Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪೋಷಕರೇ, ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಈ 5 ಮಂತ್ರಗಳನ್ನ ಕಲಿಸಿ! ಜೀವನದಲ್ಲಿ ಯಶಸ್ಸು ಖಚಿತ.!

13/08/2025 9:57 PM

ಬೆಂಗಳೂರು ಜನತೆ ಗಮನಕ್ಕೆ: ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಭಾಗಿಯಾಗುವವರಿಗೆ E-Pass ವ್ಯವಸ್ಥೆ

13/08/2025 9:37 PM

B.Sc, GNM ನರ್ಸಿಂಗ್ ವಿದ್ಯಾರ್ಥಿಗಳ ಗಮನಕ್ಕೆ: ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

13/08/2025 9:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG BREAKING: ‘ರಾಜ್ಯ ಸರ್ಕಾರ’ದಿಂದ ಸರ್ಕಾರಿ ನೌಕರರಿಗೆ ‘7ನೇ ವೇತನ ಆಯೋಗ’ದ ಶಿಫಾರಸ್ಸು ಜಾರಿಗೆ ಅಧಿಕೃತ ಆದೇಶ | Karnataka Government Employees
KARNATAKA

BIG BREAKING: ‘ರಾಜ್ಯ ಸರ್ಕಾರ’ದಿಂದ ಸರ್ಕಾರಿ ನೌಕರರಿಗೆ ‘7ನೇ ವೇತನ ಆಯೋಗ’ದ ಶಿಫಾರಸ್ಸು ಜಾರಿಗೆ ಅಧಿಕೃತ ಆದೇಶ | Karnataka Government Employees

By kannadanewsnow0922/07/2024 6:24 PM

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ಧರಾಮಯ್ಯ ಅವರು ದಿನಾಂಕ 01-07-2022ರಿಂದಲೇ ಜಾರಿಗೆ ಬರುವಂತೆ 7ನೇ ವೇತನ ಆಯೋಗದ ವರದಿಯಂತೆ ವೇತನ ಜಾರಿಗೊಳಿಸುವುದಾಗಿ ಘೋಷಣೆ ಮಾಡಿದ್ದರು. ಈ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಇಂದು ಈ ಸಂಬಂಧ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್ ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ: 19.11.2022ರ ಆದೇಶದಲ್ಲಿ ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗವು ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳು ಹಾಗೂ ಪಿಂಚಣಿ ಪರಿಷ್ಕರಣೆ ಕುರಿತಂತೆ ತನ್ನ ವರದಿಯ ಸಂಪುಟ-1 ನ್ನು ಸಲ್ಲಿಸಿರುತ್ತದೆ.

7ನೇ ರಾಜ್ಯ ವೇತನ ಆಯೋಗದ ಸಂಪುಟ- ರ ವರದಿಯಲ್ಲಿನ ಶಿಫಾರಸ್ಸುಗಳನ್ನು ಸರ್ಕಾರವು ಪರಿಗಣಿಸಿರುತ್ತದೆ. ಅದರಂತೆ, ಈ ಕೆಳಕಂಡ ಆದೇಶಗಳನ್ನು ಹೊರಡಿಸಿದೆ.

ಮುಖ್ಯ ವೇತನ ಶ್ರೇಣಿ ಮತ್ತು ಸ್ಥಾಯಿ ವೇತನ ಶ್ರೇಣಿಗಳ ಪರಿಷ್ಕರಣೆ ಬಗ್ಗೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ರಾಜ್ಯ ಸರ್ಕಾರವು ಅಂಗೀಕರಿಸಿರುತ್ತದೆ. ಅದರಂತೆ, 7ನೇ ರಾಜ್ಯ ವೇತನ ಆಯೋಗವು ಶಿಫಾರಸ್ಸು ಮಾಡಿರುವ ಮುಖ್ಯ ವೇತನ ಶ್ರೇಣಿ ಮತ್ತು ಪರಿಷ್ಕೃತ 25 ಸ್ಥಾಯಿ ವೇತನ ಶ್ರೇಣಿಗಳನ್ನು ದಿನಾಂಕ: 01.07.202280 ಜಾರಿಗೆ ಬರುವಂತೆ ಅನುಷ್ಠಾನಗೊಳಿಸಲು ಸರ್ಕಾರವು ಹರ್ಷಿಸುತ್ತದೆ ಎಂದಿದೆ.

ಹೀಗಿದೆ ಪರಿಷ್ಕೃತ ಮುಖ್ಯ ವೇತನ ಶ್ರೇಣಿ

ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ಈ ಕೆಳಕಂಡಂತೆ ವೇತನವನ್ನು ನಿಗದಿಪಡಿಸತಕ್ಕದ್ದು:- (ಅ) ದಿನಾಂಕ: 01.07.2022 ರಲ್ಲಿದ್ದಂತೆ ಮೂಲ ವೇತನ.
(ಆ) ದಿನಾಂಕ: 01.07.2022 ರಲ್ಲಿದ್ದಂತಹ ಬೆಲೆ ಸೂಚ್ಯಂಕ ಹಂತ 361.704 ಕ್ಕೆ ಸಂವಾದಿಯಾಗಿ ಲಭ್ಯವಿದ್ದ 31% ತುಟ್ಟಿ ಭತ್ಯೆ.
(ಇ) ದಿನಾಂಕ: 01.07.2022 ರಲ್ಲಿ ಲಭ್ಯವಿದ್ದ ಮೂಲ ವೇತನದ ಮೇಲೆ 27.50% ರಷ್ಟು ಫಿಟ್‌ಮೆಂಟ್‌ ಸೌಲಭ್ಯ.
(ಈ) ಮೇಲಿನ (ಅ), (ಆ), (ಇ) ಯನ್ನು ಒಟ್ಟುಗೂಡಿಸಿ ಲೆಕ್ಕ ಹಾಕಿದಾಗ ಬರುವ ಮೊತ್ತದ ನಂತರದ ಹಂತದಲ್ಲಿ ವೇತನವನ್ನು ಪರಿಷ್ಕೃತ ವೇತನ ಶ್ರೇಣಿಯಲ್ಲಿ
ನಿಗದಿಪಡಿಸುವುದು. ಪರಿಷ್ಕೃತ ವೇತನ ಶ್ರೇಣಿಗಳ ಅನುಷ್ಠಾನದ ಆರ್ಥಿಕ ಸೌಲಭ್ಯವು 1ನೇ ಆಗಸ್ಟ್ 2024ರಿಂದ ಪ್ರಾಪ್ತವಾಗತಕ್ಕದ್ದು.

4. ಪಿಂಚಣಿ ಮತ್ತು ಪಿಂಚಣಿ ಸೌಲಭ್ಯಗಳ ಪರಿಷ್ಕರಣೆ ಕುರಿತಂತೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ಅಂಗೀಕರಿಸಲು ಸರ್ಕಾರವು ಹರ್ಷಿಸುತ್ತದೆ. ಅದರಂತೆ, ಕನಿಷ್ಠ ಮತ್ತು ಗರಿಷ್ಠ ಪಿಂಚಣಿಯ ಪ್ರಸ್ತುತ ಮೊತ್ತವನ್ನು ಕ್ರಮವಾಗಿ ಮಾಸಿಕ ರೂ.8,500/- ಮತ್ತು ರೂ.75,300/- ರಿಂದ ರೂ.13,500/- ಮತ್ತು ರೂ.1,20,600/- ಗಳಿಗೆ ಮತ್ತು ಸಂವಾದಿ ಕುಟುಂಬ ಪಿಂಚಣಿಯ ಕನಿಷ್ಠ ಮತ್ತು ಗರಿಷ್ಠ ಮಿತಿಯನ್ನು ಅನುಕ್ರಮವಾಗಿ ಮಾಸಿಕ ರೂ.8,500/- ಮತ್ತು ರೂ.45,180/- ರಿಂದ ಮತ್ತು ರೂ.13,500/- ಮತ್ತು ರೂ.80,400/-ಗಳಿಗೆ ಪರಿಷ್ಕರಿಸತಕ್ಕದ್ದು. ಪರಿಷ್ಕೃತ ಪಿಂಚಣಿ ಮತ್ತು ಕುಟುಂಬ ಪಿಂಚಣಿಗಳು ದಿನಾಂಕ: 01.07.2022 ರಿಂದ ಜಾರಿಗೆ ಬರುತ್ತವೆ. ಆದರೆ, ಪಿಂಚಣಿ ಪರಿಷ್ಕರಣೆಯ ಆರ್ಥಿಕ ಲಾಭವು ದಿನಾಂಕ: 01.08.2024 ರಿಂದ ಪ್ರಾಪ್ತವಾಗತಕ್ಕದ್ದು. ಮರಣ ಮತ್ತು ನಿವೃತ್ತಿ ಉಪದಾನದ ಪ್ರಸ್ತುತ ಗರಿಷ್ಠ ಮಿತಿ ರೂ.20 ಲಕ್ಷಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

5. ದಿನಾಂಕ: 01.07.2022 ಕ್ಕೆ ಪೂರ್ವದಲ್ಲಿ ನಿವೃತ್ತರಾದ ಅಥವಾ ಸೇವೆಯಲ್ಲಿದ್ದಾಗ ಮೃತರಾದ ಪಿಂಚಣಿ ಮತ್ತು ಕುಟುಂಬ ಪಿಂಚಣಿಯನ್ನು ಈ ಕೆಳಗಿನಂತೆ
ಸರ್ಕಾರಿ ನೌಕರರ ನಿಗದಿಪಡಿಸತಕ್ಕದ್ದು:-

ಅ) ದಿನಾಂಕ: 01.07.2022 ರಂದು ಇದ್ದ ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನ;

ಆ) ದಿನಾಂಕ: 01.07.2022 ರಂದು ಲಭ್ಯವಿದ್ದ 31% ರಷ್ಟು ತುಟ್ಟಿ ಭತ್ಯೆ.
ಇ) ದಿನಾಂಕ: 01.07.2022 ರಂದು ಇದ್ದ ನಿವೃತ್ತಿ ವೇತನ/ಕುಟುಂಬ ವೇತನದ ಮೇಲೆ 27.50% ರಷ್ಟು ಫಿಟ್‌ಮೆಂಟ್ ಸೌಲಭ್ಯ.

ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನದ ಈ ಮೇಲಿನ (ಅ) + (ಆ) + (ಇ) ರ ಒಟ್ಟಾರೆ ಮೊತ್ತವು ಮಾಹೆಯಾನ ರೂ.13,500/- ಗಳ ಕನಿಷ್ಠ ಪಿಂಚಣಿಗೆ ಕಡಿಮೆ ಇಲ್ಲದಂತೆ ಮತ್ತು ನಿವೃತ್ತಿ ವೇತನವು ಗರಿಷ್ಠ ಮಾಹೆಯಾನ ರೂ.1,20,600/- ರ ಮಿತಿಗೆ ಹಾಗೂ ಕುಟುಂಬ ನಿವೃತ್ತಿ ವೇತನದ ಗರಿಷ್ಠ ಮೊತ್ತವು ಮಾಹೆಯಾನ ರೂ.80,400/- ಮಿತಿಗೆ ಒಳಪಟ್ಟಿರುತ್ತದೆ. ಈ ಪರಿಷ್ಕೃತ ಪಿಂಚಣಿಯ ಆರ್ಥಿಕ ಲಾಭವು ದಿನಾಂಕ: 01.08.20224 ರಿಂದ ಪ್ರಾಪ್ತವಾಗತಕ್ಕದ್ದು.

6. ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಸಂಬಂಧಿತ ಭತ್ಯೆಗಳಾದ ಮನೆ ಬಾಡಿಗೆ ಭತ್ಯೆ, ನಗರ ಪರಿಹಾರ ಭತ್ಯೆ, ವೈದ್ಯಕೀಯ ಭತ್ಯೆಗಳ ಪರಿಷ್ಕರಣೆಯ ಶಿಫಾರಸ್ಸು ಮತ್ತು ಪರಿಷ್ಕೃತ ವೇತನ ಹಾಗೂ ಪರಿಷ್ಕೃತ ಪಿಂಚಣಿಯಲ್ಲಿ ತುಟ್ಟಿ ಭತ್ಯೆ ಲೆಕ್ಕಾಚಾರ ಮಾಡಲು ಶಿಫಾರಸ್ಸು ಮಾಡಲಾದ ಪರಿಷ್ಕೃತ ಸೂತ್ರಕ್ಕೆ ಸಂಬಂಧಿಸಿದ ವೇತನ ಆಯೋಗದ ಶಿಫಾರಸ್ಸುಗಳನ್ನು ಅಂಗೀಕರಿಸಲಾಗಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ಪ್ರಭಾರ ಭತ್ಯೆ ಮಂಜೂರಾತಿಯ ಪ್ರಸ್ತುತ ದರಗಳು ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ಯಾವುದೇ ಬದಲಾವಣೆ ಇಲ್ಲದೇ ಮುಂದುವರೆಯುತ್ತದೆ.

7. ನೌಕರರ ಸಾಮೂಹಿಕ ವಿಮಾ ಯೋಜನೆಗೆ ನೌಕರರ ವಂತಿಗೆ ಹೆಚ್ಚಳದ ಪರಿಷ್ಕರಣೆಯ ಶಿಫಾರಸ್ಸುಗಳನ್ನು ಅಂಗೀಕರಿಸಲಾಗಿದೆ.

8. ಅನ್ವಯಿಸುವ ಬದಲಾವಣೆಯೊಂದಿಗೆ ಈ ಮೇಲಿನ ಎಲ್ಲಾ ಸೌಲಭ್ಯಗಳನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳ ನೌಕರರು ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೂ ಸಹ ವಿಸ್ತರಿಸಲು ಸರ್ಕಾರವು ಹರ್ಷಿಸುತ್ತದೆ.

9. ಮುಂದುವರೆದು, ಈ ಮೇಲಿನಂತೆ ವೇತನ ಶ್ರೇಣಿಗಳ ಪರಿಷ್ಕರಣೆಯ ಕಾರಣದಿಂದಾಗಿ ಉಂಟಾಗುವ ವೇತನ ಮತ್ತು ಭತ್ಯೆಗಳ ಹೆಚ್ಚಳವನ್ನು ದಿನಾಂಕ: 01.08.2024ರಿಂದ ನಗದಾಗಿ ಪಾವತಿ ಮಾಡತಕ್ಕದ್ದು. ದಿನಾಂಕ: 01.07.2022 ರಿಂದ 31.07.2024ರ ಅವಧಿಯಲ್ಲಿ ಸೇವೆಯಿಂದ ನಿವೃತ್ತರಾದ ಅಥವಾ ಸೇವೆಯಲ್ಲಿರುವಾಗಲೇ ಮರಣ ಹೊಂದಿದ ಅಥವಾ ಸೇವೆಯಲ್ಲಿರುವುದು ಸಮಾಪ್ತಿಗೊಂಡ ಸರ್ಕಾರಿ ನೌಕರರ ಪ್ರಕರಣಗಳಲ್ಲಿ, ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ನಿಗದಿಪಡಿಸಲಾದ ಕಾಲ್ಪನಿಕ ವೇತನವನ್ನು ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಲೆಕ್ಕ ಹಾಕುವ ಉದ್ದೇಶಗಳಿಗಾಗಿ ಪರಿಗಣಿಸತಕ್ಕದ್ದು. ಆದರೆ, ಸದರಿ ಕಾಲ್ಪನಿಕ ಪುನರ್ ನಿಗದಿಯ ಆರ್ಥಿಕ ಲಾಭವು ನಿವೃತ್ತಿ ಹೊಂದಿದ ಸರ್ಕಾರಿ ನೌಕರನಿಗೆ ಅಥವಾ ಮರಣ ಹೊಂದಿದ ಸರ್ಕಾರಿ ನೌಕರನ ಫಲಾನುಭವಿಗೆ ಸಂದರ್ಭಾನುಸಾರ ದಿನಾಂಕ: 01.08.2024 ರಿಂದ ಪ್ರಾಪ್ತವಾಗತಕ್ಕದ್ದು.

10. ಪರಿಷ್ಕೃತ ವೇತನ ಶ್ರೇಣಿಗಳ ಹಂಚಿಕೆ ಮತ್ತು ಅದರಲ್ಲಿ ವೇತನ ಹಾಗೂ ನಿವೃತ್ತಿ ವೇತನವನ್ನು ಕ್ರಮಬದ್ಧಗೊಳಿಸುವ ಕುರಿತು, ಸರ್ಕಾರದಿಂದ ವಿವರವಾದ ನಿಯಮ ಮತ್ತು ಆದೇಶಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

ಶಿವಮೊಗ್ಗದಲ್ಲಿ ಜಿಲ್ಲಾ ತೋಟಗಾರಿಕೆ ಇಲಾಖೆ ಉಪನಿರ್ದೇಶಕರ ಮನೆ ಮೇಲೆ ಲೋಕಾಯುಕ್ತ ದಾಳಿ, ಕಂತೆ ಕಂತೆ ಹಣ ಪತ್ತೆ

ಬೆಂಗಳೂರಲ್ಲಿ ಪ್ರಾಯೋಗಿಕವಾಗಿ ‘250 ಮಾಂಟೆಸ್ಸರಿ’ಗಳಿಗೆ ಚಾಲನೆ: ರಾಜ್ಯಾದ್ಯಂತ ‘5,000 LKG, UKG ಶಾಲೆ’ ಆರಂಭ

Share. Facebook Twitter LinkedIn WhatsApp Email

Related Posts

ಬೆಂಗಳೂರು ಜನತೆ ಗಮನಕ್ಕೆ: ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಭಾಗಿಯಾಗುವವರಿಗೆ E-Pass ವ್ಯವಸ್ಥೆ

13/08/2025 9:37 PM1 Min Read

B.Sc, GNM ನರ್ಸಿಂಗ್ ವಿದ್ಯಾರ್ಥಿಗಳ ಗಮನಕ್ಕೆ: ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

13/08/2025 9:33 PM1 Min Read

CRIME NEWS: ಗದಗದಲ್ಲಿ ಬಿರಿಯಾನಿ ತಿನ್ನಲು ಹೋಟೆಲ್ ಗೆ ತೆರಳಿದಾತನನ್ನು ಭೀಕರವಾಗಿ ಕೊಲೆ

13/08/2025 9:00 PM1 Min Read
Recent News

ಪೋಷಕರೇ, ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಈ 5 ಮಂತ್ರಗಳನ್ನ ಕಲಿಸಿ! ಜೀವನದಲ್ಲಿ ಯಶಸ್ಸು ಖಚಿತ.!

13/08/2025 9:57 PM

ಬೆಂಗಳೂರು ಜನತೆ ಗಮನಕ್ಕೆ: ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಭಾಗಿಯಾಗುವವರಿಗೆ E-Pass ವ್ಯವಸ್ಥೆ

13/08/2025 9:37 PM

B.Sc, GNM ನರ್ಸಿಂಗ್ ವಿದ್ಯಾರ್ಥಿಗಳ ಗಮನಕ್ಕೆ: ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

13/08/2025 9:33 PM

BREAKING : ರಾಹುಲ್ ಗಾಂಧಿ ‘ಜೀವ ಬೆದರಿಕೆ’ ಕೇಸ್’ಗೆ ಬಿಗ್ ಟ್ವಿಸ್ಟ್ ; “ನನ್ನ ಒಪ್ಪಿಗೆಯಿಲ್ಲದೇ ವಕೀಲರು ಅರ್ಜಿ ಸಲ್ಲಿಸಿದ್ದಾರೆ” ಎಂದ ರಾಗಾ

13/08/2025 9:29 PM
State News
KARNATAKA

ಬೆಂಗಳೂರು ಜನತೆ ಗಮನಕ್ಕೆ: ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಭಾಗಿಯಾಗುವವರಿಗೆ E-Pass ವ್ಯವಸ್ಥೆ

By kannadanewsnow0913/08/2025 9:37 PM KARNATAKA 1 Min Read

ಬೆಂಗಳೂರು: ಬೆಂಗಳೂರು ನಗರದಲ್ಲಿ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಆಗಸ್ಟ್ 15 ರಂದು ನಡೆಯಲಿರುವ ರಾಜ್ಯ ಮಟ್ಟದ…

B.Sc, GNM ನರ್ಸಿಂಗ್ ವಿದ್ಯಾರ್ಥಿಗಳ ಗಮನಕ್ಕೆ: ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

13/08/2025 9:33 PM

CRIME NEWS: ಗದಗದಲ್ಲಿ ಬಿರಿಯಾನಿ ತಿನ್ನಲು ಹೋಟೆಲ್ ಗೆ ತೆರಳಿದಾತನನ್ನು ಭೀಕರವಾಗಿ ಕೊಲೆ

13/08/2025 9:00 PM

ಹೊಸ ಮೈಲುಗಲ್ಲು ದಾಖಲಿಸಿದ ನಮ್ಮ ಮೆಟ್ರೋ: ಹಳದಿ ಮಾರ್ಗದಲ್ಲಿ ಒಂದೇ ದಿನ 10.48 ಲಕ್ಷ ಮಂದಿ ಪ್ರಯಾಣ

13/08/2025 8:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.