸ್ವಾಮಿ

30/07/2025 1:49 PM

ಗ್ರಾಮೀಣ ಮಹಿಳೆಯರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಸಿಗಲಿದೆ ಉಚಿತ `ವಿದ್ಯುತ್ ಚಾಲಿತ ಹೊಲಿಗೆ ಯಂತ್ರ’

30/07/2025 1:20 PM

BIG NEWS : ಹುಬ್ಬಳ್ಳಿಯಲ್ಲಿ ಪ್ರೀತಿಯ ವಿಚಾರಕ್ಕೆ ಯುವಕನಿಗೆ ಚಾಕು ಇರಿದ ಯುವತಿಯ ಚಿಕ್ಕಪ್ಪ!

30/07/2025 1:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.