Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಾಕ್-ಅಫ್ಘಾನ್ ನಡುವೆ ಭೀಕರ ಯುದ್ಧ ; ಹೋರಾಟಕ್ಕೆ 132 ವರ್ಷಗಳು, ವಿವಾದ ಹೇಗೆ ಪ್ರಾರಂಭವಾಯ್ತು ಗೊತ್ತಾ?

27/02/2026 7:34 PM

6,50,000 ಉದ್ಯೋಗಿಗಳಿಗೆ 2023-2024 ರಲ್ಲಿ AI ಕೌಶಲ್ಯಗಳ ಕುರಿತು ತರಬೇತಿ: ಡಿಸಿಎಂ ಡಿ.ಕೆ ಶಿವಕುಮಾರ್

27/02/2026 7:27 PM

ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

27/02/2026 7:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ ಸೌಲಭ್ಯ ಪರಿಚಯಿಸಲು ಕ್ರಮ: ಸಚಿವ ದಿನೇಶ್‌ ಗುಂಡೂರಾವ್‌
KARNATAKA

ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ ಸೌಲಭ್ಯ ಪರಿಚಯಿಸಲು ಕ್ರಮ: ಸಚಿವ ದಿನೇಶ್‌ ಗುಂಡೂರಾವ್‌

By kannadanewsnow0918/05/2025 5:28 PM

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ “ಕೀಮೋಥೆರಪಿ ಸೌಲಭ್ಯವನ್ನು ಪರಿಚಯಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿದ್ದು, ಮುಖ್ಯಮಂತ್ರಿಗಳು ಮೈಸೂರಿನಲ್ಲಿ ಶೀಘ್ರದಲ್ಲೇ ಚಾಲನೆ ನೀಡಲಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಘೋಷಿಸಿದರು.

ಸ್ಪರ್ಶ್‌ ಆಸ್ಪತ್ರೆ ಸಮೂಹ ಸಂಸ್ಥೆಯು ಬೆಂಗಳೂರಿನ ಹೆಣ್ಣೂರು ರಸ್ತೆಯಲ್ಲಿ ಭಾನುವಾರ ನೂತನವಾಗಿ ಆರಂಭಿಸಿದ “ವಿಶೇಷ ಚಿಕಿತ್ಸಾ ಸೌಲಭ್ಯಗಳನ್ನೊಳಗೊಂಡ “ಸ್ಪರ್ಶ್‌ ಆಸ್ಪತ್ರೆ” ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು, ಬಡರೋಗಿಗಳು ಕಿಮೋಥೆರಪಿ ಮಾಡಿಸಲು ಸಾವಿರಾರು ರೂಪಾಯಿ ವ್ಯಯಿಸುತ್ತಿದ್ದಾರೆ, ಸರ್ಕಾರಿ ಆಸ್ಪತ್ರೆಯಲ್ಲೂ ಈ ಸೌಲಭ್ಯ ಒದಗಿಸಿದರೆ ಸಾಕಷ್ಟು ಜನರಿಗೆ ಸಹಕಾರಿಯಾಗಿದೆ, ಈ ನಿಟ್ಟಿನಲ್ಲಿ ಕಿಮೋಥೆರಪಿಯನ್ನೂ ಸಹ ಸರ್ಕಾರಿ ಆಸ್ಪತ್ರೆಗಳಲ್ಲಿ ಒದಗಿಸಲು ಮುಂದಾಗಿದ್ದು, ಶೀಘ್ರವೇ ಈ ಸೇವೆಗೆ ಚಾಲನೆ ಸಿಗಲಿದೆ ಎಂದರು.

ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಗಳ ರೀತಿಯಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳನ್ನಾಗಿ ಮಾಡುವುದು ಕಷ್ಟಸಾಧ್ಯ, ಆದರೆ, ಸರ್ಕಾರಿ ಆಸ್ಪತ್ರೆಗಳಲ್ಲೂ ಆಧುನಿಕ ತಂತ್ರಜ್ಞಾನಗಳೊಂದಿಗೆ ಸುಧಾರಿತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಈಗಾಗಲೇ ಕ್ರಮ ಕೈಗೊಂಡಿದ್ದೇವೆ, ಸಾಕಷ್ಟು ಸೌಲಭ್ಯಗಳನ್ನು ರೋಗಿಗಳ ಸೇವೆಗೆ ಲಭ್ಯವಿದೆ ಎಂದು ತಿಳಿಸಿದರು.

ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್‌ ಮಾತನಾಡಿ, ನಮ್ಮ ರಾಜ್ಯದಲ್ಲಿ ಬಡ ಮಕ್ಕಳೂ ಸಹ ವೈದ್ಯರಾಗಬೇಕು ಎಂಬ ಕನಸನ್ನು ನನಸು ಮಾಡಲು, ಸರ್ಕಾರಿ ಕೋಟಾದಡಿ ಲಭ್ಯವಿರುವ ವೈದ್ಯಕೀಯ ಸೀಟುಗಳ ಸಂಖ್ಯೆ ಹೆಚ್ಚಿಸಿದ್ದೇವೆ. ಇತರೆ ರಾಜ್ಯಗಳಿ ಹೋಲಿಸಿದರೆ ನಮ್ಮಲ್ಲಿಯೇ ಹೆಚ್ಚು ಸರ್ಕಾರಿ ಕೋಟಾ ವೈದ್ಯಕೀಯ ಸೀಟು ಮೀಸಲಿಡಲಾಗಿದೆ ಎಂದರು.

ಹೆಣ್ಣೂರಿನಲ್ಲಿ 300 ಹಾಸಿಗೆಯುಳ್ಳ ಸ್ಪರ್ಶ್‌ ಆಸ್ಪತ್ರೆ ಶಾಖೆ ಉದ್ಘಾಟನೆ:

ಸ್ಪರ್ಶ್‌ ಆಸ್ಪತ್ರೆ ಸಮೂಹವು ಬೆಂಗಳೂರಿನ ಹೆಣ್ಣೂರು ರಸ್ತೆಯಲ್ಲಿ ನೂತನವಾಗಿ ವಿಶೇಷ ಚಿಕಿತ್ಸಾ ಸೌಲಭ್ಯಗಳನ್ನೊಳಗೊಂಡ ಬಹು ವಿಭಾಗೀಯ ರೋಗಿ ಕೇಂದ್ರಿತ ಚಿಕಿತ್ಸೆ, ಅತ್ಯುತ್ತಮ ಗುಣಮಟ್ಟದ ಮತ್ತು ಎಲ್ಲರಿಗೂ ಲಭ್ಯವಾಗುವಂತಿರುವ 300 ಹಾಸಿಗೆಗಳ ಅತ್ಯಾಧುನಿಕ ಆಸ್ಪತ್ರಯನ್ನು ಭಾನುವಾರ ಚಾಲನೆ ನೀಡಲಾಗಿದೆ. ಸಮಗ್ರ ಚಿಕಿತ್ಸಾ ಸೇವೆಗಳನ್ನೊಳಗೊಂಡ ಹೆಣ್ಣೂರು ರಸ್ತೆ ಸ್ಪರ್ಶ್‌ ಆಸ್ಪತ್ರೆಯು ಮೂಳೆ, ನರ ವಿಜ್ಞಾನ, ಹೃದ್ರೋಗ ವಿಭಾಗ, ಕ್ಯಾನ್ಸರ್‌ ಚಿಕಿತ್ಸೆಗಳೂ ಸೇರಿದಂತೆ ಅಂಗಾಂಗ ಕಸಿ ವಿಭಾಗಗಳನ್ನೊಳಗೊಂಡಿದ್ದು ಮಹಿಳೆಯರು ಮತ್ತು ಮಕ್ಕಳ ಪ್ರತ್ಯೇಕ ಕೇಂದ್ರವನ್ನೊಳಗೊಂಡಿದೆ.

ಸ್ಪರ್ಶ್‌ ಆಸ್ಪತ್ರೆ ಸಮೂಹದ ಅಧ್ಯಕ್ಷ ಡಾ.ಶರಣ್‌ ಶಿವರಾಜ್‌ ಪಾಟೀಲ್‌ ಮಾತನಾಡಿ“ ಈ ನೂತನ ಆಸ್ಪತ್ರೆ ಉದ್ಘಾಟನೆಯೊಂದಿಗೆ ನಾವು ನಿಖರವಾದ, ಸಹಾನುಭೂತಿಯ ಹಾಗೂ ಎಲ್ಲ ವರ್ಗಗಳ ಕೈಗೆಟಕುವಂತೆ ಸೇವೆ ನೀಡುವ ನಮ್ಮ ಧ್ಯೇಯವನ್ನು ಮುಂದುವರಿಸುತ್ತಿದ್ದೇವೆ. ರೋಬೊಟಿಕ್ ನೆರವಿನ ಶಸ್ತ್ರಚಿಕಿತ್ಸೆಗಳು, ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ರೋಗನಿರ್ಣಯಗಳು ಹಾಗೂ 3 ಡಿ ಮುದ್ರಣ ತಂತ್ರಜ್ಞಾನವೂ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಈ ಆಸ್ಪತ್ರೆಯಲ್ಲಿ ಅಳವಡಿಸಲಾಗಿದ್ದು ನಮ್ಮ ಸಮುದಾಯಗಳಿಗೆ ಸುಧಾರಿತ ಚಿಕಿತ್ಸಾ ಆಯ್ಕೆಗಳನ್ನು ಹೆಚ್ಚು ಹೆಚ್ಚಾಗಿ ನೀಡುವ ಗುರಿ ಹೊಂದಿದ್ದೇವೆ.” ಎಂದರು.

ಭವಿಷ್ಯದ ಮುನ್ನೋಟದೊಂದಿಗೆ ವಿನ್ಯಾಸಗೊಳಿಸಲಾದ ಸ್ಪರ್ಶ್‌ ಹೆಣ್ಣೂರು ಆಸ್ಪತ್ರೆಯು ಬಹು ವಿಭಾಗೀಯ ಮತ್ತು ವಿಶೇಷ ಚಿಕಿತ್ಸಾ ವಿಭಾಗಗಳು, ಮೂಳೆ, ನರವಿಜ್ಞಾನ, ಹೃದ್ರೋಗ ವಿಭಾಗ, ಅಂಗಾಂಗ ಕಸಿ, ಕ್ಯಾನ್ಸರ್‌ ಚಿಕಿತ್ಸೆ ಸೇರಿದಂತೆ ಮಹಿಳೆಯರು ಮತ್ತು ಮಕ್ಕಳ ಪ್ರತ್ಯೇಕ ವಿಭಾಗಗಳನ್ನು ಹೊಂದಿದೆ. ನವಯುಗದ ತಂತ್ರಜ್ಞಾನಗಳ ಆವಿಷ್ಕಾರಗಳನ್ನೂ ಅಳವಡಿಸಿಕೊಂಡಿರುವ ಸ್ಪರ್ಶ್‌ ಹೆಣ್ಣೂರು ಆಸ್ಪತ್ರೆಯಲ್ಲಿ ಅಂಕಿ ಅಂಶ ಚಾಲಿತ ಸೇವಾ ಸೌಕರ್ಯಗಳು, ನೈಜ ಅವಧಿಯ ಚಿಕಿತ್ಸಾ ವಿಶ್ಲೇಷಣೆಗಳು, ರೊಬೋಟಿಕ್‌ ಸಹಾಯದೊಂದಿಗೆ ಶಸ್ತ್ರಚಿಕಿತ್ಸೆಗಳು, ಕೃತಕ ಬುದ್ಧಿಮತ್ತೆ ಚಾಲಿತ ರೋಗ ನಿರ್ಣಯಗಳು ಹಾಗೂ ವೈಯಕ್ತಿಕ ಔಷಧೋಪಚಾರಗಳೊಂದಿಗೆ ರೋಗಿಗಳ ಆರೈಕೆಯ ನಿಟ್ಟಿನಲ್ಲಿ ಶ್ರೇಷ್ಟ ಗುಣಮಟ್ಟವನ್ನು ಒದಗಿಸಲಿದೆ. ವೈದ್ಯಕೀಯ ಶಿಕ್ಷಣ ಮತ್ತು ಕ್ಲಿನಿಕಲ್‌ ಸಂಶೋಧನೆಗೂ ಈ ಆಸ್ಪತ್ರೆಯು ಅನುವು ಮಾಡಲಿದೆ. ವೈದ್ಯಕೀಯ ವಿಚಾರದಲ್ಲಿ ಅತ್ಯುನ್ನತ ಮಟ್ಟದ ಚಿಕಿತ್ಸೆ ಜೊತೆಗೆ ಸುಮಾರು 2,500 ಮಂದಿಗೆ ನೇರ ಉದ್ಯೋಗಾವಕಾಶವನ್ನೂ ಈ ಬೃಹತ್‌ ಆಸ್ಪತ್ರೆಯು ಒದಗಿಸುತ್ತಿದ್ದು ಈ ಭಾಗದ ಆರ್ಥಿಕ ಅಭಿವೃದ್ಧಿಗೂ ಕೊಡುಗೆ ನೀಡಲಿದೆ ಎಂದು ಡಾ.ಪಾಟೀಲ್‌ ತಿಳಿಸಿದರು.

ಸ್ಪರ್ಶ್‌ ಆಸ್ಪತ್ರೆ ಸಮಮೂಹದ ವಿಸ್ತರಣಾ ಯೋಜನೆಯಲ್ಲಿ ಹೆಣ್ಣೂರು ಆಸ್ಪತ್ರೆ ಉದ್ಘಾಟನೆಯು ಮಹತ್ವದ ಮೈಲಿಗಲ್ಲಾಗಿದ್ದು ಈ ವರ್ಷಾಂತ್ಯದೊಳಗೆ 9 ಆಸ್ಪತ್ರೆಗಳಲ್ಲಿ 1,700 ಹಾಸಿಗೆ ಸಾಮರ್ಥ್ಯದ ಗುರಿ ಹೊಂದಲಾಗಿದೆ. ವಿಸ್ತರಣೆಯು ಹೆಣ್ಣೂರು ಸೌಲಭ್ಯದ ಮೇಲೆ ಗಣನೀಯ ಪ್ರಮಾಣದ ಹೂಡಿಕೆಯನ್ನೂ ಒಳಗೊಂಡಿದೆ. ಆಸ್ಪತ್ರೆಯು ಈ ಭಾಗದ ಜನರ ಆರೋಗ್ಯದ ಅಗತ್ಯತೆಗಳನ್ನು ಪೂರೈಸುವುದರೊಂದಿಗೆ ಆಸ್ಪತ್ರೆಯ ವಿನ್ಯಾಸವು ಕೂಡ ರೋಗಿಗಳಿಗೆ ಆಹ್ಲಾದಕರವಾದ ಅನುಭವವನ್ನು ನೀಡುವಂತೆ ನಿರ್ಮಿಸಲಾಗಿದೆ. ಅತ್ಯಾಧುನಿಕ ತಂತ್ರಜ್ಞಾನವು ಮಾನವೀಯ ಸ್ಪರ್ಶವನ್ನು ಮಿಳಿತಗೊಳಿಸುವಂತೆ ಸ್ಪರ್ಶ್‌ ಹೆಣ್ಣೂರು ವಿಭಾಗವು ತಲೆ ಎತ್ತಿದ್ದು ಸ್ಪರ್ಶ್‌ ಸೇವಾ ಬದ್ಧತೆಗೆ ಸಾಕ್ಷಿಯಾಗಿದೆ.

ಹೆಣ್ಣೂರು ರಸ್ತೆಯಲ್ಲಿ ಸ್ಪರ್ಶ್‌ ಆಸ್ಪತ್ರೆ ಕಾರ್ಯಾರಂಭದೊಂದಿಗೆ ಸ್ಪರ್ಶ್‌ ಸಮೂಹವು ಸ್ಥಳೀಯವಾಗಿ ಆರೋಗ್ಯ ಸೇವೆಯಲ್ಲಿ ಜಾಗತಿಕ ಗುಣಮಟ್ಟದ ಮಾನದಂಡಗಳೊಂದಿಗೆ ಕ್ರಾಂತಿಕಾರಕ ಬದಲಾವಣೆ ಮಾಡುವ ಸ್ಪರ್ಶ್‌ ಆಸ್ಪತ್ರೆ ಸಮೂಹದ ಬದ್ಧತೆಯನ್ನು ಪುನರುಚ್ಛರಿಸುತ್ತದೆ ಎಂದು ಡಾ.ಶರಣ್‌ ಶಿವರಾಜ್‌ ಪಾಟೀಲ್‌ ವಿವರಿಸಿದರು.

ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಶ್ರೀಗಳಾದ ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿಯವರ ದಿವ್ಯಸಾನಿಧ್ಯ ವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಶಿವರಾಜ್‌ ವಿ.ಪಾಟೀಲ್‌, ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ,ಬಿ.ಎ.ಬಸವರಾಜ ಭಾಗವಹಿಸಿದ್ದರು.

BREAKING: ಇಸ್ರೋದ EOS-09 ಉಪಗ್ರಹ ಉಡಾವಣೆ ವಿಫಲ | ISRO EOS-09 Mission

ಆಪರೇಷನ್ ಸಿಂಧೂರ್: ಪಾಕ್ ಭಯೋತ್ಪಾದಕ ಲಾಂಚ್ ಪ್ಯಾಡ್ ಮೇಲಿನ ದಾಳಿಯ ವೀಡಿಯೋ ಬಿಡುಗಡೆ ಮಾಡಿದ ಭಾರತೀಯ ಸೇನೆ

Share. Facebook Twitter LinkedIn WhatsApp Email

Related Posts

6,50,000 ಉದ್ಯೋಗಿಗಳಿಗೆ 2023-2024 ರಲ್ಲಿ AI ಕೌಶಲ್ಯಗಳ ಕುರಿತು ತರಬೇತಿ: ಡಿಸಿಎಂ ಡಿ.ಕೆ ಶಿವಕುಮಾರ್

27/02/2026 7:27 PM3 Mins Read

ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

27/02/2026 7:26 PM1 Min Read

ವಿನಯ್ ಕುಲಕರ್ಣಿ ಜಾಮೀನು; ಕೊನೆಗೂ ಸಿಕ್ಕ ನ್ಯಾಯ- ಡಿಸಿಎಂ ಡಿಕೆಶಿ

27/02/2026 7:24 PM1 Min Read
Recent News

ಪಾಕ್-ಅಫ್ಘಾನ್ ನಡುವೆ ಭೀಕರ ಯುದ್ಧ ; ಹೋರಾಟಕ್ಕೆ 132 ವರ್ಷಗಳು, ವಿವಾದ ಹೇಗೆ ಪ್ರಾರಂಭವಾಯ್ತು ಗೊತ್ತಾ?

27/02/2026 7:34 PM

6,50,000 ಉದ್ಯೋಗಿಗಳಿಗೆ 2023-2024 ರಲ್ಲಿ AI ಕೌಶಲ್ಯಗಳ ಕುರಿತು ತರಬೇತಿ: ಡಿಸಿಎಂ ಡಿ.ಕೆ ಶಿವಕುಮಾರ್

27/02/2026 7:27 PM

ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

27/02/2026 7:26 PM

ವಿನಯ್ ಕುಲಕರ್ಣಿ ಜಾಮೀನು; ಕೊನೆಗೂ ಸಿಕ್ಕ ನ್ಯಾಯ- ಡಿಸಿಎಂ ಡಿಕೆಶಿ

27/02/2026 7:24 PM
State News
KARNATAKA

6,50,000 ಉದ್ಯೋಗಿಗಳಿಗೆ 2023-2024 ರಲ್ಲಿ AI ಕೌಶಲ್ಯಗಳ ಕುರಿತು ತರಬೇತಿ: ಡಿಸಿಎಂ ಡಿ.ಕೆ ಶಿವಕುಮಾರ್

By kannadanewsnow0927/02/2026 7:27 PM KARNATAKA 3 Mins Read

ಬೆಂಗಳೂರು: “ಕರ್ನಾಟಕ ರಾಜ್ಯ ಸಂಶೋಧನೆಗೆ, ನೂತನ ಆವಿಷ್ಕಾರಗಳಿಗೆ, ಉದ್ಯೋಗಗಳಿಗೆ ಹಾಗೂ ಪ್ರತಿಭಾವಂತರಿಗೆ ಕಾಯಕ ಭೂಮಿಯಾಗಿದೆ. ಕರ್ನಾಟಕವು 875 ಕ್ಕೂ ಹೆಚ್ಚು ಜಾಗತಿಕ…

ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

27/02/2026 7:26 PM

ವಿನಯ್ ಕುಲಕರ್ಣಿ ಜಾಮೀನು; ಕೊನೆಗೂ ಸಿಕ್ಕ ನ್ಯಾಯ- ಡಿಸಿಎಂ ಡಿಕೆಶಿ

27/02/2026 7:24 PM

8 ವರ್ಷ ಪ್ರೀತಿಸಿ ಕೈಕೊಡೋದಕ್ಕೆ ಯತ್ನಿಸಿದ ಶಿಕ್ಷಕ ಲಾಕ್: ಪೊಲೀಸರ ಸಮ್ಮುಖದಲ್ಲೇ ಪ್ರೇಯಸಿಗೆ ಮಾಂಗಲ್ಯಧಾರಣೆ

27/02/2026 5:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.