ಮಂಡ್ಯ: ಮತದಾನ ಮಾಡೋದು ಕರ್ತ್ಯವ್ಯ ಅದನ್ನ ನಿರ್ವಹಿಸಿದ್ದೀನಿ ಎಂಬುದಾಗಿ ಸಂಸದೆ ಸುಮಲತಾ ಅಂಬರೀಶ್ ಅವರು ಹೇಳಿದರು.
ಇಂದು ಮಂಡ್ಯ ಜಿಲ್ಲೆಯ ದೊಡ್ಡರರಿಸಿನ ಕೆರೆ ಗ್ರಾಮದಲ್ಲಿ ಸಂಸದೆ ಸುಮಲತಾ ಅಂಬರೀಶ್ ಮಾತನಾಡಿ, ದೇವೇಗೌಡರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ. ಅವರು ದೊಡ್ಡವರು. ಅವರಿಗೆ ಸರಿಯಾದ ಮಾಹಿತಿ ಕೊಡದೆ ಆ ರೀತಿ ಹೇಳಿದ್ದಾರೆ. ಅವರಿಂದ ಅಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ. ಸ್ಚತಂತ್ರ ಸಂಸದೆಯಾಗಿ ನನ್ನಜವಾಬ್ದಾರಿಯನ್ನ ನಿರ್ವಹಿಸಿದ್ದೀನಿ ಎಂದರು.
ಮೋದಿ ಅವರು ಪ್ರಧಾನಿಯಾಗಬೇಕು ಎಂಬ ಉದ್ದೇಶದಿಂದ ನಾನು ಗೆದ್ದಂತಹ ಸೀಟ್ ಅನ್ನ ತ್ಯಾಗ ಮಾಡಿದ್ದೀನಿ. ಈ ಹಂತದಲ್ಲಿ ಅಂಬರೀಶ್ ಅವರ ಪಡೆಯ ಶಕ್ತಿಯನ್ನ ಎನ್ ಡಿಎ ಗೆ ಕೊಟ್ಟಿದ್ದೇವೆ. ನಾವು ನಿಷ್ಠೆಯಿಂದ ಕೆಲಸ ಮಾಡಿದ್ದೀನಿ. ಈ ದಿನದ ವರೆಗೂ ಜೆಡಿಎಸ್ ನ ಯಾವುದೇ ನಾಯಕರು ಯಾವುದೇ ಸಭೆಗೆ ಆಹ್ವಾನಿಸಿಲ್ಲ.
ಅವರು ಕರೆದು ನಾನು ಬರದೆ ಇದ್ದರೆ ತಪ್ಪಾಗುತ್ತೆ. ಆದ್ರೆ ಅವರು ನನ್ನಕರೆದೇ ಇಲ್ಲ ಎಂದು ತಿಳಿಸಿದರು.
ಲೋಕಸಭಾ ಚುನಾವಣೆಗೆ ಮತದಾನ: ಹೀಗಿದೆ 1 ಗಂಟೆಯವರೆಗೆ ಬೆಂಗಳೂರು ಕ್ಷೇತ್ರವಾರು ಮತದಾನದ ಪ್ರಮಾಣ
BREAKING: ಭಾರತದಲ್ಲಿ ಮತ್ತೆ X (ಟ್ವಿಟರ್) ಸರ್ವರ್ ಡೌನ್, ಬಳಕೆದಾರರ ಪರದಾಟ