Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಆಪರೇಷನ್ ಸಿಂಧೂರ್ ನಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ : ಭಾರತೀಯ ಸೇನೆ ಸ್ಪಷ್ಟನೆ

11/05/2025 7:30 PM

BREAKING : ಪಾಕಿಸ್ತಾನ ಕರೆ ಮಾಡಿ ಮನವಿ ಮಾಡಿದಕ್ಕೆ ‘ಕದನ ವಿರಾಮ’ ಘೋಷಣೆ : DGMO ರಾಜೀವ್ ಘಾಯ್ ಸ್ಪಷ್ಟನೆ

11/05/2025 7:25 PM

BREAKING : ಪಾಕಿಸ್ತಾನದ 35-40 ಸೈನಿಕರನ್ನು ಕೊಂದಿದ್ದೇವೆ : ಏರ್ ಮಾರ್ಷಲ್ ಅವಧೆಶ್ ಕುಮಾರ್ ಭಾರ್ತಿ ಹೇಳಿಕೆ

11/05/2025 7:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಚಂದ್ರಗುತ್ತಿ ದೇವಸ್ಥಾನ’ದ ಸರ್ವಾಂಗೀಣ ವಿಕಾಸಕ್ಕೆ ಕ್ರಮ: ಸಚಿವ ಮಧು ಬಂಗಾರಪ್ಪ
KARNATAKA

‘ಚಂದ್ರಗುತ್ತಿ ದೇವಸ್ಥಾನ’ದ ಸರ್ವಾಂಗೀಣ ವಿಕಾಸಕ್ಕೆ ಕ್ರಮ: ಸಚಿವ ಮಧು ಬಂಗಾರಪ್ಪ

By kannadanewsnow0911/08/2024 10:36 AM

ಶಿವಮೊಗ್ಗ : ಕರ್ನಾಟಕ ವಾರ್ತೆ : ಮಲೆನಾಡಿನ ಜನರ ಪ್ರತಿ ಮನೆಯ ಅಧಿದೇವತೆಯಾಗಿರುವ ಚಂದ್ರಗುತ್ತಿಯ ಪ್ರಸಿದ್ಧ ಶ್ರೀ ರೇಣುಕಾ ರೇಣುಕಾ ದೇವಿ ಶ್ರೀ ಕ್ಷೇತ್ರ ಸರ್ವಾಂಗೀಣ ವಿಕಾಸಕ್ಕೆ ಸರ್ಕಾರದ ವತಿಯಿಂದ ಎಲ್ಲ ರೀತಿಯ ನೆರವನ್ನು ಒದಗಿಸಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಅವರು ಹೇಳಿದರು.

ಅವರು ಶನಿವಾರದಂದು ಸೊರಬ ಸಮೀಪದ ಚಂದ್ರಗುತ್ತಿಯ ಶ್ರೀ ರೇಣುಕಾದೇವಿಯ ದರ್ಶನ ಪಡೆದ ನಂತರ ಅವರು ಶ್ರೀ ಕ್ಷೇತ್ರದ ಆಡಳಿತಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ಸುದೀರ್ಘ ಸಮಾಲೋಚನೆ ನಡೆಸಿದರು.

ಶ್ರೀ ಕ್ಷೇತ್ರದಲ್ಲಿನ ಸ್ವಚ್ಛತೆ, ಶೌಚಾಲಯ, ಶುದ್ಧ ಕುಡಿಯುವ ನೀರು, ವಸತಿ ಮತ್ತಿತರ ವಿಷಯಗಳ ಕುರಿತು ಸುಧೀರ್ಘ ಸಮಾಲೋಚನೆ ನಡೆಸಿದ ಅವರು ಯತ್ರಾರ್ತಿಗಳ ಅನುಕೂಲಕ್ಕಾಗಿ ತುರ್ತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಸ್ತುತ ಸಂದರ್ಭದಲ್ಲಿ ಸ್ಥಿತವಾಗಿರುವ ಹಾಗೂ ಪಾರಂಪರಿಕವಾಗಿರುವ ಮೂಲ ಕಟ್ಟಡವು ಶಿಥಿಲಗೊಂಡಿದೆ ಮಾತ್ರವಲ್ಲದೆ ಮಳೆಯಿಂದ ಸೋರುತ್ತಿದೆ. ದೇವಸ್ಥಾನದ ಬಾಗಿಲುಗಳು ಸಡಿಲಗೊಂಡಿವೆ. ಅದರ ತುರ್ತು ಕಾರ್ಯವನ್ನು ಕೈಗೊಳ್ಳಲು ಭಾರತೀಯ ಪರಂಪರಿಕ ಕಟ್ಟಡಗಳ ನಿರ್ವಹಣಾ ಸಮಿತಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಅಲ್ಲದೆ ಕೈಗೊಳ್ಳಬಹುದಾದ ತುರ್ತು ಕಾಮಗಾರಿಗಳಿಗೆ ಆರ್ಥಿಕ ನೆರವನ್ನು ಸರ್ಕಾರ ಅಥವಾ ಸ್ಥಳೀಯ ಆಡಳಿತ ಅಧಿಕಾರಿಗಳ ಕಚೇರಿಯಿಂದ ಒದಗಿಸಿಕೊಡಲಾಗುವುದು ಎಂದವರು ನುಡಿದರು.

ಪ್ರಸ್ತುತ ದೇವಸ್ಥಾನದ ಮೂಲ ಕಟ್ಟಡದ ಪ್ರದೇಶ ಅರಣ್ಯ ಇಲಾಖೆಯ ವ್ಯಾಪ್ತಿಗೊಳ ಪಟ್ಟಿದೆ. ಅದಕ್ಕಾಗಿ ನಿಯಮಾನುಸಾರ ಇಲಾಖೆಯ ಅನುಮತಿ ಪಡೆದು ಕಟ್ಟಡದ ಜೀರ್ಣೋದ್ದಾರಕ್ಕೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ದೇವಸ್ಥಾನದ ಸುತ್ತಮುತ್ತಲ 10 ಎಕರೆ ಪ್ರದೇಶವನ್ನು ಗುರುತಿಸಲಾಗಿದೆ ಈ ಪ್ರದೇಶದಲ್ಲಿ ಶುದ್ಧ ಕುಡಿಯುವ ನೀರು ನೆರಳು, ವಿದ್ಯುತ್ ಮತ್ತಿತರ ಸೌಲಭ್ಯಗಳನ್ನು ಒದಗಿಸಲು ಸೂಚಿಸಲಾಗಿದೆ ಎಂದರು.

ದೇವಸ್ಥಾನದ ಸುತ್ತಮುತ್ತಲ ಹತ್ತು ಎಕರೆ ಪ್ರದೇಶವನ್ನು ಅರಣ್ಯ ಇಲಾಖೆಯಿಂದ ಪಡೆದುಕೊಂಡ ನಂತರ ಅದಕ್ಕೆ ಪರ್ಯಾಯವಾಗಿ 20 ಎಕರೆ ಭೂಪ್ರದೇಶವನ್ನು ಅರಣ್ಯ ಇಲಾಖೆಗೆ ವಹಿಸಿಕೊಡಲಾಗುವುದು ಎಂದರು.

ಪ್ರಸ್ತುತ ಈ ಪಾರಂಪರಿಕ ಕಟ್ಟಡದಲ್ಲಿ ಗುರುತಿಸಲಾಗಿರುವ ತುರ್ತು ಕಾಮಗಾರಿಗಳನ್ನು ರಾಷ್ಟ್ರೀಯ ಪ್ರಾಚ್ಯ ವಸ್ತು ಇಲಾಖೆಯಿಂದ ಹಾಗೂ ಉಳಿದಂತೆ ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿನ ಮೆಟ್ಟಿಲುಗಳ ದುರಸ್ತಿ, ನೆರಳು ಹಾಗೂ ವಿದ್ಯುತ್ ಸಂಪರ್ಕದ ವ್ಯವಸ್ಥೆ ಕಾಮಗಾರಿಗಳನ್ನು ಆಡಳಿತಾಧಿಕಾರಿಗಳ ಕಚೇರಿಯಿಂದ ನಿರ್ವಹಿಸಲಾಗುವುದು ಎಂದ ಅವರು ನೆರಳಿಗಾಗಿ ನಿರ್ಮಿಸುವ ಶೆಲ್ಟರ್ ಗಳನ್ನು ಕಾಲಮಾನ ಕನುಗುಣವಾಗಿ ಅಳವಡಿಸಲು ಹಾಗೂ ತೆರವುಗೊಳಿಸಲು ಅನುಕೂಲವಾಗುವಂತೆ ನಿರ್ಮಿಸಲಾಗುವುದು ಎಂದರು.

ಈ ದೇಶದಲ್ಲಿ ನಿತ್ಯ ಪೂಜಾ ಕೈಂಕರ್ಯಗಳು ನಿರಂತರವಾಗಿರುವಂತೆ ನೋಡಿಕೊಳ್ಳಲು ಯಾಗ ಶಾಲೆಯನ್ನು ಸಾಂಪ್ರದಾಯಿಕ ಹಾಗೂ ಪಾರಂಪರಿಕ ಶೈಲಿಯಲ್ಲಿ ನಿರ್ಮಿಸಲು ಸೂಚಿಸಲಾಗಿದೆ ಎಂದವರು ನುಡಿದರು.

ದೇವಸ್ಥಾನಕ್ಕೆ ಬರುವ ಯಾತ್ರೆಗಳ ಅನುಕೂಲಕ್ಕೆ ಅಲ್ಲಲ್ಲಿ ಮಾರ್ಗಸೂಚಿಗಳನ್ನು, ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಂತೆ ಮನವಿ ಮಾಡುವ ಭಕ್ತಾದಿಗಳ ಪಾದರಕ್ಷಗಳನ್ನು ಕೌಂಟರ್ ಗಳನ್ನು ತೆರೆಯಲು ಸೂಚಿಸಿದ ಅವರು ಹಾಲುಣಿಸುವ ತಾಯಂದಿರ ಅನುಕೂಲಕ್ಕಾಗಿ ಪ್ರತ್ಯೇಕ ಕೊಠಡಿಯೊಂದನ್ನು ನಿರ್ಮಿಸಲು ಸೂಚಿಸಿದರು.

ಪ್ರಸ್ತುತ ಈಗಿರುವ ಶೌಚಾಲಯಗಳ ಸಂಖ್ಯೆ ಅತ್ಯಂತ ಕನಿಷ್ಠ ವಾಗಿದ್ದು ಮಹಿಳೆಯರು ಹಾಗೂ ಪುರುಷರ ಅನುಕೂಲಕ್ಕಾಗಿ ಪ್ರತ್ಯೇಕವಾಗಿ 25 ಶೌಚ ಹಾಗೂ ಸ್ನಾನ ಗೃಹಗಳನ್ನು ನಿರ್ಮಿಸಲು ಸೂಚಿಸಿದರು.

ಸ್ಥಳೀಯ ಗ್ರಾಮ ಪಂಚಾಯಿತಿ ಹಾಗೂ ಆಡಳಿತಾಧಿಕಾರಿಗಳ ಕಾರ್ಯಾಲಯದಿಂದ ಕೇವಲ ಆದಾಯ ನಿರೀಕ್ಷೆಕ್ಕೆ ಗಮನ ಹರಿಸಿದೆ ಜನರಿಗೆ ಸೌಲಭ್ಯ ಕಲ್ಪಿಸಿಕೊಡಲು ಹಣಕಾಸಿನ ಅಗತ್ಯವಿದ್ದಲ್ಲಿ ಸರ್ಕಾರದ ನೆರವನ್ನು ಒದಗಿಸಲಾಗುವುದು ಎಂದರು.

ದೇವರ ದರ್ಶನಕ್ಕಾಗಿ ಬರುವ ಯಾತ್ರಾತಿಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವುದರಿಂದ ವಾಹನಗಳ ನಿಲುಗಡೆಗೆ, ಜನರ ವಸತಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಳ್ಳಲು ಆಡಳಿತ ಅಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆ ಚುನಾಯಿತ ಪ್ರತಿನಿಧಿಗಳು ಗಮನಹರಿಸುವಂತೆ ಸೂಚಿಸಿದ ಅವರು ಪರಸ್ಪರರಲ್ಲಿ ಸಮನ್ವಯತೆ ಇರಬೇಕು ಎಂದವರು ನುಡಿದರು.

ಈ ಪುಣ್ಯ ಭೂಮಿಗೆ ಬಂದು ದೇವರ ದರ್ಶನ ಪಡೆಯುವ ಯತ್ರಾರ್ತಿಗಳಿಗೆ ಧನ್ಯತಾಭಾವ ಮೂಡಬೇಕು ಅಂತಹ ವಾತಾವರಣ ಇಲ್ಲಿ ನಿರ್ಮಾಣಗೊಳ್ಳಬೇಕು ಎಂದು ಅವರು ಮುಂದಿನ ದಿನಗಳಲ್ಲಿ ಸರ್ಕಾರದಿಂದಲೇ ಪ್ರಾಧಿಕಾರ ರಚಿಸಿ ನಿರ್ವಹಣೆಗೆ ಕ್ರಮ ವಹಿಸಲಾಗುವುದು ಎಂದರು.

ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯಿಂದಾಗಿ ಕೆರೆಕಟ್ಟೆ ಕಾಲ್ವೆಗಳು ಅಲ್ಲಲ್ಲಿ ಹಾಳಾಗಿದ್ದು ಅವುಗಳನ್ನು ದುರಸ್ತಿಗೊಳಿಸಲು ತುರ್ತು ಕ್ರಮ ಕೈಗೊಳ್ಳಲಾಗುವುದು. ಸೊರಬ, ಜಡೆ ಹಾಗೂ ಆನವಟ್ಟಿಗಳಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಶೀಘ್ರದಲ್ಲಿ ಮೇಲ್ದರ್ಜೆಗೇರಿಸಲಾಗುವುದು ಹಾಗೆಯೇ ಕೊರತೆ ಇರುವ ಎಲ್ಲ ತಜ್ಞ ವೈದ್ಯರುಗಳು ಹಾಗೂ ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞರನ್ನು ಮುಂದಿನ ಒಂದು ತಿಂಗಳೊಳಗಾಗಿ ನೇಮಿಸಲಾಗುವುದು ಎಂದವರು ನುಡಿದರು.

ಸಭೆಯಲ್ಲಿ ಸಾಗರದ ಒಬ್ಬ ವಿಭಾಗಾಧಿಕಾರಿ ಯತೀಶ್, ತಹಶೀಲ್ದಾರ್ ಮಂಜುಳಾ ಹೆಗಡಾಳ, ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿ ಡಾ. ಪ್ರದೀಪ್ ಕುಮಾರ್, ದೇವಾಲಯದ ಆಡಳಿತಾಧಿಕಾರಿ ಪ್ರಮೀಳಾ, ಗ್ರಾಮ ಪಂಚಾಯಿತಿ ಅಧ್ಯಕ್ಷ ಸರಿತಾ, ಉಪಾಧ್ಯಕ್ಷ ರೇಣುಕಾ ಪ್ರಸಾದ್ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

Share. Facebook Twitter LinkedIn WhatsApp Email

Related Posts

BREAKING : ಮಹಿಳೆಯರ ಫೋಟೋ ಅಶ್ಲೀಲವಾಗಿ ಎಡಿಟ್ ಮಾಡಿ ಪೋಸ್ಟ್ : ಬೆಂಗಳೂರಲ್ಲಿ ಕಾಮುಕ ಅರೆಸ್ಟ್

11/05/2025 6:02 PM1 Min Read

BIG NEWS : ಕಾಶ್ಮೀರದ ಕೃಷಿ ವಿಜ್ಞಾನ ವಿವಿಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

11/05/2025 3:35 PM1 Min Read

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

11/05/2025 3:22 PM1 Min Read
Recent News

BREAKING : ಆಪರೇಷನ್ ಸಿಂಧೂರ್ ನಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ : ಭಾರತೀಯ ಸೇನೆ ಸ್ಪಷ್ಟನೆ

11/05/2025 7:30 PM

BREAKING : ಪಾಕಿಸ್ತಾನ ಕರೆ ಮಾಡಿ ಮನವಿ ಮಾಡಿದಕ್ಕೆ ‘ಕದನ ವಿರಾಮ’ ಘೋಷಣೆ : DGMO ರಾಜೀವ್ ಘಾಯ್ ಸ್ಪಷ್ಟನೆ

11/05/2025 7:25 PM

BREAKING : ಪಾಕಿಸ್ತಾನದ 35-40 ಸೈನಿಕರನ್ನು ಕೊಂದಿದ್ದೇವೆ : ಏರ್ ಮಾರ್ಷಲ್ ಅವಧೆಶ್ ಕುಮಾರ್ ಭಾರ್ತಿ ಹೇಳಿಕೆ

11/05/2025 7:08 PM

BREAKING : ‘ಆಪರೇಷನ್ ಸಿಂಧೂರ್’ ನಲ್ಲಿ ಉಗ್ರರ ನೆಲೆಗಳನ್ನು ನಾಶ ಮಾಡಿರೋ ಸಾಕ್ಷಿಗಳಿವೆ : ಫೋಟೋ ರಿಲೀಸ್ ಮಾಡಿದ ಸೇನೆ

11/05/2025 6:55 PM
State News
KARNATAKA

BREAKING : ಮಹಿಳೆಯರ ಫೋಟೋ ಅಶ್ಲೀಲವಾಗಿ ಎಡಿಟ್ ಮಾಡಿ ಪೋಸ್ಟ್ : ಬೆಂಗಳೂರಲ್ಲಿ ಕಾಮುಕ ಅರೆಸ್ಟ್

By kannadanewsnow0511/05/2025 6:02 PM KARNATAKA 1 Min Read

ಬೆಂಗಳೂರು : ಬೆಂಗಳೂರು ಮಹಿಳೆಯರಿಗೆ ಸೇಫ್ ಅಲ್ಲ ಅನ್ನೋದು ಮತ್ತೆ ಮತ್ತೆ ಸಾಬೀತು ಆಗ್ತಿದೆ. ಇದೀಗ ಮಹಿಳಾ ಸಹೋದ್ಯೋಗಿಗಳ ಭಾವಚಿತ್ರಗಳನ್ನು…

BIG NEWS : ಕಾಶ್ಮೀರದ ಕೃಷಿ ವಿಜ್ಞಾನ ವಿವಿಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

11/05/2025 3:35 PM

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

11/05/2025 3:22 PM

BREAKING : ಬಾಗಲಕೋಟೆಯಲ್ಲಿ ಭೀಕರ ಅಪಘಾತ : ಟಿಪ್ಪರ್ ಹರಿದು ಬೈಕ್ ಸವಾರ ದುರ್ಮರಣ

11/05/2025 2:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.