ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಭೂಮಿ ಒತ್ತುವರಿ ತಡೆಗೆ ಸರ್ಕಾರದಿಂದ ಮಹತ್ವದ ಕ್ರಮವನ್ನು ಕೈಗೊಳ್ಳಲಾಗಿದೆ. ಒಂದು ಇಂಚು ಸರ್ಕಾರಿ ಭೂಮಿಯನ್ನು ಒತ್ತುವರಿಯಾಗದಂತೆ ತಡೆಯೋದಕ್ಕೆ ಬೀಟ್ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ.
ಈ ಕುರಿತಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ಹಂಚಿಕೊಂಡಿದ್ದು ರಾಜ್ಯಾಧ್ಯಂತ ಸರ್ಕಾರಿ ಜಮೀನುಗಳ ಸ್ಥಳ, ವಿಸ್ತೀರ್ಣ ಮತ್ತು ನಕ್ಷೆಯನ್ನು ಮೊಬೈಲ್ ಆಪ್ ನಲ್ಲಿ ದಾಖಲಿಸುವ ಕಾರ್ಯ ಮಾರ್ಚ್ ತಿಂಗಳ ಅಂತ್ಯಕ್ಕೆ ಪೂರ್ಣವಾಗಲಿದೆ ಎಂದಿದ್ದಾರೆ.
ಈ ಪ್ರಕ್ರಿಯೆ ಪೂರ್ಣವಾದರೇ ಪ್ರತಿ ಮೂರು ತಿಂಗಳಿಗೊಮ್ಮ ವಾಸ್ತವ ಸ್ಥಿತಿಗತಿ ಅರಿಯಲು ನಿರಂತರ ಬೀಟ್ ವ್ಯವಸ್ಥೆ ಇರಲಿದ್ದು, ಒಂದಿಂಚೂ ಸರ್ಕಾರಿ ಭೂಮಿ ಕಬಳಿಕೆಯಾಗದಂತೆ ತಡೆಯುವ ಪರಿಣಾಮಕಾರಿ ವ್ಯವಸ್ಥೆಯನ್ನು ರಾಜ್ಯದಲ್ಲಿ ಜಾರಿಗೆ ತರಲಾಗುತ್ತಿದೆ ಎಂಬುದಾಗಿ ತಿಳಿಸಿದ್ದಾರೆ.
ಒಟ್ಟಾರೆಯಾಗಿ ರಾಜ್ಯಾದ್ಯಂತ ಸರ್ಕಾರಿ ಜಮೀನುಗಳ ಒತ್ತುವರಿ, ಕಬಳಿಕೆ ತಡೆಗೆ ‘ಬೀಟ್’ ವ್ಯವಸ್ಥೆ ಜಾರಿ ಮಾಡುತ್ತಿರುವ ಸರ್ಕಾರ, ಎಲ್ಲ ಸರ್ಕಾರಿ ಭೂಮಿಯ ಮಾಹಿತಿ (ಡೇಟಾ ಬೇಸ್) ಸಿದ್ಧಪಡಿಸಿದೆ. ಈ ಜಮೀನುಗಳ ಸ್ಥಳ, ವಿಸ್ತೀರ್ಣ, ಆಕಾರ್ ಬಂದ್ ಸಿದ್ಧಪಡಿಸಲು ಮೊಬೈಲ್ ಆ್ಯಪ್ ಅಭಿವೃದ್ಧಿ ಪಡಿಸಲಾಗಿದೆ. ಈ ಆ್ಯಪ್ ಬಳಸಿ ಸರ್ಕಾರಿ ಜಾಗಗಳ ನಕ್ಷೆ ಸಿದ್ಧಪಡಿಸಿ ಆನ್ಲೈನ್ನಲ್ಲಿ ಅಪ್ಲೋಡ್ ಮಾಡಲು ಕಂದಾಯ ಅಧಿಕಾರಿಗಳಿಗೆ ಮಾರ್ಚ್ ತಿಂಗಳಾಂತ್ಯದವರಗೆ ಗಡುವು ನೀಡಲಾಗಿದೆ.
ಕಲಬುರ್ಗಿಯಲ್ಲಿ ‘ಶಾಲಾ ವಾಹನ’ ಹರಿದು ಮಗು ದುರ್ಮರಣ: ಉದ್ರಿಕ್ತರಿಂದ ‘ಬಸ್ ಜಖಂ’
‘ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ಫೆ.19, 20ರಂದು ರಾಜ್ಯಮಟ್ಟದ ‘ಬೃಹತ್ ಉದ್ಯೋಗ ಮೇಳ’ ಆಯೋಜನೆ