ಬೆಂಗಳೂರು: ನಗರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ( Voter List ) ಸಂಬಂಧ ನಡೆದಂತ ಅಕ್ರಮದಲ್ಲಿ, ಚಿಲುಮೆ ಸಂಸ್ಥೆಯ ಪಾತ್ರ ಎದ್ದು ತೋರಿತ್ತು. ಈ ಪ್ರಕರಣದಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿತ್ತು. ಆದ್ರೇ ಇದೀಗ ಅವರ ಅಮಾನತು ಆದೇಶವನ್ನು ಹಿಂಪಡೆದಿದ್ದು, ಇಬ್ಬರಿಗೂ ಸ್ಥಳ ನಿಯೋಜನೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಚಿಲುಮೆ ಡೇಟಾ ಅಕ್ರಮ ಪ್ರಕರಣ ಸಂಬಂಧ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದಂತ ಐಎಎಸ್ ಅಧಿಕಾರಿ ಶ್ರೀನಿವಾಸ್ ಮತ್ತು ರಂಗಪ್ಪ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿತ್ತು. ರಾಜ್ಯ ಸರ್ಕಾರದ ಈ ಕ್ರಮವನ್ನು ಇಬ್ಬರೂ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದಂತ ಕೋರ್ಟ್, ಪ್ರಕರಣದಲ್ಲಿ ಜಾಮೀನು ನೀಡಿತ್ತು.

ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಐಎಎಸ್ ಅಧಿಕಾರಿ ( IAS Officer ) ಶ್ರೀನಿವಾಸ್ ಹಾಗೂ ರಂಗಪ್ಪ ಅವರ ಅಮಾನತು ಆದೇಶವನ್ನು ಹಿಂದಕ್ಕೆ ಪಡೆದು, ಇಬ್ಬರನ್ನು ಹೊಸ ಸ್ಥಾನಗಳಿಗೆ ನಿಯೋಜನೆ ಮಾಡಿದೆ.

ಅಭಿವೃದ್ಧಿ ಏನು ಅನ್ನುವುದನ್ನು ಬಿಜೆಪಿ ತೋರಿಸುತ್ತಿದೆ – ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ

Karnataka Covid19 Update: ರಾಜ್ಯದಲ್ಲಿ ಇಂದು 16 ಮಂದಿಗೆ ಕೋವಿಡ್ ದೃಢ, ಸಕ್ರೀಯ ಸೋಂಕಿತರ ಸಂಖ್ಯೆ 1,241ಕ್ಕೆ ಏರಿಕೆ

ಅಭಿವೃದ್ಧಿ ಏನು ಅನ್ನುವುದನ್ನು ಬಿಜೆಪಿ ತೋರಿಸುತ್ತಿದೆ – ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ

Share.
Exit mobile version