Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದೆಹಲಿ BMW ಅಪಘಾತ ಪ್ರಕರಣ: ಆರೋಪಿಯ ರಕ್ತ ಪರೀಕ್ಷೆಯಲ್ಲಿ ಆಲ್ಕೊಹಾಲ್ ನೆಗೆಟಿವ್

16/09/2025 12:44 PM

ರಾಜ್ಯದಲ್ಲಿ 15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ : ಸರ್ಕಾರದಿಂದ ಮಹತ್ವದ ಆದೇಶ

16/09/2025 12:31 PM

BREAKING: ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್ ಬದಲಿಸುವ ಪಾಕಿಸ್ತಾನದ ಬೇಡಿಕೆಯನ್ನು ತಿರಸ್ಕರಿಸಿದ ICC

16/09/2025 12:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿದ್ಯಾರ್ಥಿಗಳ ಗಮನಕ್ಕೆ : `SSLC ಪರೀಕ್ಷೆ -2ರ `ಮಾರ್ಗಸೂಚಿ’ ಬಿಡುಗಡೆ
KARNATAKA

ವಿದ್ಯಾರ್ಥಿಗಳ ಗಮನಕ್ಕೆ : `SSLC ಪರೀಕ್ಷೆ -2ರ `ಮಾರ್ಗಸೂಚಿ’ ಬಿಡುಗಡೆ

By kannadanewsnow5712/05/2024 8:56 AM

ಬೆಂಗಳೂರು: 2024 ರ ಎಸ್ ಎಸ್ ಎಲ್ ಸಿ ಪರೀಕ್ಷೆ-2 ಕ್ಕೆ ಅರ್ಹ ಅಭ್ಯರ್ಥಿಗಳ ನೋಂದಣಿ ಕುರಿತು ಮಾರ್ಗಸೂಚಿ ಮಾಡಲಾಗಿದೆ.

2024 ರ ಎಸ್ ಎಸ್ ಎಲ್ ಸಿ ಪರೀಕ್ಷೆ-1 ಕ್ಕೆ ನೋಂದಾಯಿಕೊಂಡು ಪರೀಕ್ಷೆಗೆ ಗೈರು ಹಾಜರಾದ ಮತ್ತು ಪೂರ್ಣಗೊಳಿಸಲಾಗಿಲ್ಲದ [Not Completed] ಹಾಗೂ ಹಿಂದಿನ ಸಾಲಿನಲ್ಲಿ ಅನುತ್ತೀರ್ಣರಾದ ಅಭ್ಯರ್ಥಿಗಳಿಗೆ 2024ರ ಜೂನ್ ಮಾಹೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ-2ನ್ನು ನಡೆಸಲಾಗುವುದು. ಈ ಹಿನ್ನೆಲೆಯಲ್ಲಿ ಅರ್ಹ ಪುನರಾವರ್ತಿತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

1. 2002-03 ರಿಂದ 2023-24ರ ಎಸ್.ಎಸ್.ಎಲ್.ಸಿ. ಪರೀಕ್ಷೆವರೆಗೆ ಪೂರ್ಣಗೊಳಿಸಲಾಗಿಲ್ಲದ [Not Completed] ಹಾಗೂ 2024ರ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಂಡು ಗೈರು ಹಾಜರಾಗಿರುವ ಅರ್ಹ ಅಭ್ಯರ್ಥಿಗಳನ್ನು ಶಾಲಾ ಮುಖ್ಯೋಪಾಧ್ಯಾಯರು ಮಂಡಳಿಯ https://kseab.karnataka.gov.in ಜಾಲತಾಣದ ಶಾಲಾ ಲಾಗಿನ್ ಮೂಲಕ ಪರೀಕ್ಷೆ-2ಕ್ಕೆ ನೋಂದಣಿ ಮಾಡುವುದು. ಶಾಲಾ ಲಾಗಿನ್‌ನಲ್ಲಿ Registration for 2024 Exam-2ನ್ನು ಕ್ಲಿಕ್‌ಮಾಡಿದಾಗ ENTER REGISTER NUMBER ಎನ್ನುವ ಆಯ್ಕೆ ದೊರಕುತ್ತದೆ. ಈ ಆಯ್ಕೆಯಲ್ಲಿ ವಿದ್ಯಾರ್ಥಿಗಳ ನೋಂದಣೆ ಸಂಖ್ಯೆಯನ್ನು ನಮೂದು ಮಾಡಲು ಅವಕಾಶ ನೀಡಲಾಗಿದೆ.

ಪರೀಕ್ಷೆಗೆ ನೋಂದಾಯಿಸಿಕೊಳ್ಳುವ ವಿದ್ಯಾರ್ಥಿಯ ನೋಂದಣೆ ಸಂಖ್ಯೆಯನ್ನು ನಮೂದು ಮಾಡಿ Submit ಕೊಟ್ಟಾಗ ಆ ವಿದ್ಯಾರ್ಥಿಯ ವಿವರಗಳು, ವಿದ್ಯಾರ್ಥಿಯ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಮಾಧ್ಯಮ, ದೈಹಿಕ ಸ್ಥಿತಿ, ಜನ್ಮ ದಿನಾಂಕ, ಪರೀಕ್ಷೆ ತೆಗೆದುಕೊಳ್ಳುತ್ತಿರುವ ವಿಷಯಗಳು ತೆರೆದುಕೊಳ್ಳುತ್ತವೆ. ಇವುಗಳಲ್ಲಿ ಯಾವುದೇ ಬದಲಾವಣೆ ಮಾಡಲು ಅವಕಾಶವಿರುವುದಿಲ್ಲ.

2021 ಮತ್ತು 2022-23 ನೇ ಸಾಲಿನಲ್ಲಿ ಪರೀಕ್ಷೆ ಬರೆದು ಅನುತ್ತೀರ್ಣಗೊಂಡ ವಿದ್ಯಾರ್ಥಿಗಳ ಹಾಗೂ ಮಾರ್ಚ್/ಏಪ್ರಿಲ್ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-1 ಕ್ಕೆ ನೋಂದಾಯಿಸಿಕೊಂಡು ಪೂರ್ಣಗೊಳಿಸಲಾಗಿಲ್ಲದ [Not Completed] ವಿದ್ಯಾರ್ಥಿಗಳ ಭಾವಚಿತ್ರ ಮತ್ತು ಸಹಿಗಳು ಮಂಡಳಿಯಲ್ಲಿ ಲಭ್ಯವಿದ್ದು, ಸದರಿ ಅಭ್ಯರ್ಥಿಗಳು ಈ ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಲ್ಲಿ ಮನ: ಇವರುಗಳ ಭಾವಚಿತ್ರ ಮತ್ತು ಸಹಿಗಳನ್ನು ಅಪ್‌ಲೋಡ್ ಮಾಡುವ ಅವಶ್ಯಕತೆ ಇರುವುದಿಲ್ಲ.

2, 2002ರ ಹಿಂದಿನ ವರ್ಷಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ನೋಂದಾಯಿಸಲು ಈ ಹಿಂದ ಇದ್ದಂತ MSA ಅರ್ಜಿಗಳನ್ನು ಭರ್ತಿ ಮಾಡಿ ಅರ್ಜಿ ಮೂಲಕ ಸಲ್ಲಿಸಬಹುದಾಗಿದೆ. ಈ ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ನೋಂದಾಯಿಸಲು ಅವಕಾಶ ಕಲ್ಪಿಸಲಾಗಿರುವುದಿಲ್ಲ. ಇಂತಹ ಅಭ್ಯರ್ಥಿಗಳ ಎಂ.ಎಸ್.ಎ ಫಾರಂನಲ್ಲಿ ವಿದ್ಯಾರ್ಥಿಯ ಇತ್ತೀಚಿನ ಪಾಸ್‌ಫೋರ್ಟ್ ಅಳತೆಯ 2 ಭಾವಚಿತ್ರಗಳನ್ನು ಅಂಟಿಸಿ ಧೃಡೀಕರಿಸಿ ಸಲ್ಲಿಸಬೇಕು. ಎಂ.ಎಸ್.ಎ ಅರ್ಜಿಗಳನ್ನು ಪರಿಶೀಲಿಸುವಾಗ ಎಂ.ಎಸ್.ಎ ನಲ್ಲಿರುವ ಶಾಲಾ ಸಂಕೇತವು ತಮ್ಮ ಶಾಲೆಯದೇ ಎಂಬುದನ್ನು ಖಚಿತಪಡಿಸಿಕೊಳ್ಳುವುದು. ಈ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ನಿಗದಿತ ಬ್ಯಾಂಕ್ NEFT ಚಲನ್ ಮೂಲಕ ಪಾವತಿಸಿ ಎಂ.ಎಸ್‌.ಎ ಅರ್ಜಿ, ಭಾವಚಿತ್ರ ಶುಲ್ಕ ಪಾವತಿಯ ಚಲನ್‌ನೊಂದಿಗೆ ಮಂಡಳಿಗೆ ಸಲ್ಲಿಸುವುದು. ಈ ಮೂರು ಮಾಹಿತಿಗಳಿದ್ದಲ್ಲಿ ಮಾತ್ರ ಅರ್ಜಿಗಳನ್ನು ಪರಿಗಣಿಸಲಾಗುವುದು. ಇಲ್ಲವಾದಲ್ಲಿ ವಿದ್ಯಾರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ. ಒಂದು ವೇಳೆ ಈ ವಿದ್ಯಾರ್ಥಿಗಳ ಎಂ.ಎಸ್.ಎ ಗಳು ಶಾಲೆಯಲ್ಲಿ ಲಭ್ಯವಿಲ್ಲದಿದ್ದಲ್ಲಿ ಮಂಡಳಿಯ ವಿಭಾಗೀಯ ಕಛೇರಿಗಳಿಂದ ನಿಗಧಿತ ಶುಲ್ಕ ಪಾವತಿಸಿ ಪಡೆದು ಸಲ್ಲಿಸುವುದು ಕಡ್ಡಾಯ.

3. 2003ಕ್ಕೂ ಹಿಂದಿನ ವರ್ಷಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳ ಎಂ.ಎಸ್.ಎ ಮೂಲಕ ಸಲ್ಲಿಸುವ ಪ್ರಸ್ತಾವನೆಯ ಲಕೋಟೆಯ ಮೇಲೆ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-2 ಕ್ಕೆ ಅರ್ಜಿಗಳು ಎಂದು ಬರೆಯುವುದು ಹಾಗೂ ನಿಮ್ಮ ಜಿಲ್ಲೆಗೆ ಸಂಬಂಧಿಸಿದ ಮಂಡಳಿಯ ಅಧಿಕಾರಿಗಳ ಹೆಸರು ಮತ್ತು ಶಾಖೆಯನ್ನು ಲಕೋಟೆಯ ಮೇಲೆ ತಪ್ಪದೇ ಬರೆಯುವುದು.

4. ಮಂಡಳಿ ನಿಗದಿಪಡಿಸಿರುವ ಅಂತಿಮ ದಿನಾಂಕ “ಸಾರ್ವತ್ರಿಕ ರಜಾ ದಿನ” ಎಂಬುದಾಗಿ ಘೋಷಿಸಿದ್ದಲ್ಲಿ ಮಾರನೇ ಕೆಲಸದ ದಿನವನ್ನು ಕೊನೆಯ ದಿನಾಂಕವೆಂದು ಪರಿಗಣಿಸುವುದು. ಈ ಕೆಳಗೆ ನಮೂದಿಸಿರುವ ಮಂಡಳಿಯ ಅಧಿಕಾರಿಗಳು ಮತ್ತು ಉಸ್ತುವಾರಿ ನಿರ್ವಹಿಸುವ ಜಿಲ್ಲೆಗಳ ವಿವರಗಳನ್ನು ನೀಡಿದೆ. ಸಂಬಂಧಿಸಿದ ಶಾಲಾ ಮುಖ್ಯಸ್ಥರು ನಿಮ್ಮ ಜಿಲ್ಲೆಗೆ ಸಂಬಂಧಿಸಿದ ಅಧಿಕಾರಿಗಳ ಹೆಸರನ್ನು ಲಕೋಟೆಯ ಮೇಲೆ ತಪ್ಪದೇ ಬರೆಯಬೇಕು. 5. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಹಾಗೂ ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳಿಗೆ ಮಾತ್ರ ಪರೀಕೆ-2ಕ್ಕೆ ಪರೀಕ್ಷಾ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

Students note: 'Guideline' for SSLC Exam-2 released ವಿದ್ಯಾರ್ಥಿಗಳ ಗಮನಕ್ಕೆ : `SSLC ಪರೀಕ್ಷೆ-2' ನೋಂದಣಿಗೆ ಮೇ 24ರ ವರೆಗೆ ಅವಕಾಶ
Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ 15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ : ಸರ್ಕಾರದಿಂದ ಮಹತ್ವದ ಆದೇಶ

16/09/2025 12:31 PM1 Min Read

ರಾಜ್ಯ ಸರ್ಕಾರದಿಂದ `ಕಲ್ಯಾಣ ಕರ್ನಾಟಕ’ದ ಜನತೆಗೆ ಗುಡ್ ನ್ಯೂಸ್ : ನಾಳೆ ಅತ್ಯಾಧುನಿಕ ಆಂಬುಲೆನ್ಸ್ ಗಳಿಗೆ ಚಾಲನೆ

16/09/2025 12:25 PM1 Min Read

ಸಣ್ಣ ಹೂಡಿಕೆ – ದೊಡ್ಡ ಲಾಭ : ಜಸ್ಟ್ 10 ರೂಪಾಯಿಯ ಈ ಸಸ್ಯ ಬೆಳೆಸಿ ಮಾರಾಟ ಮಾಡಿದ್ರೆ ಕೋಟ್ಯಾಧಿಪತಿ ಆಗಬಹುದು.!,

16/09/2025 11:53 AM2 Mins Read
Recent News

ದೆಹಲಿ BMW ಅಪಘಾತ ಪ್ರಕರಣ: ಆರೋಪಿಯ ರಕ್ತ ಪರೀಕ್ಷೆಯಲ್ಲಿ ಆಲ್ಕೊಹಾಲ್ ನೆಗೆಟಿವ್

16/09/2025 12:44 PM

ರಾಜ್ಯದಲ್ಲಿ 15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ : ಸರ್ಕಾರದಿಂದ ಮಹತ್ವದ ಆದೇಶ

16/09/2025 12:31 PM

BREAKING: ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್ ಬದಲಿಸುವ ಪಾಕಿಸ್ತಾನದ ಬೇಡಿಕೆಯನ್ನು ತಿರಸ್ಕರಿಸಿದ ICC

16/09/2025 12:27 PM

BREAKING : ‘ಆನ್ ಲೈನ್ ಬೆಟ್ಟಿಂಗ್ ಆ್ಯಪ್’ ಕೇಸ್ : ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್, ನಟ ಸೋನು ಸೂದ್ ಗೂ E.D ಯಿಂದ ಸಮನ್ಸ್ ಜಾರಿ.!

16/09/2025 12:26 PM
State News
KARNATAKA

ರಾಜ್ಯದಲ್ಲಿ 15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow5716/09/2025 12:31 PM KARNATAKA 1 Min Read

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆ, ನಿಗಮ, ಮಂಡಳಿ, ನಗರಸಭೆ, ಸರ್ಕಾರದ ಇತರೆ ಅಧೀನ ಸಂಸ್ಥೆಗಳಿಗೆ ಸೇರಿದ, ನೋಂದಣಿಯಾಗಿ 15…

ರಾಜ್ಯ ಸರ್ಕಾರದಿಂದ `ಕಲ್ಯಾಣ ಕರ್ನಾಟಕ’ದ ಜನತೆಗೆ ಗುಡ್ ನ್ಯೂಸ್ : ನಾಳೆ ಅತ್ಯಾಧುನಿಕ ಆಂಬುಲೆನ್ಸ್ ಗಳಿಗೆ ಚಾಲನೆ

16/09/2025 12:25 PM

ಸಣ್ಣ ಹೂಡಿಕೆ – ದೊಡ್ಡ ಲಾಭ : ಜಸ್ಟ್ 10 ರೂಪಾಯಿಯ ಈ ಸಸ್ಯ ಬೆಳೆಸಿ ಮಾರಾಟ ಮಾಡಿದ್ರೆ ಕೋಟ್ಯಾಧಿಪತಿ ಆಗಬಹುದು.!,

16/09/2025 11:53 AM

ರಾಜ್ಯಾದ್ಯಂತ ‘ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ’ ಆರಂಭ : ನೋಂದಣಿಗೆ ಜಸ್ಟ್ ಹೀಗೆ ಮಾಡಿ.!

16/09/2025 11:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.