Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಆಹಾರದಲ್ಲಿನ ಸಕ್ಕರೆ, ಕೊಬ್ಬಿನಂಶದ ಕುರಿತು ಎಲ್ಲ ಮಳಿಗೆಗಳಲ್ಲಿಯೂ ಮಾಹಿತಿ ಪ್ರಕಟಿಸಲು ಕೇಂದ್ರ ಸರ್ಕಾರ ಆದೇಶ

15/07/2025 5:07 PM

ಸರೋಜಾದೇವಿ ಅವರ ಹೆಸರು ಶಾಶ್ವತವಾಗಿ ಉಳಿಸಲು ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

15/07/2025 4:58 PM

BREAKING ; ಭಾರತೀಯ ಸೇನೆ ಕುರಿತು ಅವಹೇಳನಕಾರಿ ಹೇಳಿಕೆ : ‘ರಾಹುಲ್ ಗಾಂಧಿ’ಗೆ ಜಾಮೀನು ಮಂಜೂರು

15/07/2025 4:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸರೋಜಾದೇವಿ ಅವರ ಹೆಸರು ಶಾಶ್ವತವಾಗಿ ಉಳಿಸಲು ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್
KARNATAKA

ಸರೋಜಾದೇವಿ ಅವರ ಹೆಸರು ಶಾಶ್ವತವಾಗಿ ಉಳಿಸಲು ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

By kannadanewsnow0915/07/2025 4:58 PM

ಚನ್ನಪಟ್ಟಣ : “ಬಿ. ಸರೋಜಾದೇವಿ ಅವರು ಖ್ಯಾತ ನಟಿ. ಅವರ ಕಲಾಸೇವೆಗಾಗಿ ಅವರ ಹೆಸರು ಶಾಶ್ವತವಾಗಿ ಉಳಿಯುವಂತೆ ಮಾಡಲು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕಾರ್ಯಕ್ರಮ ರೂಪಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಬಿ. ಸರೋಜಾದೇವಿ ಅವರ ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಿದ್ದ ಶಿವಕುಮಾರ್ ಅವರು ದಶಾವಾರದಲ್ಲಿ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು.

“ನಾವೆಲ್ಲರೂ ಇಂದು ದಕ್ಷಿಣ ಭಾರತದ ಖ್ಯಾತ ನಟಿ ಬಿ. ಸರೋಜಾದೇವಿ ಅವರ ಅಂತಿಮ ಸಂಸ್ಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇವೆ. ಇವರು ದಕ್ಷಿಣ ಭಾರತದ ಖ್ಯಾತ ನಟರ ಜತೆ ತಲಾ 20 ರಿಂದ 25ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿ ಅಪಾರವಾದ ಕೀರ್ತಿ ಸಂಪಾದಿಸಿದ್ದಾರೆ. ಇಡೀ ಕರ್ನಾಟಕ ಸರ್ಕಾರ, ದಕ್ಷಿಣ ಭಾರತದ ಕಲಾವಿದರು ಅವರಿಗೆ ಗೌರವಪೂರ್ವಕವಾಗಿ ನಮನ ಅರ್ಪಿಸುವ ಕೆಲಸ ಮಾಡಿದ್ದೇವೆ” ಎಂದು ತಿಳಿಸಿದರು.

ನನಗೂ ಸಿನಿಮಾದಲ್ಲಿ ನಟಿಸುವಂತೆ ಹೇಳಿದ್ದರು

“ಸರೋಜಾದೇವಿ ಅವರು ನನಗೆ ಸಣ್ಣ ವಯಸ್ಸಿನಿಂದಲೂ ಬಹಳ ಪರಿಚಯ. ನಾನು ಆರಂಭದಲ್ಲಿ ಸಚಿವನಾದಾಗ, ನನ್ನನ್ನು ಕರೆದು ನೀನು ಸಿನಿಮಾಗಳಲ್ಲಿ ನಟನೆ ಮಾಡಬೇಕು ಎಂದು ಹೇಳಿದ್ದರು. ಅವರು ನಮ್ಮ ಜಿಲ್ಲೆಯವರು. ಅವರ ಅಂತಿಮ ಸಂಸ್ಕಾರವನ್ನು ಇಲ್ಲಿ ಮಾಡುತ್ತಿದ್ದೇವೆ” ಎಂದು ಹೇಳಿದರು.

“ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ, ಜನನ ಉಚಿತ, ಮರಣ ಖಚಿತ. ಈ ಹುಟ್ಟು ಸಾವಿನ ನಡುವೆ ನಾವು ಏನು ಸಾಧನೆ ಮಾಡುತ್ತೇವೆ ಅದು ಶಾಶ್ವತವಾಗಿ ಉಳಿಯುತ್ತವೆ. ಬಹಳ ಚಿಕ್ಕ ವಯಸ್ಸಿಗೆ ಭಾರತ ಸರ್ಕಾರದ ಪದ್ಮ ವಿಭೂಷಣ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಆ ಕಾಲದಲ್ಲಿ ಆ ವಯಸ್ಸಿಗೆ ಯಾರೂ ಆ ಪ್ರಶಸ್ತಿ ಪಡೆದಿರಲಿಲ್ಲ. ಅವರ ಹೆಸರು ಶಾಶ್ವತವಾಗಿ ಉಳಿದುಕೊಳ್ಳಲು ರಸ್ತೆಗಳಿಗೆ ಅವರ ಹೆಸರಿಡುವ ಕಾರ್ಯಕ್ರಮವನ್ನು ರೂಪಿಸಬೇಕು ಎಂದು ನಮ್ಮ ಶಾಸಕರಾದ ಯೋಗೇಶ್ವರ್ ಅವರು ಒತ್ತಾಯ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬಿಡಿಎ ಅಥವಾ ಪಾಲಿಕೆಯಲ್ಲಿ ಈ ವಿಚಾರ ಚರ್ಚೆ ಮಾಡಿ ಈ ಕೆಲಸ ಮಾಡುತ್ತೇವೆ” ಎಂದರು.

“ಗ್ರಾಮೀಣ ಪ್ರದೇಶದಲ್ಲಿ ಜನಿಸಿ, ಅವರು ಮಾಡಿರುವ ಅಪಾರವಾದ ಕಲಾ ಸೇವೆ ಅಪ್ರತಿಮವಾದುದ್ದು. ಅವರು ಎಂದಿಗೂ ಒಂದೇ ಒಂದು ವಿವಾದಕ್ಕೆ ಸಿಲುಕಲಿಲ್ಲ. ಎಲ್ಲಾ ವರ್ಗದ ಜನ ಅವರನ್ನು ಬಹಳ ಪ್ರೀತಿ, ಗೌರವದಿಂದ ಕಂಡಿದ್ದಾರೆ. ರಾಜ್ಯಕ್ಕೆ ಸಮಸ್ಯೆ ಎದುರಾದಾಗ ಅವರು ನಮ್ಮ ಜೊತೆ ನಿಂತು ರಾಜ್ಯದ ಹಿತ ಕಾಪಾಡಿದ್ದಾರೆ. ಕಲೆಗೆ ಹೆಚ್ಚಿಗೆ ಪ್ರೋತ್ಸಾಹ ನೀಡಿರುವುದನ್ನು ನಾವು ಸ್ಮರಿಸಬೇಕು. ಸರ್ಕಾರದ ಪರವಾಗಿ, ಈ ಜಿಲ್ಲೆಯವನಾಗಿ ಅವರಿಗೆ ಸಕಲ ಸರ್ಕಾರಿ ಗೌರವ ಸಲ್ಲಿಸಲಾಗುತ್ತಿದೆ” ಎಂದು ಹೇಳಿದರು.

ಅವರ ಪ್ರತಿಮೆ ನಿರ್ಮಾಣ ಮಾಡಲಾಗುವುದೇ ಎಂದು ಕೇಳಿದಾಗ, “ಪ್ರತಿಮೆ ಮುಖ್ಯವಲ್ಲ. ಅವರ ವಿಚಾರದಲ್ಲಿ ಏನು ಮಾಡಬೇಕು ಎಂಬುದುನ್ನು ನಾವು ಚರ್ಚೆ ಮಾಡಿ ತಿಳಿಸುತ್ತೇವೆ. ಅವರ ಹೆಸರು ಉಳಿದುಕೊಳ್ಳುವಂತೆ ಏನುಬೇಕೋ ಅದನ್ನು ಮಾಡುತ್ತೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ತಿಳಿಸಿದರು.

PG DENTAL-25 ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಿದ KEA

BIG NEWS: ‘ಮಾಸಿದ ರಾಷ್ಟ್ರಧ್ವಜ’ ಹಾರಿಸಿ ಅಪಮಾನ ಮಾಡಿದ ‘PDO’ಗೆ ಶಾಕ್: ವಿವರಣೆ ಕೇಳಿ ‘EO ನೋಟಿಸ್’

Share. Facebook Twitter LinkedIn WhatsApp Email

Related Posts

BREAKING : ಚಿಕ್ಕಮಗಳೂರಲ್ಲಿ ಘೋರ ದುರಂತ : ವಿದ್ಯುತ್ ತಂತಿ ತಗುಲಿ ರೈತ ಸಾವು!

15/07/2025 4:45 PM1 Min Read

BREAKING : ಕೇಂದ್ರ & ರಾಜ್ಯದಲ್ಲಿ ಅಧಿಕಾರದಲ್ಲಿರುವವರಿಗೆ ಗಂಡಾಂತರ : ಕೋಡಿಶ್ರೀ ಸ್ಪೋಟಕ ಭವಿಷ್ಯ

15/07/2025 4:38 PM1 Min Read

BIG NEWS: ‘ಮಾಸಿದ ರಾಷ್ಟ್ರಧ್ವಜ’ ಹಾರಿಸಿ ಅಪಮಾನ ಮಾಡಿದ ‘PDO’ಗೆ ಶಾಕ್: ವಿವರಣೆ ಕೇಳಿ ‘EO ನೋಟಿಸ್’

15/07/2025 4:36 PM1 Min Read
Recent News

BREAKING: ಆಹಾರದಲ್ಲಿನ ಸಕ್ಕರೆ, ಕೊಬ್ಬಿನಂಶದ ಕುರಿತು ಎಲ್ಲ ಮಳಿಗೆಗಳಲ್ಲಿಯೂ ಮಾಹಿತಿ ಪ್ರಕಟಿಸಲು ಕೇಂದ್ರ ಸರ್ಕಾರ ಆದೇಶ

15/07/2025 5:07 PM

ಸರೋಜಾದೇವಿ ಅವರ ಹೆಸರು ಶಾಶ್ವತವಾಗಿ ಉಳಿಸಲು ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

15/07/2025 4:58 PM

BREAKING ; ಭಾರತೀಯ ಸೇನೆ ಕುರಿತು ಅವಹೇಳನಕಾರಿ ಹೇಳಿಕೆ : ‘ರಾಹುಲ್ ಗಾಂಧಿ’ಗೆ ಜಾಮೀನು ಮಂಜೂರು

15/07/2025 4:48 PM

BREAKING : ಚಿಕ್ಕಮಗಳೂರಲ್ಲಿ ಘೋರ ದುರಂತ : ವಿದ್ಯುತ್ ತಂತಿ ತಗುಲಿ ರೈತ ಸಾವು!

15/07/2025 4:45 PM
State News
KARNATAKA

ಸರೋಜಾದೇವಿ ಅವರ ಹೆಸರು ಶಾಶ್ವತವಾಗಿ ಉಳಿಸಲು ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

By kannadanewsnow0915/07/2025 4:58 PM KARNATAKA 2 Mins Read

ಚನ್ನಪಟ್ಟಣ : “ಬಿ. ಸರೋಜಾದೇವಿ ಅವರು ಖ್ಯಾತ ನಟಿ. ಅವರ ಕಲಾಸೇವೆಗಾಗಿ ಅವರ ಹೆಸರು ಶಾಶ್ವತವಾಗಿ ಉಳಿಯುವಂತೆ ಮಾಡಲು ಸರ್ಕಾರದ ಮಟ್ಟದಲ್ಲಿ…

BREAKING : ಚಿಕ್ಕಮಗಳೂರಲ್ಲಿ ಘೋರ ದುರಂತ : ವಿದ್ಯುತ್ ತಂತಿ ತಗುಲಿ ರೈತ ಸಾವು!

15/07/2025 4:45 PM

BREAKING : ಕೇಂದ್ರ & ರಾಜ್ಯದಲ್ಲಿ ಅಧಿಕಾರದಲ್ಲಿರುವವರಿಗೆ ಗಂಡಾಂತರ : ಕೋಡಿಶ್ರೀ ಸ್ಪೋಟಕ ಭವಿಷ್ಯ

15/07/2025 4:38 PM

BIG NEWS: ‘ಮಾಸಿದ ರಾಷ್ಟ್ರಧ್ವಜ’ ಹಾರಿಸಿ ಅಪಮಾನ ಮಾಡಿದ ‘PDO’ಗೆ ಶಾಕ್: ವಿವರಣೆ ಕೇಳಿ ‘EO ನೋಟಿಸ್’

15/07/2025 4:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.