Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಂಪನಿಯಿಂದ ಕಾರಣವಿಲ್ಲದೆ ಕೆಲಸದಿಂದ ತೆಗೆದುಹಾಕಿದರೆ ಚಿಂತಿಸಬೇಡಿ : ನಿಮ್ಮ ನೆರವಿಗೆ ಬರಲಿದೆ ಸರ್ಕಾರದ ಈ ಆ್ಯಪ್!

GOOD NEWS: ದೇಶದ ಉದ್ಯೋಗಿಗಳಿಗೆ ಭರ್ಜರಿ ಸಿಹಿ ಸುದ್ದಿ: ‘ಪಿಎಫ್‌’ಗೆ ಶೇ.8.25 ಬಡ್ಡಿದರಕ್ಕೆ ಕೇಂದ್ರ ಸರ್ಕಾರದ ಅನುಮೋದನೆ

ಡಿಸ್ನಿ ಪ್ಲಸ್ ಸ್ಥಗಿತ? ವ್ಯಾಪಕ ಸೇವಾ ವ್ಯತ್ಯಯದ ನಡುವೆ ಸಾವಿರಾರು ಬಳಕೆದಾರರಿಂದ ಎರರ್ ಕೋಡ್‌ಗಳ ವರದಿ | Disney plus down

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ‘ಗ್ರೂಪ್-ಸಿ, ಬಿ ಹುದ್ದೆ’ಗಳ ನೇಮಕಾತಿಗೆ ‘3 ವರ್ಷ ವಯೋಮಿತಿ’ ಸಡಿಲಿಸಿ ಆದೇಶ
KARNATAKA

ರಾಜ್ಯ ಸರ್ಕಾರದಿಂದ ‘ಗ್ರೂಪ್-ಸಿ, ಬಿ ಹುದ್ದೆ’ಗಳ ನೇಮಕಾತಿಗೆ ‘3 ವರ್ಷ ವಯೋಮಿತಿ’ ಸಡಿಲಿಸಿ ಆದೇಶ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಉದ್ಯೋಗ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಲಾಗಿದೆ. ರಾಜ್ಯ ಸಿವಿಲ್ ಸೇವೆಗಳಿಗೆ ಸಂಬಂಧಿಸಿದಂತ ಗ್ರೂಪ್-ಬಿ ಹಾಗೂ ಸಿ ವೃಂದದ ನೇಮಕಾತಿಯ ವೇಳೆಯಲ್ಲಿ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ 3 ವರ್ಷ ವಯೋಮಿತಿಯನ್ನು ಸಡಿಲಿಸಿ ಆದೇಶಿಸಿದೆ.

ಇಂದು ರಾಜ್ಯ ಸರ್ಕಾರದಿಂದ ಈ ಬಗ್ಗೆ ಆದೇಶ ಹೊರಡಿಸಿದ್ದು, ಕೋವಿಡ್-19 ಸಮಯದಲ್ಲಿ ನೇಮಕಾತಿಗಳು ಸರಿಯಾಗಿ ನಡೆದಿರಲಿಲ್ಲ. ಹಲವು ನೇಮಕಾತಿಗಳನ್ನು ಮುಂದೂಡುತ್ತಾ ಬರಲಾಗಿತ್ತು. ಹೀಗಾಗಿ ಅನೇಕ ಉದ್ಯೋಗ ಆಕಾಂಕ್ಷಿಗಳು ವಯೋಮಿತಿಯನ್ನು ಮೀರುವಂತೆ ಆಗಿತ್ತು. ಅವರೆಲ್ಲರೂ ವಯೋಮಿತಿ ಸಡಿಲಿಕೆಗೆ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಮನವಿಯ ಹಿನ್ನಲೆಯಲ್ಲಿ 3 ವರ್ಷ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಮಾಡಿರುವುದಾಗಿ ತಿಳಿಸಿದೆ.

ರಾಜ್ಯ ಸರ್ಕಾರ ಹೊರಡಿಸಿದ ಆದೇಶದಲ್ಲಿ ಏನಿದೆ.?

ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಮತ್ತು ಗ್ರೂಪ್-ಸಿ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರ್ಕಾರಕ್ಕೆ ಮನವಿ ಸಲ್ಲಿಸಿ, ಕರ್ನಾಟಕ ರಾಜ್ಯದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ಮತ್ತು ಇತರೆ ಕಾರಣದಿಂದ ಮತ್ತು ಪದೇ ಪದೇ ಲಾಕ್ ಡೌನ್ ಆಗಿದ್ದರಿಂದ ವಿವಿಧ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ನೇಮಕಾತಿಯನ್ನು ಸರ್ಕಾರವು ಮುಂದೂಡುತ್ತಾ ಬಂದಿರುತ್ತದೆ. ಇದರಿಂದ ಅಭ್ಯರ್ಥಿಗಳ ವಯೋಮಿತಿ ಹೆಚ್ಚಾಗಿದ್ದು ಹುದ್ದೆಗಳ ನೇಮಕಾತಿಯಿಂದ ವಂಚಿತರಾಗಿ ನಿರುದ್ಯೋಗಿಗಳಾಗಿರುವುದರಿಂದ ರಾಜ್ಯ ಸರ್ಕಾರದ ನೇರ ನೇಮಕಾತಿಯಲ್ಲಿ ಪ್ರಸ್ತುತ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಸಡಿಲಿಸುವಂತೆ ಕೋರಿರುತ್ತಾರೆ ಎಂದು ತಿಳಿಸಿದೆ.

ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್-ಸಿ ಮತ್ತು ಗ್ರೂಪ್ ಬಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಪವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ (One time measure) ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿಲಾಗಿದೆ ಎಂಬುದಾಗಿ ಆದೇಶದಲ್ಲಿ ತಿಳಿಸಿದೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

BREAKING: ‘ಅನುದಾನಿತ ಶಾಲಾ ಶಿಕ್ಷಕ’ರಿಗೆ ಗುಡ್ ನ್ಯೂಸ್: ‘7ನೇ ವೇತನ’ ಜಾರಿಗೊಳಿಸಿ ‘ರಾಜ್ಯ ಸರ್ಕಾರ’ ಆದೇಶ

BIG UPDATE : ಯಜಮಾನಿಯರಿಗೆ ಗುಡ್ ನ್ಯೂಸ್ : ಕೊನೆಗೂ 1 ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ!

Share. Facebook Twitter LinkedIn WhatsApp Email

Related Posts

ಕಂಪನಿಯಿಂದ ಕಾರಣವಿಲ್ಲದೆ ಕೆಲಸದಿಂದ ತೆಗೆದುಹಾಕಿದರೆ ಚಿಂತಿಸಬೇಡಿ : ನಿಮ್ಮ ನೆರವಿಗೆ ಬರಲಿದೆ ಸರ್ಕಾರದ ಈ ಆ್ಯಪ್!

2 Mins Read

SHOCKING : ರಾಜ್ಯದಲ್ಲಿ `ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಕಾಲೇಜಿನ ಆವರಣದಲ್ಲೇ ಕುಸಿದುಬಿದ್ದು ವಿದ್ಯಾರ್ಥಿ ಸಾವು.!

1 Min Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’14 IAS ಅಧಿಕಾರಿ’ಗಳನ್ನು ವರ್ಗಾವಣೆ | IAS Officer Transfer

2 Mins Read
Recent News

ಕಂಪನಿಯಿಂದ ಕಾರಣವಿಲ್ಲದೆ ಕೆಲಸದಿಂದ ತೆಗೆದುಹಾಕಿದರೆ ಚಿಂತಿಸಬೇಡಿ : ನಿಮ್ಮ ನೆರವಿಗೆ ಬರಲಿದೆ ಸರ್ಕಾರದ ಈ ಆ್ಯಪ್!

GOOD NEWS: ದೇಶದ ಉದ್ಯೋಗಿಗಳಿಗೆ ಭರ್ಜರಿ ಸಿಹಿ ಸುದ್ದಿ: ‘ಪಿಎಫ್‌’ಗೆ ಶೇ.8.25 ಬಡ್ಡಿದರಕ್ಕೆ ಕೇಂದ್ರ ಸರ್ಕಾರದ ಅನುಮೋದನೆ

ಡಿಸ್ನಿ ಪ್ಲಸ್ ಸ್ಥಗಿತ? ವ್ಯಾಪಕ ಸೇವಾ ವ್ಯತ್ಯಯದ ನಡುವೆ ಸಾವಿರಾರು ಬಳಕೆದಾರರಿಂದ ಎರರ್ ಕೋಡ್‌ಗಳ ವರದಿ | Disney plus down

ವಿಚ್ಛೇದನವಾದ ಪತಿ ಮೃತಪಟ್ಟರೂ ಮಾಜಿ ಪತ್ನಿಗೆ ಜೀವನಾಂಶ ಸಿಗುತ್ತಾ? ಹೈಕೋರ್ಟ್ ಮಹತ್ವದ ತೀರ್ಪು!

State News
KARNATAKA

ಕಂಪನಿಯಿಂದ ಕಾರಣವಿಲ್ಲದೆ ಕೆಲಸದಿಂದ ತೆಗೆದುಹಾಕಿದರೆ ಚಿಂತಿಸಬೇಡಿ : ನಿಮ್ಮ ನೆರವಿಗೆ ಬರಲಿದೆ ಸರ್ಕಾರದ ಈ ಆ್ಯಪ್!

By kannadanewsnow57 KARNATAKA 2 Mins Read

ನವದೆಹಲಿ: ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಲು ಬಯಸುವುದೇ ಅವರು ಭವಿಷ್ಯದಲ್ಲಿ ಒಂದು ಒಳ್ಳೆಯ ಕೆಲಸಕ್ಕೆ ಸೇರಿಕೊಳ್ಳಲಿ…

SHOCKING : ರಾಜ್ಯದಲ್ಲಿ `ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಕಾಲೇಜಿನ ಆವರಣದಲ್ಲೇ ಕುಸಿದುಬಿದ್ದು ವಿದ್ಯಾರ್ಥಿ ಸಾವು.!

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’14 IAS ಅಧಿಕಾರಿ’ಗಳನ್ನು ವರ್ಗಾವಣೆ | IAS Officer Transfer

ಹೊಸ `ರೇಷನ್ ಕಾರ್ಡ್’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ದೇಶದಲ್ಲಿ ಇನ್ನೂ 3 ಕೋಟಿ `ಪಡಿತರ ಚೀಟಿ’ ವಿತರಣೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.