Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ಒಂದೇ ದಿನಕ್ಕೆ ಸೊರಬದ ಉಳವಿಯಿಂದ ಅಂಬಲಿಗೋಳ ತಲುಪಿದ ಕಾಡಾನೆ, ನಾಳೆ ಶೆಟ್ಟಿಹಳ್ಳಿ ಕಡೆಗೆ ಕಾರ್ಯಾಚರಣೆ

13/12/2025 10:18 PM

Good News ; ಉದ್ಯೋಗಿಗಳಿಗೆ ಶುಭ ಸುದ್ದಿ ; ಖಾತೆಗೆ 52 ಸಾವಿರ ರೂ. ಜಮಾ.?

13/12/2025 10:00 PM

ಹಗಲಿನಲ್ಲಿ ‘ನಿದ್ದೆ’ ಮಾಡಿದ್ರೆ ಏನಾಗುತ್ತೆ.? ಒಂದು ಸಣ್ಣ ನಿದ್ರೆಯಿಂದ ಇಷ್ಟೆಲ್ಲಾ ಆಗಲು ಸಾಧ್ಯವೇ.?

13/12/2025 9:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಅಕ್ರಮ ಕಟ್ಟಡ’ಗಳ ಸಕ್ರಮಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ! ಇಲ್ಲಿದೆ ಸಂಪೂರ್ಣ ಮಾಹಿತಿ
KARNATAKA

‘ಅಕ್ರಮ ಕಟ್ಟಡ’ಗಳ ಸಕ್ರಮಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ! ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow0907/04/2025 7:29 PM

ಬೆಂಗಳೂರು: ರಾಜ್ಯ ಸರ್ಕಾರದಿಂದ ಅಕ್ರಮ ಕಟ್ಟಡಗಳನ್ನು ಸಕ್ರಮ ಮಾಡುವ ನಿಟ್ಟಿನಲ್ಲಿ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಈ ಮೂಲಕ ಅಕ್ರಮ ಕಟ್ಟಡ ಮಾಲೀಕರಿಗೆ ಗುಡ್ ನ್ಯೂಸ್ ನೀಡಲಾಗಿದೆ.

ಈ ಸಂಬಂಧ ಗೆಜೆಟ್ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ)ಅಧಿನಿಯಮ, 2025 (2025ರ ಏಪ್ರಿಲ್ ತಿಂಗಳ 05ನೇ ದಿನಾಂಕದಂದು ರಾಜ್ಯಪಾಲರಿಂದ ಅನುಮೋದನೆಯನ್ನು ಪಡೆಯಲಾಗಿದೆ) ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ನ್ನು ಮತ್ತಷ್ಟ ತಿದ್ದುಪಡಿ ಮಾಡಲು ಒಂದು ಅಧಿನಿಯಮ.

ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ನ್ನು (1993ರ ಕರ್ನಾಟಕ ಅಧಿನಿಯಮ ಸಂಖ್ಯೆ 14) ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಎಪ್ಪತ್ತಾರನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನ ಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ,-
1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಅಧಿನಿಯಮ, 2025 ಎಂದು ಕರೆಯತಕ್ಕದ್ದು. (2) ಇದು ಈ ಕೂಡಲೇ ಜಾರಿಗೆ ಬರತಕ್ಕದ್ದು.

2, 199ಬಿ ಮತ್ತು 199ಸಿ ಹೊಸ ಪ್ರಕರಣಗಳ ಸೇರ್ಪಡೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 (1993ರ ಕರ್ನಾಟಕ ಅಧಿನಿಯಮ 14)ರ 199ಎ ಪ್ರಕರಣದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

*199ಬಿ. ಸ್ವತ್ತುಗಳಿಗಾಗಿ ಹೊಸ ಖಾತಾ ಅಥವಾ ಪಿಐಡಿ-ಯನ್ನು ನೀಡುವುದು.- (1) ಈ ಅಧಿನಿಯಮದಲ್ಲಿ ಏನೇ ಒಳಗೊಂಡಿದ್ದರೂ, ಕಟ್ಟಡ ನಿರ್ಮಾಣದ ಉದ್ದೇಶಗಳಿಗಾಗಿ ಇರುವ ಕಟ್ಟಡ ನಿವೇಶನಗಳಿಗಾಗಿ ಹೊಸ ಖಾತಾ ಅಥವಾ ಪಿಐಡಿ-ಯನ್ನು ನೀಡಲು, ಗ್ರಾಮ ಪಂಚಾಯತಿ ಅಥವಾ ಸರ್ಕಾರವು ಅಧಿಸೂಚನೆಯ ಮೂಲಕ ಗೊತ್ತುಪಡಿಸಲಾದ ಪ್ರಾಧಿಕಾರಿಗಳು, ಅಧಿಕಾರವ್ಯಾಪ್ತಿಯ ಯೋಜನಾ ಪ್ರಾಧಿಕಾರದ ಮೂಲಕ ಲೇಔಟ್ ಪ್ಲಾನಿಗಾಗಿ ಪೂರ್ವಾನುಮೋದನೆಯನ್ನು ಪಡೆದುಕೊಳ್ಳತಕ್ಕದ್ದು,

(2) ಗ್ರಾಮ ಪಂಚಾಯತಿ ಪ್ರದೇಶಗಳು ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಅಧಿನಿಯಮ, 1961 (1963ರ ಕರ್ನಾಟಕ ಅಧಿನಿಯಮ 11)ರ ಉಪಬಂಧಗಳ ಮೇರೆಗೆ ಅಧಿಸೂಚಿಸಲಾದ ಸ್ಥಳೀಯ ಯೋಜನಾ ಪ್ರದೇಶದ ಅಧಿಕಾರವ್ಯಾಪ್ತಿಯಡಿ ಬರುವ ಸಂದರ್ಭದಲ್ಲಿ, ಅನುಮೋದಿತ ಲೇಔಟ್ ಪ್ಲಾನನ್ನು ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಅಧಿನಿಯಮ, 1961 (1963ರ ಕರ್ನಾಟಕ ಅಧಿನಿಯಮ 11)ರ 17ನೇ ಪ್ರಕರಣದಡಿ ಅಧಿಕಾರ ವ್ಯಾಪ್ತಿಯ ಯೋಜನಾ ಪ್ರಾಧಿಕಾರದಿಂದ ಪಡೆಯತಕ್ಕದ್ದು ಮತ್ತು ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಅಧಿನಿಯಮ, 1961 (1963ರ ಕರ್ನಾಟಕ ಅಧಿನಿಯಮ 11)ರ 17ನೇ ಪ್ರಕರಣ ಮತ್ತು 17ನೇ ಪುಕರಣದ 2(ಇ) ಉಪ-ಪಕರಣದ ಉಪಬಂಧಗಳನ್ನು ಪಾಲಿಸದೇ ಯಾವುದೇ ಹೊಸ ಪಿಐಡಿ ಅಥವಾ ಖಾತಾವನ್ನು ನೀಡತಕ್ಕದ್ದಲ್ಲ.

(3) ಗ್ರಾಮ ಪಂಚಾಯತಿ ಪ್ರದೇಶಗಳು ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಅಧಿನಿಯಮ, 1961 (1963ರ ಕರ್ನಾಟಕ ಅಧಿನಿಯಮ11)ರ ಉಪಬಂಧಗಳ ಮೇರೆಗೆ ರಚಿಸಲಾದ ಸ್ಥಳೀಯ ಯೋಜನಾ ಪ್ರದೇಶದ ಅಧಿಕಾರವ್ಯಾಪ್ತಿಯಡಿ ಒಳಗೊಳ್ಳದಿರುವ ಸಂದರ್ಭದಲ್ಲಿ, ಅನುಮೋದಿತ ಲೇಔಟ್ ಪ್ಲಾನನ್ನು ಪಟ್ಟಣ ಮತ್ತು ನಗರ ಯೋಜನೆ ನಿರ್ದೇಶಕ ಅಥವಾ ನಿರ್ದೇಶಕನು, ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನ ಅಧಿನಿಯಮ, 1961 (1963ರ ಕರ್ನಾಟಕ ಅಧಿನಿಯಮ 11)ರ 4 ಕೆ ಪ್ರಕರಣದ (2) ಉಪ-ಪುಕರಣದಡಿ ಅಧಿಕೃತಗೊಳಿಸಿದ ಸಹಾಯಕ ನಿರ್ದೇಶಕ, ಪಟ್ಟಣ ಮತ್ತು ನಗರ ಯೋಜನೆ ದರ್ಜೆಗೆ ಕಡಿಮೆಯಲ್ಲದ ಅಧಿಕಾರಿಯಿಂದ ಪಡೆದುಕೊಳ್ಳತಕ್ಕದ್ದು, ಮತ್ತು ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನ ಅಧಿನಿಯಮ, 1961 (1963ರ ಕರ್ನಾಟಕ ಅಧಿನಿಯಮ 11)ರ ಉಪಬಂಧಗಳನ್ನು ಪಾಲಿಸದೇ ಯಾವುದೇ ಹೊಸ ಪಿಐಡಿ ಅಥವಾ ಖಾತಾವನ್ನು ನೀಡತಕ್ಕದ್ದಲ್ಲ:

ಪರಂತು ಗ್ರಾಮ ಪಂಚಾಯಿತಿಯ ಯಾರೇ ಅಧಿಕಾರಿ ಅಥವಾ ಪ್ರಾಧಿಕಾರಿಯು ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಅಧಿನಿಯಮ, 1961 (19630 ಕರ್ನಾಟಕ ಅಧಿನಿಯಮ11)ರ ಸದರಿ ಉಪಬಂಧಗಳನ್ನು ಪಾಲಿಸಲು ವಿಫಲನಾದರೆ ಮತ್ತು ಕಾನೂನುಬದ್ಧವಾಗಿಲ್ಲದೆ ರಚಿತವಾದ ನಿವೇಶನಕ್ಕೆ ಹೊಸ ಪಿಐಡಿ ಅಥವಾ ಖಾತಾವನ್ನು ನೀಡಿದರೆ, ಸಂಬಂಧಪಟ್ಟ ಅಧಿಕಾರಿ ಅಥವಾ ಸಿಬ್ಬಂದಿ ಅಥವಾ ಪ್ರಾಧಿಕಾರಿಯು ನಿಯಮಿಸಬಹುದಾದಂಥ ದಂಡನೆ ಅಥವಾ ಶಿಕ್ಷೆಗೆ ಹೊಣೆಗಾರನಾಗಿರತಕ್ಕದ್ದು.

199ಸಿ. ಕಟ್ಟಡ ಮತ್ತು ಪರಿವರ್ತನೆಯಾಗದಿರುವ ಭೂಮಿ ಅಥವಾ ಪರಿವರ್ತನೆಯಾದ ಭೂಮಿ ಆದರೆ ಕಂದಾಯ ಭೂಮಿಯಲ್ಲಿನ ಅನುಮೋದಿತವಲ್ಲದ ಬಡಾವಣೆಯ ಮೇಲಿನ ತೆರಿಗೆಗಳು.- (1) ಗ್ರಾಮ ಪಂಚಾಯಿತಿಯು ಮಾದರಿ ಕಟ್ಟಡ ಉಪವಿಧಿಗಳ ಉಪಬಂಧಗಳನ್ನು ಉಲ್ಲಂಘಿಸಿ ನಿರ್ಮಿಸಲಾದ ಕಟ್ಟಡ ಅಥವಾ ಪರಿವರ್ತನೆಯಾಗದಿರುವ ಭೂಮಿ ಅಥವಾ ಪರಿವರ್ತನೆಯಾದ ಭೂಮಿ ಆದರೆ ಕಂದಾಯ ಭೂಮಿಯ ಮೇಲಿನ ಅನುಮೋದಿತವಲ್ಲದ ಲೇಔಟ್ ಅಥವಾ ಅಧಿಭೋಗ ಅಥವಾ ಪೂರ್ಣಗೊಳಿಸಿದ ಪ್ರಮಾಣ ಪತ್ರವನ್ನು ಪಡೆಯದ ಸ್ವಾಧೀನ ಪಡಿಸಿಕೊಂಡ ಕಟ್ಟಡವನ್ನು ಒಳಗೊಂಡು ಪ್ರತಿಯೊಂದು ಕಟ್ಟಡ, ಖಾಲಿ ಭೂಮಿ ಅಥವಾ
ಅವೆರಡರಿಂದಲೂ, ಈ ಉಪಬಂಧವನ್ನು ಸೇರಿಸಲಾದ ದಿನಾಂಕಕ್ಕೆ ಮೊದಲು ಸೃಜಿಸಲಾದ ಸ್ವತ್ತುಗಳಿಗೆ ಮಾತ್ರ, ಸರ್ಕಾರಿ ಭೂಮಿ, ಅರಣ್ಯ ಭೂಮಿ, ಸರ್ಕಾರದ ಒಡೆತನದಲ್ಲಿರುವ ಅಥವಾ ನಿಯಂತ್ರಣದಲ್ಲಿರುವ ಯಾವುದೇ ಸ್ಥಳೀಯ ನಿಕಾಯ, ಯಾವುದೇ ಶಾಸನಬದ್ಧ ನಿಕಾಯ ಅಥವಾ ಸಂಸ್ಥೆಗೆ ಸೇರಿದ ಭೂಮಿಯನ್ನು ಹೊರತುಪಡಿಸಿ ಸ್ವತ್ತು ತೆರಿಗೆಯನ್ನು ವಿಧಿಸಬಹುದು ಮತ್ತು ಸಂಗ್ರಹಿಸಬಹುದು. ಅಂಥ ಕಟ್ಟಡ ಅಥವಾ ನಿವೇಶನಕ್ಕಾಗಿ ವಿಧಿಸಿದ ಸ್ವತ್ತು ತೆರಿಗೆಯು ಮೊದಲ ವರ್ಷಕ್ಕಾಗಿ ಪಾವತಿಸಬೇಕಾದ ತೆರಿಗೆಯು ಎರಡು ಪಟ್ಟಾಗಿರತಕ್ಕದ್ದು ಮತ್ತು ತರುವಾಯ ವರ್ಷಗಳಿಗಾಗಿ ಸ್ವತ್ತು ತೆರಿಗೆಯನ್ನು ಮಾತ್ರ ವಿಧಿಸತಕ್ಕದ್ದು, ಅದನ್ನು ಪ್ರತ್ಯೇಕ ರಿಜಿಸ್ಟರಿನಲ್ಲಿ ನಿರ್ವಹಿಸತಕ್ಕದ್ದು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಅಧಿನಿಯಮ, 2025ರ ಪ್ರಾರಂಭದ ದಿನಾಂಕದ ತರುವಾಯ ರಿಜಿಸ್ಟರ್ ನಲ್ಲಿ ಯಾವುದೇ ಹೊಸ ಸತನ್ನು ನಮೂದಿಸತಕ್ಕದಲ:

ವರ೦ತು ಅಂಥ ಕಟ್ಟಡ ಅಥವಾ ಖಾಲಿ ಭೂಮಿಯಿಂದ ಈ ಉಪ-ಪ್ರಕರಣದಡಿ ವಿಧಿಸಲಾದ ಮತ್ತು ಸಂಗ್ರಹಿಸಲಾದ ಸ್ವತ್ತು ತೆರಿಗೆಯ, ಅಂಥ ಕಟ್ಟಡ ಅಥವಾ ಖಾಲಿ ಭೂಮಿಗೆ ಮಾಡಿದ ಉಲ್ಲಂಘನೆಯನ್ನು ಸಕ್ರಮಗೊಳಿಸುವ ಯಾವುದೇ ಹಕ್ಕು, ಅಥವಾ ಹಕ್ಕುಸ್ವಾಮ್ಯ, ಮಾಲೀಕತ್ವ ಅಥವಾ ಕಾನೂನುಬದ್ಧ ಸ್ಥಾನಮಾನವನ್ನು ಪದತ್ತಗೊಳಿಸುವುದಿಲ್ಲ ಅಂಥ ಕಟ್ಟಡ ಅಥವಾ ಖಾಲಿ ಭೂಮಿಯನ್ನು ಹೊಂದಿರುವ ವ್ಯಕ್ತಿಗಳನ್ನು ಕಾನೂನು ಉಲ್ಲಂಘನೆಗಾಗಿ ಈ ಅಧಿನಿಯಮ ಅಥವಾ ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಉಪಬಂಧಗಳಿಗೆ ಅನುಸಾರವಾಗಿ ಕಾನೂನುಬದ್ಧ ಕ್ರಮಕ್ಕೆ ಯಾವಾಗಲೂ ಹೊಣೆಗಾರರಾಗಿರತಕ್ಕದ್ದು.

(2) ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಅಥವಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯು (1)ನೇ ಉಪ-ಪುಕರಣದಲ್ಲಿ ನಿರ್ದಿಷ್ಟಪಡಿಸಿದಂತೆ ದಾಖಲೆಗಳನ್ನು ನಿರ್ವಹಿಸತಕ್ಕದ್ದು, ಅದು ಈ ಪ್ರಕರಣದಡಿ ತೆರಿಗೆಗೊಳಗಾದ ಕಾನೂನುಬದ್ಧ ಕಟ್ಟಡಗಳ, ಅಥವಾ ಖಾಲಿ ಭೂಮಿಗಳ ಹಾಗೂ ಕಾನೂನುಬದ್ಧವಲ್ಲದ ಕಟ್ಟಡಗಳ, ಅಥವಾ ಖಾಲಿ ಭೂಮಿಗಳ ವಿವರಗಳನ್ನು ಒಳಗೊಂಡಿರತಕ್ಕದ್ದು.

3.ತೊಂದರೆಗಳನ್ನು ನಿವಾರಿಸುವ ಅಧಿಕಾರ.- (1) ಈ ಅಧಿನಿಯಮದ ಉಪಬಂಧಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಯಾವುದೇ ತೊಂದರೆ ಉದ್ಭವಿಸಿದಲ್ಲಿ ರಾಜ್ಯ ಸರ್ಕಾರವು ಸರ್ಕಾರಿ ರಾಜಪತ್ರದಲ್ಲಿ ಪುಕಟಿಸಿದ ಆದೇಶದ ಮೂಲಕ, ತೊಂದರೆಗಳನ್ನು ನಿವಾರಿಸಲು ತನಗೆ ಅವಶ್ಯಕ ಅಥವಾ ಯುಕ್ತವೆಂದು ಕಂಡುಬರುವ ಮತ್ತು ಈ ಅಧಿನಿಯಮದ ಉದ್ದೇಶಗಳಿಗೆ ಅಸಂಗತವಾಗಿದಂಥ ಉಪಬಂಧಗಳನ್ನು ರಚಿಸಬಹುದು:

ಪರಂತು, ಅಂಥ ಯಾವ ಆದೇಶವನ್ನು, ಈ ಅಧಿನಿಯಮವು ಪ್ರಾರಂಭವಾದ ದಿನಾಂಕದಿಂದ ಎರಡು ವರ್ಷಗಳ ಅವಧಿಯು ಮುಕ್ತಾಯಗೊಂಡ ತರುವಾಯ ಮಾಡತಕ್ಕದ್ದಲ್ಲ.

(2) ಉಪಪಕರಣ (1)ರಡಿ ಮಾಡಲಾದ ಪ್ರತಿಯೊಂದು ಆದೇಶವನ್ನು ವಿಧಾನಮಂಡಲದ ಪ್ರತಿಯೊಂದು ಸದನದ ಮುಂದೆ ಸಾಧ್ಯವಾದಷ್ಟು ಬೇಗನೇ ಮಂಡಿಸತಕ್ಕದ್ದು ಎಂದಿದೆ.

BREAKING: ಮಂಡ್ಯದ ವಿಸಿ ನಾಲೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು

BIG NEWS : ‘ಗೃಹಲಕ್ಷ್ಮಿ’ ಯೋಜನೆ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ ರಾಜ್ಯ ಸರ್ಕಾರ

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಒಂದೇ ದಿನಕ್ಕೆ ಸೊರಬದ ಉಳವಿಯಿಂದ ಅಂಬಲಿಗೋಳ ತಲುಪಿದ ಕಾಡಾನೆ, ನಾಳೆ ಶೆಟ್ಟಿಹಳ್ಳಿ ಕಡೆಗೆ ಕಾರ್ಯಾಚರಣೆ

13/12/2025 10:18 PM3 Mins Read

ಮಂಗಳೂರು, ವಿಜಯಪುರದಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ: ಸಚಿವ ಎಂ.ಬಿ.ಪಾಟೀಲ್ ಘೋಷಣೆ

13/12/2025 8:45 PM2 Mins Read

ಶಾಸಕ ಇಕ್ಬಾಲ್ ಮಾತನ್ನು ಗಂಭೀರವಾಗಿ ಪರಿಗಣಿಸಬೇಡಿ: ಡಿಸಿಎಂ ಡಿ.ಕೆ ಶಿವಕುಮಾರ್

13/12/2025 8:37 PM2 Mins Read
Recent News

ಶಿವಮೊಗ್ಗ: ಒಂದೇ ದಿನಕ್ಕೆ ಸೊರಬದ ಉಳವಿಯಿಂದ ಅಂಬಲಿಗೋಳ ತಲುಪಿದ ಕಾಡಾನೆ, ನಾಳೆ ಶೆಟ್ಟಿಹಳ್ಳಿ ಕಡೆಗೆ ಕಾರ್ಯಾಚರಣೆ

13/12/2025 10:18 PM

Good News ; ಉದ್ಯೋಗಿಗಳಿಗೆ ಶುಭ ಸುದ್ದಿ ; ಖಾತೆಗೆ 52 ಸಾವಿರ ರೂ. ಜಮಾ.?

13/12/2025 10:00 PM

ಹಗಲಿನಲ್ಲಿ ‘ನಿದ್ದೆ’ ಮಾಡಿದ್ರೆ ಏನಾಗುತ್ತೆ.? ಒಂದು ಸಣ್ಣ ನಿದ್ರೆಯಿಂದ ಇಷ್ಟೆಲ್ಲಾ ಆಗಲು ಸಾಧ್ಯವೇ.?

13/12/2025 9:32 PM

BREAKING : ಹೈದರಾಬಾದ್’ನಲ್ಲಿ ‘ಮೆಸ್ಸಿ’ ಭೇಟಿಯಾದ ‘ರಾಹುಲ್ ಗಾಂಧಿ’, ಅರ್ಜೆಂಟೀನಾ ತಾರೆಯ ಭಾರತ ಪ್ರವಾಸದಲ್ಲಿ ಭಾಗಿ

13/12/2025 9:01 PM
State News
KARNATAKA

ಶಿವಮೊಗ್ಗ: ಒಂದೇ ದಿನಕ್ಕೆ ಸೊರಬದ ಉಳವಿಯಿಂದ ಅಂಬಲಿಗೋಳ ತಲುಪಿದ ಕಾಡಾನೆ, ನಾಳೆ ಶೆಟ್ಟಿಹಳ್ಳಿ ಕಡೆಗೆ ಕಾರ್ಯಾಚರಣೆ

By kannadanewsnow0913/12/2025 10:18 PM KARNATAKA 3 Mins Read

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ಹೋಬಳಿಯ ದೂಗೂರು ಅರಣ್ಯದಲ್ಲಿ ಕೆಲ ದಿನಗಳಿಂದ ಬೀಡು ಬಿಟ್ಟಿದ್ದಂತ ಜೋಡಿ ಕಾಡಾನೆಗಳನ್ನು, ಒಂದೇ…

ಮಂಗಳೂರು, ವಿಜಯಪುರದಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ: ಸಚಿವ ಎಂ.ಬಿ.ಪಾಟೀಲ್ ಘೋಷಣೆ

13/12/2025 8:45 PM

ಶಾಸಕ ಇಕ್ಬಾಲ್ ಮಾತನ್ನು ಗಂಭೀರವಾಗಿ ಪರಿಗಣಿಸಬೇಡಿ: ಡಿಸಿಎಂ ಡಿ.ಕೆ ಶಿವಕುಮಾರ್

13/12/2025 8:37 PM

‘ಹಿರಿಯ ಪತ್ರಕರ್ತ ಅ.ಚ.ಶಿವಣ್ಣ’ಗೆ KUWJ ಶ್ರದ್ಧಾಂಜಲಿ: ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಶ್ಲಾಘನೆ

13/12/2025 8:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.