Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಾರುಕಟ್ಟೆಯಲ್ಲಿ ಅಗ್ಗವಾಗಿ ಸಿಗುವ ಈ ‘ಅಡುಗೆ ಎಣ್ಣೆ’ ತುಂಬಾನೇ ಒಳ್ಳೆಯದು, ನೀವು ಯಾವ್ದು ಬಳಸ್ತೀರಾ!

24/02/2026 10:06 PM

BREAKING : ಫೆ.27ರವೆರೆಗೆ 2026ರ ‘UPSC CSE’ ನೇಮಕಾತಿಗೆ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ

24/02/2026 9:51 PM

BREAKING : ವಿಮಾನ ಅಪಘಾತ ಹೆಚ್ಚಳದ ನಡುವೆ ನಿಗದಿತವಲ್ಲದ ನಿರ್ವಾಹಕರಿಗೆ ಕಠಿಣ ಸುರಕ್ಷತಾ ಕ್ರಮ ಪ್ರಕಟಿಸಿದ ‘DGCA’

24/02/2026 9:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮದ್ದೂರು ನಗರಸಭೆಗೆ ‘ಗೆಜ್ಜಲಗೆರೆ ಗ್ರಾಮ ಪಂಚಾಯ್ತಿ’ ಸೇರ್ಪಡೆಗೆ ತೀವ್ರ ವಿರೋಧ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ
KARNATAKA

ಮದ್ದೂರು ನಗರಸಭೆಗೆ ‘ಗೆಜ್ಜಲಗೆರೆ ಗ್ರಾಮ ಪಂಚಾಯ್ತಿ’ ಸೇರ್ಪಡೆಗೆ ತೀವ್ರ ವಿರೋಧ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ

By kannadanewsnow0922/12/2025 7:39 PM

ಮಂಡ್ಯ : ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮ ಪಂಚಾಯಿತಿಯನ್ನು ಮದ್ದೂರು ನಗರಸಭೆಗೆ ಸೇರ್ಪಡೆಗೊಳಿಸಿರುವುದನ್ನು ವಿರೋಧಿಸಿ ಸ್ಥಳೀಯ ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಕೈಗೊಂಡು ಗ್ರಾಮ ಪಂಚಾಯಿತಿ ಕಚೇರಿ ಎದುರು ಸೋಮವಾರದಿಂದ ಪ್ರತಿಭಟನೆ ಕೈಗೊಂಡಿದ್ದಾರೆ.

ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾ.ಪಂ. ಕಚೇರಿ ಬಳಿ ಆಗಮಿಸಿದ ನೂರಾರು ಸಂಖ್ಯೆಯ ನಿವಾಸಿಗಳು ಪಂಚಾಯಿತಿಯನ್ನು ನಗರಸಭೆಯನ್ನಾಗಿಸಲು ಸಹಿ ಹಾಕಿರುವ ಸ್ಥಳೀಯ ಚುನಾಯಿತ ಪ್ರತಿನಿಧಿಗಳ ವಿರುದ್ಧ ಮತ್ತು ಶಾಸಕರ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯಾದ್ಯಂತ ಇರುವ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬುಡಮೇಲು ಮಾಡಲು ಹೊರಟಿರುವ ಸರ್ಕಾರ ಹಾಗೂ ಶಾಸಕ ವಿರುದ್ಧ ಕಿಡಿಕಾರಿದ ಪ್ರತಿಭಟನಾಕಾರರು ಕೂಡಲೇ ಗೆಜ್ಜಲಗೆರೆ ಪಂಚಾಯಿತಿಯನ್ನು ನಗರಸಭೆಯಿಂದ ಕೈಬಿಡುವಂತೆ ತಪ್ಪಿದಲ್ಲಿ ನಿರಂತರ ಪ್ರತಿಭಟನೆಯನ್ನು ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ರೈತನಾಯಕಿ ಸುನಂದ ಜಯರಾಮ್ ಮಾತನಾಡಿ, ಬೆಂಗಳೂರಿನಿಂದ ಮೈಸೂರಿನವರೆಗೂ ಶಾಸಕರುಗಳು ನಗರೀಕರಣ ಮಾಡಲು ಕೈ ಜೋಡಿದಸಿದ್ದಾರೆಂದು ಆರೋಪಿಸಿದರಲ್ಲದೆ ಈಗಾಗಲೇ ನಗರಸಭೆಯಿಂದ ಕೈಬಿಡುವಂತೆ ಹಲವಾರು ಬಾರಿ ಮನವಿ ಮಾಡಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗದೆ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡು ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬುಡಮೇಲು ಮಾಡಲು ಹೊರಟಿದ್ದಾರೆಂದು ದೂರಿದರು.

ಈ ದೇಶದ ಬೆನ್ನೆಲುಬಾದ ರೈತರು ಮತ್ತು ಪ್ರಜೆಗಳ ಹಕ್ಕುಗಳನ್ನು ರಕ್ಷಿಸಬೇಕಾದವರೇ ರಿಯಲ್ ಎಸ್ಟೇಟ್ ವ್ಯವಸ್ಥೆ ಮತ್ತು ನಗರೀಕರಣಕ್ಕೆ ಮುಂದಾಗುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದರಲ್ಲದೆ ತಾವು ಈಗಾಗಲೇ ಕಾನೂನಾತ್ಮಕವಾಗಿ ಹೋರಾಟ ಮಾಡಿದ್ದು ಮತ್ತು ಪಂಚಾಯಿತಿಯನ್ನು ನಗರಸಭೆಗೆ ಸೇರಿಸುವ ಸಂಬಂಧ ಸ್ಥಳೀಯ ನಿವಾಸಿಗಳೊಟ್ಟಿಗೆ ಚರ್ಚಿಸದೆ ಶಾಸಕರು ದ್ರೋಹವೆಸಗಿದ್ದಾರೆಂದು ದೂರಿದರು.

ನಗರಸಭೆಗೆ ಸೇರ್ಪಡೆಯಾಗುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಲವಾರು ಯೋಜನೆಗಳು ಕೈತಪ್ಪಲಿದ್ದು ನರೇಗಾ, ಗ್ರಾಮೀಣ ಕೃಪಾಂಕ ರದ್ದು ಇನ್ನಿತರ ಮೂಲ ಸೌಲಭ್ಯಗಳಿಂದ ವಂಚಿತವಾಗಲಿದ್ದು ಶಾಸಕರು ಅಭಿವೃದ್ಧಿಯನ್ನು ಮಾಡಿದರೆ ತಾವು ಸಹ ಕೈಜೋಡಿಸಲಿದ್ದು, ಆದರೆ ನಗರೀಕರಣ ಹೆಸರಿನಲ್ಲಿ ಗ್ರಾಮದ ಜನರಿಗೆ ಮೋಸವೆಸಗುತ್ತಿದ್ದಾರೆಂದು ಗಂಭೀರವಾಗಿ ಆರೋಪಿಸಿದರು.

ಏಕ ಪಕ್ಷೀಯ ನಿರ್ಧಾರ ಕೈಗೊಂಡು ವಿರೋಧದ ನಡುವೆಯೂ ನಗರಸಭೆಯನ್ನಾಗಿಸಲು ಹೊರಟರೆ ಮುಂದಾಗುವ ಅನಾಹುತಕ್ಕೆ ಶಾಸಕರೇ ನೇರ ಹೊಣೆಯಾಗಲಿದ್ದು ಇದು ಪ್ರಥಮ ಹಂತವಾಗಿ ಇಂದು ಶಾಂತಿಯುತ ಪ್ರತಿಭಟನೆ ಕೈಗೊಂಡಿದ್ದು, ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪವಾದ ಹೋರಾಟವನ್ನು ರೂಪಿಸುವುದಾಗಿ ಪ್ರತಿಭಟನಕಾರರು ಎಚ್ಚರಿಸಿದರು.

ಸ್ಥಳದಲ್ಲೇ ಅಡುಗೆ

ಗ್ರಾ.ಪಂ. ಕಚೇರಿ ಬಳಿ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹದ ವೇಳೆ ಪ್ರತಿಭಟನಾಕಾರರು ಸ್ಥಳದಲ್ಲೇ ಅಡುಗೆ ತಯಾರಿಸಿ ಧರಣಿ ನಿರತರಿಗೆ ಬಡಿಸುವ ಮೂಲಕ ವಿನೂತನ ಪ್ರತಿಭಟನೆಗೂ ಮುಂದಾದರು.

ಶಾಸಕ ಕೆ.ಎಂ.ಉದಯ್ ಹೇಳಿದ್ದೇನು?

ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾ.ಪಂ.ಯನ್ನು ನಗರಸಭೆಗೆ ಸೇರ್ಪಡಿಸಿರುವ ಸಂಬಂಧ ಗ್ರಾ.ಪಂ. ಕಚೇರಿ, ತಾಲೂಕು ಕಚೇರಿ, ಪುರಸಭೆ ಇನ್ನಿತರೆಡೆ ಕೆಲವರು ಪ್ರತಿಭಟನೆ ನಡೆಸಿದ್ದು, ಹೋರಾಟ ನಡೆಸಲು ಪ್ರತಿಯೊಬ್ಬರಿಗೂ ಸ್ವತಂತ್ರವಿದ್ದು ಇದರಿಂದ ಯಾವುದೇ ಬದಲಾವಣೆ ಆಗುವುದಿಲ್ಲ ಮುಂದಿನ ದಿನಗಳಲ್ಲಿ ಗ್ರಾ.ಪಂ. ಕಚೇರಿಗಳನ್ನೇ ನಗರಸಭೆಯ ವಾರ್ಡ್ ಕಚೇರಿಗಳನ್ನಾಗಿಸಿ ಸ್ಥಳೀಯ ಸಾರ್ವಜನಿಕರ ಸಮಸ್ಯೆಗಳ ನಿವಾರಣೆಗೆ ಕ್ರಮ ವಹಿಸಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಸುದ್ದಿಗಾರರಿಗೆ ಸೋಮವಾರ ತಿಳಿಸಿದರು.

ಪ್ರತಿಭಟನೆಯಲ್ಲಿ ಗ್ರಾ.ಪಂ. ಅಧ್ಯಕ್ಷೆ ರಾಧಾ, ಸದಸ್ಯ ದೀಪಕ್, ಸ್ಥಳೀಯ ಮುಖಂಡರಾದ ಜಿ.ಟಿ.ವೀರಪ್ಪ, ರಾಮಣ್ಣ, ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ ಜಿ.ಸಿ.ಮಹೇಂದ್ರ, ತಾ.ಪಂ ಮಾಜಿ ಅಧ್ಯಕ್ಷ ಯೋಗೇಶ್, ಲಿಂಗಪ್ಪಾಜಿ, ಕೃಷ್ಣಪ್ಪ, ಜಿ.ಟಿ.ಪುಟ್ಟಸ್ವಾಮಿ, ಕಂಡೇಗೌಡ, ಶಿವನಂಜು, ಶೇಖರ್, ನಾಗೇಶ್, ಜಿ.ಎ.ಶಂಕರ್ ನೇತೃತ್ವ ವಹಿಸಿದ್ದರು.

ವರದಿ : ಗಿರೀಶ್ ರಾಜ್, ಮಂಡ್ಯ

ಮೈಸೂರಿನ ನೈರುತ್ಯ ರೈಲ್ವೆ ವಿಭಾಗದ ಈ ರೈಲುಗಳ ಸಂಚಾರ ರದ್ದು/ಭಾಗಶಃ ರದ್ದು

BIG NEWS: ಬೆಂಗಳೂರಿನ ‘ವಿಕ್ಟೋರಿ ಆಸ್ಪತ್ರೆ ಜನತಾ ಬಜಾರ್’ನಲ್ಲಿ ‘ಬದಲಿ ಔಷಧ’ಗಳ ದಂಧೆ: ರೋಗಿಗಳ ‘ಪ್ರಾಣ’ದ ಜೊತೆ ಚೆಲ್ಲಾಟ

Share. Facebook Twitter LinkedIn WhatsApp Email

Related Posts

ಹುಬ್ಬಳ್ಳಿಯಲ್ಲಿ ಕಾಲೇಜು ಕಟ್ಟಡದಿಂದ ಬಿದ್ದು ಇಬ್ಬರು ಕಾರ್ಮಿಕರು ದುರ್ಮರಣ

24/02/2026 8:39 PM1 Min Read

ರಾಜ್ಯದ ಗ್ರಾಮೀಣ ಕೃಪಾಂಕ ರಹಿತ ಶಿಕ್ಷಕರಿಗೆ ಗುಡ್ ನ್ಯೂಸ್ : ವೇತನ ಶ್ರೇಣಿ ಪರಿಷ್ಕರಣೆ, ಬಾಕಿ ಹಣ ಪಾವತಿಗೆ ಸರ್ಕಾರ ಆದೇಶ

24/02/2026 8:16 PM2 Mins Read

200 ಎಕರೆಯಲ್ಲಿ ಡಿಫೆನ್ಸ್ ಎಲೆಕ್ಟ್ರಾನಿಕ್ಸ್ ಪಾರ್ಕ್, 100 ಎಕರೆಯಲ್ಲಿ ಏವಿಯಾನಿಕ್ಸ್ ಸ್ಥಾಪನೆ: ಸಚಿವ ಎಂ.ಬಿ ಪಾಟೀಲ್

24/02/2026 8:11 PM3 Mins Read
Recent News

ಮಾರುಕಟ್ಟೆಯಲ್ಲಿ ಅಗ್ಗವಾಗಿ ಸಿಗುವ ಈ ‘ಅಡುಗೆ ಎಣ್ಣೆ’ ತುಂಬಾನೇ ಒಳ್ಳೆಯದು, ನೀವು ಯಾವ್ದು ಬಳಸ್ತೀರಾ!

24/02/2026 10:06 PM

BREAKING : ಫೆ.27ರವೆರೆಗೆ 2026ರ ‘UPSC CSE’ ನೇಮಕಾತಿಗೆ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ

24/02/2026 9:51 PM

BREAKING : ವಿಮಾನ ಅಪಘಾತ ಹೆಚ್ಚಳದ ನಡುವೆ ನಿಗದಿತವಲ್ಲದ ನಿರ್ವಾಹಕರಿಗೆ ಕಠಿಣ ಸುರಕ್ಷತಾ ಕ್ರಮ ಪ್ರಕಟಿಸಿದ ‘DGCA’

24/02/2026 9:35 PM

ಹುಬ್ಬಳ್ಳಿಯಲ್ಲಿ ಕಾಲೇಜು ಕಟ್ಟಡದಿಂದ ಬಿದ್ದು ಇಬ್ಬರು ಕಾರ್ಮಿಕರು ದುರ್ಮರಣ

24/02/2026 8:39 PM
State News
KARNATAKA

ಹುಬ್ಬಳ್ಳಿಯಲ್ಲಿ ಕಾಲೇಜು ಕಟ್ಟಡದಿಂದ ಬಿದ್ದು ಇಬ್ಬರು ಕಾರ್ಮಿಕರು ದುರ್ಮರಣ

By kannadanewsnow0924/02/2026 8:39 PM KARNATAKA 1 Min Read

ಹುಬ್ಬಳ್ಳಿ: ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣದ ವೇಳೆಯಲ್ಲಿ ಕಾರ್ಮಿಕರಿಬ್ಬದು ಬಿದ್ದು ಸಾವನ್ನಪ್ಪಿರುವಂತ ಧಾರುಣ ಘಟನೆ ನಡೆದಿದೆ. ಹುಬ್ಬಳ್ಳಿಯ ಕೆ ಎಲ್ ಇ…

ರಾಜ್ಯದ ಗ್ರಾಮೀಣ ಕೃಪಾಂಕ ರಹಿತ ಶಿಕ್ಷಕರಿಗೆ ಗುಡ್ ನ್ಯೂಸ್ : ವೇತನ ಶ್ರೇಣಿ ಪರಿಷ್ಕರಣೆ, ಬಾಕಿ ಹಣ ಪಾವತಿಗೆ ಸರ್ಕಾರ ಆದೇಶ

24/02/2026 8:16 PM

200 ಎಕರೆಯಲ್ಲಿ ಡಿಫೆನ್ಸ್ ಎಲೆಕ್ಟ್ರಾನಿಕ್ಸ್ ಪಾರ್ಕ್, 100 ಎಕರೆಯಲ್ಲಿ ಏವಿಯಾನಿಕ್ಸ್ ಸ್ಥಾಪನೆ: ಸಚಿವ ಎಂ.ಬಿ ಪಾಟೀಲ್

24/02/2026 8:11 PM

ಶಿವಮೊಗ್ಗದಲ್ಲಿ ಹತ್ಯೆಗೊಳಗಾದ ವಿದ್ಯಾರ್ಥಿ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

24/02/2026 7:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.