Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ಮಗನ ಕಣ್ಣೆದುರೇ ನದಿಯಲ್ಲಿ ನೀರು ಪಾಲಾದ ತಂದೆ!

BREAKING :ಲುಧಿಯಾನ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ : ಮೂವರು ಕಾರ್ಮಿಕರು ಸಾವು, ನಾಲ್ವರ ಸ್ಥಿತಿ ಗಂಭೀರ

ಸಾಗರದ ಮಾರಿ ಜಾತ್ರೆ ಅನುದಾನದ ಬಗ್ಗೆ ಸತ್ಯ ಸಾರ್ವಜನಿಕರ ಮುಂದಿದೆ: ಟೌನ್ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಬಾಬು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಭದ್ರಾ ಜಲಾಶಯ ಅಚ್ಚುಕಟ್ಟು ಕೊನೆ ಭಾಗಕ್ಕೂ ನೀರು ಪೂರೈಸಲು ಕ್ರಮ: ದಾವಣಗೆರೆ ಡಿಸಿ ಗಂಗಾಧರ ಸ್ವಾಮಿ
KARNATAKA

ಭದ್ರಾ ಜಲಾಶಯ ಅಚ್ಚುಕಟ್ಟು ಕೊನೆ ಭಾಗಕ್ಕೂ ನೀರು ಪೂರೈಸಲು ಕ್ರಮ: ದಾವಣಗೆರೆ ಡಿಸಿ ಗಂಗಾಧರ ಸ್ವಾಮಿ

By ವಸಂತ ಬಿ ಈಶ್ವರಗೆರೆ

ದಾವಣಗೆರೆ : ಭದ್ರಾ ಜಲಾಶಯದ ಕಾಲುವೆ ಮೂಲಕ ಬಿಡುವ ನೀರು ಕೊನೆ ಭಾಗದ ಅಚ್ಚುಕಟ್ಟು ದಾರರಿಗೂ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಜಿ.ಎಂ ತಿಳಿಸಿದರು.

ಶನಿವಾರ(ಮಾ.01) ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಭದ್ರಾಅಚ್ಚುಕಟ್ಟು ಪ್ರದೇಶದ ರೈತರೊಂದಿಗೆ ನಡೆಸಿದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಭದ್ರಾ ಜಲಾಶಯದಿಂದ ಅಚ್ಚುಕಟ್ಟು ದಾರರಿಗೆ ನೀರು ಹರಿಸಿ ಒಂದೆರಡು ದಿನಗಳಲ್ಲಿ ನಿಮ್ಮ ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದು ರೈತರಿಗೆ ಭರವಸೆ ನೀಡಿದರು, ಕಾಲುವೆಗಳಿಗೆ ಅನಧಿಕೃತವಾಗಿ ಪಂಪ್ ಅಳವಡಿಸಿ ನೀರೆತ್ತಲಾಗುತ್ತಿದೆ, ಇದರಿಂದ ಕೊನೆ ಭಾಗದ ರೈತರಿಗೆ ನೀರು ಸಿಗುತ್ತಿಲ್ಲ. ಅನಧಿಕೃತ ಪಂಪ್ ಗಳನ್ನು ತೆರವು ಮಾಡಿ ವಿದ್ಯುತ್ ಸಂಪರ್ಕವನ್ನು ಕಡಿತ ಮಾಡಲಾಗುತ್ತದೆ ಎಂದರು.

ಬೇಸಿಗೆಯಾಗಿರುವುದರಿಂದ ಗೇಟ್ ಗಳಲ್ಲಿ ನೀರಿನ ಸೋರಿಕೆ ಮತ್ತು ಕಾಲುವೆ ದುರಸ್ಥಿಗೆ ಅಗತ್ಯ ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಕಳುಹಿಸಲಾಗುತ್ತದೆ ಎಂದು ರೈತರಿಗೆ ತಿಳಿಸಿದರು.

ಕಾಲುವೆಗಳ ನೀರು ನಿರ್ವಹಣೆಗೆ ಸಿಬ್ಬಂದಿಗಳ ಕೊರತೆ ಇದ್ದು ಈ ಸಮಸ್ಯೆಯನ್ನು ಬಗೆಹರಿಸಲು ಅಧೀಕ್ಷಕ ಇಂಜಿನಿಯರ್ ಗೆ ಸೂಚಿಸಿದರು.

ಶಾಸಕರಾದ ಬಿ.ಪಿ ಹರೀಶ್ ಮಾತನಾಡಿ ಜಲಾಶಯದ ದುರಸ್ಥಿ ಮಾಡಿಸಿ, ಭದ್ರಾ ಇಂಜಿನಿಯರ್‍ಗಳು ವೈಜ್ಞಾನಿಕ ತಂತ್ರಜ್ಞಾನ ಬಳಸಿ ನೀರು ಪೆÇೀಲಾಗದಂತೆ ಕ್ರಮ ತೆಗೆದುಕೊಳ್ಳಬೇಕೆಂದರು. ಭದ್ರಾ ನಾಲೆ ಅಚ್ಚುಕಟ್ಟು ಪ್ರದೇಶದ ಬಹುತೇಕ ಭಾಗದಲ್ಲಿ ನೀರಾವರಿ ಕಟ್ಟಡ ಹಾಗೂ ನಾಲೆಯ ಗೇಟ್‍ಗಳು ಹಾಳಾಗಿವೆ. ಆದ್ದರಿಂದ ನೀರು ಹೆಚ್ಚಿನ ಪ್ರಮಾಣದಲ್ಲಿ ಪೋಲಾಗುತ್ತಿದೆ ಎಂದು ವಿವರಿಸಿದರು.

ಸಿಬ್ಬಂದಿ ಕೊರತೆಯಿಂದ ಬಸವಾಪಟ್ಟಣ ಕೊನೆ ಭಾಗಕ್ಕೆ ನೀರು ತಲುಪಿಲ್ಲ ಎಂದು ಎಇಇ ಧನಂಜಯ ಸ್ಪಷ್ಟನೆ ನೀಡಿದರು.

ಭದ್ರಾ ಜಲಾಶಯದಿಂದ ನೀರು ಹರಿಸಿ 50 ದಿನ ಕಳೆದಿದೆ, ಇನ್ನೂ 70 ದಿನ ಮಾತ್ರ ಬಾಕಿ ಉಳಿದಿದೆ. ಕೊನೆ ಭಾಗದ ಅಚ್ಚುಕಟ್ಟು ಪ್ರದೇಶಗಳಾದ ಮಲೇಬೆನ್ನೂರು, ಬಸವಪಟ್ಟಣದ ರೈತರ ಜಮೀನುಗಳಿಗೆ ನೀರು ಇನ್ನೂ ತಲುಪಿಲ್ಲ. ಭದ್ರಾ ಜಲಾಶಯದ ನೀರು ಜಿಲ್ಲೆಯ ಜೀವನಾಡಿಯಾಗಿದ್ದು, ಈ ನೀರು ನಂಬಿ ಲಕ್ಷಾಂತರ ಎಕರೆ ಭೂಮಿಯಲ್ಲಿ ರೈತರು ಬೆಳೆ ಬೆಳೆಯುತ್ತಿದ್ದಾರೆ. ತಿಂಗಳು ಸಮೀಪವಾದರೂ ಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಬರುತ್ತಿಲ್ಲ. ಭದ್ರಾ ಜಲಾಶಯದ ನೀರನ್ನು ನಂಬಿ ಭತ್ತ ನಾಟಿ ಮಾಡಿರುವ ಲಕ್ಷಾಂತರ ರೈತರು ನೀರಿಗಾಗಿ ಕಾದು ಕುಳಿತಿದ್ದಾರೆ. ಮಲೇಬೆನ್ನೂರಿನ ಕೊನೆ ಭಾಗದ ರೈತರು ಸೇರಿದಂತೆ ಹತ್ತಾರು ಹಳ್ಳಿಗಳು ನೀರಿನ ದಾರಿ ಕಾಯುತ್ತಿವೆ. ತಿಂಗಳು ಸಮೀಪವಾದರೂ ಈ ಪ್ರದೇಶಕ್ಕೆ ನೀರು ಬರುತ್ತಿಲ್ಲ ಎಂದು ರೈತರು ಅಕ್ರೋಶ ವ್ಯಕ್ತ ಪಡಿಸಿದರು.

ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಹೆಚ್ಚುವರಿ ಪೋಲೀಸ್ ಅಧೀಕ್ಷಕರಾದ ಮಂಜುನಾಥ, ಜಿಲ್ಲಾ ಯೋಜನಾ ನಿರ್ದೇಶಕರಾದ ಮಹಾಂತೇಶ್ ಉಪಸ್ಥಿತರಿದ್ದರು.

ರಾಜ್ಯ ಸರ್ಕಾರದಿಂದ ‘ಕಳಪೆ ಮೆಡಿಸಿನ್’ ತಡೆಗೆ ಮಹತ್ವದ ಕ್ರಮ: 17 ಲಕ್ಷ ಮೌಲ್ಯದ ‘ಔಷಧ ವಾಪಾಸ್’

BIG NEWS: ಇನ್ಮುಂದೆ ಕರ್ನಾಟಕದಲ್ಲಿ ತಯಾರಾಗುವ, ಮಾರಾಟವಾಗುವ ಉತ್ಪನ್ನಗಳ ಮೇಲೆ ಕನ್ನಡ ಬಳಕೆ ಕಡ್ಡಾಯ: ಸರ್ಕಾರ ಆದೇಶ

Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ಮಗನ ಕಣ್ಣೆದುರೇ ನದಿಯಲ್ಲಿ ನೀರು ಪಾಲಾದ ತಂದೆ!

1 Min Read

ಸಾಗರದ ಮಾರಿ ಜಾತ್ರೆ ಅನುದಾನದ ಬಗ್ಗೆ ಸತ್ಯ ಸಾರ್ವಜನಿಕರ ಮುಂದಿದೆ: ಟೌನ್ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಬಾಬು

2 Mins Read

BIG NEWS : ಸಿದ್ದರಾಮಯ್ಯ ಪುತ್ರ ಯತೀಂದ್ರಗೆ ಸಚಿವ ಸ್ಥಾನ ಬಹುತೇಕ ಫಿಕ್ಸ್!

2 Mins Read
Recent News

SHOCKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ಮಗನ ಕಣ್ಣೆದುರೇ ನದಿಯಲ್ಲಿ ನೀರು ಪಾಲಾದ ತಂದೆ!

BREAKING :ಲುಧಿಯಾನ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ : ಮೂವರು ಕಾರ್ಮಿಕರು ಸಾವು, ನಾಲ್ವರ ಸ್ಥಿತಿ ಗಂಭೀರ

ಸಾಗರದ ಮಾರಿ ಜಾತ್ರೆ ಅನುದಾನದ ಬಗ್ಗೆ ಸತ್ಯ ಸಾರ್ವಜನಿಕರ ಮುಂದಿದೆ: ಟೌನ್ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಬಾಬು

ಸ್ಕೂಟಿ ಪಾಕೆಟ್‌ ನಲ್ಲಿ ಗೂಡು ಕಟ್ಟಿ ಮೊಟ್ಟೆಯಿಟ್ಟ ಗುಬ್ಬಚ್ಚಿ : ಬಿಸಿಲಿನ ಬೇಗೆಗೆ ಹಕ್ಕಿಯ ವಿಭಿನ್ನ ಐಡಿಯಾ.!

State News
KARNATAKA

SHOCKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ಮಗನ ಕಣ್ಣೆದುರೇ ನದಿಯಲ್ಲಿ ನೀರು ಪಾಲಾದ ತಂದೆ!

By ಸುರೇಶ್‌ KARNATAKA 1 Min Read

ಕಲಬುರ್ಗಿ: ರಾಜ್ಯದಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಕಣ್ಣೆದುರೇ ಹೆತ್ತ ತಂದೆ ನದಿಯ ನೀರಿನಲ್ಲಿ ಮುಳುಗುತ್ತಿದ್ದರೂ ಏನೂ ಮಾಡಲಾಗದ ಅಸಹಾಯಕ…

ಸಾಗರದ ಮಾರಿ ಜಾತ್ರೆ ಅನುದಾನದ ಬಗ್ಗೆ ಸತ್ಯ ಸಾರ್ವಜನಿಕರ ಮುಂದಿದೆ: ಟೌನ್ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಬಾಬು

BIG NEWS : ಸಿದ್ದರಾಮಯ್ಯ ಪುತ್ರ ಯತೀಂದ್ರಗೆ ಸಚಿವ ಸ್ಥಾನ ಬಹುತೇಕ ಫಿಕ್ಸ್!

BREAKING : ದಾವಣಗೆರೆ ಬೈ ಎಲೆಕ್ಷನ್ ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ರಾ ಜಮೀರ್? : ಸ್ಪೋಟಕ ಆಡಿಯೋ ವೈರಲ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.