Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS: ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸಿಎಂ ಸಿದ್ಧರಾಮಯ್ಯ ಸಿಹಿಸುದ್ದಿ: ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್

10/05/2025 5:59 AM

Transfer of Government Employees : ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌..!

10/05/2025 5:51 AM
Meeting for permanent solution for Sharavathi flood victims: Promises early solution to decades-old problems

ಶರಾವತಿ ಮುಳುಗಡೆ ಸಂತ್ರಸ್ತರ ಶಾಶ್ವತ ಪರಿಹಾರಕ್ಕಾಗಿ ಸಭೆ: ದಶಕಗಳ ಸಮಸ್ಯೆಗಳಿಗೆ ಶೀಘ್ರದಲ್ಲಿಯೇ ಪರಿಹಾರದ ಭರವಸೆ

10/05/2025 5:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು- ವಿಜಯಪುರ ನಡುವಿನ ರೈಲು ಪ್ರಯಾಣದ ಅವಧಿ ಇಳಿಸಲು ಕ್ರಮ- ಸಚಿವ ಎಂ.ಬಿ ಪಾಟೀಲ
KARNATAKA

ಬೆಂಗಳೂರು- ವಿಜಯಪುರ ನಡುವಿನ ರೈಲು ಪ್ರಯಾಣದ ಅವಧಿ ಇಳಿಸಲು ಕ್ರಮ- ಸಚಿವ ಎಂ.ಬಿ ಪಾಟೀಲ

By kannadanewsnow0915/03/2024 8:54 PM

ಬೆಂಗಳೂರು: ರಾಜಧಾನಿಯಿಂದ ವಿಜಯಪುರ ಮತ್ತು ಬಾಗಲಕೋಟೆಗಳಿಗೆ ರೈಲು ಪ್ರಯಾಣಕ್ಕೆ ಈಗ ಸುಮಾರು 14 ಗಂಟೆಗಳ ಕಾಲ ಹಿಡಿಸುತ್ತಿದ್ದು, ಇದನ್ನು 10 ಗಂಟೆಗಳಿಗೆ ಇಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ರೈಲ್ವೆ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ. ಇದರಿಂದಾಗಿ, ವಾಯವ್ಯ ಕರ್ನಾಟಕದ ಜನರು ಬೆಂಗಳೂರಿಗೆ ಬಂದುಹೋಗಲು ಅನುಕೂಲವಾಗಲಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಶುಕ್ರವಾರ ಹೇಳಿದ್ದಾರೆ.

ರೈಲು ಪ್ರಯಾಣವನ್ನು ಅನುಕೂಲಕರ ಮತ್ತು ಸುಖದಾಯಕವನ್ನಾಗಿ ಮಾಡಲು ಹಾಗೂ ಮಂದಗತಿಯಲ್ಲಿ ಸಾಗುತ್ತಿರುವ ವೆಚ್ಚ ಹಂಚಿಕೆಯ 9 ರೈಲು ಯೋಜನೆಗಳ ಸ್ಥಿತಿಗತಿ ಬಗ್ಗೆ ಚರ್ಚಿಸಲು ಖನಿಜ ಭವನದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಮತ್ತು ನೈರುತ್ಯ ರೈಲ್ವೆ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು.

ಬಳಿಕ ಮಾತನಾಡಿದ ಅವರು, ಬೆಂಗಳೂರು- ವಿಜಯಪುರ ನಡುವಿನ 660 ಕಿ.ಮೀ ರೈಲು ಪ್ರಯಾಣಕ್ಕೆ ಈಗ ಸುಮಾರು 14 ಗಂಟೆ ಸಮಯ ಹಿಡಿಸುತ್ತಿದೆ. ಬೆಂಗಳೂರಿನಿಂದ ಹೊರಡುವ ರೈಲುಗಳು ಈಗ ಹುಬ್ಬಳ್ಳಿ ನಿಲ್ದಾಣಕ್ಕೆ ಹೋಗುತ್ತಿದ್ದು, ಅಲ್ಲಿ ಎಂಜಿನ್ ಬದಲಿಸಲು 45 ನಿಮಿಷ ನಿಲ್ಲುತ್ತವೆ. ಬಳಿಕ, ಗದಗದಲ್ಲೂ ಹೀಗೆಯೇ ಸಮಯ ವ್ಯರ್ಥವಾಗುತ್ತಿದೆ. ಆದ್ದರಿಂದ, ರೈಲುಗಳು ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಹೋಗುವ ಬದಲು ಹುಬ್ಬಳ್ಳಿ (ದಕ್ಷಿಣ) ನಿಲ್ದಾಣ ಬೈಪಾಸ್ ಮತ್ತು ಗದಗ ಬೈಪಾಸ್ ಮೂಲಕ ಸಾಗುವ ವ್ಯವಸ್ಥೆ ಮಾಡಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕು ಎಂದು ಅವರು ಸೂಚಿಸಿದರು.

ಈಗಾಗಲೇ ಬೆಂಗಳೂರು-ಹುಬ್ಬಳ್ಳಿ-ಬಾಗಲಕೋಟೆ ನಡುವೆ ಜೋಡಿ ಹಳಿ ಇದೆ. ಬಾಗಲಕೋಟೆ-ವಿಜಯಪುರ ಮಧ್ಯೆ ಆಲಮಟ್ಟಿಯವರೆಗೂ ದ್ವಿಪಥ ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿದ್ದು, ಈ ವರ್ಷದ ಸೆಪ್ಟೆಂಬರ್ ಹೊತ್ತಿಗೆ ಮುಗಿಯಲಿದೆ. ಇಲ್ಲಿ ಆಲಮಟ್ಟಿ-ವಂಡಾಳ್ ಮಧ್ಯೆ 9 ಕಿ.ಮೀ. ಮಾತ್ರ ಕಾಮಗಾರಿ ಬಾಕಿ ಉಳಿದಿದ್ದು, ಇಲ್ಲಿ ಸೇತುವೆ ಕಾಮಗಾರಿ ನಡೆಯಬೇಕಿದೆ. ಇದನ್ನು 2025ರ ಆಗಸ್ಟ್ ವೇಳೆಗೆ ಪೂರ್ಣಗೊಳಿಸಲಾಗುವುದು. ಜೊತೆಗೆ, ಇನ್ನು ಎರಡು ತಿಂಗಳಲ್ಲಿ ಈ ಮಾರ್ಗದಲ್ಲಿ ಬಾಕಿ ಇರುವ ವಿದ್ಯುದೀಕರಣ ಕೂಡ ಮುಗಿಯಲಿದೆ ಎಂದು ಅವರು ವಿವರಿಸಿದರು.

ಈ ಕ್ರಮಗಳ ಜೊತೆಗೆ ಬೆಂಗಳೂರಿನಿಂದ ವಿಜಯಪುರ, ಬಾಗಲಕೋಟೆಗಳಿಗೆ ವಿಶೇಷ ರೈಲುಗಳನ್ನು ಓಡಿಸಬೇಕಾದ ಅಗತ್ಯವಿದೆ. ಮಿಗಿಲಾಗಿ, ವಿದ್ಯುದೀಕರಣ ಕಾಮಗಾರಿ ಮುಗಿದರೆ ವಿಜಯಪುರ, ಬಾಗಲಕೋಟೆಗಳಿಗೆ `ವಂದೇ ಭಾರತ್’ ಎಕ್ಸಪ್ರೆಸ್ ರೈಲು ಸೇವೆ ಆರಂಭಿಸುವಂತೆ ರೈಲ್ವೆ ಮಂಡಳಿಯನ್ನು ಕೋರಲಾಗುವುದು ಎಂದು ಪಾಟೀಲ ತಿಳಿಸಿದರು.

ವೆಚ್ಚ ಹಂಚಿಕೆ ಯೋಜನೆಗಳಿಗೆ ಗಡುವು

ರಾಜ್ಯದಲ್ಲಿ ರೈಲ್ವೆಯೊಂದಿಗೆ ವೆಚ್ಚ ಹಂಚಿಕೆ ಆಧಾರದ ಮೇಲೆ 9 ರೈಲ್ವೆ ಯೋಜನೆಗಳು ಪ್ರಗತಿಯಲ್ಲಿವೆ. ಆದರೆ, ಇವು ಕಾಲಮಿತಿಯಲ್ಲಿ ಪೂರ್ಣಗೊಳ್ಳದೆ ಇರುವುದರಿಂದ ವೆಚ್ಚ ಮಿತಿ ಮೀರುತ್ತಿದೆ. ಆದ್ದರಿಂದ ಇವುಗಳ ವೆಚ್ಚ ಹೆಚ್ಚಾಗದಂತೆ ನೋಡಿಕೊಂಡು, ತ್ವರಿತ ಗತಿಯಲ್ಲಿ ಮುಗಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಹೇಳಿದರು.

ಈ ಪೈಕಿ ಮುನಿರಾಬಾದ್- ಮೆಹಬೂಬ್ ನಗರ ಯೋಜನೆಯನ್ನು 2026ರ ಮಾರ್ಚ್ ವೇಳೆಗೆ, ತುಮಕೂರು- ರಾಯದುರ್ಗ ಯೋಜನೆಯನ್ನು 2027ರ ಡಿಸೆಂಬರ್ ಹೊತ್ತಿಗೆ, ಚಿಕ್ಕಮಗಳೂರು-ಬೇಲೂರು ಯೋಜನೆಯನ್ನು 2026ರ ಹೊತ್ತಿಗೆ, ಬಾಗಲಕೋಟೆ-ಕುಡಚಿ ಯೋಜನೆಯನ್ನು 2027ರ ವೇಳೆಗೆ ಮುಗಿಸಬೇಕು. ತುಮಕೂರು- ದಾವಣಗೆರೆ ಯೋಜನೆಗೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆ ಮುಗಿದಿದೆ. ಇದರಲ್ಲಿ ರಾಜ್ಯವು ಒಂದು ಪಥದ ಅಭಿವೃದ್ಧಿಗೆ ಮಾತ್ರ ವೆಚ್ಚ ಭರಿಸುತ್ತಿದೆ. ಆದರೆ, ರೈಲ್ವೆ ಇಲಾಖೆಯು ಈಗಾಗಲೇ ಜೋಡಿ ಹಳಿ ಹಾಕಲು ತೀರ್ಮಾನಿಸಿರುವುದು ಒಳ್ಳೆಯ ಬೆಳವಣಿಗೆ. ಇದನ್ನು 2027ಕ್ಕೆ ಮುಗಿಸಬೇಕು. ಇದರಿಂದ ಬಾಗಲಕೋಟೆ ಮತ್ತು ವಿಜಯಪುರಗಳ ನಡುವಿನ ನೇರ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಅವರು ಸೂಚಿಸಿದರು.

ಗದಗ-ವಾಡಿ ಮಾರ್ಗದಲ್ಲಿ ಬರುವ ಹಳಕಟ್ಟೆ ಎಂಬಲ್ಲಿ ಭೂಸ್ವಾಧೀನದ ಸಮಸ್ಯೆ ಎದುರಾಗಿದೆ. ಆರ್ ಟಿಸಿಯಲ್ಲಿ ಒಬ್ಬರ ಹೆಸರು ಇದ್ದರೆ, ವಾಸ್ತವದಲ್ಲಿ ಆ ಜಾಗದಲ್ಲಿ ಬೇರೆಯವರಾರೋ ಇರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದು, ಇದನ್ನು ಶೀಘ್ರವೇ ಬಗೆಹರಿಸುವಂತೆ ಸೂಚಿಸಲಾಗಿದೆ ಎಂದು ಅವರು ನುಡಿದರು.

ಸಭೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ.ಎನ್ ಮಂಜುಳಾ, ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸತೀಶ, ನೈರುತ್ಯ ರೈಲ್ವೆಯ ಮುಖ್ಯ ಆಡಳಿತಾಧಿಕಾರಿ, ರಾಮಗೋಪಾಲ್, ರೈಲ್ವೆಯ ಯೋಜನಾ ವಿಭಾಗದ ಮುಖ್ಯ ಎಂಜಿನಿಯರ್ ಮೂರ್ತಿ ರಾಜು, ಕೈಗಾರಿಕಾ ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ ಉಪಸ್ಥಿತರಿದ್ದರು.

ರಾಮನಗರದಲ್ಲಿ 20 ಕೆಪಿಎಸ್ ಶಾಲೆಗಳ ನಿರ್ಮಾಣಕ್ಕೆ ಒಪ್ಪಂದ: ಡಿಸಿಎಂ ಡಿ.ಕೆ. ಶಿವಕುಮಾರ್

ಬಿಹಾರ ಸಚಿವ ಸಂಪುಟ ವಿಸ್ತರಣೆ : ಮಾಜಿ ಡಿಸಿಎಂ ‘ರೇಣು ದೇವಿ ಸೇರಿ 21 ನಾಯಕ’ರು ‘ನಿತೀಶ್ ಕುಮಾರ್’ ಪಡೆಗೆ ಸೇರ್ಪಡೆ

ಬೆಂಗಳೂರು- ವಿಜಯಪುರ ನಡುವಿನ ರೈಲು ಪ್ರಯಾಣದ ಅವಧಿ ಇಳಿಸಲು ಕ್ರಮ- ಸಚಿವ ಎಂ.ಬಿ ಪಾಟೀಲ Steps will be taken to reduce the duration of train travel between Bengaluru and Vijayapura: Minister M B Patil
Share. Facebook Twitter LinkedIn WhatsApp Email

Related Posts

GOOD NEWS: ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸಿಎಂ ಸಿದ್ಧರಾಮಯ್ಯ ಸಿಹಿಸುದ್ದಿ: ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್

10/05/2025 5:59 AM1 Min Read

Transfer of Government Employees : ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌..!

10/05/2025 5:51 AM1 Min Read
Meeting for permanent solution for Sharavathi flood victims: Promises early solution to decades-old problems

ಶರಾವತಿ ಮುಳುಗಡೆ ಸಂತ್ರಸ್ತರ ಶಾಶ್ವತ ಪರಿಹಾರಕ್ಕಾಗಿ ಸಭೆ: ದಶಕಗಳ ಸಮಸ್ಯೆಗಳಿಗೆ ಶೀಘ್ರದಲ್ಲಿಯೇ ಪರಿಹಾರದ ಭರವಸೆ

10/05/2025 5:45 AM2 Mins Read
Recent News

GOOD NEWS: ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸಿಎಂ ಸಿದ್ಧರಾಮಯ್ಯ ಸಿಹಿಸುದ್ದಿ: ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್

10/05/2025 5:59 AM

Transfer of Government Employees : ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌..!

10/05/2025 5:51 AM
Meeting for permanent solution for Sharavathi flood victims: Promises early solution to decades-old problems

ಶರಾವತಿ ಮುಳುಗಡೆ ಸಂತ್ರಸ್ತರ ಶಾಶ್ವತ ಪರಿಹಾರಕ್ಕಾಗಿ ಸಭೆ: ದಶಕಗಳ ಸಮಸ್ಯೆಗಳಿಗೆ ಶೀಘ್ರದಲ್ಲಿಯೇ ಪರಿಹಾರದ ಭರವಸೆ

10/05/2025 5:45 AM

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

10/05/2025 5:30 AM
State News
KARNATAKA

GOOD NEWS: ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸಿಎಂ ಸಿದ್ಧರಾಮಯ್ಯ ಸಿಹಿಸುದ್ದಿ: ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್

By kannadanewsnow0910/05/2025 5:59 AM KARNATAKA 1 Min Read

ಬೆಂಗಳೂರು: ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಿಹಿಸುದ್ದಿ ನೀಡಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ರೂ.1000 ತಂಡ ಆಧಾರಿತ ಪ್ರೋತ್ಸಾಹಧನವನ್ನು ಪಾವತಿಸಲು…

Transfer of Government Employees : ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌..!

10/05/2025 5:51 AM
Meeting for permanent solution for Sharavathi flood victims: Promises early solution to decades-old problems

ಶರಾವತಿ ಮುಳುಗಡೆ ಸಂತ್ರಸ್ತರ ಶಾಶ್ವತ ಪರಿಹಾರಕ್ಕಾಗಿ ಸಭೆ: ದಶಕಗಳ ಸಮಸ್ಯೆಗಳಿಗೆ ಶೀಘ್ರದಲ್ಲಿಯೇ ಪರಿಹಾರದ ಭರವಸೆ

10/05/2025 5:45 AM

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

10/05/2025 5:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.