Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ಯೋಗಿಗಳಿಗೆ ಗುಡ್ ನ್ಯೂಸ್ ; 11 ವರ್ಷಗಳ ಬಳಿಕ EPS-95 ಅಡಿಯಲ್ಲಿ ‘ಪಿಂಚಣಿ’ ಹೆಚ್ಚಳ ಸಾಧ್ಯತೆ!

07/10/2025 10:09 PM

ರೈಲು ಟಿಕೆಟ್ ಬುಕ್ ಆದ್ಮೇಲೆ ಪ್ರಯಾಣ ಕ್ಯಾನ್ಸಲಾದ್ರೆ ಚಿಂತೆ ಬೇಡ, ಈಗ ಅದೇ ಟಿಕೆಟ್’ನಿಂದ ಬೇರೆ ದಿನ ಪ್ರಯಾಣಿಸ್ಬೋದು!

07/10/2025 9:50 PM

BREAKING : ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್’ನಿಂದ ಮತ್ತೆರೆಡು ಮಕ್ಕಳು ಸಾವು ; ಮೃತರ ಸಂಖ್ಯೆ 16ಕ್ಕೆ ಏರಿಕೆ

07/10/2025 9:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರಾಜ್ಯ ಸರ್ಕಾರದಿಂದ ಮಧ್ಯಾಹ್ನದ ಬಿಸಿಯೂಟ ಯೋಜನೆಯ ‘ಚಿಕ್ಕಿ ವಿತರಣೆ’ಗೆ ಬ್ರೇಕ್
KARNATAKA

BREAKING: ರಾಜ್ಯ ಸರ್ಕಾರದಿಂದ ಮಧ್ಯಾಹ್ನದ ಬಿಸಿಯೂಟ ಯೋಜನೆಯ ‘ಚಿಕ್ಕಿ ವಿತರಣೆ’ಗೆ ಬ್ರೇಕ್

By kannadanewsnow0917/02/2025 2:42 PM

ಬೆಂಗಳೂರು: ರಾಜ್ಯ ಸರ್ಕಾರದಿಂದ ಮಧ್ಯಾಹ್ನದ ಬಿಸಿಯೂಟ ಯೋಡನೆಯಾದಂತ ಮಧ್ಯಾಹ್ನದ ಉಪಹಾರ ಯೋಜನೆಯ ಅಡಿಯಲ್ಲಿ ಪೂರಕ ಪೌಷ್ಠಿಕ ಆಹಾರವಾಗಿ ಚಿಕ್ಕಿ, ಮೊಟ್ಟೆ, ಇಲ್ಲವೇ ಬಾಳೆಹಣ್ಣು ವಿತರಣೆಯನ್ನು ಶಾಲೆಗಳಲ್ಲಿ ಮಾಡಲಾಗುತ್ತಿತ್ತು. ಇದೀಗ ಈ ಯೋಜನೆಯ ಅಡಿಯಲ್ಲಿ ಚಿಕ್ಕಿ ವಿತರಣೆಗೆ ಬ್ರೇಕ್ ಹಾಕಿದೆ.

ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2022-23ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ (ಮಧ್ಯಾಹ್ನ ಉಪಹಾರ ಯೋಜನೆ) ರಡಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 1 ರಿಂದ 8ನೇ ತರಗತಿಗಳವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 46 ದಿನಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣು/ಚಿಕ್ಕಿಯನ್ನು ವಿತರಿಸಲು ಆದೇಶಿಸಲಾಗಿರುತ್ತದೆ.

ಮೇಲೆ ಓದಲಾದ ಕ್ರಮಾಂಕ (2)ರ ಸರ್ಕಾರದ ಆದೇಶದಲ್ಲಿ 2023-24ನೇ ಸಾಲಿನ ಜುಲೈ ಆಯವ್ಯಯ ಭಾಷಣದ ಕಂಡಿಕೆ-91ರಲ್ಲಿನ ಘೋಷಣೆಯಂತೆ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1 ರಿಂದ 10ನೇ ತರಗತಿಗಳವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ, (ಪ್ರತಿ ವಿದ್ಯಾರ್ಥಿಯ ಒಂದು ದಿನದ ಘಟಕ ವೆಚ್ಚ ರೂ 6/- ರಂತೆ) 80 ದಿನಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ (Supplementary Nutrition) ಮೊಟ್ಟೆ /ಶೇಂಗಾ ಚಿಕ್ಕಿ/ಬಾಳೆಹಣ್ಣನ್ನು ವಿತರಿಸಲು ಆದೇಶಿಸಲಾಗಿರುತ್ತದೆ.

ಮೇಲೆ ಓದಲಾದ ಕ್ರಮಾಂಕ (3)ರ ಸರ್ಕಾರದ ಆದೇಶದಲ್ಲಿ ಅಜೀಂ ಪ್ರೇಮ್‌ಜಿ ಫೌಂಡೇಷನ್, ಬೆಂಗಳೂರು ಇವರ ಸಹಭಾಗಿತ್ವದಲ್ಲಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ (ಈಗಾಗಲೇ ವಾರದಲ್ಲಿ ಎರಡು ದಿನ ನೀಡಲಾಗುತ್ತಿರುವ ಪೂರಕ ಪೌಷ್ಠಿಕ ಆಹಾರದ ಹೊರತಾಗಿ) ವಾರದಲ್ಲಿ ನಾಲ್ಕು ದಿನ ಪೂರಕ ಪೌಷ್ಠಿಕ ಆಹಾರವನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು ಬ್ಯಾಂಕ್‌ ಖಾತೆಗಳನ್ನು ತೆರೆಯಲು ಆದೇಶಿಸಲಾಗಿರುತ್ತದೆ.

ಮೇಲೆ ಓದಲಾದ ಕ್ರಮಾಂಕ (4)ರ ಅಪರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಕಲಬುರಗಿ ಇವರ ಪತ್ರದಲ್ಲಿ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮಕ್ಕಳಿಗೆ ವಿತರಿಸಲಾಗುತ್ತಿರುವ ಚಿಕ್ಕಿಯಲ್ಲಿ ಮಕ್ಕಳ ಆರೋಗ್ಯಕ್ಕೆ ಹಾನಿಕಾರಕ ಎನ್ನಬಹುದಾದಂತಹ ಅಪರ್ಯಾಪ್ತ ಕೊಬ್ಬಿನಾಂಶ (Unsaturated fats) ಹೆಚ್ಚಿಗೆ ಇದ್ದು, ಇದರಲ್ಲಿನ ಸಕ್ಕರೆ ಅಂಶ ಕೂಡ ಅಧಿಕವಾಗಿದ್ದು, ಚಿಕ್ಕಿಯನ್ನು ಸರಿಯಾಗಿ ಸಂಗ್ರಹಿಸದಿದ್ದಲ್ಲಿ ಕಲುಷಿತವಾಗಿ ಮಕ್ಕಳ ಆರೋಗ್ಯಕ್ಕೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಗಳಿರುವುದರಿಂದ ಚಿಕ್ಕಿ ವಿತರಣೆಯನ್ನು ಸ್ಥಗಿತಗೊಳಿಸಿ, ಮೊಟ್ಟೆ ಅಥವಾ ಬಾಳೆಹಣ್ಣು ಮಾತ್ರ ವಿತರಿಸುವ ಕುರಿತು ಕ್ರಮವಹಿಸಲು ಕೋರಿರುತ್ತಾರೆ.

ಮೇಲೆ ಓದಲಾದ ಕ್ರಮಾಂಕ (5)ರ ಅಪರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಧಾರವಾಡ, ಇವರ ಪತ್ರದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಪೂರಕ ಪೌಷ್ಠಿಕ ಆಹಾರವಾಗಿ ಮೊಟ್ಟೆ ಬದಲಾಗಿ ಶಾಲೆಗಳಲ್ಲಿ ವಿತರಣೆ ಮಾಡಲಾಗುತ್ತಿರುವ ಚಿಕ್ಕಿಯು ನಿಗದಿತ ಪ್ರಮಾಣದಲ್ಲಿ ಇಲ್ಲದಿರುವುದು, ಸಮರ್ಪಕವಾಗಿ ಸಂಗ್ರಹಿಸದೇ ಇರುವುದು ಹಾಗೂ ಅವಧಿ ಮೀರಿದ ಚಿಕ್ಕಿಗಳನ್ನು ಸಂಗ್ರಹಿಸಿ ವಿದ್ಯಾರ್ಥಿಗಳಿಗೆ ವಿತರಿಸುತ್ತಿರುವುದು ಕಂಡು ಬಂದಿರುವುದರಿಂದ ಹಾಗೂ ಅಂತಹ ಚಿಕ್ಕಿಗಳನ್ನು ಸೇವಿಸಿದಲ್ಲಿ ಮಕ್ಕಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಚಿಕ್ಕಿ ವಿತರಣೆಯನ್ನು ಸ್ಥಗಿತಗೊಳಿಸಿ ಮೊಟ್ಟೆ ಅಥವಾ ಬಾಳೆಹಣ್ಣುಗಳನ್ನು ಮಾತ್ರ ವಿತರಿಸುವ ಕುರಿತು ಕ್ರಮವಹಿಸಲು ಕೋರಿರುತ್ತಾರೆ.

ಈ ಪ್ರಸ್ತಾವನೆಯಲ್ಲಿ ವಿವರಿಸಲಾದ ಮೇಲ್ಕಂಡ ಅಂಶಗಳನ್ನು ಸರ್ಕಾರವು ಕೂಲಂಕಷವಾಗಿ ಪರಿಶೀಲಿಸಿ, ಈ ಕೆಳಕಂಡಂತೆ ಆದೇಶಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಿಸಲು ಅನುಮತಿ ನೀಡಿ ಆದೇಶಿಸಿದೆ.

ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರು, ಮಧ್ಯಾಹ್ನ ಉಪಹಾರ ಯೋಜನೆಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಿಸುವ ಕುರಿತು ಪ್ರತ್ಯೇಕವಾದ ಮಾರ್ಗಸೂಚಿಯನ್ನು ಹೊರಡಿಸತಕ್ಕದ್ದು.

ಈ ಆದೇಶವನ್ನು ಸರ್ಕಾರದ ಆದೇಶ ಸಂಖ್ಯೆ: ಎಫ್‌ಡಿ 07 ಟಿ.ಎಫ್.ಪಿ 2024, ದಿನಾಂಕ: 03.01.2025 ರಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿಯವರಿಗೆ ಪ್ರತ್ಯಾಯೋಜಿಸಿರುವ ಅಧಿಕಾರದನ್ವಯ ಹೊರಡಿಸಿದೆ ಎಂಬುದಾಗಿ ತಿಳಿಸಿದ್ದಾರೆ.

BREAKING : ಆಭರಣ ಪ್ರಿಯರಿಗೆ ಶಾಕ್ : ದೇಶಾದ್ಯಂತ ಇಂದು ಮತ್ತೆ ಚಿನ್ನದ ಬೆಲೆ 10 ಗ್ರಾಂಗೆ 550 ರೂ. ಏರಿಕೆ | Gold Price Hike

ರೈಲ್ವೆ ನಿಲ್ದಾಣಗಳಲ್ಲಿ ಜನಸಂದಣಿ ನಿಯಂತ್ರಣಕ್ಕೆ ಕೇಂದ್ರದಿಂದ ಮಹತ್ವದ ಕ್ರಮ: ‘AI ತಂತ್ರಜ್ಞಾನ’ ಬಳಕೆ – ವರದಿ

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಈವರೆಗೆ 1,19,65,700 ಮನೆಗಳ ಸಮೀಕ್ಷೆ | Case Survey

07/10/2025 9:02 PM1 Min Read

ಗಣತಿ ಬಗ್ಗೆ ಸುಳ್ಳಿನ ಕಂತೆ ಮೇಲೆ ಕಂತೆ ಹೇಳುವ ಸರಕಾರ: ಛಲವಾದಿ ನಾರಾಯಣಸ್ವಾಮಿ ಖಂಡನೆ

07/10/2025 8:53 PM2 Mins Read

ದೇಶದ ಅಪರೂಪದ ಸಾಹಿತಿ ಮಹರ್ಷಿ ವಾಲ್ಮೀಕಿ: ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ

07/10/2025 8:44 PM1 Min Read
Recent News

ಉದ್ಯೋಗಿಗಳಿಗೆ ಗುಡ್ ನ್ಯೂಸ್ ; 11 ವರ್ಷಗಳ ಬಳಿಕ EPS-95 ಅಡಿಯಲ್ಲಿ ‘ಪಿಂಚಣಿ’ ಹೆಚ್ಚಳ ಸಾಧ್ಯತೆ!

07/10/2025 10:09 PM

ರೈಲು ಟಿಕೆಟ್ ಬುಕ್ ಆದ್ಮೇಲೆ ಪ್ರಯಾಣ ಕ್ಯಾನ್ಸಲಾದ್ರೆ ಚಿಂತೆ ಬೇಡ, ಈಗ ಅದೇ ಟಿಕೆಟ್’ನಿಂದ ಬೇರೆ ದಿನ ಪ್ರಯಾಣಿಸ್ಬೋದು!

07/10/2025 9:50 PM

BREAKING : ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್’ನಿಂದ ಮತ್ತೆರೆಡು ಮಕ್ಕಳು ಸಾವು ; ಮೃತರ ಸಂಖ್ಯೆ 16ಕ್ಕೆ ಏರಿಕೆ

07/10/2025 9:39 PM

Good News ; ಭಾರತೀಯ ಕಂಪನಿಗಳು ಉದ್ಯೋಗಿಗಳಿಗೆ ಶೇ.9ರಷ್ಟು ಸಂಬಳ ಹೆಚ್ಚಳಕ್ಕೆ ಸಿದ್ಧತೆ ನಡೆಸಿವೆ ; ಅಧ್ಯಯನ

07/10/2025 9:10 PM
State News
KARNATAKA

ರಾಜ್ಯದಲ್ಲಿ ಈವರೆಗೆ 1,19,65,700 ಮನೆಗಳ ಸಮೀಕ್ಷೆ | Case Survey

By kannadanewsnow0907/10/2025 9:02 PM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿ ಸಮೀಕ್ಷೆಯನ್ನು ಅಕ್ಟೋಬರ್.18ರವರೆಗೆ ವಿಸ್ತರಣೆ ಮಾಡಲಾಗಿದೆ. ಇದರ ನಡುವೆ ರಾಜ್ಯದಲ್ಲಿ ಇದುವರೆಗೆ 1,19,65,700…

ಗಣತಿ ಬಗ್ಗೆ ಸುಳ್ಳಿನ ಕಂತೆ ಮೇಲೆ ಕಂತೆ ಹೇಳುವ ಸರಕಾರ: ಛಲವಾದಿ ನಾರಾಯಣಸ್ವಾಮಿ ಖಂಡನೆ

07/10/2025 8:53 PM

ದೇಶದ ಅಪರೂಪದ ಸಾಹಿತಿ ಮಹರ್ಷಿ ವಾಲ್ಮೀಕಿ: ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ

07/10/2025 8:44 PM

30ಕ್ಕೂ ಹೆಚ್ಚು ವರ್ಷಗಳಿಂದ ಹಕ್ಕುಪತ್ರ, ಮೂಲ ಸೌಕರ್ಯಗಳಿಲ್ಲ: ಮದ್ದೂರು ಶಾಸಕ ಉದಯ್ ಮುಂದೆ ಜನರ ಅಳಲು

07/10/2025 8:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.