ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಇಂದು ಸಂಜೆ ವಿಧಾನಸೌಧದ ಮುಂಭಾಗ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ವೇಳೆ ಪ್ರಶಸ್ತಿಯನ್ನು ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ ಸ್ವೀಕರಿಸಿದರು.

ಈ ಕಾರ್ಯಕ್ಕೆ ಆಗಮಿಸಿದ ನಟ , ಸೂಪರ್ ಸ್ಟಾರ್ ರಜನೀಕಾಂತ್ ಇದೀಗ ಚೆನ್ನೈನತ್ತ ಮರಳಿದ್ದಾರೆ. ಇಂದು ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣದ ಮೂಲಕ ರಜನೀಕಾಂತ್ ಚೆನ್ನೈಗೆ ಮರಳಿದ್ದಾರೆ. ಇಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಜೆ ವಿಧಾನಸೌಧದ ಮುಂಭಾಗ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಗಿದ್ದು, ನಟ ರಜನೀಕಾಂತ್, ಜ್ಯೂ ಎನ್ ಟಿ ಆರ್ ವಿಶೇಷ ಅತಿಥಿಗಳಾಗಿ ಆಗಮಿಸಿದ್ದರು.

ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಡಾ. ರಾಜ್ಕುಮಾರ್ ಕುಟುಂಬದ ಸದ್ಯಸರು, ಖ್ಯಾತ ನಟರಾದ ರಜಿನಿಕಾಂತ್, ಜ್ಯೂ.ಎನ್ಟಿಆರ್ ಸೇರಿದಂತೆ ರಾಜಕೀಯ ನಾಯಕರುಗಳು ಭಾಗವಹಿಸಿದ್ದರು. ಇದೇ ವೇಳೆ ಕಾರ್ಯಕ್ರಮಕ್ಕೆ ಸಾವಿರಾರು ಜನತೆ ಆಗಮಿಸಿ ನೆಚ್ಚಿನ ನಟನಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದೇ ವೇಳೆ ಕಾರ್ಯಕ್ರಮ ಆಗಮಕ್ಕೂ ಮುನ್ನ ಗಾಯಕರು ನಟ ಪುನೀತ್ ರಾಜ್ಕುಮಾರ್ ಅವರ ಅಭಿನಯದ ಸಿನಿಮಾ ಹಾಡುಗಳನ್ನು ಹಾಡಿದ್ದರು. ಇದೇ ವೇಳೆ ಅಪ್ಪು ಅವರ ಕುರಿತು ಕಿರುಚಿತ್ರವನ್ನು ಕೂಡ ಪ್ರದರ್ಶನ ಮಾಡಿದರು.

Viral Video: ಕೆಲವೇ ಸೆಕೆಂಡಿನಲ್ಲಿ ಜಿಂಕೆಯನ್ನು ನುಂಗಿದ ದೈತ್ಯ ಹೆಬ್ಬಾವು, ಭಯಾನಕ ವಿಡಿಯೋ ವೈರಲ್ !

ಸತ್ಯೇಂದರ್ ಜೈನ್‌ಗೆ ರಕ್ಷಣೆಗಾಗಿ 10 ಕೋಟಿ ರೂ.ಗಳನ್ನು ಪಾವತಿಸಲಾಗಿದೆ: ಸುಕೇಶ್ ಚಂದ್ರಶೇಖರ್ ಆರೋಪ

BIGG NEWS : ‘ಸಹೋದರನ ಪುತ್ರ ನಾಪತ್ತೆ’ ಪ್ರಕರಣದ ಕುರಿತು ಶಾಸಕ ‘ರೇಣುಕಾಚಾರ್ಯ’ ಹೇಳಿದ್ದೇನು..?

Share.
Exit mobile version