Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾನು ಜೆಡಿಎಸ್‌ಗೆ ಹೋಗುವ ಪ್ರಶ್ನೆಯೇ ಇಲ್ಲ: ಪಕ್ಷಾಂತರ ವದಂತಿಗಳಿಗೆ ಸಚಿವ ಜಮೀರ್ ಅಹ್ಮದ್ ಖಡಕ್ ಉತ್ತರ!

21/04/2026 3:40 PM

BREAKING : ‘NCP’ ಅಧ್ಯಕ್ಷ ಶರದ್ ಪವಾರ್ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು!

21/04/2026 3:39 PM

ಸಿದ್ದರಾಮಯ್ಯ ಈಗಲೂ ಟಗರು, ಅವರು ಗರ್ಜಿಸಿದರೆ ಸೌಂಡೇ ಬೇರೆ: ಸಚಿವ ಜಮೀರ್ ಅಹ್ಮದ್ ಖಾನ್ ತಿರುಗೇಟು

21/04/2026 3:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರಕಾರದಿಂದ ಪೊಲೀಸ್ ಇಲಾಖೆಯ ದುರ್ಬಳಕೆ: ಬಿವೈ ವಿಜಯೇಂದ್ರ ಕಿಡಿ
KARNATAKA

ರಾಜ್ಯ ಸರಕಾರದಿಂದ ಪೊಲೀಸ್ ಇಲಾಖೆಯ ದುರ್ಬಳಕೆ: ಬಿವೈ ವಿಜಯೇಂದ್ರ ಕಿಡಿ

By kannadanewsnow0910/12/2025 4:49 PM

ಬೆಳಗಾವಿ: ಸದನದಲ್ಲಿ ವಿಪಕ್ಷ ನಾಯಕರು ಮಾತನಾಡುವಾಗ ಅದನ್ನು ಕೇಳುವ ವ್ಯವಧಾನವೂ ಆಡಳಿತ ಪಕ್ಷದವರಿಗೆ ಇಲ್ಲವೆಂದಾದರೆ, ಇದು ಖಂಡಿತ ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರಿಸಿದರು. 9-10 ದಿನಗಳ ಕಾಲ ಸದನ ನಡೆಯುತ್ತದೆ. ಎರಡು ದಿನ ಕಳೆದಿದೆ. ಸದನದ ಸಮಯ ವ್ಯರ್ಥ ಆಗಬಾರದು. ನಾಡಿನ ರೈತರ, ನಿರುದ್ಯೋಗಿಗಳ, ನೀರಾವರಿ ವಿಚಾರದಲ್ಲಿ ಸಮರ್ಪಕ ಉತ್ತರ ಪಡೆಯುವುದೇ ನಮ್ಮ ಉದ್ದೇಶ ಎಂದು ಸ್ಪಷ್ಟಪಡಿಸಿದರು.

ಸದನದಲ್ಲಿ ರಾಜ್ಯದ ರೈತರ ಮತ್ತು ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ರಾಜ್ಯ ಸರಕಾರ ಸ್ಪಂದಿಸುತ್ತಿದ್ದರೆ ಅದು ನಮಗೆ ಮಾಡುವ ಉಪಕಾರವಲ್ಲ; ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಮೊನ್ನೆಯಿಂದ ಆರಂಭವಾಗಿದೆ. ನಾಡಿನ ಜ್ವಲಂತ ಸಮಸ್ಯೆ, ರೈತರ ಸಂಕಷ್ಟ, ಅಪೂರ್ಣ ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸಲು ಅಧಿವೇಶನ ಕರೆದಿದ್ದಾರೆ. ಇವರೇನೂ ನಮಗೆ ಉಪಕಾರ ಮಾಡುತ್ತಿಲ್ಲ ಎಂದು ತಿಳಿಸಿದರು.

ಕಾಂಗ್ರೆಸ್ ಸರಕಾರ ಸತ್ಯ ಮರೆಮಾಚುವ ಕೆಲಸ ಮಾಡುತ್ತಿದೆ. ನಿನ್ನೆಯೂ ಬಿಜೆಪಿ ರೈತ ಮೋರ್ಚಾ ವತಿಯಿಂದ ನಾಡಿನ ರೈತರ ಸಮಸ್ಯೆ ಕುರಿತು ಹೋರಾಟ ನಡೆಸಿದ್ದೆವು. ಹೋರಾಟಗಾರರು ಹೋರಾಟದ ಸ್ಥಳಕ್ಕೆ ತಲುಪದಂತೆ ಅಡೆತಡೆ ಒಡ್ಡಿದ್ದರು. ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿದ್ದಾರೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದರು.

ನಿರುದ್ಯೋಗಿ ಯುವಜನರು ಸಾಕಷ್ಟು ವರ್ಷಗಳಿಂದ ತಪಸ್ಸಿನಂತೆ ಕೆಪಿಎಸ್ಸಿ, ಇತರ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಮಾಡಿ ಉದ್ಯೋಗದ ನಿರೀಕ್ಷೆಯಲ್ಲಿದ್ದರು. ಅವರು ಬೀದಿಗಿಳಿದು ಹೋರಾಟ ಮಾಡುವುದು ಅಪರಾಧವೆಂದು ಸರಕಾರಕ್ಕೆ ಅನಿಸಿದರೆ, ಸರಕಾರದ ಈ ಧೋರಣೆ ಸರಿಯಲ್ಲ; ಇದರ ಕುರಿತು ಸದನದಲ್ಲೂ ಚರ್ಚೆ ಮಾಡುವುದಾಗಿ ತಿಳಿಸಿದರು.

ರಾಹುಲ್ ಗಾಂಧಿಯವರು ಭಾರತ್ ಜೋಡೋ ಸಂದರ್ಭದಲ್ಲಿ ಬಹಳಷ್ಟು ಭರವಸೆಗಳನ್ನು ನೀಡಿ ಹೋಗಿದ್ದರು. ರಾಜ್ಯದಲ್ಲಿ 2.5 ಲಕ್ಷ ಸರಕಾರಿ ಉದ್ಯೋಗಗಳು ನೇಮಕಾತಿ ಇಲ್ಲದೇ ಖಾಲಿ ಇವೆ. ಅವುಗಳನ್ನು ಭರ್ತಿ ಮಾಡುವ ಭರವಸೆ ಹಾಗೇ ಇದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಹತಾಶ ಯುವಜನರ ಆಶಯಕ್ಕೆ ಮಣ್ಣೆರಚುವ ಕೆಲಸವನ್ನು ಸರಕಾರ ಮಾಡುತ್ತಿದೆ ಎಂದು ದೂರಿದರು.

ಸತ್ಯ ಮರೆಮಾಚುವ ಕೆಲಸ..

ಕೆಪಿಎಸ್ಸಿ ಸರಿ ಮಾಡುವ ಕೆಲಸ ರಾಜ್ಯ ಸರಕಾರದ್ದಲ್ಲವೇ ಎಂದು ಕೇಳಿದರು. ಹೋರಾಟ ಹತ್ತಿಕ್ಕಿ ಸತ್ಯ ಮರೆಮಾಚುವ ಕೆಲಸವನ್ನು ಸರಕಾರ ಮಾಡುತ್ತಿದೆ ಎಂದು ಆಕ್ಷೇಪಿಸಿದರು. ತೆಲಂಗಾಣದಲ್ಲಿ ಗ್ಯಾರಂಟಿ ಅನುಷ್ಠಾನದಿಂದ ಸರಕಾರ ನೌಕರರಿಗೆ ಸಂಬಳ ಕೊಡಲೂ ಸಾಧ್ಯವಾಗುತ್ತಿಲ್ಲ; ಇದು ವಾಸ್ತವಿಕ ಸತ್ಯ. ಕಾಂಗ್ರೆಸ್ ಆಡಳಿತವುಳ್ಳ ಹಿಮಾಚಲ ಪ್ರದೇಶದಲ್ಲೂ ಗ್ಯಾರಂಟಿಗಳನ್ನು ಘೋಷಿಸಿದ್ದರು. ಅಲ್ಲಿ ದೇವಸ್ಥಾನದ ಆದಾಯವನ್ನು ಸರಕಾರಕ್ಕೆ ಕೊಡುವಂತೆ ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ ಎಂದು ಗಮನ ಸೆಳೆದರು.

ಸ್ವಾತಂತ್ರ್ಯ ಹೋರಾಟಗಾರರ 8 ತಿಂಗಳ ಪಿಂಚಣಿ ಕೊಟ್ಟಿಲ್ಲ..

ಮಂಡ್ಯದಲ್ಲಿ ಸ್ವಾತಂತ್ರ್ಯ ಹೋರಾಟಗಾರರಿಗೆ 8 ತಿಂಗಳ ಪಿಂಚಣಿ ಕೊಟ್ಟಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು. ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರಿನಲ್ಲಿ 32 ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಗ್ರಾಮೀಣ ಭಾಗದ ವಿದ್ಯಾರ್ಥಿನಿ, ಕೊಕ್ಕೊ ಆಟಗಾರ್ತಿಗೆ 5 ಲಕ್ಷ ಬಹುಮಾನ ಘೋಷಿಸಿದ್ದರು. ಅಕ್ಕಪಕ್ಕದ ರಾಜ್ಯಗಳಲ್ಲಿ 1 ಕೋಟಿ, 2 ಕೋಟಿ ಬಹುಮಾನ ನೀಡಿದ್ದಾರೆ. ಆದ್ದರಿಂದ ಆ ಹುಡುಗಿ ಆ ಮೊತ್ತವನ್ನು ಹಿಂದಿರುಗಿಸಿದ್ದಾಳೆ ಎಂದು ವಿವರಿಸಿದರು. ಇದು ವಾಸ್ತವಿಕ ಸತ್ಯ. ಇದನ್ನು ಅನುಭವಿ ಮುಖ್ಯಮಂತ್ರಿಗಳು ಮರೆಮಾಚುವುದು ಅಕ್ಷಮ್ಯ ಅಪರಾಧ ಎಂದು ನುಡಿದರು.

ಧರ್ಮಸ್ತಳ ಬುರುಡೆ ಗ್ಯಾಂಗ್, ಷಡ್ಯಂತ್ರದ ರೂವಾರಿಗಳು, ಸೂತ್ರಧಾರರ ವಿವರಕ್ಕೆ ಪತ್ತೆಗೆ ವಿಜಯೇಂದ್ರ ಒತ್ತಾಯ

ಪ್ರತಿ ಶನಿವಾರ ನಾಗಮಂಗಲ, ಮಂಡ್ಯಕ್ಕೆ ಚಲುವರಾಯಸ್ವಾಮಿ ಬರೋದೇ ಕಲೆಕ್ಷನ್ ಮಾಡೋಕೆ: ಮಾಜಿ ಶಾಸಕ ಸುರೇಶ್ ಗೌಡ ಆರೋಪ

Share. Facebook Twitter LinkedIn WhatsApp Email

Related Posts

ನಾನು ಜೆಡಿಎಸ್‌ಗೆ ಹೋಗುವ ಪ್ರಶ್ನೆಯೇ ಇಲ್ಲ: ಪಕ್ಷಾಂತರ ವದಂತಿಗಳಿಗೆ ಸಚಿವ ಜಮೀರ್ ಅಹ್ಮದ್ ಖಡಕ್ ಉತ್ತರ!

21/04/2026 3:40 PM2 Mins Read

ಸಿದ್ದರಾಮಯ್ಯ ಈಗಲೂ ಟಗರು, ಅವರು ಗರ್ಜಿಸಿದರೆ ಸೌಂಡೇ ಬೇರೆ: ಸಚಿವ ಜಮೀರ್ ಅಹ್ಮದ್ ಖಾನ್ ತಿರುಗೇಟು

21/04/2026 3:38 PM1 Min Read

ಬೆಂಗಳೂರಲ್ಲಿ ಜನಗಣತಿಗೆ ಗೈರಾದವರಿಗೆ ಜಿಬಿಎ ಶಾಕ್: ಎಫ್ಐಆರ್ ದಾಖಲಿಸಿ, ಕಾನೂನು ಕ್ರಮದ ಎಚ್ಚರಿಕೆ

21/04/2026 2:31 PM1 Min Read
Recent News

ನಾನು ಜೆಡಿಎಸ್‌ಗೆ ಹೋಗುವ ಪ್ರಶ್ನೆಯೇ ಇಲ್ಲ: ಪಕ್ಷಾಂತರ ವದಂತಿಗಳಿಗೆ ಸಚಿವ ಜಮೀರ್ ಅಹ್ಮದ್ ಖಡಕ್ ಉತ್ತರ!

21/04/2026 3:40 PM

BREAKING : ‘NCP’ ಅಧ್ಯಕ್ಷ ಶರದ್ ಪವಾರ್ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು!

21/04/2026 3:39 PM

ಸಿದ್ದರಾಮಯ್ಯ ಈಗಲೂ ಟಗರು, ಅವರು ಗರ್ಜಿಸಿದರೆ ಸೌಂಡೇ ಬೇರೆ: ಸಚಿವ ಜಮೀರ್ ಅಹ್ಮದ್ ಖಾನ್ ತಿರುಗೇಟು

21/04/2026 3:38 PM

BREAKING: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್‌ಮೈಂಡ್ ಪಾಕಿಸ್ತಾನದಲ್ಲಿ ಪತ್ತೆ

21/04/2026 2:38 PM
State News
KARNATAKA

ನಾನು ಜೆಡಿಎಸ್‌ಗೆ ಹೋಗುವ ಪ್ರಶ್ನೆಯೇ ಇಲ್ಲ: ಪಕ್ಷಾಂತರ ವದಂತಿಗಳಿಗೆ ಸಚಿವ ಜಮೀರ್ ಅಹ್ಮದ್ ಖಡಕ್ ಉತ್ತರ!

By kannadanewsnow0921/04/2026 3:40 PM KARNATAKA 2 Mins Read

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮತ್ತೆ ಜೆಡಿಎಸ್ ಸೇರುತ್ತಾರೆ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ರಹಸ್ಯ ಮಾತುಕತೆ…

ಸಿದ್ದರಾಮಯ್ಯ ಈಗಲೂ ಟಗರು, ಅವರು ಗರ್ಜಿಸಿದರೆ ಸೌಂಡೇ ಬೇರೆ: ಸಚಿವ ಜಮೀರ್ ಅಹ್ಮದ್ ಖಾನ್ ತಿರುಗೇಟು

21/04/2026 3:38 PM

ಬೆಂಗಳೂರಲ್ಲಿ ಜನಗಣತಿಗೆ ಗೈರಾದವರಿಗೆ ಜಿಬಿಎ ಶಾಕ್: ಎಫ್ಐಆರ್ ದಾಖಲಿಸಿ, ಕಾನೂನು ಕ್ರಮದ ಎಚ್ಚರಿಕೆ

21/04/2026 2:31 PM

ಕಟ್ಟಡ ಕಾರ್ಮಿಕರೇ ಎಚ್ಚರ! ಸಿಮೆಂಟ್ ಬಳಕೆಯಲ್ಲಿ ಅಜಾಗರೂಕತೆ ಬೇಡ: ಇಲ್ಲಿವೆ ಆರೋಗ್ಯ ರಕ್ಷಣೆಗೆ ಅಗತ್ಯ ಸಲಹೆಗಳು

21/04/2026 2:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.