Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘ದ್ವೇಷ ಭಾಷಣ, ಹಿಂಸಾಚಾರಕ್ಕೆ ಪ್ರಚೋದನೆ ಆರೋಪ ; ‘ರಾಜ್ ಠಾಕ್ರೆ’ ವಿರುದ್ಧ ಪ್ರಕರಣ ದಾಖಲು

14/07/2025 3:03 PM

ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್: 500 ಕೋಟಿ ಉಚಿತ ಪ್ರಯಾಣ, ದೇಶದಲ್ಲೇ ಹೊಸ ಮಲ್ಲಿಗಲ್ಲು

14/07/2025 2:52 PM

BREAKING : ಲಡಾಖ್ ಲೆಫ್ಟಿನೆಂಟ್ ಗವರ್ನರ್ ಆಗಿ ಬಿಜೆಪಿ ನಾಯಕ ‘ಕವಿಂದರ್ ಗುಪ್ತಾ’ ನೇಮಕ

14/07/2025 2:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್: 500 ಕೋಟಿ ಉಚಿತ ಪ್ರಯಾಣ, ದೇಶದಲ್ಲೇ ಹೊಸ ಮಲ್ಲಿಗಲ್ಲು
KARNATAKA

ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್: 500 ಕೋಟಿ ಉಚಿತ ಪ್ರಯಾಣ, ದೇಶದಲ್ಲೇ ಹೊಸ ಮಲ್ಲಿಗಲ್ಲು

By kannadanewsnow0914/07/2025 2:52 PM

ಬೆಂಗಳೂರು: ಶಕ್ತಿ ಯೋಜನೆಯಲ್ಲಿ 500ನೇ ಕೋಟಿ ಮಹಿಳಾ ಪ್ರಯಾಣಿಕರ ಪ್ರಯಾಣದ ಸಂಭ್ರಮ ಮನೆ ಮಾಡಿದೆ. ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ದೊರೆತಿರೋದೇ ಈ ಇದಕ್ಕೆ ಕಾರಣವಾಗಿದ್ದು, ಇದು ದೇಶದಲ್ಲೇ ಕರ್ನಾಟಕ ಹೊಸ ಮೈಲಿಗಲ್ಲು ಸಾಧಿಸಿದಂತೆ ಆಗಿದೆ.

ಕರ್ನಾಟಕ‌ ಸರ್ಕಾರದ‌ ಮಹತ್ವಾಕಾಂಕ್ಷೆ ಶಕ್ತಿ ಯೋಜನೆಯು ದಿನಾಂಕ 11-06-2023 ರಿಂದ ಜಾರಿಗೆ ಬಂದಿದ್ದು, ಜುಲೈ 14 ನೇ 2025 ಕ್ಕೆ 500 ಕೋಟಿ ಮಹಿಳಾ ಪ್ರಯಾಣಿಕರ ಟ್ರಿಪ್ ಅನ್ನು ತಲುಪುವ ಮುಖಾಂತರ ದೇಶದಲ್ಲೇ ಹೊಸ ಮೈಲಿಗಲ್ಲನ್ನು ತಲುಪಲಿದೆ.

ಮುಂದುವರೆದು, ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡಲಾಗುತ್ತಿರುವುದಿಂದ ಮಹಿಳೆಯರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಔದ್ಯೋಗಿಕ, ಆರೋಗ್ಯ ಅಭಿವೃದ್ಧಿ ಹೊಂದಲು ಸಹಕಾರಿಯಾಗಿದೆ.

ಶಕ್ತಿ ಯೋಜನೆಯು ಅಭೂತಪೂರ್ವ ಯಶಸ್ಸನ್ನು ಕಂಡು ಮಹಿಳಾ ಸಬಲೀಕರಣದೆಡೆಗಿನ‌ ದಿಟ್ಟ ಯೋಜನೆಯಾಗಿ ಮುಂದುವರೆಯುತ್ತಿರುವುದಕ್ಕೆ ಸಾಕ್ಷಿಯಾಗಿದೆ.

ಬಸ್ಸಿನಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರಿಗೆ 500 ನೇ ಕೋಟಿ ಟಿಕೇಟ್ ಅನ್ನು ಸಾಂಕೇತಿಕವಾಗಿ ಇಂದು ವಿತರಿಸಿದ್ದು, ಶಕ್ತಿ ಯೋಜನೆಯಲ್ಲಿ ಇಲ್ಲಿಯವರೆಗೂ ರೂ.12669 ಕೋಟಿ ಮಹಿಳಾ ಟಿಕೇಟ್ ಮೌಲ್ಯ.

ನಗರ, ಸಾಮಾನ್ಯ, ವೇಗದೂತ ಬಸ್ಸುಗಳಲ್ಲಿ ರಾಜ್ಯದ್ಯಾಂತ ರಾಜ್ಯದ ನಿವಾಸಿಗಳಾ ಎಲ್ಲಾ ಮಹಿಳೆಯರು, ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪಸಂಖ್ಯಾತರು ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಶಕ್ತಿ ಯೋಜನೆಗೆ ಮುನ್ನ ಸಾರಿಗೆ ಬಸ್ಸುಗಳಲ್ಲಿ ಪ್ರತಿ ದಿನ 85.84 ಲಕ್ಷ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು, ಈಗ 1.17 ಕೋಟಿ ಜನರು‌ ಪ್ರತಿ ದಿನ ಪ್ರಯಾಣಿಸುತ್ತಿದ್ದಾರೆ.

ಸಾರಿಗೆ ನಿಗಮಗಳನ್ನು ಸದೃಡಗೊಳಿಸಲು, ಹೊಸ ಬಸ್ಸುಗಳ ಸೇರ್ಪಡೆ ಮತ್ತು ನೇಮಕಾತಿಗೆ ಚಾಲನೆ ನೀಡಲಾಗಿದೆ.

ಹೊಸ ಬಸ್ಸುಗಳ ಸೇರ್ಪಡೆ‌ ಮತ್ತು ನೇಮಕಾತಿಯು ಸಂಪೂರ್ಣ ಸ್ಥಗಿತಗೊಂಡಿತ್ತು.ಕಳೆದ ಎರಡು ವರುಷದಲ್ಲಿ 5800 ಹೊಸ ಬಸ್ಸುಗಳ ಸೇರ್ಪಡೆಗೆ ಅನುಮೋದನೆ ನೀಡಿತು. ಈಗಾಗಲೇ ನಾಲ್ಕು ನಿಗಮಗಳಲ್ಲಿ 5049 ಹೊಸ ಬಸ್ಸುಗಳ ಸೇರ್ಪಡೆಯಾಗಿದೆ.

ಅದೇ ರೀತಿ 9000 ಹುದ್ದೆಗಳ ನೇಮಕಾತಿಗೆ ಅನುಮತಿ ನೀಡಲಾಗಿದೆ. ಈಗಾಗಲೇ 6700 ಹೊಸ ನೇಮಕಾತಿ ಮತ್ತು 1000 ಅನುಕಂಪದ ನೇಮಕಾತಿ ಪೂರ್ಣಗೊಳಿಸಲಾಗಿದೆ. ಒಟ್ಟು 10000 ನೇಮಕಾತಿ ಸಾರಿಗೆ ನಿಗಮದಲ್ಲಿ ಕಳೆದ ಎರಡು ವರ್ಷದ ಅವಧಿಯಲ್ಲಿ ಚಾಲನೆ ದೊರಕಿದೆ.

ಶಕ್ತಿ‌ ಫೂರ್ವ 21164 ಅನುಸೂಚಿಗಳಿದ್ದು, ,ಶಕ್ತಿ‌ ನಂತರ 23635 ಕ್ಕೆ ಹೆಚ್ಚಳವಾಗಿದೆ.

ಅದೇ ರೀತಿ ಶಕ್ತಿ‌ ಪೂರ್ವ ಒಟ್ಟು ಬಸ್ಸುಗಳು 23948 ಇದ್ದದ್ದು‌ ನಂತರ 26130 ಕ್ಕೆ ಏರಿಕೆಯಾಗಿದೆ. ಹಳೆಯ 2828 ವಾಹನಗಳನ್ನು ಬದಲಿಸಲಾಗಿದೆ.

ಕಳೆದ ಎರಡು ವರ್ಷದಲ್ಲಿ ನಾಲ್ಕೂ ಸಾರಿಗೆ ನಿಗಮಗಳಿಗೆ 185 ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಪ್ರಶಸ್ತಿಗಳು ಸಾರಿಗೆ ನಿಗಮಗಳಿಗೆ ಲಭಿಸಿರುತ್ತದೆ.

 ವಿಶೇಷ ಬಸ್ ಪೂಜಾ ಕಾರ್ಯಕ್ರಮ, ನಗರದ ಪ್ರಮುಖ ಬಸ್ ನಿಲ್ದಾಣಗಳಲ್ಲಿ, ತಾಲ್ಲೂಕು ಮತ್ತು ಜಿಲ್ಲೆಯ ಬಸ್ ನಿಲ್ದಾಣಗಳಲ್ಲಿ ಬಸ್‌ ಪೂಜೆ ನೆರವೇರಿಸಿ ಸಿಹಿ‌ ಹಂಚಿ ಸಾಂಕೇತಿಕವಾಗಿ ಅಚರಣೆ ಮಾಡಿ, ಮಹಿಳಾ ಪ್ರಯಾಣಿಕರಿಗೆ ಬಸ್‌ನಲ್ಲಿ ಸ್ವಾಗತದ ರೂಪದಲ್ಲಿ ಗುಲಾಬಿ ಹೂಗಳ ವಿತರಣೆ.

 ಒಡಲ ಧ್ವನಿ ಸ್ತ್ರೀ ಸಂಘ ವಿಜಯಪುರವರು ಶಕ್ತಿ ಯೋಜನೆಯಿಂದ ಸಾವಯವ ರೊಟ್ಟಿ, ,ಹೋಳಿಗೆ ತಯಾರಿಸಿ ಬೆಂಗಳೂರಿಗೆ ಮಾರಾಟ‌‌ ಮಾಡಿ ಲಕ್ಷಾಂತರ ರೂ ವಹಿವಾಟು ನಡೆಸಲಾಗಿದ್ದು ,ಅವರಿಂದ ಸನ್ಮಾನ್ಯ ಮುಖ್ಯಮಂತ್ರಿ ರವರಿಗೆ ಮತ್ತು ಮಾನ್ಯ ಉಪಮುಖ್ಯ ಮಂತ್ರಿರವರಿಗೆ,ಮಾನ್ಯ ಸಾರಿಗೆ ಹಾಗೂ‌ ಮುಜರಾಯಿಗೆ ರೊಟ್ಟಿ ನೀಡಿ ಗೌರವ ಸಲ್ಲಿಸಿದರು.

 ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ  ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಶಕ್ತಿ 500ನೇ ಕೋಟಿ ಪಿಂಕ್ ಟಿಕೆಟ್ ವಿತರಣೆ ಮತ್ತು‌ ಬಸ್ಸಿನಲ್ಲಿದ್ದ ಮಹಿಳೆಯರು, ವಿದ್ಯಾರ್ಥಿನಿಯರು, ಹಿರಿಯ ನಾಗರಿಕರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರು 30 ಮಹಿಳಾ ಪ್ರಯಾಣಿಕರಿಗೆ ಇಳಕಲ್ ಸೀರೆ ನೀಡಿ ಗೌರವಿಸಿದರು.

500 ನೇ ಕೋಟಿ ಶಕ್ತಿ‌ ಟಿಕೇಟ್ ಪಡೆದ ಮಹಿಳೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶಾಲು ಹೊದಿಸಿ, ಹಾರ ಹಾಕಿ, ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು.

ಈ ಕಾರ್ಯಕ್ರಮದಲ್ಲಿ ಸಮಾಜ‌ ಕಲ್ಯಾಣ ಸಚಿವರು, ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವರು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಮಹಿಳಾ ಆಯೋಗದ ಅಧ್ಯಕ್ಷರು, ಮಾನ್ಯ ವಿಧಾನ ಪರಿಷತ್ ಸದಸ್ಯರು, ಕಾರ್ಯದರ್ಶಿಗಳು ಸಾರಿಗೆ ಇಲಾಖೆ, ಕೆ‌ಎಸ್ ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು ಉಪಸ್ಥಿತರಿದ್ದರು.

Share. Facebook Twitter LinkedIn WhatsApp Email

Related Posts

ಕುವೆಂಪು ವಿಶ್ವವಿದ್ಯಾಲಯಕ್ಕೆ ಮತ್ತೆ ‘ನ್ಯಾಕ್’ನಿಂದ ‘ಎ’ ಗ್ರೇಡ್ ಮಾನ್ಯತೆ

14/07/2025 2:18 PM1 Min Read

BREAKING : ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು : ಹಾಡಹಗಲೇ, ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ!

14/07/2025 2:01 PM1 Min Read

ರಾಜ್ಯದ ಮಹಿಳೆಯರಿಗೆ ಉಚಿತಪ್ರಯಾಣ ಕಲ್ಪಿಸಿದ ಶಕ್ತಿ ಯೋಜನೆ : 500ನೇ ಕೋಟಿ ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ

14/07/2025 1:47 PM2 Mins Read
Recent News

BREAKING : ‘ದ್ವೇಷ ಭಾಷಣ, ಹಿಂಸಾಚಾರಕ್ಕೆ ಪ್ರಚೋದನೆ ಆರೋಪ ; ‘ರಾಜ್ ಠಾಕ್ರೆ’ ವಿರುದ್ಧ ಪ್ರಕರಣ ದಾಖಲು

14/07/2025 3:03 PM

ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್: 500 ಕೋಟಿ ಉಚಿತ ಪ್ರಯಾಣ, ದೇಶದಲ್ಲೇ ಹೊಸ ಮಲ್ಲಿಗಲ್ಲು

14/07/2025 2:52 PM

BREAKING : ಲಡಾಖ್ ಲೆಫ್ಟಿನೆಂಟ್ ಗವರ್ನರ್ ಆಗಿ ಬಿಜೆಪಿ ನಾಯಕ ‘ಕವಿಂದರ್ ಗುಪ್ತಾ’ ನೇಮಕ

14/07/2025 2:52 PM

ಶೀಘ್ರದಲ್ಲೇ ‘ಸಮೋಸಾ, ಜಿಲೇಬಿ, ಪಕೋಡಾ’ಗಳ ಮೇಲೆ ‘ಸಿಗರೇಟ್’ಗಳಂತೆಯೇ ಎಚ್ಚರಿಕೆ ಲೇಬಲ್ ; ಆರೋಗ್ಯ ಸಚಿವಾಲಯ

14/07/2025 2:39 PM
State News
KARNATAKA

ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್: 500 ಕೋಟಿ ಉಚಿತ ಪ್ರಯಾಣ, ದೇಶದಲ್ಲೇ ಹೊಸ ಮಲ್ಲಿಗಲ್ಲು

By kannadanewsnow0914/07/2025 2:52 PM KARNATAKA 2 Mins Read

ಬೆಂಗಳೂರು: ಶಕ್ತಿ ಯೋಜನೆಯಲ್ಲಿ 500ನೇ ಕೋಟಿ ಮಹಿಳಾ ಪ್ರಯಾಣಿಕರ ಪ್ರಯಾಣದ ಸಂಭ್ರಮ ಮನೆ ಮಾಡಿದೆ. ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್…

ಕುವೆಂಪು ವಿಶ್ವವಿದ್ಯಾಲಯಕ್ಕೆ ಮತ್ತೆ ‘ನ್ಯಾಕ್’ನಿಂದ ‘ಎ’ ಗ್ರೇಡ್ ಮಾನ್ಯತೆ

14/07/2025 2:18 PM

BREAKING : ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು : ಹಾಡಹಗಲೇ, ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ!

14/07/2025 2:01 PM

ರಾಜ್ಯದ ಮಹಿಳೆಯರಿಗೆ ಉಚಿತಪ್ರಯಾಣ ಕಲ್ಪಿಸಿದ ಶಕ್ತಿ ಯೋಜನೆ : 500ನೇ ಕೋಟಿ ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ

14/07/2025 1:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.