Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಲೋಕಸಭೆಯಲ್ಲಿ ‘ರಾಷ್ಟ್ರೀಯ ಕ್ರೀಡಾ ಮಸೂದೆ’ ಅಂಗೀಕಾರ, ‘BCCI’ ಕೂಡ ಇದರ ವ್ಯಾಪ್ತಿಗೆ, ಪರಿಣಾಮವೇನು ಗೊತ್ತಾ?

11/08/2025 7:47 PM

ಶೀಘ್ರವೇ ವೈದ್ಯಕೀಯ ಶಿಕ್ಷಣ ಇಲಾಖೆಗಳ ಕಾಲೇಜುಗಳಲ್ಲಿನ ಖಾಲಿ ಹುದ್ದೆಗಳ ಭರ್ತಿ: ಸಚಿವ ಶರಣಪ್ರಕಾಶ್ ಪಾಟೀಲ್

11/08/2025 7:46 PM

ವನ್ಯಜೀವಿ-ಮಾನವ ಸಂಘರ್ಷ ನಿಯಂತ್ರಣಕ್ಕೆ ಕ್ರಮ: ಸಚಿವ ಈಶ್ವರ ಖಂಡ್ರೆ

11/08/2025 7:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 2027ರ ಮಾರ್ಚ್ ವೇಳೆಗೆ ಕೋಲಾರ, ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ಕುಡಿಯುವ ನೀರು ಪೂರೈಕೆ: ಡಿಸಿಎಂ ಡಿಕೆಶಿ
KARNATAKA

2027ರ ಮಾರ್ಚ್ ವೇಳೆಗೆ ಕೋಲಾರ, ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ಕುಡಿಯುವ ನೀರು ಪೂರೈಕೆ: ಡಿಸಿಎಂ ಡಿಕೆಶಿ

By kannadanewsnow0911/08/2025 7:37 PM

ಬೆಂಗಳೂರು: “ಕೋಲಾರ, ಚಿಕ್ಕಬಳ್ಳಾಪುರಕ್ಕೆ 2027 ಮಾರ್ಚ್ ವೇಳೆಗೆ ಎತ್ತಿನಹೊಳೆ ಕುಡಿಯುವ ನೀರು ಪೂರೈಕೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಸೋಮವಾರ ತಿಳಿಸಿದರು.

ಶಾಸಕ ವೆಂಕಟಶಿವಾರೆಡ್ಡಿ ಅವರು ಮಂಡಿಸಿದ್ದ ಗಮನ ಸೆಳೆಯುವ ಸೂಚನೆಗೆ ಅವರು ಉತ್ತರಿಸಿದರು.

“ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಸ್ಥಗಿತಗೊಂಡಿತ್ತು. ನಾವು ವಿಶೇಷ ಆದ್ಯತೆ ನೀಡಿ ನೀರನ್ನು ಹೊರಕ್ಕೆ ತಂದಿದ್ದೇವೆ. ಅವರ ನಾಯಕರು ಈ ಯೋಜನೆಯಲ್ಲಿ ನೀರು ಬರುವುದೇ ಇಲ್ಲ ಎಂದು ಹೇಳುತ್ತಿದ್ದರು. ಆದರೆ ನಾವು ನೀರು ತಂದಿದ್ದೇವೆ. ಈಗ ತುಮಕೂರಿನವರೆಗೂ ಈ ನೀರನ್ನು ತರಬೇಕಾಗಿದ್ದು, ಅಲ್ಲಿ ಸಮತೋಲಿತ ಜಲಾಶಯ ನಿರ್ಮಿಸಬೇಕಾಗಿದೆ. ಇದಕ್ಕೆ ಅರಣ್ಯ ಇಲಾಖೆಗೆ ಬದಲಿ ಜಮೀನು ನೀಡುತ್ತಿದ್ದು, ಮುಂದಿನ ಎರಡು ತಿಂಗಳಲ್ಲಿ ಈ ಪ್ರಕ್ರಿಯೆ ಮುಗಿಸಿ ತುಮಕೂರಿನವರೆಗೂ ನೀರು ತರುತ್ತೇವೆ” ಎಂದು ತಿಳಿಸಿದರು.

ಚಿಕ್ಕಬಳ್ಳಾಪುರ, ಕೋಲಾರಕ್ಕೆ ನೀರು ತೆಗೆದುಕೊಂಡು ಹೋಗುವ ಕಾಮಗಾರಿಗಳು ಬಾಕಿ ಇದ್ದವು. ಇಲ್ಲಿಯೂ ಪೈಪ್ ಅಳವಡಿಕೆಗೆ ಅನುಮತಿ ನೀಡಿದ್ದೇವೆ. ನಮ್ಮ ನಾಯಕರು ಸೇರಿದಂತೆ ಸ್ಥಳೀಯ ಶಾಸಕರು ಸೇರಿ ಅಲ್ಲಿ ಪೂಜೆ ಸಲ್ಲಿಸಿ ಆದಷ್ಟು ಬೇಗ ಕಾಮಗಾರಿ ಆರಂಭಿಸಲಾಗುವುದು. ಈ ಮಧ್ಯೆ ಕೊರಟಗೆರೆಯಲ್ಲಿ ಆಕ್ಷೇಪ ಇದ್ದ ಕಾರಣ ಪರಮೇಶ್ವರ್ ಅವರ ಜೊತೆ ಚರ್ಚಿಸಿ ಅದನ್ನು ಬಗೆಹರಿಸಿದ್ದೇವೆ” ಎಂದು ವಿವರಿಸಿದರು.

ಈ ವೇಳೆ ಮಾತನಾಡಿದ ಶಾಸಕ ವೆಂಕಟಶಿವಾರೆಡ್ಡಿ ಅವರು “ಮೊದಲು ನಮಗೆ ಆದ್ಯತೆ ನೀಡಿ, ಆನಂತರ ಹಾಸನ, ತುಮಕೂರಿಗೆ ನೀರು ನೀಡಿ” ಎಂದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಹಾಸನ ಹಾಗೂ ತುಮಕೂರಿನವರೂ ಕೂಡ ಈಗಲೇ ನೀರು ಕೇಳುತ್ತಿಲ್ಲ. ಮೊದಲು ಕುಡಿಯುವ ನೀರಿಗೆ ಆದ್ಯತೆ ನೀಡಿ, ಆನಂತರ ನಮಗೆ ನೀಡಿ ಎನ್ನುತ್ತಿದ್ದಾರೆ. ಈ ಯೋಜನೆಯಲ್ಲಿ ಚಿಕ್ಕಬಳ್ಳಾಪುರ ಹಾಗೂ ಕೋಲಾರ ನಮ್ಮ ಮೊದಲ ಆದ್ಯತೆ” ಎಂದು ತಿಳಿಸಿದರು.

“ಸದರಿ ಯೋಜನೆಯನ್ನು 2026-27ನೇ ಸಾಲಿನಲ್ಲಿ 31.03.2027ರ ಅಂತ್ಯಕ್ಕೆ ಶೀಘ್ರವಾಗಿ ಪೂರ್ಣಗೊಳಿಸಿ ನೀರು ಹರಿಸಲು ಉದ್ದೇಶಿಸಲಾಗಿದ್ದು, ಎತ್ತಿನಹೊಳೆ ಯೋಜನೆಯ ಮೂಲ ಉದ್ದೇಶದಂತೆ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಭಾಗಗಳಿಗೆ ಯಶಸ್ವಿಯಾಗಿ ನೀರನ್ನು ಹರಿಸಲು ಅನುಕೂಲವಾಗುವಂತೆ ಕೋಲಾರ ಗುರುತ್ವ ಪೈಪ್‌ಲೈನ್ ಪ್ಯಾಕೇಜ್-॥&IV ಹಾಗೂ ಕೋಲಾರ ಫೀಡರ್ ಪೈಪ್‌ಲೈನ್ ಪ್ಯಾಕೇಜ್- V&VI ಮತ್ತು ಶ್ರೀನಿವಾಸಪುರ ಫೀಡರ್ ಪೈಪ್‌ಲೈನ್ ಪ್ಯಾಕೇಜ್-1 ರಿಂದ 1ರ ಕಾಮಗಾರಿಗಳನ್ನು ಕೂಡಲೇ ಪ್ರಾರಂಭಿಸಲು ಸರ್ಕಾರದ ಪತ್ರ ದಿನಾಂಕ:16.05.2025ರಲ್ಲಿ ಅನುಮೋದನೆ ನೀಡಲಾಗಿರುತ್ತದೆ. ಈ 7 ಪ್ಯಾಕೇಜ್ ಕಾಮಗಾರಿಗಳಿಗೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆ ಜಾರಿಯಲ್ಲಿದ್ದು, ಸದರಿ ಪ್ಯಾಕೇಜ್ ಕಾಮಗಾರಿಗಳನ್ನು ಅಕ್ಟೋಬರ್ 2025ರ ಮಾಹೆಯಲ್ಲಿ ಪ್ರಾರಂಭಿಸಲು ಯೋಜಿಸಲಾಗಿದೆ” ಎಂದು ವಿವರಿಸಿದರು.

ಡಿಪಿಆರ್ ಸಿದ್ಧವಾದ ನಂತರ ಪೀರಾಪುರ ಏತ ನೀರಾವರಿ ಕಾಮಗಾರಿ ಪೂರ್ಣಗೊಳಿಸಲಾಗುವುದು:

ಇದೇ ವೇಳೆ ಶಾಸಕ ಅಪ್ಪಾಜಿ ಸಿ.ಎಸ್ ನಾಡಗೌಡ ಅವರು ಬೂದಿಹಾಳ-ಪೀರಾಪುರ ಏತ ನೀರಾವರಿ ಕಾಮಗಾರಿ ಪೂರ್ಣಗೊಳಿಸುವ ಬಗ್ಗೆ ಗಮನ ಸೆಳೆವ ಸೂಚನೆ ಮೂಲಕ ಪ್ರಸ್ತಾಪ ಮಾಡಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಈ ಕಾಮಗಾರಿ 90% ಮುಕ್ತಾಯವಾಗಿದ್ದು, ಮೊದಲನೇ ಹಂತದಲ್ಲಿ ಈ ಯೋಜನೆಗೆ ಸಂಬಂಧಿಸಿದ ರೈಸಿಂಗ್ ಮೇನ್ ಮತ್ತು ಡೆಲಿವರಿ ಚೇಂಬರ್ ನಿರ್ಮಾಣದ ಕಾಮಗಾರಿಯನ್ನು ಟರ್ನ್ ಕೀ ಆಧಾರದ ಮೇಲೆ ಟೆಂಡ‌ರ್ ಕರೆದು ಕಡಿಮೆ ದರ ನಮೂದಿಸಿದ ಗುತ್ತಿಗೆದಾರರಾದ ಮೆ॥ ಅಮೃತಾ ಕನ್ಸಕ್ಷನ್ಸ್ ಪ್ರೈವೆಟ್ ಲಿಮಿಟೆಡ್ ಹಾಗೂ ಪ್ರತಿಭಾ ಇಂಡಸ್ಟ್ರೀಜ್ ಲಿ. (ಜೆ.ವಿ.) ಇವರಿಗೆ ರೂ.523.03 ಕೋಟಿಗಳಿಗೆ (ಜಿ.ಎಸ್.ಟಿ. ಹೊರತುಪಡಿಸಿ) 24 ತಿಂಗಳುಗಳ ಕಾಲಾವಧಿ ನೀಡಿ ಗುತ್ತಿಗೆ ವಹಿಸಲಾಗಿರುತ್ತದೆ. ಇನ್ನು ಸ್ವಲ್ಪ ಕಾಮಗಾರಿ ಬಾಕಿ ಉಳಿದಿದೆ” ಎಂದರು.

“ಸದರಿ ಯೋಜನೆಯಡಿ 20,243 ಹಕ್ಟೇರ್ ಅಚ್ಚುಕಟ್ಟು ಕ್ಷೇತ್ರಕ್ಕೆ ಹೊಲಗಾಲುವೆ ನಿರ್ಮಾಣ ಕಾಮಗಾರಿಯ ವಿವರವಾದ ಯೋಜನಾ ವರದಿ (DPR) ತಯಾರಿಸುವ ಸಲುವಾಗಿ ಸಮಾಲೋಚಕರನ್ನು ನೇಮಿಸುವ ಕಾರ್ಯಕ್ಕೆ ರೂ.1.75 ಕೋಟಿ ಮೊತ್ತಕ್ಕೆ ದಿನಾಂಕ: 06.08.2025ರಂದು ಟೆಂಡರ್ ಕರೆಯಲಾಗಿದ್ದು, ಸಮಾಲೋಚಕರಿಂದ ಡಿಪಿಆರ್ ಪಡೆದ ನಂತರ ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆದು, ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಕ್ರಮ ಜರುಗಿಸಲಾಗುವುದು” ಎಂದು ತಿಳಿಸಿದರು.

ಈ ವೇಳೆ ಮಾತನಾಡಿದ ಶಾಸಕರು, ‘ಯಾವುದೇ ಯೋಜನೆ ತಡವಾಗಲು ಭೂಸ್ವಾಧೀನ ಪ್ರಕ್ರಿಯೆ ಕಾರಣವಾಗಿದೆ’ ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿಗಳು “ಭೂಸ್ವಾಧೀನ ಪ್ರಕ್ರಿಯೆ ದೊಡ್ಡ ಸಮಸ್ಯೆಯಾಗಿದೆ. ಈ ಬಗ್ಗೆ ಸಾವಿರಾರು ಪ್ರಕರಣಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿವೆ. ಇತ್ತೀಚೆಗೆ ಈ ವಿಚಾರವಾಗಿ ಸಂಪೂರ್ಣ ವರದಿ ಸಿದ್ಧಪಡಿಸಲಾಗುತ್ತಿದೆ. ಇದು ಸರಿಯಾದ ನಂತರ ನಾವು ಕಾಮಗಾರಿ ಕೈಗೊತ್ತಿಕೊಳ್ಳುತ್ತೇವೆ. ಅದಕ್ಕಾಗಿಯೇ ಡಿಪಿಆರ್ ಸಿದ್ಧಪಡಿಸಲು ಟೆಂಡರ್ ಕರೆಯಲಾಗಿದೆ. ಶಾಸಕರ ಕಳಕಳಿ ಅರಿತು ಸೂಕ್ತ ಕ್ರಮ ಕೈಗೊಳ್ಳುತ್ತೇನೆ” ಎಂದರು.

ರಾಜ್ಯದಲ್ಲಿನ ಅಕ್ರಮ ಬಡಾವಣೆ ನಿರ್ದಾಕ್ಷಿಣ್ಯವಾಗಿ ತೆರವು: ಸಚಿವ ಬಿಎಸ್ ಸುರೇಶ್

ನಾಳೆಯಿಂದ ಆಶಾ ಕಾರ್ಯಕರ್ತೆಯರಿಂದ ಅಹೋರಾತ್ರಿ ಧರಣಿ, ಅಗತ್ಯ ಕ್ರಮಕ್ಕೆ ರಾಜ್ಯ ಸರ್ಕಾರ ಸೂಚನೆ

Share. Facebook Twitter LinkedIn WhatsApp Email

Related Posts

ಶೀಘ್ರವೇ ವೈದ್ಯಕೀಯ ಶಿಕ್ಷಣ ಇಲಾಖೆಗಳ ಕಾಲೇಜುಗಳಲ್ಲಿನ ಖಾಲಿ ಹುದ್ದೆಗಳ ಭರ್ತಿ: ಸಚಿವ ಶರಣಪ್ರಕಾಶ್ ಪಾಟೀಲ್

11/08/2025 7:46 PM1 Min Read

ವನ್ಯಜೀವಿ-ಮಾನವ ಸಂಘರ್ಷ ನಿಯಂತ್ರಣಕ್ಕೆ ಕ್ರಮ: ಸಚಿವ ಈಶ್ವರ ಖಂಡ್ರೆ

11/08/2025 7:43 PM2 Mins Read

ನಾಳೆಯಿಂದ ಆಶಾ ಕಾರ್ಯಕರ್ತೆಯರಿಂದ ಅಹೋರಾತ್ರಿ ಧರಣಿ, ಅಗತ್ಯ ಕ್ರಮಕ್ಕೆ ರಾಜ್ಯ ಸರ್ಕಾರ ಸೂಚನೆ

11/08/2025 7:31 PM2 Mins Read
Recent News

BREAKING : ಲೋಕಸಭೆಯಲ್ಲಿ ‘ರಾಷ್ಟ್ರೀಯ ಕ್ರೀಡಾ ಮಸೂದೆ’ ಅಂಗೀಕಾರ, ‘BCCI’ ಕೂಡ ಇದರ ವ್ಯಾಪ್ತಿಗೆ, ಪರಿಣಾಮವೇನು ಗೊತ್ತಾ?

11/08/2025 7:47 PM

ಶೀಘ್ರವೇ ವೈದ್ಯಕೀಯ ಶಿಕ್ಷಣ ಇಲಾಖೆಗಳ ಕಾಲೇಜುಗಳಲ್ಲಿನ ಖಾಲಿ ಹುದ್ದೆಗಳ ಭರ್ತಿ: ಸಚಿವ ಶರಣಪ್ರಕಾಶ್ ಪಾಟೀಲ್

11/08/2025 7:46 PM

ವನ್ಯಜೀವಿ-ಮಾನವ ಸಂಘರ್ಷ ನಿಯಂತ್ರಣಕ್ಕೆ ಕ್ರಮ: ಸಚಿವ ಈಶ್ವರ ಖಂಡ್ರೆ

11/08/2025 7:43 PM

2027ರ ಮಾರ್ಚ್ ವೇಳೆಗೆ ಕೋಲಾರ, ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ಕುಡಿಯುವ ನೀರು ಪೂರೈಕೆ: ಡಿಸಿಎಂ ಡಿಕೆಶಿ

11/08/2025 7:37 PM
State News
KARNATAKA

ಶೀಘ್ರವೇ ವೈದ್ಯಕೀಯ ಶಿಕ್ಷಣ ಇಲಾಖೆಗಳ ಕಾಲೇಜುಗಳಲ್ಲಿನ ಖಾಲಿ ಹುದ್ದೆಗಳ ಭರ್ತಿ: ಸಚಿವ ಶರಣಪ್ರಕಾಶ್ ಪಾಟೀಲ್

By kannadanewsnow0911/08/2025 7:46 PM KARNATAKA 1 Min Read

ಬೆಂಗಳೂರು : ಒಳಮೀಸಲಾತಿ ಸಂಬಂಧ ರಾಜ್ಯಸರ್ಕಾರ ಸ್ಪಷ್ಟವಾದ ತೀರ್ಮಾನ ತೆಗೆದುಕೊಂಡ ಮೇಲೆ ವೈದ್ಯಕೀಯ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ…

ವನ್ಯಜೀವಿ-ಮಾನವ ಸಂಘರ್ಷ ನಿಯಂತ್ರಣಕ್ಕೆ ಕ್ರಮ: ಸಚಿವ ಈಶ್ವರ ಖಂಡ್ರೆ

11/08/2025 7:43 PM

2027ರ ಮಾರ್ಚ್ ವೇಳೆಗೆ ಕೋಲಾರ, ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ಕುಡಿಯುವ ನೀರು ಪೂರೈಕೆ: ಡಿಸಿಎಂ ಡಿಕೆಶಿ

11/08/2025 7:37 PM

ನಾಳೆಯಿಂದ ಆಶಾ ಕಾರ್ಯಕರ್ತೆಯರಿಂದ ಅಹೋರಾತ್ರಿ ಧರಣಿ, ಅಗತ್ಯ ಕ್ರಮಕ್ಕೆ ರಾಜ್ಯ ಸರ್ಕಾರ ಸೂಚನೆ

11/08/2025 7:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.