ಬೆಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಭಾರತದಲ್ಲಿ ಭರ್ಜರಿಯಾಗಿ ಸಿದ್ದತೆಯನ್ನು ನಡೆಸಲಾಗುತ್ತಿದೆ. ಅದರಂತೆ ಕರ್ನಾಟಕ ಸರ್ಕಾರವು ಕೂಡ ಎಲ್ಲ ಆರೀತಿಯಲ್ಲಿ ಸಿದ್ದತೆಯನ್ನು ನಡೆಸಿದ್ದು, ಈ ಬಾರಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆ ಕೇಂದ್ರ ಸರ್ಕಾರ `ಹರ್ ಘರ್ ತಿರಂಗಾ’ ಅಭಿಯಾನ ನಡೆಸಲು ಘೋಷಿಸಿದೆ.
ಅದರಂತೆ, ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು, ಪಿಯುಸಿ ಕಾಲೇಜುಗಳು, ಮದರಸಾಗಳ ಮೇಲೂ ಕಡ್ಡಾಯವಾಗಿ ತಿರಂಗಾ ಹಾರಿಸಲೇಬೇಕು ಎಂದು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪತ್ರ ಬರೆದಿದ್ದಾರೆ ಎನ್ನಲಾಗಿದೆ.