Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

IPL 2025: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ RCB ಪಂದ್ಯಕ್ಕೆ ಮಳೆ ಅಡ್ಡಿ?

17/05/2025 8:17 AM

SHOCKING : `ಚಾಕೋಲೆಟ್’ ಪ್ರಿಯರಿಗೆ ಶಾಕಿಂಗ್ ನ್ಯೂಸ್ : ಆಲ್ಕೋಹಾಲ್ ಅಂಶ ಪತ್ತೆ ಹಿನ್ನೆಲೆ ರಾಜ್ಯಾದ್ಯಂತ ಮಾದರಿ ಸಂಗ್ರಹ.!

17/05/2025 8:16 AM

ಬೆಂಗಳೂರು ಇಸ್ಕಾನ್ ಹರೇ ಕೃಷ್ಣ ದೇಗುಲದ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು | Hare Krishna Temple

17/05/2025 8:12 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಲೋಕಸಭೆ ಚುನಾವಣೆಯಯಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕಟ್ಟುನಿಟ್ಟಿನ ಕ್ರಮ : ರಾಜ್ಯ ಮುಖ್ಯ ಚುನಾವಣಾಧಿಕಾರಿ ಮಹತ್ವದ ಸೂಚನೆ
KARNATAKA

ಲೋಕಸಭೆ ಚುನಾವಣೆಯಯಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕಟ್ಟುನಿಟ್ಟಿನ ಕ್ರಮ : ರಾಜ್ಯ ಮುಖ್ಯ ಚುನಾವಣಾಧಿಕಾರಿ ಮಹತ್ವದ ಸೂಚನೆ

By kannadanewsnow5724/03/2024 6:15 AM

ಬೆಂಗಳೂರು : ರಾಜ್ಯದಲ್ಲಿ ಎರಡು ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು, ಚುನಾವಣೆ ಪ್ರಕ್ರಿಯೆಯಲ್ಲಿ ಕಾನೂನು ಹಾಗೂ ನೀತಿ ಸಂಹಿತೆ ಯಾವುದೇ ಕಾರಣಕ್ಕೂ ಉಲ್ಲಂಘನೆಯಾಗಬಾರದು. ಪ್ರತಿಯೊಬ್ಬರೂ ಜಾಗ್ರತೆ ವಹಿಸಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ಎಲ್ಲಾ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಶನಿವಾರದಂದು, ಲೋಕಸಭೆ ಸಾರ್ವತ್ರಿಕ ಚುನಾವಣೆ – 2024ರ ಸಂಬಂಧ ತಮ್ಮ ಕಚೇರಿಯಿಂದ ಎಲ್ಲಾ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಪಂ ಸಿಇಒ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಸಭೆ ನಡೆಸಿ ಮಾತನಾಡಿದರು.

ಈಗಾಗಲೇ ಲೋಕಸಭೆ ಚುನಾವಣೆಗೆ ವೇಳಾಪಟ್ಟಿ ಘೋಷಣೆಯಾಗಿದ್ದು, ಚುನಾವಣೆಗೆ ತೊಂದರೆ ಉಂಟು ಮಾಡುವ ಅಥವಾ ಅಹಿತಕರ ಘಟನೆ ಸೃಷ್ಟಿಸುವಂತಹ ರೌಡಿ ಶೀಟರ್, ಸಮಾಜ ವಿದ್ರೋಹಿಗಳ ಮೇಲೆ ನಿಗಾ ವಹಿಸಬೇಕು ಎಂದು ಎಲ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದರು.

ಅಂತರ್ ರಾಜ್ಯ ಮತ್ತು ಅಂತರ್ ಜಿಲ್ಲೆ ಗಡಿಭಾಗ ಹೊಂದಿರುವಂತಹ ಜಿಲ್ಲೆಯ ಚೆಕ್ ಪೋಸ್ಟ್ ಗಳಲ್ಲಿ ಹದ್ದಿನ ಕಣ್ಣಿನಂತೆ ನಿಗಾವಹಿಸಬೇಕು. ಅಕ್ರಮ ಮದ್ಯ, ಅನಧಿಕೃತವಾಗಿ ಸಾಗಿಸುವ ಹಣ, ಬೆಲೆಬಾಳುವ ವಸ್ತುಗಳನ್ನು ಜಪ್ತಿ ಮಾಡಬೇಕು. ನಿಗದಿತ ನಮೂನೆಯಲ್ಲಿ ವರದಿ ಸಲ್ಲಿಸಬೇಕು ಎಂದು ಆಯಾ ಜಿಲ್ಲೆಯ ಚುನಾವಣಾಧಿಕಾರಿಗಳಿಗೆ ಸೂಚಿಸಿದರು.

ಚುನಾವಣೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಲು ಕೇಂದ್ರದಿಂದ ಭದ್ರತಾ ಪಡೆಗಳ ನಿಯೋಜನೆ ಮಾಡಲಾಗುತ್ತದೆ. ಅವರಿಗೆ ಎಲ್ಲಾ ತರಹದ ವ್ಯವಸ್ಥೆ ಕೈಗೊಳ್ಳಬೇಕು ಎಂದರು.

ಚೆಕ್ ಪೋಸ್ಟ್ ಗಳಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಕೆ, ಸಮರ್ಪಕ ವಿದ್ಯುತ್ ವ್ಯವಸ್ಥೆ ಹಾಗೂ ಮೂಲ ಸೌಲಭ್ಯ ಒದಗಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ವಾಹನ ತಪಾಸಣೆ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘಯಾಗದಂತೆ ನಿಗಾವಹಿಸಬೇಕು ಎಂದು ಆಯಾ ಜಿಲ್ಲಾ ಚುನಾವಣಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಫ್ಲೈಯಿಂಗ್ ಸ್ಕ್ವಾಡ್‍ಗಳು, ವೀಡಿಯೋ ಸರ್ವೆಲನ್ಸ್, ವೀಡಿಯೋ ವ್ಯೂವಿಂಗ್ ತಂಡಗಳು, ಸ್ಟ್ಯಾಟಿಕ್ ಸರ್ವೆಲನ್ಸ್ ತಂಡಗಳ ವಾಹನಗಳಲ್ಲಿ ಜಿಪಿಎಸ್ ಟ್ರ್ಯಾಕಿಂಗ್ ಅಳವಡಿಸಿರುವ ವಾಹನಗಳನ್ನು ಬಳಸಬೇಕು. ಕಂಟ್ರೋಲ್ ರೂಂ ಗಳ ಕಡೆಗೂ ಗಮನ ಹರಿಸಬೇಕು ಎಂದು ನಿರ್ದೇಶನ ನೀಡಿದರು.

ಮುಕ್ತ ಹಾಗೂ ಶಾಂತಿಯುತ ಚುನಾವಣೆ ನಡೆಸಲು, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಹೊಂದಿರುವ ಪರವಾನಿಗೆದಾರರಿಂದ ಚುನಾವಣೆ ಮುಗಿಯುವವರೆಗೂ ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಠೇವಣಿ ಇಡುವಂತೆ ಸೂಚಿಸಬೇಕು ಎಂದರು.

ಮತದಾನ ನಡೆಯುವ ಮತಗಟ್ಟೆ ಕೇಂದ್ರಗಳ ಪರಿಶೀಲನೆ ನಡೆಸಬೇಕು. ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಲು ಕ್ರಮ ವಹಿಸಬೇಕು. ಅತಿಹೆಚ್ಚು ಮತದಾರರನ್ನು ಹೊಂದಿರುವ ಭಾಗದಲ್ಲಿ ಮತಗಟ್ಟೆ ಕೇಂದ್ರಗಳಲ್ಲಿ ಅವಶ್ಯಕತೆ ಇದ್ದಲ್ಲಿ ಸ್ಥಳೀಯ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಪ್ರಸ್ತಾವನೆ ಪಡೆದುಕೊಳ್ಳಬೇಕು ಎಂದು ಸಿಇಒ ಮನೋಜ್ ಕುಮಾರ್ ಮೀನಾ ಅವರು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅಂಚೆ ಮತದಾನ ಸೇವೆ ಮತ್ತು ಅಗತ್ಯ ಸೇವೆಗಳಗಳಡಿ ಬರುವ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಮತದಾನ ಪ್ರಕ್ರಿಯೆಯಿಂದ ಹೊರಗುಳಿಯಬಾರದು. ಸಂಬಂಧಿಸಿದ ನೋಡೆಲ್ ಅಧಿಕಾರಿಗಳು ನಿಗಾವಹಿಸಬೇಕು. 85 ವರ್ಷಕ್ಕೂ ಮೇಲ್ಪಟ್ಟ ವಯಸ್ಕರು ಹಾಗೂ ವಿಕಲಚೇತನರು ಮನೆಯಲ್ಲಿಯೇ ಮತದಾನ ಮಾಡಲು ಬೇಕಾದ ಎಲ್ಲಾ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.

ಮತದಾರರ ಪಟ್ಟಿಗೆ ಸಂಬಂಧಿಸಿದಂತೆ, ಈಗಾಗಲೇ ಸಲ್ಲಿಸಿರುವ ಅರ್ಜಿಗಳ ವಿಲೇವಾರಿಗೆ ಕ್ರಮ ವಹಿಸಬೇಕು. ಮತಯಂತ್ರಗಳ ಮೊದಲ ಹಂತದ ರ್ಯಾಂಡಮೈಸೇಷನ್ ಕಾರ್ಯವನ್ನು ರಾಜಕೀಯ ಪಕ್ಷಗಳ ಮುಖಂಡರ ಸಮ್ಮುಖದಲ್ಲಿ ಕೈಗೊಳ್ಳಬೇಕು ಎಂದು ಸೂಚಿಸಿದರು.

Strict action will be taken to ensure that model code of conduct is not violated during Lok Sabha elections: State Chief Electoral Officer ಲೋಕಸಭೆ ಚುನಾವಣೆಯಯಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕಟ್ಟುನಿಟ್ಟಿನ ಕ್ರಮ : ರಾಜ್ಯ ಮುಖ್ಯ ಚುನಾವಣಾಧಿಕಾರಿ ಮಹತ್ವದ ಸೂಚನೆ
Share. Facebook Twitter LinkedIn WhatsApp Email

Related Posts

SHOCKING : `ಚಾಕೋಲೆಟ್’ ಪ್ರಿಯರಿಗೆ ಶಾಕಿಂಗ್ ನ್ಯೂಸ್ : ಆಲ್ಕೋಹಾಲ್ ಅಂಶ ಪತ್ತೆ ಹಿನ್ನೆಲೆ ರಾಜ್ಯಾದ್ಯಂತ ಮಾದರಿ ಸಂಗ್ರಹ.!

17/05/2025 8:16 AM1 Min Read

ಬೆಂಗಳೂರು ಇಸ್ಕಾನ್ ಹರೇ ಕೃಷ್ಣ ದೇಗುಲದ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು | Hare Krishna Temple

17/05/2025 8:12 AM1 Min Read

BIG NEWS : ರಾಜ್ಯ ಸರ್ಕಾರಿ ನೌಕರರಿಗೆ `ಆರೋಗ್ಯ ಸಂಜೀವಿನಿ ಯೋಜನೆ’ : `ಘೋಷಣೆ/ಪ್ರಮಾಣ ಪತ್ರ’ದ ಬಗ್ಗೆ ಇಲ್ಲಿದೆ ಮಾಹಿತಿ

17/05/2025 8:09 AM1 Min Read
Recent News

IPL 2025: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ RCB ಪಂದ್ಯಕ್ಕೆ ಮಳೆ ಅಡ್ಡಿ?

17/05/2025 8:17 AM

SHOCKING : `ಚಾಕೋಲೆಟ್’ ಪ್ರಿಯರಿಗೆ ಶಾಕಿಂಗ್ ನ್ಯೂಸ್ : ಆಲ್ಕೋಹಾಲ್ ಅಂಶ ಪತ್ತೆ ಹಿನ್ನೆಲೆ ರಾಜ್ಯಾದ್ಯಂತ ಮಾದರಿ ಸಂಗ್ರಹ.!

17/05/2025 8:16 AM

ಬೆಂಗಳೂರು ಇಸ್ಕಾನ್ ಹರೇ ಕೃಷ್ಣ ದೇಗುಲದ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು | Hare Krishna Temple

17/05/2025 8:12 AM

BIG NEWS : ರಾಜ್ಯ ಸರ್ಕಾರಿ ನೌಕರರಿಗೆ `ಆರೋಗ್ಯ ಸಂಜೀವಿನಿ ಯೋಜನೆ’ : `ಘೋಷಣೆ/ಪ್ರಮಾಣ ಪತ್ರ’ದ ಬಗ್ಗೆ ಇಲ್ಲಿದೆ ಮಾಹಿತಿ

17/05/2025 8:09 AM
State News
KARNATAKA

SHOCKING : `ಚಾಕೋಲೆಟ್’ ಪ್ರಿಯರಿಗೆ ಶಾಕಿಂಗ್ ನ್ಯೂಸ್ : ಆಲ್ಕೋಹಾಲ್ ಅಂಶ ಪತ್ತೆ ಹಿನ್ನೆಲೆ ರಾಜ್ಯಾದ್ಯಂತ ಮಾದರಿ ಸಂಗ್ರಹ.!

By kannadanewsnow5717/05/2025 8:16 AM KARNATAKA 1 Min Read

ಬೆಂಗಳೂರು: ವಿದೇಶದಿಂದ ಆಮದು ಮಾಡಿಕೊಳ್ಳಲಾದ ಚಾಕೋಲೆಟ್ ಗಳಲ್ಲಿ ಆಲ್ಕೋಹಾಲ್ ಅಂಶ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ…

ಬೆಂಗಳೂರು ಇಸ್ಕಾನ್ ಹರೇ ಕೃಷ್ಣ ದೇಗುಲದ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು | Hare Krishna Temple

17/05/2025 8:12 AM

BIG NEWS : ರಾಜ್ಯ ಸರ್ಕಾರಿ ನೌಕರರಿಗೆ `ಆರೋಗ್ಯ ಸಂಜೀವಿನಿ ಯೋಜನೆ’ : `ಘೋಷಣೆ/ಪ್ರಮಾಣ ಪತ್ರ’ದ ಬಗ್ಗೆ ಇಲ್ಲಿದೆ ಮಾಹಿತಿ

17/05/2025 8:09 AM

ಇಂದು ಉದ್ಯಾನ ನಗರಿಯಲ್ಲಿ ‘ಬೆಂಗಳೂರು ಹಬ್ಬ’ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ.!

17/05/2025 8:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.